Homeಮುಖಪುಟನಾನೊಬ್ಬ ಪತ್ರಕರ್ತೆ, ಹಾಗಾಗಿ ಅರ್ನಾಬ್ ಪರ ನಿಲ್ಲುವುದಿಲ್ಲ!- ಅರ್ಫಾ ಖಾನಮ್ ಶೇರ್ವಾನಿ

ನಾನೊಬ್ಬ ಪತ್ರಕರ್ತೆ, ಹಾಗಾಗಿ ಅರ್ನಾಬ್ ಪರ ನಿಲ್ಲುವುದಿಲ್ಲ!- ಅರ್ಫಾ ಖಾನಮ್ ಶೇರ್ವಾನಿ

ಆತ ಒಬ್ಬ ತಟಸ್ಥ ಪತ್ರಕರ್ತನಾಗಿ ಕೆಲಸ ಮಾಡುವುದರ ಬದಲಿಗೆ ಒಬ್ಬ ರಾಜಕೀಯ ದಲ್ಲಾಳಿಯಾಗಿ ವರ್ತಿಸುತ್ತಿದ್ದರು.

- Advertisement -
- Advertisement -

“ನಾನೊಬ್ಬ ಪತ್ರಕರ್ತೆಯಾಗಿರುವುದರಿಂದ ಅರ್ನಾಬ್ ಗೋಸ್ವಾಮಿಯ ಪರ ನಿಲ್ಲುವುದಿಲ್ಲ” ಎಂದು ದಿ ವೈರ್ ಪತ್ರಕರ್ತೆಯಾದ ಅರ್ಫಾ ಖಾನಮ್ ಶೇರ್ವಾನಿ ಹೇಳಿದ್ದಾರೆ. ಹಣದ ವಂಚನೆ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಮುಂಬೈ ಪೊಲೀಸರು ಈ ವಾರ ಅರ್ನಾಬ್ ಗೋಸ್ವಾಮಿಯನ್ನು ಬಂಧಿಸಿದ್ದರು.

ರಿಪಬ್ಲಿಕ್ ಟಿವಿಯ ಮಾಲೀಕರು ಮತ್ತು ಪ್ರಧಾನ ಸಂಪಾದಕರಾದ ಅರ್ನಾಬ್ ಗೋಸ್ವಾಮಿಯನ್ನು ಬಂಧಿಸಿದ ಸುದ್ದಿ ತಿಳಿದ ತಕ್ಷಣ, ಅವರನ್ನು ಬೆಂಬಲಿಸಿ ಎಲ್ಲಾಕಡೆಯಿಂದಲೂ ಪ್ರತಿಕ್ರಿಯೆ ಬರತೊಡಗಿತು. ಅದರಲ್ಲೂ ಇಡೀ ಬಿಜೆಪಿಯ ಪಟಾಲಂ ಒಟ್ಟಾಗಿ, ಕೇಂದ್ರ ಸಚಿವರಾದ ಅಮಿತ್ ಶಾ, ಸ್ಮೃತಿ ಇರಾನಿ, ಪ್ರಕಾಶ್ ಜಾವಡೇಕರ್ ಮತ್ತು ಪಕ್ಷದ ಇತರ ಹಿರಿಯ ಕಾರ್ಯಕರ್ತರು ಸೇರಿದಂತೆ ಹಲವು ನಾಯಕರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಇದನ್ನು 1975 ರಲ್ಲಿ ಇಂದಿರಾ ಗಾಂಧಿ ವಿಧಿಸಿದ ತುರ್ತು ಪರಿಸ್ಥಿತಿಗೆ ಹೋಲಿಸಿದರು. ಇಷ್ಟೇ ಅಲ್ಲದೇ, ಹಲವಾರು ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಅರ್ನಾಬ್ ಚಿತ್ರದೊಂದಿಗೆ ಬಿಜೆಪಿಯ ಧ್ವಜಗಳು ಮತ್ತು ಚಿಹ್ನೆಗಳನ್ನು ಬಳಸಿ ಪ್ರತಿಭಟಿಸಿದ್ದರು.

ಇದನ್ನೂ ಓದಿ: ಆತ್ಮಹತ್ಯೆಗೆ ಪ್ರಚೋದನೆ: ಅರ್ನಾಬ್ ಗೋಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ!

ಇದರ ಕುರಿತು ಪ್ರತಿಕ್ರಿಯಾ ಬರಹವನ್ನು ಬರೆದಿರುವ ಪತ್ರಕರ್ತೆ ಅರ್ಫಾ ಖಾನಮ್ ಶೇರ್ವಾನಿ, “ಅನೇಕ ಉದಾರವಾದಿ ಪತ್ರಕರ್ತರು, ಬರಹಗಾರರು ಮತ್ತು ಕಾರ್ಯಕರ್ತರು ಈ ಬಂಧನವನ್ನು ಖಂಡಿಸಿ, ಅರ್ನಾಬ್‌ ಗೋಸ್ವಾಮಿಯ ಅಭಿವ್ಯಕ್ತಿ ಸ್ವಾತಂತ್ರವನ್ನು ಸಮರ್ಥಿಸಿಕೊಂಡರು. ಜೊತೆಗೆ ಅರ್ನಾಬ್‌ನೊಂದಿಗಿರುವ ಭಿನ್ನಾಭಿಪ್ರಾಯದ ಹೊರತಾಗಿಯೂ ಆತನ ಬಂಧನವನ್ನು ವಿರೋಧಿಸಲು ಒತ್ತಾಯಿಸಿದರು” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಅರ್ನಾಬ್ ಗೋಸ್ವಾಮಿ ಇಂದು ಭಾರತೀಯ ರಾಜಕಾರಣದ ಅತ್ಯಂತ ಶಕ್ತಿಶಾಲಿ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದು, ನರೇಂದ್ರ ಮೋದಿಯವರ ಇಡೀ ಕ್ಯಾಬಿನೆಟ್ ಸಾರ್ವಜನಿಕವಾಗಿ ಹೊರಬಂದು ಯಾರಿಗಾದರೂ ಬೆಂಬಲ ವ್ಯಕ್ತಪಡಿಸಿದ್ದನ್ನು ಇದುವರೆಗೂ ನಾನು ನೋಡಿಲ್ಲ. ಆದರೆ ಈ ಬೆಂಬಲವನ್ನು ಅರ್ನಾಬ್ ಪಡೆದಿದ್ದಾರೆ. ಈತ ಕೊರೊನಾ ಸಾಂಕ್ರಾಮಿಕ ರೋಗಕ್ಕೆ ಕೋಮು ಬಣ್ಣಬಳಿದು ಮುಸ್ಲಿಮರನ್ನು ನೇರವಾಗಿ ದೂಷಿಸಿದ್ದನ್ನು ನಾವೆಲ್ಲರೂ ನೋಡಿದ್ದೇವೆ. ಕೊರೊನಾ ಜಿಹಾದ್, ಕೊರೊನಾ ಭಯೋತ್ಪಾದನೆ, ಕೊರೊನಾ ಬಾಂಬ್ ಮತ್ತು ತಬ್ಲಿಘಿ ಜಮಾತ್ ಎಂದು ಪ್ಯಾನಲ್‌ನಲ್ಲಿ ಕುಳಿತು ಕಿರುಚಾಡುತ್ತಿದ್ದುದನ್ನು ನೋಡಿದ ಎಂತವರ ಮನಸ್ಸಿನಲ್ಲೂ ಮುಸ್ಲಿಮರ ವಿರುದ್ಧ ದ್ವೇಷ ಹುಟ್ಟುವಂತೆ ಮಾಡುತ್ತಿದ್ದ ಅರ್ನಾಬ್‌ನನ್ನು ಒಬ್ಬ ಪತ್ರಕರ್ತ ಎಂದು ಹೇಗೆ ಒಪ್ಪಿಕೊಳ್ಳುವುದು? ಈ ಕಾರ್ಯಕ್ರಮಗಳನ್ನು ನೋಡಿದ ಜನರು ಮುಗ್ಧ ಮುಸಲ್ಮಾನರನ್ನು ಹಣ್ಣು, ಹಾಲು ಮತ್ತು ತರಕಾರಿ ಮಾರುವುದಕ್ಕೂ ಅವಕಾಶ ಕೊಡದಷ್ಟು ಕೋಮು ವ್ಯಾಘ್ರಗಳಾಗಿ ಬದಲಾಗಿದ್ದರು” ಎಂದು ಖಾನಂ ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮಹಿಳಾ ಪೊಲೀಸ್‌ ಮೇಲೆ ಹಲ್ಲೆ: ಅರ್ನಾಬ್ ಸೇರಿ ಪತ್ನಿ & ಮಗನ ವಿರುದ್ಧ ಹೊಸ ಎಫ್‌ಐಆರ್!

“ಹಾಗಾಗಿ ಅರ್ನಾಬ್ ಗೋಸ್ವಾಮಿಯ ರಕ್ಷಣೆಗೆ ಅಥವಾ ಆತನ ಪರ ನಿಲ್ಲಲ್ಲು ನಿರಾಕರಿಸುವುದರಿಂದ ನನ್ನ ಪತ್ರಿಕೋದ್ಯಮ ಧರ್ಮದ ಮೇಲೆ ಮತ್ತು ಪತ್ರಿಕೋದ್ಯಮ ಭ್ರಾತೃತ್ವದ ಮೇಲೆ ಯಾವುದೇ ಋಣಾತ್ಮಕ ಪರಿಣಾಮ ಬೀರುವುದಿಲ್ಲ ಎಂದು ನಾನು ಧೃಢವಾಗಿ ನಂಬಿದ್ದೇನೆ. ಕಳೆದ ಎರಡು ದಶಕಗಳಿಂದ ಆಡಿಯೋ-ವಿಶುವಲ್ ಪತ್ರಿಕೋದ್ಯಮದಲ್ಲಿ ನಾನು ನೂರಾರು ಟಿವಿ ಚರ್ಚೆಗಳನ್ನು ನಡೆಸಿದ್ದೇನೆ. ಆದರೆ ಅರ್ನಾಬ್ ಟಿವಿಗಳಲ್ಲಿ ನಡೆಸುವ ಚರ್ಚೆಗಳನ್ನು ನೋಡಿದರೆ ತಿಳಿಯುತ್ತದೆ, ಆತ ಮಾಡುತ್ತಿರುವುದು ಪತ್ರಿಕೋದ್ಯಮವಲ್ಲ; ಆ ವೃತ್ತಿಗೆ ಮಾಡುತ್ತಿರುವ ಅವಮಾನ ಎಂದು. ಹಾಗಾಗಿ ನಾನು ಅರ್ನಾಬ್ ಪರ ನಿಲ್ಲುವುದಿಲ್ಲ” ಎಂದು ಅರ್ಫಾ ಖಾನಮ್ ಶೇರ್ವಾನಿ ಹೇಳಿದ್ದಾರೆ.

ಇದನ್ನೂ ಓದಿ: ರಿಪಬ್ಲಿಕ್ ಟಿವಿ ಅರ್ನಾಬ್ ಬಂಧನ ಸಂತೋಷ ತಂದಿದೆ: ಅನ್ವಯ್ ನಾಯಕ್ ಕುಟುಂಬ!

“ಅರ್ನಾಬ್ ವಿರುದ್ಧದ ಪೊಲೀಸರ ಈ ಕ್ರಮವು ರಾಜಕೀಯ ಪ್ರೇರಿತವಾಗಿ ಕಂಡರೂ, ಇದು ಅರ್ನಾಬ್ ಆಡುತ್ತಿದ್ದ ಆಟದ ಭಾಗವೇ ಆಗಿದೆ. ವಾಸ್ತವದಲ್ಲಿ ಹೇಳಬೇಕೆಂದರೆ, ಆತ ಒಬ್ಬ ತಟಸ್ಥ ಪತ್ರಕರ್ತನಾಗಿ ಕೆಲಸ ಮಾಡುವುದರ ಬದಲಿಗೆ ಒಬ್ಬ ರಾಜಕೀಯ ದಲ್ಲಾಳಿಯಾಗಿ ವರ್ತಿಸುತ್ತಿದ್ದರು. ಕೇಂದ್ರ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಸರ್ಕಾರಗಳು ಕಳೆದ ಆರು ವರ್ಷಗಳಿಂದ, ಎಡಪಂಥೀಯ ಕಾರ್ಯಕರ್ತರು, ವಿದ್ಯಾರ್ಥಿಗಳು ಮತ್ತು ಪ್ರಾಮಾಣಿಕ ಪತ್ರಕರ್ತರ ಮೇಲೆ ನಡೆಸುತ್ತಿರುವ ಕಿರುಕುಳಕ್ಕೆ ನಾವೆಲ್ಲರೂ ಸಾಕ್ಷಿಯಾಗಿದ್ದೇವೆ. ಸಾರ್ವಜನಿಕ ಬೆಂಬಲವನ್ನು ಗಳಿಸಲು ನ್ಯಾಯಾಲಯದ ಕಲಾಪಗಳನ್ನು ತಮ್ಮ ಸ್ಟುಡಿಯೋದಲ್ಲಿಯೇ ನಡೆಸಿ, ನ್ಯಾಯಾಧೀಶ, ತೀರ್ಪುಗಾರ ಮತ್ತು ಮರಣದಂಡನೆಕಾರರಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆದರೆ, ಬಿಜೆಪಿ ಮತ್ತು ಅದರ ಸರ್ಕಾರಗಳನ್ನು ದೂಷಿಸಿ ಒಬ್ಬೇ ಒಬ್ಬ ಪತ್ರಕರ್ತನ ರಕ್ಷಣೆಗೂ ಆತ ಮುಂದಾಗಿಲ್ಲ. ಹಾಗಾಗಿ ನಿಜವಾದ ಪತ್ರಕರ್ತರು ಇವರ ಬೆಂಬಲಕ್ಕೆ ನಿಲ್ಲುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: TRP ಹಗರಣದಲ್ಲಿ ವಿಚಾರಣೆಗೆ ಹಾಜರಾಗಲು ಸಮನ್ಸ್; ಬಂಧನ ಭೀತಿಯಲ್ಲಿ ಅರ್ನಾಬ್ ಗೋಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...