Homeಮುಖಪುಟ'ಹಲಾಲ್ ಮಾಂಸ ಸೇವಿಸುವ ಮುಸ್ಲಿಮರನ್ನು ಮೆಚ್ಚುತ್ತೇನೆ; ಹಿಂದೂಗಳು ಧಾರ್ಮಿಕ ಬದ್ಧತೆ ಪ್ರದರ್ಶಿಸಿ'

‘ಹಲಾಲ್ ಮಾಂಸ ಸೇವಿಸುವ ಮುಸ್ಲಿಮರನ್ನು ಮೆಚ್ಚುತ್ತೇನೆ; ಹಿಂದೂಗಳು ಧಾರ್ಮಿಕ ಬದ್ಧತೆ ಪ್ರದರ್ಶಿಸಿ’

- Advertisement -
- Advertisement -

ಹಲಾಲ್ ಮಾಂಸವನ್ನು ಮಾತ್ರ ಸೇವಿಸುವ ಮುಸ್ಲಿಮರನ್ನು ನಾನು ಮೆಚ್ಚುತ್ತೇನೆ. ಹಿಂದೂಗಳು ಸಹ ತಮ್ಮದೇ ಆದ ಧಾರ್ಮಿಕ ಸಂಪ್ರದಾಯಗಳಿಗೆ ಇದೇ ರೀತಿಯ ಬದ್ಧತೆ ಪ್ರದರ್ಶಿಸಬೇಕು ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ.

ತಮ್ಮ ಸ್ವಕ್ಷೇತ್ರ ಬೇಗುಸರಾಯ್ ಲೋಕಸಭಾ ಕ್ಷೇತ್ರದಲ್ಲಿ ಈ ಕುರಿತು ಮಾತನಾಡಿದ ಸಚಿವರು, ‘ಹಿಂದೂಗಳು ಹಲಾಲ್ ಮಾಂಸವನ್ನು ತಿನ್ನುವುದನ್ನು ಬಿಟ್ಟುಬಿಡಿ. ಕತ್ತಿಯಿಂದ ಒಂದೇ ಏಟಿಗೆ ಬಲಿಯಾದ ಪ್ರಾಣಿಗಳ ಮಾಂಸವನ್ನು, ಅಂದರೆ ‘ಜಟ್ಕಾ ಕಟ್’ ಮಾತ್ರ ಸೇವಿಸಬೇಕು ಎಂದು ಹೇಳಿದ ಅವರು, ‘ಹಲಾಲ್ ಮಾಂಸವನ್ನು ತಿನ್ನುವ ಮೂಲಕ ತಮ್ಮ ‘ಧರ್ಮ’ಕ್ಕೆ ಅಪಚಾರ ಮಾಡುವುದಿಲ್ಲ’ ಎಂದು ಅಲ್ಲಿ ನೆರೆದಿದ್ದ ತಮ್ಮ ಬೆಂಬಲಿಗರಿಗೆ ಪ್ರತಿಜ್ಞೆ ಮಾಡುವಂತೆ ಸೂಚಿಸಿದರು.

ಹಿಂದೂಗಳು ಜಟ್ಕಾ ಕಟ್ ಮೂಲಕ ಪ್ರಾಣಿ ವಧೆ ಮಾಡುತ್ತಾರೆ. ಅಂದರೆ, ಅವರು ಒಂದೇ ಹೊಡೆತದಲ್ಲಿ ಪ್ರಾಣಿಬಲಿ ಮಾಡುತ್ತಾರೆ. ಹಾಗಾಗಿ, ಅವರೆಲ್ಲಾ ಹಲಾಲ್ ಮಾಂಸ ತಿನ್ನುವ ಮೂಲಕ ತಮ್ಮನ್ನು ತಾವು ಧಾರ್ಮಿಕ ಭ್ರಷ್ಟಗೊಳಿಸಬಾರದು. ಹಿಂದೂಗಳೆಲ್ಲಾ ಸದಾ ಜಟ್ಕಾ ಕಟ್ ಮಾಂಸ ಸೇವನೆಗೆ ಮಾತ್ರ ಅಂಟಿಕೊಳ್ಳಬೇಕು ಎಂದರು.

ಜಟ್ಕಾ ಮಾಂಸ ಮಾತ್ರ ಮಾರಾಟ ಮಾಡುವ ಅಂಗಡಿಗಳ ಸ್ಥಾಪನೆಯ ಹೊಸ ವ್ಯವಹಾರ ಮಾದರಿಯ ಕುರಿತ ಅಗತ್ಯವನ್ನು ಕೇಂದ್ರ ಸಚಿವರು ತಮ್ಮ ಬೆಂಬಲಿಗರಿಗೆ ಒತ್ತಿ ಹೇಳಿದರು.

ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ‘ಹಲಾಲ್’ ಪ್ರಮಾಣೀಕೃತ ಆಹಾರ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದಂತೆ, ಬಿಹಾರದಲ್ಲೂ ಇದೇ ಮಾದರಿಯ ಕ್ರಮ ತಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಗಿರಿರಾಜ್ ಸಿಂಗ್ ಪತ್ರ ಬರೆದಿದ್ದರು.

ಕಳೆದ ತಿಂಗಳು ಉತ್ತರ ಪ್ರದೇಶ ಸರ್ಕಾರವು ‘ಹಲಾಲ್ ಪ್ರಮಾಣಪತ್ರ’ ಅಕ್ರಮ ವಿತರಣೆಯ ವಿರುದ್ಧ ನಿರ್ಣಾಯಕ ನಿರ್ಧಾರ ತೆಗೆದುಕೊಂಡಿತು. ಹಲಾಲ್ ಪ್ರಮಾಣೀಕರಣದ ಆಹಾರ ಉತ್ಪನ್ನಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಮಾರಾಟವನ್ನು ನಿಷೇಧಿಸುವ ಆದೇಶವನ್ನು ಹೊರಡಿಸಿತು. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೂಡ ಯುಪಿ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಆಹಾರ ಪ್ರಮಾಣೀಕರಣವನ್ನು ಸರ್ಕಾರಿ ಸಂಸ್ಥೆಗಳು ಮಾತ್ರ ಮಾಡಬೇಕೇ ಹೊರತು ಸರ್ಕಾರೇತರ ಸಂಸ್ಥೆಗಳಿಂದಲ್ಲ ಎಂದು ಅವರು ಹೇಳಿದರು.

ಹಲಾಲ್ ಉತ್ಪನ್ನಗಳನ್ನು ನಿಷೇಧಿಸಿದ್ದಕ್ಕಾಗಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಭಾರತೀಯ ಜನತಾ ಪಕ್ಷವನ್ನು ಕಟುವಾಗಿ ಟೀಕಿಸಿದರು. ‘ಸರ್ಕಾರದ ಈ ನಿರ್ಧಾರವು ಸಮುದಾಯಗಳ ನಡುವೆ ಬಿರುಕು ಮೂಡಿಸುತ್ತಿದೆ’ ಎಂದು ಆರೋಪಿಸಿದರು.

ಹಲಾಲ್ ವಿವಾದ: ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಕರ್ನಾಟಕ!

ಕಳೆದ ವರ್ಷ ಕರ್ನಾಟಕದಲ್ಲೂ ಶ್ರೀರಾಮಸೇನೆ ಸೇರಿದಂತೆ ಕೆಲ ಹಿಂದುತ್ವ ಸಂಘಟನೆಗಳು ಹಲಾಲ್ ಕಟ್ ವಿರುದ್ಧ ಅಭಿಯಾನ ಆರಂಭಿಸಿದ್ದರು. ಹಲಾಲ್ ಬೋರ್ಡ್ ಹಾಕಿಕೊಂಡು ವ್ಯವಹಾರ ನಡೆಸುತ್ತಿದ್ದ ಹೋಟೆಲ್‌ಗಳು ಹಾಗೂ ಅಂಗಡಿಗಳ ಮೇಲೆ ದಾಳಿ ಮಾಡಿದ್ದರು.

‘ಹಿಂದೂಗಳು ಈ ಬಾರಿಯ ಯುಗಾದಿಯಲ್ಲಿ ಬರುವ ಹೊಸತೊಡಕು (ವರ್ಷತೊಡಕು) ಹಬ್ಬದಲ್ಲಿ ಹಲಾಲ್ ಕಟ್ ಮಾಂಸವನ್ನು ಬಳಸಬೇಡಿ. ಜಟ್ಕಾ ಕಟ್ ಮಾಂಸವನ್ನೇ ಬಳಸಬೇಕು’ ಎಂದು ಹಿಂದುತ್ವ ಸಂಘಟನೆಯ ಕಾರ್ಯಕರ್ತರು ಮಾಡಿದ ಮನವಿಗೆ ಕರ್ನಾಟಕದ ಜನ ಅಷ್ಟಾಗಿ ಸ್ಪಂದಿಸಲಿಲ್ಲ. ಆದರೆ, ರಾಜ್ಯದಲ್ಲಿ ಭುಗಿಲೆದ್ದಿದ್ದ ಈ ವಿವಾದ ರಾಷ್ಟ್ರಮಟ್ಟದಲ್ಲಿ ಭಾರಿ ಸದ್ದು ಮಾಡಿತ್ತು.

‘ಹಲಾಲ್ ಇಸ್ಲಾಂನದ್ದು, ಹಿಂದೂಗಳಿಗೆ ಸಂಬಂಧಿಸಿರೋದು ಅಲ್ಲ. ಮುಸ್ಲಿಮರು ಹಿಂದೂಗಳು ಕಟ್ ಮಾಡಿದ ಮಾಂಸ ತಿನ್ನೋದಿಲ್ಲ, ನಾವು ಯಾಕೆ ಅವರ ಹಲಾಲ್ ಮಾಂಸವನ್ನು ತಿನ್ನಬೇಕು’ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಪ್ರಶ್ನಿಸಿದ್ದರು. ಹಲಾಲ್ ವಿರುದ್ಧದ ಅಭಿಯಾನದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿದ್ದ ತುಮಕೂರು ಮೂಲದ ಕಾಳಿ ಮಠದ ರಿಶಿಕುಮಾರ ಸ್ವಾಮೀಜಿ, ಖುದ್ದು ತಾವೇ ಮಾಂಸದ ಅಂಗಡಿಯಲ್ಲಿ ಕೋಳಿ ಕತ್ತರಿಸಿದ್ದರು.

ಇದನ್ನೂ ಓದಿ; ಕೇರಳದಲ್ಲಿ ಶಾಂತಿ ಕದಡಲು ರಾಜ್ಯಪಾಲರಿಂದ ಯತ್ನ: ಸಿಎಂ ಪಿಣರಾಯಿ ವಿಜಯನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....