Homeಮುಖಪುಟನಾನೊಬ್ಬ ಪತ್ರಕರ್ತೆ, ಹಾಗಾಗಿ ಅರ್ನಾಬ್ ಪರ ನಿಲ್ಲುವುದಿಲ್ಲ!- ಅರ್ಫಾ ಖಾನಮ್ ಶೇರ್ವಾನಿ

ನಾನೊಬ್ಬ ಪತ್ರಕರ್ತೆ, ಹಾಗಾಗಿ ಅರ್ನಾಬ್ ಪರ ನಿಲ್ಲುವುದಿಲ್ಲ!- ಅರ್ಫಾ ಖಾನಮ್ ಶೇರ್ವಾನಿ

ಆತ ಒಬ್ಬ ತಟಸ್ಥ ಪತ್ರಕರ್ತನಾಗಿ ಕೆಲಸ ಮಾಡುವುದರ ಬದಲಿಗೆ ಒಬ್ಬ ರಾಜಕೀಯ ದಲ್ಲಾಳಿಯಾಗಿ ವರ್ತಿಸುತ್ತಿದ್ದರು.

- Advertisement -
- Advertisement -

“ನಾನೊಬ್ಬ ಪತ್ರಕರ್ತೆಯಾಗಿರುವುದರಿಂದ ಅರ್ನಾಬ್ ಗೋಸ್ವಾಮಿಯ ಪರ ನಿಲ್ಲುವುದಿಲ್ಲ” ಎಂದು ದಿ ವೈರ್ ಪತ್ರಕರ್ತೆಯಾದ ಅರ್ಫಾ ಖಾನಮ್ ಶೇರ್ವಾನಿ ಹೇಳಿದ್ದಾರೆ. ಹಣದ ವಂಚನೆ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಮುಂಬೈ ಪೊಲೀಸರು ಈ ವಾರ ಅರ್ನಾಬ್ ಗೋಸ್ವಾಮಿಯನ್ನು ಬಂಧಿಸಿದ್ದರು.

ರಿಪಬ್ಲಿಕ್ ಟಿವಿಯ ಮಾಲೀಕರು ಮತ್ತು ಪ್ರಧಾನ ಸಂಪಾದಕರಾದ ಅರ್ನಾಬ್ ಗೋಸ್ವಾಮಿಯನ್ನು ಬಂಧಿಸಿದ ಸುದ್ದಿ ತಿಳಿದ ತಕ್ಷಣ, ಅವರನ್ನು ಬೆಂಬಲಿಸಿ ಎಲ್ಲಾಕಡೆಯಿಂದಲೂ ಪ್ರತಿಕ್ರಿಯೆ ಬರತೊಡಗಿತು. ಅದರಲ್ಲೂ ಇಡೀ ಬಿಜೆಪಿಯ ಪಟಾಲಂ ಒಟ್ಟಾಗಿ, ಕೇಂದ್ರ ಸಚಿವರಾದ ಅಮಿತ್ ಶಾ, ಸ್ಮೃತಿ ಇರಾನಿ, ಪ್ರಕಾಶ್ ಜಾವಡೇಕರ್ ಮತ್ತು ಪಕ್ಷದ ಇತರ ಹಿರಿಯ ಕಾರ್ಯಕರ್ತರು ಸೇರಿದಂತೆ ಹಲವು ನಾಯಕರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಇದನ್ನು 1975 ರಲ್ಲಿ ಇಂದಿರಾ ಗಾಂಧಿ ವಿಧಿಸಿದ ತುರ್ತು ಪರಿಸ್ಥಿತಿಗೆ ಹೋಲಿಸಿದರು. ಇಷ್ಟೇ ಅಲ್ಲದೇ, ಹಲವಾರು ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಅರ್ನಾಬ್ ಚಿತ್ರದೊಂದಿಗೆ ಬಿಜೆಪಿಯ ಧ್ವಜಗಳು ಮತ್ತು ಚಿಹ್ನೆಗಳನ್ನು ಬಳಸಿ ಪ್ರತಿಭಟಿಸಿದ್ದರು.

ಇದನ್ನೂ ಓದಿ: ಆತ್ಮಹತ್ಯೆಗೆ ಪ್ರಚೋದನೆ: ಅರ್ನಾಬ್ ಗೋಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ!

ಇದರ ಕುರಿತು ಪ್ರತಿಕ್ರಿಯಾ ಬರಹವನ್ನು ಬರೆದಿರುವ ಪತ್ರಕರ್ತೆ ಅರ್ಫಾ ಖಾನಮ್ ಶೇರ್ವಾನಿ, “ಅನೇಕ ಉದಾರವಾದಿ ಪತ್ರಕರ್ತರು, ಬರಹಗಾರರು ಮತ್ತು ಕಾರ್ಯಕರ್ತರು ಈ ಬಂಧನವನ್ನು ಖಂಡಿಸಿ, ಅರ್ನಾಬ್‌ ಗೋಸ್ವಾಮಿಯ ಅಭಿವ್ಯಕ್ತಿ ಸ್ವಾತಂತ್ರವನ್ನು ಸಮರ್ಥಿಸಿಕೊಂಡರು. ಜೊತೆಗೆ ಅರ್ನಾಬ್‌ನೊಂದಿಗಿರುವ ಭಿನ್ನಾಭಿಪ್ರಾಯದ ಹೊರತಾಗಿಯೂ ಆತನ ಬಂಧನವನ್ನು ವಿರೋಧಿಸಲು ಒತ್ತಾಯಿಸಿದರು” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಅರ್ನಾಬ್ ಗೋಸ್ವಾಮಿ ಇಂದು ಭಾರತೀಯ ರಾಜಕಾರಣದ ಅತ್ಯಂತ ಶಕ್ತಿಶಾಲಿ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದು, ನರೇಂದ್ರ ಮೋದಿಯವರ ಇಡೀ ಕ್ಯಾಬಿನೆಟ್ ಸಾರ್ವಜನಿಕವಾಗಿ ಹೊರಬಂದು ಯಾರಿಗಾದರೂ ಬೆಂಬಲ ವ್ಯಕ್ತಪಡಿಸಿದ್ದನ್ನು ಇದುವರೆಗೂ ನಾನು ನೋಡಿಲ್ಲ. ಆದರೆ ಈ ಬೆಂಬಲವನ್ನು ಅರ್ನಾಬ್ ಪಡೆದಿದ್ದಾರೆ. ಈತ ಕೊರೊನಾ ಸಾಂಕ್ರಾಮಿಕ ರೋಗಕ್ಕೆ ಕೋಮು ಬಣ್ಣಬಳಿದು ಮುಸ್ಲಿಮರನ್ನು ನೇರವಾಗಿ ದೂಷಿಸಿದ್ದನ್ನು ನಾವೆಲ್ಲರೂ ನೋಡಿದ್ದೇವೆ. ಕೊರೊನಾ ಜಿಹಾದ್, ಕೊರೊನಾ ಭಯೋತ್ಪಾದನೆ, ಕೊರೊನಾ ಬಾಂಬ್ ಮತ್ತು ತಬ್ಲಿಘಿ ಜಮಾತ್ ಎಂದು ಪ್ಯಾನಲ್‌ನಲ್ಲಿ ಕುಳಿತು ಕಿರುಚಾಡುತ್ತಿದ್ದುದನ್ನು ನೋಡಿದ ಎಂತವರ ಮನಸ್ಸಿನಲ್ಲೂ ಮುಸ್ಲಿಮರ ವಿರುದ್ಧ ದ್ವೇಷ ಹುಟ್ಟುವಂತೆ ಮಾಡುತ್ತಿದ್ದ ಅರ್ನಾಬ್‌ನನ್ನು ಒಬ್ಬ ಪತ್ರಕರ್ತ ಎಂದು ಹೇಗೆ ಒಪ್ಪಿಕೊಳ್ಳುವುದು? ಈ ಕಾರ್ಯಕ್ರಮಗಳನ್ನು ನೋಡಿದ ಜನರು ಮುಗ್ಧ ಮುಸಲ್ಮಾನರನ್ನು ಹಣ್ಣು, ಹಾಲು ಮತ್ತು ತರಕಾರಿ ಮಾರುವುದಕ್ಕೂ ಅವಕಾಶ ಕೊಡದಷ್ಟು ಕೋಮು ವ್ಯಾಘ್ರಗಳಾಗಿ ಬದಲಾಗಿದ್ದರು” ಎಂದು ಖಾನಂ ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮಹಿಳಾ ಪೊಲೀಸ್‌ ಮೇಲೆ ಹಲ್ಲೆ: ಅರ್ನಾಬ್ ಸೇರಿ ಪತ್ನಿ & ಮಗನ ವಿರುದ್ಧ ಹೊಸ ಎಫ್‌ಐಆರ್!

“ಹಾಗಾಗಿ ಅರ್ನಾಬ್ ಗೋಸ್ವಾಮಿಯ ರಕ್ಷಣೆಗೆ ಅಥವಾ ಆತನ ಪರ ನಿಲ್ಲಲ್ಲು ನಿರಾಕರಿಸುವುದರಿಂದ ನನ್ನ ಪತ್ರಿಕೋದ್ಯಮ ಧರ್ಮದ ಮೇಲೆ ಮತ್ತು ಪತ್ರಿಕೋದ್ಯಮ ಭ್ರಾತೃತ್ವದ ಮೇಲೆ ಯಾವುದೇ ಋಣಾತ್ಮಕ ಪರಿಣಾಮ ಬೀರುವುದಿಲ್ಲ ಎಂದು ನಾನು ಧೃಢವಾಗಿ ನಂಬಿದ್ದೇನೆ. ಕಳೆದ ಎರಡು ದಶಕಗಳಿಂದ ಆಡಿಯೋ-ವಿಶುವಲ್ ಪತ್ರಿಕೋದ್ಯಮದಲ್ಲಿ ನಾನು ನೂರಾರು ಟಿವಿ ಚರ್ಚೆಗಳನ್ನು ನಡೆಸಿದ್ದೇನೆ. ಆದರೆ ಅರ್ನಾಬ್ ಟಿವಿಗಳಲ್ಲಿ ನಡೆಸುವ ಚರ್ಚೆಗಳನ್ನು ನೋಡಿದರೆ ತಿಳಿಯುತ್ತದೆ, ಆತ ಮಾಡುತ್ತಿರುವುದು ಪತ್ರಿಕೋದ್ಯಮವಲ್ಲ; ಆ ವೃತ್ತಿಗೆ ಮಾಡುತ್ತಿರುವ ಅವಮಾನ ಎಂದು. ಹಾಗಾಗಿ ನಾನು ಅರ್ನಾಬ್ ಪರ ನಿಲ್ಲುವುದಿಲ್ಲ” ಎಂದು ಅರ್ಫಾ ಖಾನಮ್ ಶೇರ್ವಾನಿ ಹೇಳಿದ್ದಾರೆ.

ಇದನ್ನೂ ಓದಿ: ರಿಪಬ್ಲಿಕ್ ಟಿವಿ ಅರ್ನಾಬ್ ಬಂಧನ ಸಂತೋಷ ತಂದಿದೆ: ಅನ್ವಯ್ ನಾಯಕ್ ಕುಟುಂಬ!

“ಅರ್ನಾಬ್ ವಿರುದ್ಧದ ಪೊಲೀಸರ ಈ ಕ್ರಮವು ರಾಜಕೀಯ ಪ್ರೇರಿತವಾಗಿ ಕಂಡರೂ, ಇದು ಅರ್ನಾಬ್ ಆಡುತ್ತಿದ್ದ ಆಟದ ಭಾಗವೇ ಆಗಿದೆ. ವಾಸ್ತವದಲ್ಲಿ ಹೇಳಬೇಕೆಂದರೆ, ಆತ ಒಬ್ಬ ತಟಸ್ಥ ಪತ್ರಕರ್ತನಾಗಿ ಕೆಲಸ ಮಾಡುವುದರ ಬದಲಿಗೆ ಒಬ್ಬ ರಾಜಕೀಯ ದಲ್ಲಾಳಿಯಾಗಿ ವರ್ತಿಸುತ್ತಿದ್ದರು. ಕೇಂದ್ರ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಸರ್ಕಾರಗಳು ಕಳೆದ ಆರು ವರ್ಷಗಳಿಂದ, ಎಡಪಂಥೀಯ ಕಾರ್ಯಕರ್ತರು, ವಿದ್ಯಾರ್ಥಿಗಳು ಮತ್ತು ಪ್ರಾಮಾಣಿಕ ಪತ್ರಕರ್ತರ ಮೇಲೆ ನಡೆಸುತ್ತಿರುವ ಕಿರುಕುಳಕ್ಕೆ ನಾವೆಲ್ಲರೂ ಸಾಕ್ಷಿಯಾಗಿದ್ದೇವೆ. ಸಾರ್ವಜನಿಕ ಬೆಂಬಲವನ್ನು ಗಳಿಸಲು ನ್ಯಾಯಾಲಯದ ಕಲಾಪಗಳನ್ನು ತಮ್ಮ ಸ್ಟುಡಿಯೋದಲ್ಲಿಯೇ ನಡೆಸಿ, ನ್ಯಾಯಾಧೀಶ, ತೀರ್ಪುಗಾರ ಮತ್ತು ಮರಣದಂಡನೆಕಾರರಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆದರೆ, ಬಿಜೆಪಿ ಮತ್ತು ಅದರ ಸರ್ಕಾರಗಳನ್ನು ದೂಷಿಸಿ ಒಬ್ಬೇ ಒಬ್ಬ ಪತ್ರಕರ್ತನ ರಕ್ಷಣೆಗೂ ಆತ ಮುಂದಾಗಿಲ್ಲ. ಹಾಗಾಗಿ ನಿಜವಾದ ಪತ್ರಕರ್ತರು ಇವರ ಬೆಂಬಲಕ್ಕೆ ನಿಲ್ಲುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: TRP ಹಗರಣದಲ್ಲಿ ವಿಚಾರಣೆಗೆ ಹಾಜರಾಗಲು ಸಮನ್ಸ್; ಬಂಧನ ಭೀತಿಯಲ್ಲಿ ಅರ್ನಾಬ್ ಗೋಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...