Homeಮುಖಪುಟ"ನಾನು ಹುಡುಗಿ ಮತ್ತು ನಾನು ಹೋರಾಡಬಲ್ಲೆ": ಯುಪಿ ಕಾಂಗ್ರೆಸ್ ಅಭಿಯಾನಕ್ಕೆ ಪ್ರಿಯಾಂಕಾ ಗಾಂಧಿ ಚಾಲನೆ

“ನಾನು ಹುಡುಗಿ ಮತ್ತು ನಾನು ಹೋರಾಡಬಲ್ಲೆ”: ಯುಪಿ ಕಾಂಗ್ರೆಸ್ ಅಭಿಯಾನಕ್ಕೆ ಪ್ರಿಯಾಂಕಾ ಗಾಂಧಿ ಚಾಲನೆ

- Advertisement -
- Advertisement -

ಉತ್ತರ ಪ್ರದೇಶ ಚುನಾವಣೆಯನ್ನು ಮಹಿಳಾ ಕೇಂದ್ರಿತವನ್ನಾಗಿ ನಡೆಸಲು ನಿರ್ಧರಿಸಿರುವ ಕಾಂಗ್ರೆಸ್ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಇಂದು ಲಕ್ನೋದಲ್ಲಿ “ನಾನು ಹುಡುಗಿ ಮತ್ತು ನಾನು ಹೋರಾಡಬಲ್ಲೆ” ಎಂಬ ಕಾಂಗ್ರೆಸ್ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.

ಝಾನ್ಸಿಯಲ್ಲಿ ಕಾಂಗ್ರೆಸ್ ಏರ್ಪಡಿಸಿದ್ದ ಮಹಿಳಾ ಮ್ಯಾರಥಾನ್ ಸ್ಪರ್ಧೆಗೆ ಸಾವಿರಾರು ಜನರು ಭಾಗವಹಿಸಿದ್ದಾರೆ. ಒಮ್ರಿಕಾನ್ ಭೀತಿಯ ಕಾರಣಕ್ಕೆ ಜಿಲ್ಲಾಡಳಿತ ಮ್ಯಾರಥಾನ್‌ಗೆ ಅನುಮತಿ ನಿರಾಕರಿಸಿದ್ದರ ನಡುವೆಯೂ ಸಾವಿರಾರು ಹುಡುಗಿಯರು ಭಾಗವಹಿಸಿದ್ದಾರೆ. ಇದರ ಫೋಟೊ ಮತ್ತು ವಿಡಿಯೋಗಳನ್ನು ಕಾಂಗ್ರೆಸ್ ಪಕ್ಷದ ಟ್ವಿಟರ್ ಮತ್ತಿತರ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ.

ಈ ಸ್ಪರ್ಧೆಯಲ್ಲಿ ಮೊದಲ ಮೂರು ಸ್ಥಾನ ಗಳಿಸಿದವರಿಗೆ ಸ್ಕೂಟಿ ಬಹುಮಾನ ನೀಡಲಾಗುವುದು, 4ರಿಂದ 25ನೇ ಸ್ಥಾನ ಗಳಿಸಿದವರಿಗೆ ಸ್ಮಾರ್ಟ್‌ಪೋನ್ ಮತ್ತು 26 ರಿಂದ 100 ನೇ ಸ್ಥಾನ ಗಳಿಸಿದವರಿಗೆ ಫಿಟ್ನೆಸ್ ಬ್ಯಾಂಡ್ ಮತ್ತು 1000 ದವರೆಗೆ ಸ್ಥಾನ ಗಳಿಸಿದವರಿಗೆ ಪದಕಗಳನ್ನು ಬಹುಮಾನವನ್ನಾಗಿ ನೀಡಲಾಗುವುದು ಎಂದು ಪಕ್ಷವು ತಿಳಿಸಿದೆ.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ 40% ದಷ್ಟು ಟಿಕೆಟ್ ನೀಡುವುದಾಗಿ ಘೋಷಿಸಿರುವ ಕಾಂಗ್ರೆಸ್ ಪಕ್ಷ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಹಿಡಿದರೆ 12 ನೇ ತರಗತಿ ಉತ್ತೀರ್ಣರಾದ ಹುಡುಗಿಯರಿಗೆ ಸ್ಮಾರ್ಟ್‌ಫೋನ್ ಮತ್ತು ಎಲ್ಲಾ ಪದವೀಧರ ಯುವತಿಯರಿಗೆ ಎಲೆಕ್ಟ್ರಾನಿಕ್ ಸ್ಕೂಟಿ ನೀಡುತ್ತೇವೆ ಎಂದು ಭರವಸೆ ನೀಡಿದೆ.

ಕಾಂಗ್ರೆಸ್ ಪಕ್ಷವು ಉತ್ತರ ಪ್ರದೇಶದಲ್ಲಿನ ಲಿಂಗ ಸಮಾನತೆಯ ಕುರಿತು ತನ್ನ ಪ್ರಚಾರವನ್ನು ಕೇಂದ್ರೀಕರಿಸಿದೆ. ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅವುಗಳನ್ನು ನಿಯಂತ್ರಿಸಬೇಕೆಂದು ಆಗ್ರಹಿಸುತ್ತಿದೆ. ಕಳೆದ ವರ್ಷದ ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ ದೇಶಾದ್ಯಂತ ಆಕ್ರೋಶ ಹುಟ್ಟು ಹಾಕಿದ್ದನ್ನು ನಾವಿಲ್ಲಿ ಗಮನಿಸಬಹುದು.


ಇದನ್ನೂ ಓದಿ: ಯುಪಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಿದರೆ ಪದವಿ ವಿದ್ಯಾರ್ಥಿನಿಯರಿಗೆ ‘ಸ್ಕೂಟಿ’: ಪ್ರಿಯಾಂಕ ಗಾಂಧಿ ಮತ್ತೊಂದು ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. First such Women movement in India

    It definitely provides a Philip to Women empowerment in India and ultimately leads to 33% reservation to Women in Parliament
    Great achievement

  2. First such Women movement in India

    It definitely provides a Philip to Women empowerment in India and ultimately leads to 33% reservation to Women in Parliament
    Great achievement
    Good

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...