Homeಮುಖಪುಟ'ಹಲಾಲ್ ಮಾಂಸ ಸೇವಿಸುವ ಮುಸ್ಲಿಮರನ್ನು ಮೆಚ್ಚುತ್ತೇನೆ; ಹಿಂದೂಗಳು ಧಾರ್ಮಿಕ ಬದ್ಧತೆ ಪ್ರದರ್ಶಿಸಿ'

‘ಹಲಾಲ್ ಮಾಂಸ ಸೇವಿಸುವ ಮುಸ್ಲಿಮರನ್ನು ಮೆಚ್ಚುತ್ತೇನೆ; ಹಿಂದೂಗಳು ಧಾರ್ಮಿಕ ಬದ್ಧತೆ ಪ್ರದರ್ಶಿಸಿ’

- Advertisement -
- Advertisement -

ಹಲಾಲ್ ಮಾಂಸವನ್ನು ಮಾತ್ರ ಸೇವಿಸುವ ಮುಸ್ಲಿಮರನ್ನು ನಾನು ಮೆಚ್ಚುತ್ತೇನೆ. ಹಿಂದೂಗಳು ಸಹ ತಮ್ಮದೇ ಆದ ಧಾರ್ಮಿಕ ಸಂಪ್ರದಾಯಗಳಿಗೆ ಇದೇ ರೀತಿಯ ಬದ್ಧತೆ ಪ್ರದರ್ಶಿಸಬೇಕು ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ.

ತಮ್ಮ ಸ್ವಕ್ಷೇತ್ರ ಬೇಗುಸರಾಯ್ ಲೋಕಸಭಾ ಕ್ಷೇತ್ರದಲ್ಲಿ ಈ ಕುರಿತು ಮಾತನಾಡಿದ ಸಚಿವರು, ‘ಹಿಂದೂಗಳು ಹಲಾಲ್ ಮಾಂಸವನ್ನು ತಿನ್ನುವುದನ್ನು ಬಿಟ್ಟುಬಿಡಿ. ಕತ್ತಿಯಿಂದ ಒಂದೇ ಏಟಿಗೆ ಬಲಿಯಾದ ಪ್ರಾಣಿಗಳ ಮಾಂಸವನ್ನು, ಅಂದರೆ ‘ಜಟ್ಕಾ ಕಟ್’ ಮಾತ್ರ ಸೇವಿಸಬೇಕು ಎಂದು ಹೇಳಿದ ಅವರು, ‘ಹಲಾಲ್ ಮಾಂಸವನ್ನು ತಿನ್ನುವ ಮೂಲಕ ತಮ್ಮ ‘ಧರ್ಮ’ಕ್ಕೆ ಅಪಚಾರ ಮಾಡುವುದಿಲ್ಲ’ ಎಂದು ಅಲ್ಲಿ ನೆರೆದಿದ್ದ ತಮ್ಮ ಬೆಂಬಲಿಗರಿಗೆ ಪ್ರತಿಜ್ಞೆ ಮಾಡುವಂತೆ ಸೂಚಿಸಿದರು.

ಹಿಂದೂಗಳು ಜಟ್ಕಾ ಕಟ್ ಮೂಲಕ ಪ್ರಾಣಿ ವಧೆ ಮಾಡುತ್ತಾರೆ. ಅಂದರೆ, ಅವರು ಒಂದೇ ಹೊಡೆತದಲ್ಲಿ ಪ್ರಾಣಿಬಲಿ ಮಾಡುತ್ತಾರೆ. ಹಾಗಾಗಿ, ಅವರೆಲ್ಲಾ ಹಲಾಲ್ ಮಾಂಸ ತಿನ್ನುವ ಮೂಲಕ ತಮ್ಮನ್ನು ತಾವು ಧಾರ್ಮಿಕ ಭ್ರಷ್ಟಗೊಳಿಸಬಾರದು. ಹಿಂದೂಗಳೆಲ್ಲಾ ಸದಾ ಜಟ್ಕಾ ಕಟ್ ಮಾಂಸ ಸೇವನೆಗೆ ಮಾತ್ರ ಅಂಟಿಕೊಳ್ಳಬೇಕು ಎಂದರು.

ಜಟ್ಕಾ ಮಾಂಸ ಮಾತ್ರ ಮಾರಾಟ ಮಾಡುವ ಅಂಗಡಿಗಳ ಸ್ಥಾಪನೆಯ ಹೊಸ ವ್ಯವಹಾರ ಮಾದರಿಯ ಕುರಿತ ಅಗತ್ಯವನ್ನು ಕೇಂದ್ರ ಸಚಿವರು ತಮ್ಮ ಬೆಂಬಲಿಗರಿಗೆ ಒತ್ತಿ ಹೇಳಿದರು.

ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ‘ಹಲಾಲ್’ ಪ್ರಮಾಣೀಕೃತ ಆಹಾರ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದಂತೆ, ಬಿಹಾರದಲ್ಲೂ ಇದೇ ಮಾದರಿಯ ಕ್ರಮ ತಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಗಿರಿರಾಜ್ ಸಿಂಗ್ ಪತ್ರ ಬರೆದಿದ್ದರು.

ಕಳೆದ ತಿಂಗಳು ಉತ್ತರ ಪ್ರದೇಶ ಸರ್ಕಾರವು ‘ಹಲಾಲ್ ಪ್ರಮಾಣಪತ್ರ’ ಅಕ್ರಮ ವಿತರಣೆಯ ವಿರುದ್ಧ ನಿರ್ಣಾಯಕ ನಿರ್ಧಾರ ತೆಗೆದುಕೊಂಡಿತು. ಹಲಾಲ್ ಪ್ರಮಾಣೀಕರಣದ ಆಹಾರ ಉತ್ಪನ್ನಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಮಾರಾಟವನ್ನು ನಿಷೇಧಿಸುವ ಆದೇಶವನ್ನು ಹೊರಡಿಸಿತು. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೂಡ ಯುಪಿ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಆಹಾರ ಪ್ರಮಾಣೀಕರಣವನ್ನು ಸರ್ಕಾರಿ ಸಂಸ್ಥೆಗಳು ಮಾತ್ರ ಮಾಡಬೇಕೇ ಹೊರತು ಸರ್ಕಾರೇತರ ಸಂಸ್ಥೆಗಳಿಂದಲ್ಲ ಎಂದು ಅವರು ಹೇಳಿದರು.

ಹಲಾಲ್ ಉತ್ಪನ್ನಗಳನ್ನು ನಿಷೇಧಿಸಿದ್ದಕ್ಕಾಗಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಭಾರತೀಯ ಜನತಾ ಪಕ್ಷವನ್ನು ಕಟುವಾಗಿ ಟೀಕಿಸಿದರು. ‘ಸರ್ಕಾರದ ಈ ನಿರ್ಧಾರವು ಸಮುದಾಯಗಳ ನಡುವೆ ಬಿರುಕು ಮೂಡಿಸುತ್ತಿದೆ’ ಎಂದು ಆರೋಪಿಸಿದರು.

ಹಲಾಲ್ ವಿವಾದ: ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಕರ್ನಾಟಕ!

ಕಳೆದ ವರ್ಷ ಕರ್ನಾಟಕದಲ್ಲೂ ಶ್ರೀರಾಮಸೇನೆ ಸೇರಿದಂತೆ ಕೆಲ ಹಿಂದುತ್ವ ಸಂಘಟನೆಗಳು ಹಲಾಲ್ ಕಟ್ ವಿರುದ್ಧ ಅಭಿಯಾನ ಆರಂಭಿಸಿದ್ದರು. ಹಲಾಲ್ ಬೋರ್ಡ್ ಹಾಕಿಕೊಂಡು ವ್ಯವಹಾರ ನಡೆಸುತ್ತಿದ್ದ ಹೋಟೆಲ್‌ಗಳು ಹಾಗೂ ಅಂಗಡಿಗಳ ಮೇಲೆ ದಾಳಿ ಮಾಡಿದ್ದರು.

‘ಹಿಂದೂಗಳು ಈ ಬಾರಿಯ ಯುಗಾದಿಯಲ್ಲಿ ಬರುವ ಹೊಸತೊಡಕು (ವರ್ಷತೊಡಕು) ಹಬ್ಬದಲ್ಲಿ ಹಲಾಲ್ ಕಟ್ ಮಾಂಸವನ್ನು ಬಳಸಬೇಡಿ. ಜಟ್ಕಾ ಕಟ್ ಮಾಂಸವನ್ನೇ ಬಳಸಬೇಕು’ ಎಂದು ಹಿಂದುತ್ವ ಸಂಘಟನೆಯ ಕಾರ್ಯಕರ್ತರು ಮಾಡಿದ ಮನವಿಗೆ ಕರ್ನಾಟಕದ ಜನ ಅಷ್ಟಾಗಿ ಸ್ಪಂದಿಸಲಿಲ್ಲ. ಆದರೆ, ರಾಜ್ಯದಲ್ಲಿ ಭುಗಿಲೆದ್ದಿದ್ದ ಈ ವಿವಾದ ರಾಷ್ಟ್ರಮಟ್ಟದಲ್ಲಿ ಭಾರಿ ಸದ್ದು ಮಾಡಿತ್ತು.

‘ಹಲಾಲ್ ಇಸ್ಲಾಂನದ್ದು, ಹಿಂದೂಗಳಿಗೆ ಸಂಬಂಧಿಸಿರೋದು ಅಲ್ಲ. ಮುಸ್ಲಿಮರು ಹಿಂದೂಗಳು ಕಟ್ ಮಾಡಿದ ಮಾಂಸ ತಿನ್ನೋದಿಲ್ಲ, ನಾವು ಯಾಕೆ ಅವರ ಹಲಾಲ್ ಮಾಂಸವನ್ನು ತಿನ್ನಬೇಕು’ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಪ್ರಶ್ನಿಸಿದ್ದರು. ಹಲಾಲ್ ವಿರುದ್ಧದ ಅಭಿಯಾನದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿದ್ದ ತುಮಕೂರು ಮೂಲದ ಕಾಳಿ ಮಠದ ರಿಶಿಕುಮಾರ ಸ್ವಾಮೀಜಿ, ಖುದ್ದು ತಾವೇ ಮಾಂಸದ ಅಂಗಡಿಯಲ್ಲಿ ಕೋಳಿ ಕತ್ತರಿಸಿದ್ದರು.

ಇದನ್ನೂ ಓದಿ; ಕೇರಳದಲ್ಲಿ ಶಾಂತಿ ಕದಡಲು ರಾಜ್ಯಪಾಲರಿಂದ ಯತ್ನ: ಸಿಎಂ ಪಿಣರಾಯಿ ವಿಜಯನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...