Homeಮುಖಪುಟನೀಟ್ ಪರೀಕ್ಷೆಯಿಂದ ವಿದ್ಯಾರ್ಥಿಗಳಿಗೆ ಉಂಟಾಗುವ ಮಾನಸಿಕ ನೋವು ನನಗೆ ತಿಳಿದಿದೆ - ನಟಿ ಸಾಯಿ ಪಲ್ಲವಿ

ನೀಟ್ ಪರೀಕ್ಷೆಯಿಂದ ವಿದ್ಯಾರ್ಥಿಗಳಿಗೆ ಉಂಟಾಗುವ ಮಾನಸಿಕ ನೋವು ನನಗೆ ತಿಳಿದಿದೆ – ನಟಿ ಸಾಯಿ ಪಲ್ಲವಿ

- Advertisement -
- Advertisement -

ನೀಟ್‌ ಪರೀಕ್ಷೆಯಿಂದ ವಿದ್ಯಾರ್ಥಿಗಳಿಗೆ ಉಂಟಾಗುವ ಮಾನಸಿಕ ನೋವಿನ ಬಗ್ಗೆ ನನಗೆ ತಿಳಿದಿದೆ ಎಂದು ಬಹುಭಾಷಾ ನಟಿ ಸಾಯಿ ಪಲ್ಲವಿ ಹೇಳಿದ್ದಾರೆ. ಸ್ವತಃ ವೈದ್ಯರೂ ಆಗಿರುವ ಸಾಯಿ ಪಲ್ಲವಿ, ಖಾಸಗಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡುತ್ತಾ ನೀಟ್ ಆತ್ಮಹತ್ಯೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಜೊತೆಗೆ, ನಾನು ಯಾವತ್ತಿದ್ದರೂ ವಿದ್ಯಾರ್ಥಿಗಳ ಪರ ಎಂದು ಹೇಳಿದ್ದಾರೆ.

“ವೈದ್ಯಕೀಯವು ಸಮುದ್ರದಂತಹ ಅಧ್ಯಯನವಾಗಿದೆ. ಪರೀಕ್ಷೆಯ ಸಮಯದಲ್ಲಿ ಪ್ರಶ್ನೆಗಳು ಎಲ್ಲಿಂದ ಬರುತ್ತವೆ ಎಂದು ಹೇಳಲು ಸಾಧ್ಯವಿಲ್ಲ. ಇದರ ಪರಿಣಾಮವಾಗಿ ನಾವು ಮಾನಸಿಕ ಖಿನ್ನತೆಗೆ ಒಳಗಾಗುತ್ತೇವೆ. ಪೋಷಕರು ಮತ್ತು ಸ್ನೇಹಿತರು ವಿದ್ಯಾರ್ಥಿಗಳೊಂದಿಗೆ ಮಾತನಾಡಿ ಆತ್ಮವಿಶ್ವಾಸ ತುಂಬಬೇಕು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ‘ನೀಟ್‌-2021’ ಪರೀಕ್ಷೆ – ವಿದ್ಯಾರ್ಥಿಗಳು ತಿಳಿದಿರಲೇ ಬೇಕಾದ ಕೆಲ ಹೊಸ ನಿಯಮಗಳಿವು!

“ನನ್ನ ಕುಟುಂಬದಲ್ಲಿ ಕೂಡಾ ನೀಟ್‌ ಆತ್ಮಹತ್ಯೆಯಂತಹ ದುರಂತದ ಸಂಭವಿಸಿದೆ. ಅಂಕಗಳು ಕಡಿಮೆಯಾಗಿದ್ದಕ್ಕೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರು ಅಲ್ಲಿಯವರೆಗೆ ಅಷ್ಟು ಕಡಿಮೆ ಅಂಕ ಪಡೆದಿರಲಿಲ್ಲ. ಇದರಿಂದಾಗಿ ಅವರಿಗೆ ಕೀಳರಿಮೆ ಉಂಟಾಗಿ ಆತ್ಮಹತ್ಯೆ ಮಾಡಿಕೊಂಡರು” ಎಂದು ಸಾಯಿ ಪಲ್ಲವಿ ಹೇಳಿದ್ದಾರೆ.

“ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುವುದು ಅವರ ಕುಟುಂಬಕ್ಕೆ ಅರಗಿಸಿಕೊಳ್ಳಲಾಗುದಿಲ್ಲ. ಆತ್ಮಹತ್ಯೆ ಮಾಡಿಕೊಳ್ಳಬೇಡಿ ಎಂದು ನಾನು ಸುಲಭವಾಗಿ ಹೇಳಬಲ್ಲೆ. ಆದರೆ ಆ ಸ್ಥಾನದಲ್ಲಿ ಇರುವವರಿಗೆ ಮಾತ್ರ ಅದರ ನೋವು ತಿಳಿದಿದೆ. ಅವರು ಯಾಕೆ ಆ ತೀರ್ಮಾನಕ್ಕೆ ಬಂದರು ಎಂದು ಕೂಡಾ ನೋಡಬೇಕಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ಪೋಷಕರು ಮತ್ತು ಸ್ನೇಹಿತರು ವಿದ್ಯಾರ್ಥಿಗಳೊಂದಿಗೆ ಮಾತನಾಡಿ ಆತ್ಮವಿಶ್ವಾಸ ತುಂಬಬೇಕು. ಹದಿನೆಂಟು ವರ್ಷದೊಳಗಿನ ವಿದ್ಯಾರ್ಥಿಗಳು ಇಷ್ಟು ಚಿಕ್ಕ ವಯಸ್ಸಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಹೃದಯ ವಿದ್ರಾವಕ. ನನಗೆ ಈ ವಿದ್ಯಾರ್ಥಿಗಳ ನೋವು ಮತ್ತು ಅವರ ಸಮಸ್ಯೆಗಳು ತಿಳಿದಿದೆ. ಈ ವಿಷಯದಲ್ಲಿ ನಾನು ಯಾವಾಗಲೂ ವಿದ್ಯಾರ್ಥಿಗಳ ಪರ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಹುಪಾಲು ವಿದ್ಯಾರ್ಥಿಗಳಿಗೆ ‘ನೀಟ್‌‌’ ಬೇಡ: ನ್ಯಾಯಮೂರ್ತಿ ರಾಜನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...