Homeಮುಖಪುಟ'ಹಲಾಲ್ ಮಾಂಸ ಸೇವಿಸುವ ಮುಸ್ಲಿಮರನ್ನು ಮೆಚ್ಚುತ್ತೇನೆ; ಹಿಂದೂಗಳು ಧಾರ್ಮಿಕ ಬದ್ಧತೆ ಪ್ರದರ್ಶಿಸಿ'

‘ಹಲಾಲ್ ಮಾಂಸ ಸೇವಿಸುವ ಮುಸ್ಲಿಮರನ್ನು ಮೆಚ್ಚುತ್ತೇನೆ; ಹಿಂದೂಗಳು ಧಾರ್ಮಿಕ ಬದ್ಧತೆ ಪ್ರದರ್ಶಿಸಿ’

- Advertisement -
- Advertisement -

ಹಲಾಲ್ ಮಾಂಸವನ್ನು ಮಾತ್ರ ಸೇವಿಸುವ ಮುಸ್ಲಿಮರನ್ನು ನಾನು ಮೆಚ್ಚುತ್ತೇನೆ. ಹಿಂದೂಗಳು ಸಹ ತಮ್ಮದೇ ಆದ ಧಾರ್ಮಿಕ ಸಂಪ್ರದಾಯಗಳಿಗೆ ಇದೇ ರೀತಿಯ ಬದ್ಧತೆ ಪ್ರದರ್ಶಿಸಬೇಕು ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ.

ತಮ್ಮ ಸ್ವಕ್ಷೇತ್ರ ಬೇಗುಸರಾಯ್ ಲೋಕಸಭಾ ಕ್ಷೇತ್ರದಲ್ಲಿ ಈ ಕುರಿತು ಮಾತನಾಡಿದ ಸಚಿವರು, ‘ಹಿಂದೂಗಳು ಹಲಾಲ್ ಮಾಂಸವನ್ನು ತಿನ್ನುವುದನ್ನು ಬಿಟ್ಟುಬಿಡಿ. ಕತ್ತಿಯಿಂದ ಒಂದೇ ಏಟಿಗೆ ಬಲಿಯಾದ ಪ್ರಾಣಿಗಳ ಮಾಂಸವನ್ನು, ಅಂದರೆ ‘ಜಟ್ಕಾ ಕಟ್’ ಮಾತ್ರ ಸೇವಿಸಬೇಕು ಎಂದು ಹೇಳಿದ ಅವರು, ‘ಹಲಾಲ್ ಮಾಂಸವನ್ನು ತಿನ್ನುವ ಮೂಲಕ ತಮ್ಮ ‘ಧರ್ಮ’ಕ್ಕೆ ಅಪಚಾರ ಮಾಡುವುದಿಲ್ಲ’ ಎಂದು ಅಲ್ಲಿ ನೆರೆದಿದ್ದ ತಮ್ಮ ಬೆಂಬಲಿಗರಿಗೆ ಪ್ರತಿಜ್ಞೆ ಮಾಡುವಂತೆ ಸೂಚಿಸಿದರು.

ಹಿಂದೂಗಳು ಜಟ್ಕಾ ಕಟ್ ಮೂಲಕ ಪ್ರಾಣಿ ವಧೆ ಮಾಡುತ್ತಾರೆ. ಅಂದರೆ, ಅವರು ಒಂದೇ ಹೊಡೆತದಲ್ಲಿ ಪ್ರಾಣಿಬಲಿ ಮಾಡುತ್ತಾರೆ. ಹಾಗಾಗಿ, ಅವರೆಲ್ಲಾ ಹಲಾಲ್ ಮಾಂಸ ತಿನ್ನುವ ಮೂಲಕ ತಮ್ಮನ್ನು ತಾವು ಧಾರ್ಮಿಕ ಭ್ರಷ್ಟಗೊಳಿಸಬಾರದು. ಹಿಂದೂಗಳೆಲ್ಲಾ ಸದಾ ಜಟ್ಕಾ ಕಟ್ ಮಾಂಸ ಸೇವನೆಗೆ ಮಾತ್ರ ಅಂಟಿಕೊಳ್ಳಬೇಕು ಎಂದರು.

ಜಟ್ಕಾ ಮಾಂಸ ಮಾತ್ರ ಮಾರಾಟ ಮಾಡುವ ಅಂಗಡಿಗಳ ಸ್ಥಾಪನೆಯ ಹೊಸ ವ್ಯವಹಾರ ಮಾದರಿಯ ಕುರಿತ ಅಗತ್ಯವನ್ನು ಕೇಂದ್ರ ಸಚಿವರು ತಮ್ಮ ಬೆಂಬಲಿಗರಿಗೆ ಒತ್ತಿ ಹೇಳಿದರು.

ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ‘ಹಲಾಲ್’ ಪ್ರಮಾಣೀಕೃತ ಆಹಾರ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದಂತೆ, ಬಿಹಾರದಲ್ಲೂ ಇದೇ ಮಾದರಿಯ ಕ್ರಮ ತಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಗಿರಿರಾಜ್ ಸಿಂಗ್ ಪತ್ರ ಬರೆದಿದ್ದರು.

ಕಳೆದ ತಿಂಗಳು ಉತ್ತರ ಪ್ರದೇಶ ಸರ್ಕಾರವು ‘ಹಲಾಲ್ ಪ್ರಮಾಣಪತ್ರ’ ಅಕ್ರಮ ವಿತರಣೆಯ ವಿರುದ್ಧ ನಿರ್ಣಾಯಕ ನಿರ್ಧಾರ ತೆಗೆದುಕೊಂಡಿತು. ಹಲಾಲ್ ಪ್ರಮಾಣೀಕರಣದ ಆಹಾರ ಉತ್ಪನ್ನಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಮಾರಾಟವನ್ನು ನಿಷೇಧಿಸುವ ಆದೇಶವನ್ನು ಹೊರಡಿಸಿತು. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೂಡ ಯುಪಿ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಆಹಾರ ಪ್ರಮಾಣೀಕರಣವನ್ನು ಸರ್ಕಾರಿ ಸಂಸ್ಥೆಗಳು ಮಾತ್ರ ಮಾಡಬೇಕೇ ಹೊರತು ಸರ್ಕಾರೇತರ ಸಂಸ್ಥೆಗಳಿಂದಲ್ಲ ಎಂದು ಅವರು ಹೇಳಿದರು.

ಹಲಾಲ್ ಉತ್ಪನ್ನಗಳನ್ನು ನಿಷೇಧಿಸಿದ್ದಕ್ಕಾಗಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಭಾರತೀಯ ಜನತಾ ಪಕ್ಷವನ್ನು ಕಟುವಾಗಿ ಟೀಕಿಸಿದರು. ‘ಸರ್ಕಾರದ ಈ ನಿರ್ಧಾರವು ಸಮುದಾಯಗಳ ನಡುವೆ ಬಿರುಕು ಮೂಡಿಸುತ್ತಿದೆ’ ಎಂದು ಆರೋಪಿಸಿದರು.

ಹಲಾಲ್ ವಿವಾದ: ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಕರ್ನಾಟಕ!

ಕಳೆದ ವರ್ಷ ಕರ್ನಾಟಕದಲ್ಲೂ ಶ್ರೀರಾಮಸೇನೆ ಸೇರಿದಂತೆ ಕೆಲ ಹಿಂದುತ್ವ ಸಂಘಟನೆಗಳು ಹಲಾಲ್ ಕಟ್ ವಿರುದ್ಧ ಅಭಿಯಾನ ಆರಂಭಿಸಿದ್ದರು. ಹಲಾಲ್ ಬೋರ್ಡ್ ಹಾಕಿಕೊಂಡು ವ್ಯವಹಾರ ನಡೆಸುತ್ತಿದ್ದ ಹೋಟೆಲ್‌ಗಳು ಹಾಗೂ ಅಂಗಡಿಗಳ ಮೇಲೆ ದಾಳಿ ಮಾಡಿದ್ದರು.

‘ಹಿಂದೂಗಳು ಈ ಬಾರಿಯ ಯುಗಾದಿಯಲ್ಲಿ ಬರುವ ಹೊಸತೊಡಕು (ವರ್ಷತೊಡಕು) ಹಬ್ಬದಲ್ಲಿ ಹಲಾಲ್ ಕಟ್ ಮಾಂಸವನ್ನು ಬಳಸಬೇಡಿ. ಜಟ್ಕಾ ಕಟ್ ಮಾಂಸವನ್ನೇ ಬಳಸಬೇಕು’ ಎಂದು ಹಿಂದುತ್ವ ಸಂಘಟನೆಯ ಕಾರ್ಯಕರ್ತರು ಮಾಡಿದ ಮನವಿಗೆ ಕರ್ನಾಟಕದ ಜನ ಅಷ್ಟಾಗಿ ಸ್ಪಂದಿಸಲಿಲ್ಲ. ಆದರೆ, ರಾಜ್ಯದಲ್ಲಿ ಭುಗಿಲೆದ್ದಿದ್ದ ಈ ವಿವಾದ ರಾಷ್ಟ್ರಮಟ್ಟದಲ್ಲಿ ಭಾರಿ ಸದ್ದು ಮಾಡಿತ್ತು.

‘ಹಲಾಲ್ ಇಸ್ಲಾಂನದ್ದು, ಹಿಂದೂಗಳಿಗೆ ಸಂಬಂಧಿಸಿರೋದು ಅಲ್ಲ. ಮುಸ್ಲಿಮರು ಹಿಂದೂಗಳು ಕಟ್ ಮಾಡಿದ ಮಾಂಸ ತಿನ್ನೋದಿಲ್ಲ, ನಾವು ಯಾಕೆ ಅವರ ಹಲಾಲ್ ಮಾಂಸವನ್ನು ತಿನ್ನಬೇಕು’ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಪ್ರಶ್ನಿಸಿದ್ದರು. ಹಲಾಲ್ ವಿರುದ್ಧದ ಅಭಿಯಾನದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿದ್ದ ತುಮಕೂರು ಮೂಲದ ಕಾಳಿ ಮಠದ ರಿಶಿಕುಮಾರ ಸ್ವಾಮೀಜಿ, ಖುದ್ದು ತಾವೇ ಮಾಂಸದ ಅಂಗಡಿಯಲ್ಲಿ ಕೋಳಿ ಕತ್ತರಿಸಿದ್ದರು.

ಇದನ್ನೂ ಓದಿ; ಕೇರಳದಲ್ಲಿ ಶಾಂತಿ ಕದಡಲು ರಾಜ್ಯಪಾಲರಿಂದ ಯತ್ನ: ಸಿಎಂ ಪಿಣರಾಯಿ ವಿಜಯನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...