Homeಮುಖಪುಟನಾನೊಬ್ಬ ಪತ್ರಕರ್ತೆ, ಹಾಗಾಗಿ ಅರ್ನಾಬ್ ಪರ ನಿಲ್ಲುವುದಿಲ್ಲ!- ಅರ್ಫಾ ಖಾನಮ್ ಶೇರ್ವಾನಿ

ನಾನೊಬ್ಬ ಪತ್ರಕರ್ತೆ, ಹಾಗಾಗಿ ಅರ್ನಾಬ್ ಪರ ನಿಲ್ಲುವುದಿಲ್ಲ!- ಅರ್ಫಾ ಖಾನಮ್ ಶೇರ್ವಾನಿ

ಆತ ಒಬ್ಬ ತಟಸ್ಥ ಪತ್ರಕರ್ತನಾಗಿ ಕೆಲಸ ಮಾಡುವುದರ ಬದಲಿಗೆ ಒಬ್ಬ ರಾಜಕೀಯ ದಲ್ಲಾಳಿಯಾಗಿ ವರ್ತಿಸುತ್ತಿದ್ದರು.

- Advertisement -
- Advertisement -

“ನಾನೊಬ್ಬ ಪತ್ರಕರ್ತೆಯಾಗಿರುವುದರಿಂದ ಅರ್ನಾಬ್ ಗೋಸ್ವಾಮಿಯ ಪರ ನಿಲ್ಲುವುದಿಲ್ಲ” ಎಂದು ದಿ ವೈರ್ ಪತ್ರಕರ್ತೆಯಾದ ಅರ್ಫಾ ಖಾನಮ್ ಶೇರ್ವಾನಿ ಹೇಳಿದ್ದಾರೆ. ಹಣದ ವಂಚನೆ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಮುಂಬೈ ಪೊಲೀಸರು ಈ ವಾರ ಅರ್ನಾಬ್ ಗೋಸ್ವಾಮಿಯನ್ನು ಬಂಧಿಸಿದ್ದರು.

ರಿಪಬ್ಲಿಕ್ ಟಿವಿಯ ಮಾಲೀಕರು ಮತ್ತು ಪ್ರಧಾನ ಸಂಪಾದಕರಾದ ಅರ್ನಾಬ್ ಗೋಸ್ವಾಮಿಯನ್ನು ಬಂಧಿಸಿದ ಸುದ್ದಿ ತಿಳಿದ ತಕ್ಷಣ, ಅವರನ್ನು ಬೆಂಬಲಿಸಿ ಎಲ್ಲಾಕಡೆಯಿಂದಲೂ ಪ್ರತಿಕ್ರಿಯೆ ಬರತೊಡಗಿತು. ಅದರಲ್ಲೂ ಇಡೀ ಬಿಜೆಪಿಯ ಪಟಾಲಂ ಒಟ್ಟಾಗಿ, ಕೇಂದ್ರ ಸಚಿವರಾದ ಅಮಿತ್ ಶಾ, ಸ್ಮೃತಿ ಇರಾನಿ, ಪ್ರಕಾಶ್ ಜಾವಡೇಕರ್ ಮತ್ತು ಪಕ್ಷದ ಇತರ ಹಿರಿಯ ಕಾರ್ಯಕರ್ತರು ಸೇರಿದಂತೆ ಹಲವು ನಾಯಕರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಇದನ್ನು 1975 ರಲ್ಲಿ ಇಂದಿರಾ ಗಾಂಧಿ ವಿಧಿಸಿದ ತುರ್ತು ಪರಿಸ್ಥಿತಿಗೆ ಹೋಲಿಸಿದರು. ಇಷ್ಟೇ ಅಲ್ಲದೇ, ಹಲವಾರು ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಅರ್ನಾಬ್ ಚಿತ್ರದೊಂದಿಗೆ ಬಿಜೆಪಿಯ ಧ್ವಜಗಳು ಮತ್ತು ಚಿಹ್ನೆಗಳನ್ನು ಬಳಸಿ ಪ್ರತಿಭಟಿಸಿದ್ದರು.

ಇದನ್ನೂ ಓದಿ: ಆತ್ಮಹತ್ಯೆಗೆ ಪ್ರಚೋದನೆ: ಅರ್ನಾಬ್ ಗೋಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ!

ಇದರ ಕುರಿತು ಪ್ರತಿಕ್ರಿಯಾ ಬರಹವನ್ನು ಬರೆದಿರುವ ಪತ್ರಕರ್ತೆ ಅರ್ಫಾ ಖಾನಮ್ ಶೇರ್ವಾನಿ, “ಅನೇಕ ಉದಾರವಾದಿ ಪತ್ರಕರ್ತರು, ಬರಹಗಾರರು ಮತ್ತು ಕಾರ್ಯಕರ್ತರು ಈ ಬಂಧನವನ್ನು ಖಂಡಿಸಿ, ಅರ್ನಾಬ್‌ ಗೋಸ್ವಾಮಿಯ ಅಭಿವ್ಯಕ್ತಿ ಸ್ವಾತಂತ್ರವನ್ನು ಸಮರ್ಥಿಸಿಕೊಂಡರು. ಜೊತೆಗೆ ಅರ್ನಾಬ್‌ನೊಂದಿಗಿರುವ ಭಿನ್ನಾಭಿಪ್ರಾಯದ ಹೊರತಾಗಿಯೂ ಆತನ ಬಂಧನವನ್ನು ವಿರೋಧಿಸಲು ಒತ್ತಾಯಿಸಿದರು” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಅರ್ನಾಬ್ ಗೋಸ್ವಾಮಿ ಇಂದು ಭಾರತೀಯ ರಾಜಕಾರಣದ ಅತ್ಯಂತ ಶಕ್ತಿಶಾಲಿ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದು, ನರೇಂದ್ರ ಮೋದಿಯವರ ಇಡೀ ಕ್ಯಾಬಿನೆಟ್ ಸಾರ್ವಜನಿಕವಾಗಿ ಹೊರಬಂದು ಯಾರಿಗಾದರೂ ಬೆಂಬಲ ವ್ಯಕ್ತಪಡಿಸಿದ್ದನ್ನು ಇದುವರೆಗೂ ನಾನು ನೋಡಿಲ್ಲ. ಆದರೆ ಈ ಬೆಂಬಲವನ್ನು ಅರ್ನಾಬ್ ಪಡೆದಿದ್ದಾರೆ. ಈತ ಕೊರೊನಾ ಸಾಂಕ್ರಾಮಿಕ ರೋಗಕ್ಕೆ ಕೋಮು ಬಣ್ಣಬಳಿದು ಮುಸ್ಲಿಮರನ್ನು ನೇರವಾಗಿ ದೂಷಿಸಿದ್ದನ್ನು ನಾವೆಲ್ಲರೂ ನೋಡಿದ್ದೇವೆ. ಕೊರೊನಾ ಜಿಹಾದ್, ಕೊರೊನಾ ಭಯೋತ್ಪಾದನೆ, ಕೊರೊನಾ ಬಾಂಬ್ ಮತ್ತು ತಬ್ಲಿಘಿ ಜಮಾತ್ ಎಂದು ಪ್ಯಾನಲ್‌ನಲ್ಲಿ ಕುಳಿತು ಕಿರುಚಾಡುತ್ತಿದ್ದುದನ್ನು ನೋಡಿದ ಎಂತವರ ಮನಸ್ಸಿನಲ್ಲೂ ಮುಸ್ಲಿಮರ ವಿರುದ್ಧ ದ್ವೇಷ ಹುಟ್ಟುವಂತೆ ಮಾಡುತ್ತಿದ್ದ ಅರ್ನಾಬ್‌ನನ್ನು ಒಬ್ಬ ಪತ್ರಕರ್ತ ಎಂದು ಹೇಗೆ ಒಪ್ಪಿಕೊಳ್ಳುವುದು? ಈ ಕಾರ್ಯಕ್ರಮಗಳನ್ನು ನೋಡಿದ ಜನರು ಮುಗ್ಧ ಮುಸಲ್ಮಾನರನ್ನು ಹಣ್ಣು, ಹಾಲು ಮತ್ತು ತರಕಾರಿ ಮಾರುವುದಕ್ಕೂ ಅವಕಾಶ ಕೊಡದಷ್ಟು ಕೋಮು ವ್ಯಾಘ್ರಗಳಾಗಿ ಬದಲಾಗಿದ್ದರು” ಎಂದು ಖಾನಂ ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮಹಿಳಾ ಪೊಲೀಸ್‌ ಮೇಲೆ ಹಲ್ಲೆ: ಅರ್ನಾಬ್ ಸೇರಿ ಪತ್ನಿ & ಮಗನ ವಿರುದ್ಧ ಹೊಸ ಎಫ್‌ಐಆರ್!

“ಹಾಗಾಗಿ ಅರ್ನಾಬ್ ಗೋಸ್ವಾಮಿಯ ರಕ್ಷಣೆಗೆ ಅಥವಾ ಆತನ ಪರ ನಿಲ್ಲಲ್ಲು ನಿರಾಕರಿಸುವುದರಿಂದ ನನ್ನ ಪತ್ರಿಕೋದ್ಯಮ ಧರ್ಮದ ಮೇಲೆ ಮತ್ತು ಪತ್ರಿಕೋದ್ಯಮ ಭ್ರಾತೃತ್ವದ ಮೇಲೆ ಯಾವುದೇ ಋಣಾತ್ಮಕ ಪರಿಣಾಮ ಬೀರುವುದಿಲ್ಲ ಎಂದು ನಾನು ಧೃಢವಾಗಿ ನಂಬಿದ್ದೇನೆ. ಕಳೆದ ಎರಡು ದಶಕಗಳಿಂದ ಆಡಿಯೋ-ವಿಶುವಲ್ ಪತ್ರಿಕೋದ್ಯಮದಲ್ಲಿ ನಾನು ನೂರಾರು ಟಿವಿ ಚರ್ಚೆಗಳನ್ನು ನಡೆಸಿದ್ದೇನೆ. ಆದರೆ ಅರ್ನಾಬ್ ಟಿವಿಗಳಲ್ಲಿ ನಡೆಸುವ ಚರ್ಚೆಗಳನ್ನು ನೋಡಿದರೆ ತಿಳಿಯುತ್ತದೆ, ಆತ ಮಾಡುತ್ತಿರುವುದು ಪತ್ರಿಕೋದ್ಯಮವಲ್ಲ; ಆ ವೃತ್ತಿಗೆ ಮಾಡುತ್ತಿರುವ ಅವಮಾನ ಎಂದು. ಹಾಗಾಗಿ ನಾನು ಅರ್ನಾಬ್ ಪರ ನಿಲ್ಲುವುದಿಲ್ಲ” ಎಂದು ಅರ್ಫಾ ಖಾನಮ್ ಶೇರ್ವಾನಿ ಹೇಳಿದ್ದಾರೆ.

ಇದನ್ನೂ ಓದಿ: ರಿಪಬ್ಲಿಕ್ ಟಿವಿ ಅರ್ನಾಬ್ ಬಂಧನ ಸಂತೋಷ ತಂದಿದೆ: ಅನ್ವಯ್ ನಾಯಕ್ ಕುಟುಂಬ!

“ಅರ್ನಾಬ್ ವಿರುದ್ಧದ ಪೊಲೀಸರ ಈ ಕ್ರಮವು ರಾಜಕೀಯ ಪ್ರೇರಿತವಾಗಿ ಕಂಡರೂ, ಇದು ಅರ್ನಾಬ್ ಆಡುತ್ತಿದ್ದ ಆಟದ ಭಾಗವೇ ಆಗಿದೆ. ವಾಸ್ತವದಲ್ಲಿ ಹೇಳಬೇಕೆಂದರೆ, ಆತ ಒಬ್ಬ ತಟಸ್ಥ ಪತ್ರಕರ್ತನಾಗಿ ಕೆಲಸ ಮಾಡುವುದರ ಬದಲಿಗೆ ಒಬ್ಬ ರಾಜಕೀಯ ದಲ್ಲಾಳಿಯಾಗಿ ವರ್ತಿಸುತ್ತಿದ್ದರು. ಕೇಂದ್ರ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಸರ್ಕಾರಗಳು ಕಳೆದ ಆರು ವರ್ಷಗಳಿಂದ, ಎಡಪಂಥೀಯ ಕಾರ್ಯಕರ್ತರು, ವಿದ್ಯಾರ್ಥಿಗಳು ಮತ್ತು ಪ್ರಾಮಾಣಿಕ ಪತ್ರಕರ್ತರ ಮೇಲೆ ನಡೆಸುತ್ತಿರುವ ಕಿರುಕುಳಕ್ಕೆ ನಾವೆಲ್ಲರೂ ಸಾಕ್ಷಿಯಾಗಿದ್ದೇವೆ. ಸಾರ್ವಜನಿಕ ಬೆಂಬಲವನ್ನು ಗಳಿಸಲು ನ್ಯಾಯಾಲಯದ ಕಲಾಪಗಳನ್ನು ತಮ್ಮ ಸ್ಟುಡಿಯೋದಲ್ಲಿಯೇ ನಡೆಸಿ, ನ್ಯಾಯಾಧೀಶ, ತೀರ್ಪುಗಾರ ಮತ್ತು ಮರಣದಂಡನೆಕಾರರಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆದರೆ, ಬಿಜೆಪಿ ಮತ್ತು ಅದರ ಸರ್ಕಾರಗಳನ್ನು ದೂಷಿಸಿ ಒಬ್ಬೇ ಒಬ್ಬ ಪತ್ರಕರ್ತನ ರಕ್ಷಣೆಗೂ ಆತ ಮುಂದಾಗಿಲ್ಲ. ಹಾಗಾಗಿ ನಿಜವಾದ ಪತ್ರಕರ್ತರು ಇವರ ಬೆಂಬಲಕ್ಕೆ ನಿಲ್ಲುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: TRP ಹಗರಣದಲ್ಲಿ ವಿಚಾರಣೆಗೆ ಹಾಜರಾಗಲು ಸಮನ್ಸ್; ಬಂಧನ ಭೀತಿಯಲ್ಲಿ ಅರ್ನಾಬ್ ಗೋಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...