Homeಮುಖಪುಟಸರ್ವಾಧಿಕಾರಿ ನಿರ್ದೇಶನದ ಮೇರೆಗೆ ನನ್ನ ಮನೆ ಮೇಲೆ ದಾಳಿ: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್

ಸರ್ವಾಧಿಕಾರಿ ನಿರ್ದೇಶನದ ಮೇರೆಗೆ ನನ್ನ ಮನೆ ಮೇಲೆ ದಾಳಿ: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್

- Advertisement -
- Advertisement -

ಕೇಂದ್ರೀಯ ತನಿಖಾ ದಳ (ಸಿಬಿಐ)ವು ಗುರುವಾರ ತಮ್ಮ ಮನೆ ಮೇಲೆ ದಾಳಿ ನಡೆಸಿರುವ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್, ‘ಸರ್ವಾಧಿಕಾರಿ ನಿರ್ದೇಶನದ ಮೇರೆಗೆ ಸರ್ಕಾರಿ ಸಂಸ್ಥೆಗಳು ನನ್ನ ಮನೆ ಮೇಲೆ ದಾಳಿ ನಡೆಸುತ್ತಿವೆ. ನಾನೊಬ್ಬ ರೈತನ ಮಗ; ದಾಳಿಗೆ ಹೆದರುವುದಿಲ್ಲ’ ಎಂದು ಹೇಳಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ‘ಕಳೆದ 3-4 ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದೇನೆ. ಇಷ್ಟೆಲ್ಲಾ ಇದ್ದರೂ ಸರ್ವಾಧಿಕಾರಿ ನಿರ್ದೇಶನದ ಮೇರೆಗೆ ಸರ್ಕಾರಿ ಸಂಸ್ಥೆಗಳು ನನ್ನ ಮನೆ ಮೇಲೆ ದಾಳಿ ನಡೆಸುತ್ತಿವೆ. ನನ್ನ ಚಾಲಕ, ಸಹಾಯಕರ ಮೇಲೆ ಹಲ್ಲೆ ನಡೆಸಿ ಕಿರುಕುಳ ನೀಡಲಾಗುತ್ತಿದೆ. ನಾನೊಬ್ಬ ರೈತನ ಮಗನಾಗಿದ್ದು, ದಾಳಿಗೆ ಹೆದರುವುದಿಲ್ಲ. ನಾನು ರೈತರೊಂದಿಗೆ ಇದ್ದೇನೆ’ ಎಂದು ಹೇಳಿದ್ದಾರೆ.

‘ಭ್ರಷ್ಟಾಚಾರದ ಆರೋಪ ಹೊತ್ತಿರುವವರ ವಿರುದ್ಧ ನಾನು ದೂರು ನೀಡಿದ್ದೆ. ಆದರೆ, ಸಿಬಿಐ ಅವರನ್ನು ಹುಡುಕುವ ಬದಲು ನನ್ನ ಮನೆ ಮೇಲೆ ದಾಳಿ ಮಾಡಿದೆ. ನನ್ನ 4-5 ಕುರ್ತಾ ಪೈಜಾಮಗಳನ್ನು ಹೊರತುಪಡಿಸಿ ನೀವು ನನ್ನ ಮನೆಯಿಂದ ಏನನ್ನೂ ಪಡೆಯುವುದಿಲ್ಲ. ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಸರ್ವಾಧಿಕಾರಿ ನನ್ನನ್ನು ಹೆದರಿಸಲು ಪ್ರಯತ್ನಿಸುತ್ತಿದ್ದಾರೆ. ನಾನು ರೈತನ ಮಗ, ನಾನು ಹೆದರುವುದಿಲ್ಲ ಮತ್ತು ತಲೆಬಾಗುವುದಿಲ್ಲ ಎಂದು ಅವರು ಮತ್ತೊಂದು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಕಿರು ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಗುರುವಾರ ಸುಮಾರು 100 ಸಿಬಿಐ ಅಧಿಕಾರಿಗಳು ಮಲಿಕ್ ಅವರ ಮನೆ ಮತ್ತು ವಿವಿಧ ನಗರಗಳ 29 ಇತರ ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. ಮಲಿಕ್ ಅವರು ಆಗಸ್ಟ್ 23, 2018 ಮತ್ತು ಅಕ್ಟೋಬರ್ 30, 2019 ರ ನಡುವೆ ಜಮ್ಮು ಮತ್ತು ಕಾಶ್ಮೀರದ ಗವರ್ನರ್ ಆಗಿ ಸೇವೆ ಸಲ್ಲಿಸಿದ್ದರು. ಅವರು ಇನ್ನೂ ರಾಜ್ಯಪಾಲರಾಗಿದ್ದಾಗ, ಯೋಜನೆಗೆ ಸಂಬಂಧಿಸಿದ ಒಂದು ಫೈಲ್ ಸೇರಿದಂತೆ ಎರಡು ಫೈಲ್‌ಗಳನ್ನು ತೆರವುಗೊಳಿಸಲು 300 ಕೋಟಿ ರೂಪಾಯಿಗಳನ್ನು ಲಂಚದ ರೂಪದಲ್ಲಿ ನೀಡಲಾಯಿತು ಎಂಬ ಆರೋಪ ಕೇಳಿಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಯು ಈಗಾಗಲೇ ಚೆನಾಬ್ ವ್ಯಾಲಿ ಪವರ್ ಪ್ರಾಜೆಕ್ಟ್ಸ್ (ಪಿ) ಲಿಮಿಟೆಡ್‌ನ ಮಾಜಿ ಅಧ್ಯಕ್ಷ ನವೀನ್ ಕುಮಾರ್ ಚೌಧರಿ ಮತ್ತು ಇತರ ಮಾಜಿ ಅಧಿಕಾರಿಗಳಾದ ಎಂ.ಎಸ್.ಬಾಬು, ಎಂ.ಕೆ.ಮಿತ್ತಲ್ ಮತ್ತು ಅರುಣ್ ಕುಮಾರ್ ಮಿಶ್ರಾ ಮತ್ತು ಪಟೇಲ್ ಇಂಜಿನಿಯರಿಂಗ್ ಲಿಮಿಟೆಡ್ ವಿರುದ್ಧ ಪ್ರಕರಣ ದಾಖಲಿಸಿದೆ.

ಕೇಂದ್ರದ ಭಾರತೀಯ ಜನತಾ ಪಕ್ಷ (ಬಿಜೆಪಿ) ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಟೀಕೆಗೆ ಮಲಿಕ್ ಗುರಿಯಾಗುತ್ತಿದ್ದಾರೆ ಎಂಬ ಆರೋಪಗಳಿವೆ.

ಮಾಜಿ ರಾಜ್ಯಪಾಲರಿಗೆ ಸಿಎಂ ಸಿದ್ದರಾಮಯ್ಯ ಬೆಂಬಲ:

ಜಮ್ಮು-ಕಾಶ್ಮೀರ ಮಾಜಿ ರಾಜ್ಯಪಾಲರಾಧ ಸತ್ಯಪಾಲ್ ಮಲಿಕ್ ಅವರ ಮೇಲಿನ ಸಿಬಿಐ ದಾಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ. 40 ದೇಶಪ್ರೇಮಿ ಸೈನಿಕರನ್ನು ಬಲಿತೆಗೆದುಕೊಂಡ ಪುಲ್ವಾಮ ದುರಂತದ ಬಗ್ಗೆ ಸತ್ಯ ಹೇಳಿದ್ದೇ ಮಾಜಿ ರಾಜ್ಯಪಾಲರು ಮತ್ತು ಭಾರತೀಯ ಜನತಾ ಪಕ್ಷದ ಮಾಜಿ ರಾಷ್ಟ್ರೀಯ ಉಪಾಧ್ಯಕ್ಷರಾದ ಸತ್ಯಪಾಲ್ ಮಲಿಕ್ ಅವರ ಅಪರಾಧವಾಗಿ ಹೋಯಿತು. ನಿರೀಕ್ಷೆಯಂತೆ ಅವರ ಮನೆ ಮೇಲೆ ಸಿಬಿಐ ದಾಳಿ ನಡೆಸಿ, ಬೆದರಿಸುವ ಪ್ರಯತ್ನ ಮಾಡಿದೆ’ ಎಂದು ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

‘ಪುಲ್ವಾಮ ದುರಂತ ನಡೆದ ಸಮಯದಲ್ಲಿ ಸತ್ಯಪಾಲ್ ಮಲಿಕ್ ಅವರು ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದ ಕಾರಣ ಕೇಂದ್ರದ ವಿರುದ್ಧದ ಅವರ ಆರೋಪವನ್ನು ತಳ್ಳಿಹಾಕಲಾಗದು. ಸತ್ಯವನ್ನು ಎದುರಿಸಲಾಗದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರೀಕ್ಷೆಯಂತೆ ಅವರಿಗೆ ಸಿಬಿಐ ತನಿಖೆ ಮೂಲಕ ಚಿತ್ರಹಿಂಸೆ ನೀಡಲು ಹೊರಟಿದೆ, ಈ ಕೃತ್ಯ ಅತ್ಯಂತ ಖಂಡನೀಯ. ಕೇಂದ್ರ ಸರ್ಕಾರ ತನ್ನ ದುಷ್ಟಬುದ್ದಿಯನ್ನು ತಿದ್ದಿಕೊಂಡು, ಸತ್ಯಪಾಲ್ ಮಲಿಕ್ ಅವರ ಮೇಲಿನ ದೌರ್ಜನ್ಯ ನಿಲ್ಲಿಸಬೇಕು’ ಎಂದು ಆಗ್ರಹಿಸಿದ್ದಾರೆ.

‘ಸತ್ಯವನ್ನು ಸಹಿಸದಿರುವ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮನ್ನು ಪ್ರಶ್ನಿಸುವವರ ವಿರುದ್ಧ ಐಟಿ, ಇಡಿ, ಸಿಬಿಐಗಳನ್ನು ಛೂ ಬಿಟ್ಟು ಬಲತ್ಕಾರದಿಂದ ಬಾಯಿ ಮುಚ್ಚಿಸುವ ಪ್ರಯತ್ನನ್ನು ಮುಂದುವರಿಸಿದ್ದಾರೆ. ಆದರೆ ದೇಶದ ಜನತೆ ಇಂತಹ ಕುಟಿಲ ಕಾರಸ್ತಾನಗಳನ್ನು ಅರ್ಥಮಾಡಿಕೊಳ್ಳುವಷ್ಟು ಪ್ರಬುದ್ಧರಾಗಿದ್ದಾರೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ; ಹಿಂದೂ ಧಾರ್ಮಿಕ ದತ್ತಿ ತಿದ್ದುಪಡಿ ವಿಧೇಯಕ: ಬಿಜೆಪಿ ನಾಯಕರ ಆರೋಪಗಳಿಗೆ ತಿರುಗೇಟು ಕೊಟ್ಟ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...