Homeಮುಖಪುಟ'ಹಲಾಲ್ ಮಾಂಸ ಸೇವಿಸುವ ಮುಸ್ಲಿಮರನ್ನು ಮೆಚ್ಚುತ್ತೇನೆ; ಹಿಂದೂಗಳು ಧಾರ್ಮಿಕ ಬದ್ಧತೆ ಪ್ರದರ್ಶಿಸಿ'

‘ಹಲಾಲ್ ಮಾಂಸ ಸೇವಿಸುವ ಮುಸ್ಲಿಮರನ್ನು ಮೆಚ್ಚುತ್ತೇನೆ; ಹಿಂದೂಗಳು ಧಾರ್ಮಿಕ ಬದ್ಧತೆ ಪ್ರದರ್ಶಿಸಿ’

- Advertisement -
- Advertisement -

ಹಲಾಲ್ ಮಾಂಸವನ್ನು ಮಾತ್ರ ಸೇವಿಸುವ ಮುಸ್ಲಿಮರನ್ನು ನಾನು ಮೆಚ್ಚುತ್ತೇನೆ. ಹಿಂದೂಗಳು ಸಹ ತಮ್ಮದೇ ಆದ ಧಾರ್ಮಿಕ ಸಂಪ್ರದಾಯಗಳಿಗೆ ಇದೇ ರೀತಿಯ ಬದ್ಧತೆ ಪ್ರದರ್ಶಿಸಬೇಕು ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ.

ತಮ್ಮ ಸ್ವಕ್ಷೇತ್ರ ಬೇಗುಸರಾಯ್ ಲೋಕಸಭಾ ಕ್ಷೇತ್ರದಲ್ಲಿ ಈ ಕುರಿತು ಮಾತನಾಡಿದ ಸಚಿವರು, ‘ಹಿಂದೂಗಳು ಹಲಾಲ್ ಮಾಂಸವನ್ನು ತಿನ್ನುವುದನ್ನು ಬಿಟ್ಟುಬಿಡಿ. ಕತ್ತಿಯಿಂದ ಒಂದೇ ಏಟಿಗೆ ಬಲಿಯಾದ ಪ್ರಾಣಿಗಳ ಮಾಂಸವನ್ನು, ಅಂದರೆ ‘ಜಟ್ಕಾ ಕಟ್’ ಮಾತ್ರ ಸೇವಿಸಬೇಕು ಎಂದು ಹೇಳಿದ ಅವರು, ‘ಹಲಾಲ್ ಮಾಂಸವನ್ನು ತಿನ್ನುವ ಮೂಲಕ ತಮ್ಮ ‘ಧರ್ಮ’ಕ್ಕೆ ಅಪಚಾರ ಮಾಡುವುದಿಲ್ಲ’ ಎಂದು ಅಲ್ಲಿ ನೆರೆದಿದ್ದ ತಮ್ಮ ಬೆಂಬಲಿಗರಿಗೆ ಪ್ರತಿಜ್ಞೆ ಮಾಡುವಂತೆ ಸೂಚಿಸಿದರು.

ಹಿಂದೂಗಳು ಜಟ್ಕಾ ಕಟ್ ಮೂಲಕ ಪ್ರಾಣಿ ವಧೆ ಮಾಡುತ್ತಾರೆ. ಅಂದರೆ, ಅವರು ಒಂದೇ ಹೊಡೆತದಲ್ಲಿ ಪ್ರಾಣಿಬಲಿ ಮಾಡುತ್ತಾರೆ. ಹಾಗಾಗಿ, ಅವರೆಲ್ಲಾ ಹಲಾಲ್ ಮಾಂಸ ತಿನ್ನುವ ಮೂಲಕ ತಮ್ಮನ್ನು ತಾವು ಧಾರ್ಮಿಕ ಭ್ರಷ್ಟಗೊಳಿಸಬಾರದು. ಹಿಂದೂಗಳೆಲ್ಲಾ ಸದಾ ಜಟ್ಕಾ ಕಟ್ ಮಾಂಸ ಸೇವನೆಗೆ ಮಾತ್ರ ಅಂಟಿಕೊಳ್ಳಬೇಕು ಎಂದರು.

ಜಟ್ಕಾ ಮಾಂಸ ಮಾತ್ರ ಮಾರಾಟ ಮಾಡುವ ಅಂಗಡಿಗಳ ಸ್ಥಾಪನೆಯ ಹೊಸ ವ್ಯವಹಾರ ಮಾದರಿಯ ಕುರಿತ ಅಗತ್ಯವನ್ನು ಕೇಂದ್ರ ಸಚಿವರು ತಮ್ಮ ಬೆಂಬಲಿಗರಿಗೆ ಒತ್ತಿ ಹೇಳಿದರು.

ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ‘ಹಲಾಲ್’ ಪ್ರಮಾಣೀಕೃತ ಆಹಾರ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದಂತೆ, ಬಿಹಾರದಲ್ಲೂ ಇದೇ ಮಾದರಿಯ ಕ್ರಮ ತಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಗಿರಿರಾಜ್ ಸಿಂಗ್ ಪತ್ರ ಬರೆದಿದ್ದರು.

ಕಳೆದ ತಿಂಗಳು ಉತ್ತರ ಪ್ರದೇಶ ಸರ್ಕಾರವು ‘ಹಲಾಲ್ ಪ್ರಮಾಣಪತ್ರ’ ಅಕ್ರಮ ವಿತರಣೆಯ ವಿರುದ್ಧ ನಿರ್ಣಾಯಕ ನಿರ್ಧಾರ ತೆಗೆದುಕೊಂಡಿತು. ಹಲಾಲ್ ಪ್ರಮಾಣೀಕರಣದ ಆಹಾರ ಉತ್ಪನ್ನಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಮಾರಾಟವನ್ನು ನಿಷೇಧಿಸುವ ಆದೇಶವನ್ನು ಹೊರಡಿಸಿತು. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೂಡ ಯುಪಿ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಆಹಾರ ಪ್ರಮಾಣೀಕರಣವನ್ನು ಸರ್ಕಾರಿ ಸಂಸ್ಥೆಗಳು ಮಾತ್ರ ಮಾಡಬೇಕೇ ಹೊರತು ಸರ್ಕಾರೇತರ ಸಂಸ್ಥೆಗಳಿಂದಲ್ಲ ಎಂದು ಅವರು ಹೇಳಿದರು.

ಹಲಾಲ್ ಉತ್ಪನ್ನಗಳನ್ನು ನಿಷೇಧಿಸಿದ್ದಕ್ಕಾಗಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಭಾರತೀಯ ಜನತಾ ಪಕ್ಷವನ್ನು ಕಟುವಾಗಿ ಟೀಕಿಸಿದರು. ‘ಸರ್ಕಾರದ ಈ ನಿರ್ಧಾರವು ಸಮುದಾಯಗಳ ನಡುವೆ ಬಿರುಕು ಮೂಡಿಸುತ್ತಿದೆ’ ಎಂದು ಆರೋಪಿಸಿದರು.

ಹಲಾಲ್ ವಿವಾದ: ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಕರ್ನಾಟಕ!

ಕಳೆದ ವರ್ಷ ಕರ್ನಾಟಕದಲ್ಲೂ ಶ್ರೀರಾಮಸೇನೆ ಸೇರಿದಂತೆ ಕೆಲ ಹಿಂದುತ್ವ ಸಂಘಟನೆಗಳು ಹಲಾಲ್ ಕಟ್ ವಿರುದ್ಧ ಅಭಿಯಾನ ಆರಂಭಿಸಿದ್ದರು. ಹಲಾಲ್ ಬೋರ್ಡ್ ಹಾಕಿಕೊಂಡು ವ್ಯವಹಾರ ನಡೆಸುತ್ತಿದ್ದ ಹೋಟೆಲ್‌ಗಳು ಹಾಗೂ ಅಂಗಡಿಗಳ ಮೇಲೆ ದಾಳಿ ಮಾಡಿದ್ದರು.

‘ಹಿಂದೂಗಳು ಈ ಬಾರಿಯ ಯುಗಾದಿಯಲ್ಲಿ ಬರುವ ಹೊಸತೊಡಕು (ವರ್ಷತೊಡಕು) ಹಬ್ಬದಲ್ಲಿ ಹಲಾಲ್ ಕಟ್ ಮಾಂಸವನ್ನು ಬಳಸಬೇಡಿ. ಜಟ್ಕಾ ಕಟ್ ಮಾಂಸವನ್ನೇ ಬಳಸಬೇಕು’ ಎಂದು ಹಿಂದುತ್ವ ಸಂಘಟನೆಯ ಕಾರ್ಯಕರ್ತರು ಮಾಡಿದ ಮನವಿಗೆ ಕರ್ನಾಟಕದ ಜನ ಅಷ್ಟಾಗಿ ಸ್ಪಂದಿಸಲಿಲ್ಲ. ಆದರೆ, ರಾಜ್ಯದಲ್ಲಿ ಭುಗಿಲೆದ್ದಿದ್ದ ಈ ವಿವಾದ ರಾಷ್ಟ್ರಮಟ್ಟದಲ್ಲಿ ಭಾರಿ ಸದ್ದು ಮಾಡಿತ್ತು.

‘ಹಲಾಲ್ ಇಸ್ಲಾಂನದ್ದು, ಹಿಂದೂಗಳಿಗೆ ಸಂಬಂಧಿಸಿರೋದು ಅಲ್ಲ. ಮುಸ್ಲಿಮರು ಹಿಂದೂಗಳು ಕಟ್ ಮಾಡಿದ ಮಾಂಸ ತಿನ್ನೋದಿಲ್ಲ, ನಾವು ಯಾಕೆ ಅವರ ಹಲಾಲ್ ಮಾಂಸವನ್ನು ತಿನ್ನಬೇಕು’ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಪ್ರಶ್ನಿಸಿದ್ದರು. ಹಲಾಲ್ ವಿರುದ್ಧದ ಅಭಿಯಾನದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿದ್ದ ತುಮಕೂರು ಮೂಲದ ಕಾಳಿ ಮಠದ ರಿಶಿಕುಮಾರ ಸ್ವಾಮೀಜಿ, ಖುದ್ದು ತಾವೇ ಮಾಂಸದ ಅಂಗಡಿಯಲ್ಲಿ ಕೋಳಿ ಕತ್ತರಿಸಿದ್ದರು.

ಇದನ್ನೂ ಓದಿ; ಕೇರಳದಲ್ಲಿ ಶಾಂತಿ ಕದಡಲು ರಾಜ್ಯಪಾಲರಿಂದ ಯತ್ನ: ಸಿಎಂ ಪಿಣರಾಯಿ ವಿಜಯನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...