Homeಮುಖಪುಟನಾನೊಬ್ಬ ಪತ್ರಕರ್ತೆ, ಹಾಗಾಗಿ ಅರ್ನಾಬ್ ಪರ ನಿಲ್ಲುವುದಿಲ್ಲ!- ಅರ್ಫಾ ಖಾನಮ್ ಶೇರ್ವಾನಿ

ನಾನೊಬ್ಬ ಪತ್ರಕರ್ತೆ, ಹಾಗಾಗಿ ಅರ್ನಾಬ್ ಪರ ನಿಲ್ಲುವುದಿಲ್ಲ!- ಅರ್ಫಾ ಖಾನಮ್ ಶೇರ್ವಾನಿ

ಆತ ಒಬ್ಬ ತಟಸ್ಥ ಪತ್ರಕರ್ತನಾಗಿ ಕೆಲಸ ಮಾಡುವುದರ ಬದಲಿಗೆ ಒಬ್ಬ ರಾಜಕೀಯ ದಲ್ಲಾಳಿಯಾಗಿ ವರ್ತಿಸುತ್ತಿದ್ದರು.

- Advertisement -
- Advertisement -

“ನಾನೊಬ್ಬ ಪತ್ರಕರ್ತೆಯಾಗಿರುವುದರಿಂದ ಅರ್ನಾಬ್ ಗೋಸ್ವಾಮಿಯ ಪರ ನಿಲ್ಲುವುದಿಲ್ಲ” ಎಂದು ದಿ ವೈರ್ ಪತ್ರಕರ್ತೆಯಾದ ಅರ್ಫಾ ಖಾನಮ್ ಶೇರ್ವಾನಿ ಹೇಳಿದ್ದಾರೆ. ಹಣದ ವಂಚನೆ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಮುಂಬೈ ಪೊಲೀಸರು ಈ ವಾರ ಅರ್ನಾಬ್ ಗೋಸ್ವಾಮಿಯನ್ನು ಬಂಧಿಸಿದ್ದರು.

ರಿಪಬ್ಲಿಕ್ ಟಿವಿಯ ಮಾಲೀಕರು ಮತ್ತು ಪ್ರಧಾನ ಸಂಪಾದಕರಾದ ಅರ್ನಾಬ್ ಗೋಸ್ವಾಮಿಯನ್ನು ಬಂಧಿಸಿದ ಸುದ್ದಿ ತಿಳಿದ ತಕ್ಷಣ, ಅವರನ್ನು ಬೆಂಬಲಿಸಿ ಎಲ್ಲಾಕಡೆಯಿಂದಲೂ ಪ್ರತಿಕ್ರಿಯೆ ಬರತೊಡಗಿತು. ಅದರಲ್ಲೂ ಇಡೀ ಬಿಜೆಪಿಯ ಪಟಾಲಂ ಒಟ್ಟಾಗಿ, ಕೇಂದ್ರ ಸಚಿವರಾದ ಅಮಿತ್ ಶಾ, ಸ್ಮೃತಿ ಇರಾನಿ, ಪ್ರಕಾಶ್ ಜಾವಡೇಕರ್ ಮತ್ತು ಪಕ್ಷದ ಇತರ ಹಿರಿಯ ಕಾರ್ಯಕರ್ತರು ಸೇರಿದಂತೆ ಹಲವು ನಾಯಕರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಇದನ್ನು 1975 ರಲ್ಲಿ ಇಂದಿರಾ ಗಾಂಧಿ ವಿಧಿಸಿದ ತುರ್ತು ಪರಿಸ್ಥಿತಿಗೆ ಹೋಲಿಸಿದರು. ಇಷ್ಟೇ ಅಲ್ಲದೇ, ಹಲವಾರು ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಅರ್ನಾಬ್ ಚಿತ್ರದೊಂದಿಗೆ ಬಿಜೆಪಿಯ ಧ್ವಜಗಳು ಮತ್ತು ಚಿಹ್ನೆಗಳನ್ನು ಬಳಸಿ ಪ್ರತಿಭಟಿಸಿದ್ದರು.

ಇದನ್ನೂ ಓದಿ: ಆತ್ಮಹತ್ಯೆಗೆ ಪ್ರಚೋದನೆ: ಅರ್ನಾಬ್ ಗೋಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ!

ಇದರ ಕುರಿತು ಪ್ರತಿಕ್ರಿಯಾ ಬರಹವನ್ನು ಬರೆದಿರುವ ಪತ್ರಕರ್ತೆ ಅರ್ಫಾ ಖಾನಮ್ ಶೇರ್ವಾನಿ, “ಅನೇಕ ಉದಾರವಾದಿ ಪತ್ರಕರ್ತರು, ಬರಹಗಾರರು ಮತ್ತು ಕಾರ್ಯಕರ್ತರು ಈ ಬಂಧನವನ್ನು ಖಂಡಿಸಿ, ಅರ್ನಾಬ್‌ ಗೋಸ್ವಾಮಿಯ ಅಭಿವ್ಯಕ್ತಿ ಸ್ವಾತಂತ್ರವನ್ನು ಸಮರ್ಥಿಸಿಕೊಂಡರು. ಜೊತೆಗೆ ಅರ್ನಾಬ್‌ನೊಂದಿಗಿರುವ ಭಿನ್ನಾಭಿಪ್ರಾಯದ ಹೊರತಾಗಿಯೂ ಆತನ ಬಂಧನವನ್ನು ವಿರೋಧಿಸಲು ಒತ್ತಾಯಿಸಿದರು” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಅರ್ನಾಬ್ ಗೋಸ್ವಾಮಿ ಇಂದು ಭಾರತೀಯ ರಾಜಕಾರಣದ ಅತ್ಯಂತ ಶಕ್ತಿಶಾಲಿ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದು, ನರೇಂದ್ರ ಮೋದಿಯವರ ಇಡೀ ಕ್ಯಾಬಿನೆಟ್ ಸಾರ್ವಜನಿಕವಾಗಿ ಹೊರಬಂದು ಯಾರಿಗಾದರೂ ಬೆಂಬಲ ವ್ಯಕ್ತಪಡಿಸಿದ್ದನ್ನು ಇದುವರೆಗೂ ನಾನು ನೋಡಿಲ್ಲ. ಆದರೆ ಈ ಬೆಂಬಲವನ್ನು ಅರ್ನಾಬ್ ಪಡೆದಿದ್ದಾರೆ. ಈತ ಕೊರೊನಾ ಸಾಂಕ್ರಾಮಿಕ ರೋಗಕ್ಕೆ ಕೋಮು ಬಣ್ಣಬಳಿದು ಮುಸ್ಲಿಮರನ್ನು ನೇರವಾಗಿ ದೂಷಿಸಿದ್ದನ್ನು ನಾವೆಲ್ಲರೂ ನೋಡಿದ್ದೇವೆ. ಕೊರೊನಾ ಜಿಹಾದ್, ಕೊರೊನಾ ಭಯೋತ್ಪಾದನೆ, ಕೊರೊನಾ ಬಾಂಬ್ ಮತ್ತು ತಬ್ಲಿಘಿ ಜಮಾತ್ ಎಂದು ಪ್ಯಾನಲ್‌ನಲ್ಲಿ ಕುಳಿತು ಕಿರುಚಾಡುತ್ತಿದ್ದುದನ್ನು ನೋಡಿದ ಎಂತವರ ಮನಸ್ಸಿನಲ್ಲೂ ಮುಸ್ಲಿಮರ ವಿರುದ್ಧ ದ್ವೇಷ ಹುಟ್ಟುವಂತೆ ಮಾಡುತ್ತಿದ್ದ ಅರ್ನಾಬ್‌ನನ್ನು ಒಬ್ಬ ಪತ್ರಕರ್ತ ಎಂದು ಹೇಗೆ ಒಪ್ಪಿಕೊಳ್ಳುವುದು? ಈ ಕಾರ್ಯಕ್ರಮಗಳನ್ನು ನೋಡಿದ ಜನರು ಮುಗ್ಧ ಮುಸಲ್ಮಾನರನ್ನು ಹಣ್ಣು, ಹಾಲು ಮತ್ತು ತರಕಾರಿ ಮಾರುವುದಕ್ಕೂ ಅವಕಾಶ ಕೊಡದಷ್ಟು ಕೋಮು ವ್ಯಾಘ್ರಗಳಾಗಿ ಬದಲಾಗಿದ್ದರು” ಎಂದು ಖಾನಂ ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮಹಿಳಾ ಪೊಲೀಸ್‌ ಮೇಲೆ ಹಲ್ಲೆ: ಅರ್ನಾಬ್ ಸೇರಿ ಪತ್ನಿ & ಮಗನ ವಿರುದ್ಧ ಹೊಸ ಎಫ್‌ಐಆರ್!

“ಹಾಗಾಗಿ ಅರ್ನಾಬ್ ಗೋಸ್ವಾಮಿಯ ರಕ್ಷಣೆಗೆ ಅಥವಾ ಆತನ ಪರ ನಿಲ್ಲಲ್ಲು ನಿರಾಕರಿಸುವುದರಿಂದ ನನ್ನ ಪತ್ರಿಕೋದ್ಯಮ ಧರ್ಮದ ಮೇಲೆ ಮತ್ತು ಪತ್ರಿಕೋದ್ಯಮ ಭ್ರಾತೃತ್ವದ ಮೇಲೆ ಯಾವುದೇ ಋಣಾತ್ಮಕ ಪರಿಣಾಮ ಬೀರುವುದಿಲ್ಲ ಎಂದು ನಾನು ಧೃಢವಾಗಿ ನಂಬಿದ್ದೇನೆ. ಕಳೆದ ಎರಡು ದಶಕಗಳಿಂದ ಆಡಿಯೋ-ವಿಶುವಲ್ ಪತ್ರಿಕೋದ್ಯಮದಲ್ಲಿ ನಾನು ನೂರಾರು ಟಿವಿ ಚರ್ಚೆಗಳನ್ನು ನಡೆಸಿದ್ದೇನೆ. ಆದರೆ ಅರ್ನಾಬ್ ಟಿವಿಗಳಲ್ಲಿ ನಡೆಸುವ ಚರ್ಚೆಗಳನ್ನು ನೋಡಿದರೆ ತಿಳಿಯುತ್ತದೆ, ಆತ ಮಾಡುತ್ತಿರುವುದು ಪತ್ರಿಕೋದ್ಯಮವಲ್ಲ; ಆ ವೃತ್ತಿಗೆ ಮಾಡುತ್ತಿರುವ ಅವಮಾನ ಎಂದು. ಹಾಗಾಗಿ ನಾನು ಅರ್ನಾಬ್ ಪರ ನಿಲ್ಲುವುದಿಲ್ಲ” ಎಂದು ಅರ್ಫಾ ಖಾನಮ್ ಶೇರ್ವಾನಿ ಹೇಳಿದ್ದಾರೆ.

ಇದನ್ನೂ ಓದಿ: ರಿಪಬ್ಲಿಕ್ ಟಿವಿ ಅರ್ನಾಬ್ ಬಂಧನ ಸಂತೋಷ ತಂದಿದೆ: ಅನ್ವಯ್ ನಾಯಕ್ ಕುಟುಂಬ!

“ಅರ್ನಾಬ್ ವಿರುದ್ಧದ ಪೊಲೀಸರ ಈ ಕ್ರಮವು ರಾಜಕೀಯ ಪ್ರೇರಿತವಾಗಿ ಕಂಡರೂ, ಇದು ಅರ್ನಾಬ್ ಆಡುತ್ತಿದ್ದ ಆಟದ ಭಾಗವೇ ಆಗಿದೆ. ವಾಸ್ತವದಲ್ಲಿ ಹೇಳಬೇಕೆಂದರೆ, ಆತ ಒಬ್ಬ ತಟಸ್ಥ ಪತ್ರಕರ್ತನಾಗಿ ಕೆಲಸ ಮಾಡುವುದರ ಬದಲಿಗೆ ಒಬ್ಬ ರಾಜಕೀಯ ದಲ್ಲಾಳಿಯಾಗಿ ವರ್ತಿಸುತ್ತಿದ್ದರು. ಕೇಂದ್ರ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಸರ್ಕಾರಗಳು ಕಳೆದ ಆರು ವರ್ಷಗಳಿಂದ, ಎಡಪಂಥೀಯ ಕಾರ್ಯಕರ್ತರು, ವಿದ್ಯಾರ್ಥಿಗಳು ಮತ್ತು ಪ್ರಾಮಾಣಿಕ ಪತ್ರಕರ್ತರ ಮೇಲೆ ನಡೆಸುತ್ತಿರುವ ಕಿರುಕುಳಕ್ಕೆ ನಾವೆಲ್ಲರೂ ಸಾಕ್ಷಿಯಾಗಿದ್ದೇವೆ. ಸಾರ್ವಜನಿಕ ಬೆಂಬಲವನ್ನು ಗಳಿಸಲು ನ್ಯಾಯಾಲಯದ ಕಲಾಪಗಳನ್ನು ತಮ್ಮ ಸ್ಟುಡಿಯೋದಲ್ಲಿಯೇ ನಡೆಸಿ, ನ್ಯಾಯಾಧೀಶ, ತೀರ್ಪುಗಾರ ಮತ್ತು ಮರಣದಂಡನೆಕಾರರಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆದರೆ, ಬಿಜೆಪಿ ಮತ್ತು ಅದರ ಸರ್ಕಾರಗಳನ್ನು ದೂಷಿಸಿ ಒಬ್ಬೇ ಒಬ್ಬ ಪತ್ರಕರ್ತನ ರಕ್ಷಣೆಗೂ ಆತ ಮುಂದಾಗಿಲ್ಲ. ಹಾಗಾಗಿ ನಿಜವಾದ ಪತ್ರಕರ್ತರು ಇವರ ಬೆಂಬಲಕ್ಕೆ ನಿಲ್ಲುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: TRP ಹಗರಣದಲ್ಲಿ ವಿಚಾರಣೆಗೆ ಹಾಜರಾಗಲು ಸಮನ್ಸ್; ಬಂಧನ ಭೀತಿಯಲ್ಲಿ ಅರ್ನಾಬ್ ಗೋಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...