Homeಮುಖಪುಟ'ಹಲಾಲ್ ಮಾಂಸ ಸೇವಿಸುವ ಮುಸ್ಲಿಮರನ್ನು ಮೆಚ್ಚುತ್ತೇನೆ; ಹಿಂದೂಗಳು ಧಾರ್ಮಿಕ ಬದ್ಧತೆ ಪ್ರದರ್ಶಿಸಿ'

‘ಹಲಾಲ್ ಮಾಂಸ ಸೇವಿಸುವ ಮುಸ್ಲಿಮರನ್ನು ಮೆಚ್ಚುತ್ತೇನೆ; ಹಿಂದೂಗಳು ಧಾರ್ಮಿಕ ಬದ್ಧತೆ ಪ್ರದರ್ಶಿಸಿ’

- Advertisement -
- Advertisement -

ಹಲಾಲ್ ಮಾಂಸವನ್ನು ಮಾತ್ರ ಸೇವಿಸುವ ಮುಸ್ಲಿಮರನ್ನು ನಾನು ಮೆಚ್ಚುತ್ತೇನೆ. ಹಿಂದೂಗಳು ಸಹ ತಮ್ಮದೇ ಆದ ಧಾರ್ಮಿಕ ಸಂಪ್ರದಾಯಗಳಿಗೆ ಇದೇ ರೀತಿಯ ಬದ್ಧತೆ ಪ್ರದರ್ಶಿಸಬೇಕು ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ.

ತಮ್ಮ ಸ್ವಕ್ಷೇತ್ರ ಬೇಗುಸರಾಯ್ ಲೋಕಸಭಾ ಕ್ಷೇತ್ರದಲ್ಲಿ ಈ ಕುರಿತು ಮಾತನಾಡಿದ ಸಚಿವರು, ‘ಹಿಂದೂಗಳು ಹಲಾಲ್ ಮಾಂಸವನ್ನು ತಿನ್ನುವುದನ್ನು ಬಿಟ್ಟುಬಿಡಿ. ಕತ್ತಿಯಿಂದ ಒಂದೇ ಏಟಿಗೆ ಬಲಿಯಾದ ಪ್ರಾಣಿಗಳ ಮಾಂಸವನ್ನು, ಅಂದರೆ ‘ಜಟ್ಕಾ ಕಟ್’ ಮಾತ್ರ ಸೇವಿಸಬೇಕು ಎಂದು ಹೇಳಿದ ಅವರು, ‘ಹಲಾಲ್ ಮಾಂಸವನ್ನು ತಿನ್ನುವ ಮೂಲಕ ತಮ್ಮ ‘ಧರ್ಮ’ಕ್ಕೆ ಅಪಚಾರ ಮಾಡುವುದಿಲ್ಲ’ ಎಂದು ಅಲ್ಲಿ ನೆರೆದಿದ್ದ ತಮ್ಮ ಬೆಂಬಲಿಗರಿಗೆ ಪ್ರತಿಜ್ಞೆ ಮಾಡುವಂತೆ ಸೂಚಿಸಿದರು.

ಹಿಂದೂಗಳು ಜಟ್ಕಾ ಕಟ್ ಮೂಲಕ ಪ್ರಾಣಿ ವಧೆ ಮಾಡುತ್ತಾರೆ. ಅಂದರೆ, ಅವರು ಒಂದೇ ಹೊಡೆತದಲ್ಲಿ ಪ್ರಾಣಿಬಲಿ ಮಾಡುತ್ತಾರೆ. ಹಾಗಾಗಿ, ಅವರೆಲ್ಲಾ ಹಲಾಲ್ ಮಾಂಸ ತಿನ್ನುವ ಮೂಲಕ ತಮ್ಮನ್ನು ತಾವು ಧಾರ್ಮಿಕ ಭ್ರಷ್ಟಗೊಳಿಸಬಾರದು. ಹಿಂದೂಗಳೆಲ್ಲಾ ಸದಾ ಜಟ್ಕಾ ಕಟ್ ಮಾಂಸ ಸೇವನೆಗೆ ಮಾತ್ರ ಅಂಟಿಕೊಳ್ಳಬೇಕು ಎಂದರು.

ಜಟ್ಕಾ ಮಾಂಸ ಮಾತ್ರ ಮಾರಾಟ ಮಾಡುವ ಅಂಗಡಿಗಳ ಸ್ಥಾಪನೆಯ ಹೊಸ ವ್ಯವಹಾರ ಮಾದರಿಯ ಕುರಿತ ಅಗತ್ಯವನ್ನು ಕೇಂದ್ರ ಸಚಿವರು ತಮ್ಮ ಬೆಂಬಲಿಗರಿಗೆ ಒತ್ತಿ ಹೇಳಿದರು.

ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ‘ಹಲಾಲ್’ ಪ್ರಮಾಣೀಕೃತ ಆಹಾರ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದಂತೆ, ಬಿಹಾರದಲ್ಲೂ ಇದೇ ಮಾದರಿಯ ಕ್ರಮ ತಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಗಿರಿರಾಜ್ ಸಿಂಗ್ ಪತ್ರ ಬರೆದಿದ್ದರು.

ಕಳೆದ ತಿಂಗಳು ಉತ್ತರ ಪ್ರದೇಶ ಸರ್ಕಾರವು ‘ಹಲಾಲ್ ಪ್ರಮಾಣಪತ್ರ’ ಅಕ್ರಮ ವಿತರಣೆಯ ವಿರುದ್ಧ ನಿರ್ಣಾಯಕ ನಿರ್ಧಾರ ತೆಗೆದುಕೊಂಡಿತು. ಹಲಾಲ್ ಪ್ರಮಾಣೀಕರಣದ ಆಹಾರ ಉತ್ಪನ್ನಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಮಾರಾಟವನ್ನು ನಿಷೇಧಿಸುವ ಆದೇಶವನ್ನು ಹೊರಡಿಸಿತು. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೂಡ ಯುಪಿ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಆಹಾರ ಪ್ರಮಾಣೀಕರಣವನ್ನು ಸರ್ಕಾರಿ ಸಂಸ್ಥೆಗಳು ಮಾತ್ರ ಮಾಡಬೇಕೇ ಹೊರತು ಸರ್ಕಾರೇತರ ಸಂಸ್ಥೆಗಳಿಂದಲ್ಲ ಎಂದು ಅವರು ಹೇಳಿದರು.

ಹಲಾಲ್ ಉತ್ಪನ್ನಗಳನ್ನು ನಿಷೇಧಿಸಿದ್ದಕ್ಕಾಗಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಭಾರತೀಯ ಜನತಾ ಪಕ್ಷವನ್ನು ಕಟುವಾಗಿ ಟೀಕಿಸಿದರು. ‘ಸರ್ಕಾರದ ಈ ನಿರ್ಧಾರವು ಸಮುದಾಯಗಳ ನಡುವೆ ಬಿರುಕು ಮೂಡಿಸುತ್ತಿದೆ’ ಎಂದು ಆರೋಪಿಸಿದರು.

ಹಲಾಲ್ ವಿವಾದ: ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಕರ್ನಾಟಕ!

ಕಳೆದ ವರ್ಷ ಕರ್ನಾಟಕದಲ್ಲೂ ಶ್ರೀರಾಮಸೇನೆ ಸೇರಿದಂತೆ ಕೆಲ ಹಿಂದುತ್ವ ಸಂಘಟನೆಗಳು ಹಲಾಲ್ ಕಟ್ ವಿರುದ್ಧ ಅಭಿಯಾನ ಆರಂಭಿಸಿದ್ದರು. ಹಲಾಲ್ ಬೋರ್ಡ್ ಹಾಕಿಕೊಂಡು ವ್ಯವಹಾರ ನಡೆಸುತ್ತಿದ್ದ ಹೋಟೆಲ್‌ಗಳು ಹಾಗೂ ಅಂಗಡಿಗಳ ಮೇಲೆ ದಾಳಿ ಮಾಡಿದ್ದರು.

‘ಹಿಂದೂಗಳು ಈ ಬಾರಿಯ ಯುಗಾದಿಯಲ್ಲಿ ಬರುವ ಹೊಸತೊಡಕು (ವರ್ಷತೊಡಕು) ಹಬ್ಬದಲ್ಲಿ ಹಲಾಲ್ ಕಟ್ ಮಾಂಸವನ್ನು ಬಳಸಬೇಡಿ. ಜಟ್ಕಾ ಕಟ್ ಮಾಂಸವನ್ನೇ ಬಳಸಬೇಕು’ ಎಂದು ಹಿಂದುತ್ವ ಸಂಘಟನೆಯ ಕಾರ್ಯಕರ್ತರು ಮಾಡಿದ ಮನವಿಗೆ ಕರ್ನಾಟಕದ ಜನ ಅಷ್ಟಾಗಿ ಸ್ಪಂದಿಸಲಿಲ್ಲ. ಆದರೆ, ರಾಜ್ಯದಲ್ಲಿ ಭುಗಿಲೆದ್ದಿದ್ದ ಈ ವಿವಾದ ರಾಷ್ಟ್ರಮಟ್ಟದಲ್ಲಿ ಭಾರಿ ಸದ್ದು ಮಾಡಿತ್ತು.

‘ಹಲಾಲ್ ಇಸ್ಲಾಂನದ್ದು, ಹಿಂದೂಗಳಿಗೆ ಸಂಬಂಧಿಸಿರೋದು ಅಲ್ಲ. ಮುಸ್ಲಿಮರು ಹಿಂದೂಗಳು ಕಟ್ ಮಾಡಿದ ಮಾಂಸ ತಿನ್ನೋದಿಲ್ಲ, ನಾವು ಯಾಕೆ ಅವರ ಹಲಾಲ್ ಮಾಂಸವನ್ನು ತಿನ್ನಬೇಕು’ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಪ್ರಶ್ನಿಸಿದ್ದರು. ಹಲಾಲ್ ವಿರುದ್ಧದ ಅಭಿಯಾನದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿದ್ದ ತುಮಕೂರು ಮೂಲದ ಕಾಳಿ ಮಠದ ರಿಶಿಕುಮಾರ ಸ್ವಾಮೀಜಿ, ಖುದ್ದು ತಾವೇ ಮಾಂಸದ ಅಂಗಡಿಯಲ್ಲಿ ಕೋಳಿ ಕತ್ತರಿಸಿದ್ದರು.

ಇದನ್ನೂ ಓದಿ; ಕೇರಳದಲ್ಲಿ ಶಾಂತಿ ಕದಡಲು ರಾಜ್ಯಪಾಲರಿಂದ ಯತ್ನ: ಸಿಎಂ ಪಿಣರಾಯಿ ವಿಜಯನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...