Homeಮುಖಪುಟ‘ನನ್ನನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಲಾಗುತ್ತಿದೆ’: ಕೊಲೆಗೀಡಾದ ಉತ್ತರಾಖಂಡದ ಯುವತಿಯ ವಾಟ್ಸಾಪ್ ಚಾಟ್‌‌

‘ನನ್ನನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಲಾಗುತ್ತಿದೆ’: ಕೊಲೆಗೀಡಾದ ಉತ್ತರಾಖಂಡದ ಯುವತಿಯ ವಾಟ್ಸಾಪ್ ಚಾಟ್‌‌

ಯುವತಿಯ ಕೊಲೆ ಪ್ರಕರಣದಲ್ಲಿ ಆರೆಸ್ಸೆಸ್‌, ಬಿಜೆಪಿಯ ಹಿರಿಯ ಮುಖಂಡನ ಮಗ ಪ್ರಮುಖ ಆರೋಪಿಯಾಗಿದ್ದು, ಬಂಧಿಸಲಾಗಿದೆ

- Advertisement -
- Advertisement -

ಆರೆಸ್ಸೆಸ್‌ ಮತ್ತು ಬಿಜೆಪಿ ನಾಯಕನ ಮಗ ನಡೆಸಿರುವ ಉತ್ತರಖಂಡ ಯುವತಿ ಕೊಲೆ ಪ್ರಕರಣದ ಮತ್ತಷ್ಟು ವಿವರಗಳು ಹೊರಬೀಳುತ್ತಿವೆ. ಆರೋಪಿಗಳು ರೆಸಾರ್ಟ್‌ನಲ್ಲಿ ಹದಿಹರೆಯದವರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದಾರೆ ಎಂದು ಹತ್ಯೆಗೀಡಾದ ಯುವತಿಯು ತನ್ನ ಸ್ನೇಹಿತೆಗೆ ಮಾಡಿದ್ದ ವಾಟ್ಸಾಪ್ ಸಂದೇಶಗಳ ಆರೋಪವನ್ನು ದೃಢಪಡಿಸುವಂತಿದೆ ಎಂದು ಎನ್‌ಡಿಟಿವಿ ವರದಿ ಹೇಳಿದೆ.

“ಅವರು ನನ್ನನ್ನು ವೇಶ್ಯೆಯನ್ನಾಗಿ ಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದು ಕೊಲೆಗೀಡಾದ ಯುವತಿಯು ತನ್ನ ಸ್ನೇಹಿತರಿಗೆ ಸಂದೇಶ ಕಳುಹಿಸಿದ್ದು ಮತ್ತು ರೆಸಾರ್ಟ್‌ನಲ್ಲಿ ಸ್ವಾಗತಕಾರಿಣಿಯಾಗಿ ಕೆಲಸ ಮಾಡಿದ ಅನುಭವವನ್ನು ವಿವರಿಸುತ್ತಿದ್ದ ಬಗ್ಗೆ ವರದಿಗಳು ಬಹಿರಂಗಗೊಂಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಯುವತಿಯು ಕಳುಹಿಸಿರುವ ಸಂದೇಶಗಳ ಸ್ಕ್ರೀನ್‌ಶಾಟ್‌ಗಳು ಹರಿದಾಡುತ್ತಿದೆ. ಅದರಲ್ಲಿ ಅವರು, ರೆಸಾರ್ಟ್‌ಗೆ ಆಗಮಿಸುತ್ತಿದ್ದ ಗ್ರಾಹಕರಿಗೆ 10 ಸಾವಿರ ರೂ.ಗೆ ‘ವಿಶೇಷ ಸೇವೆಗಳನ್ನು’ ಒದಗಿಸಲು ಹೇಗೆ ಒತ್ತಾಯಿಸಲಾಯಿತು ಎಂಬುದನ್ನು ವಿವರಿಸಿದ್ದಾರೆ. ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಗಳು ಈ ಸಂದೇಶಗಳು ಕೊಲೆಗೀಡಾದ ಯುವತಿಯದ್ದೆ ಎಂದು ಸೂಚಿಸುತ್ತಿವೆ ಎಂದು ಎನ್‌ಡಿಟಿವಿ ಪೊಲೀಸರ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಮಾಡಿದೆ. ಈ ಬಗ್ಗೆ ಇನ್ನಷ್ಟು ಫೋರೆನ್ಸಿಕ್ ತನಿಖೆಯನ್ನು ಸಹ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರಖಂಡ ಯುವತಿ ಕೊಲೆ ಪ್ರಕರಣ: ಬಿಜೆಪಿ ಮುಖಂಡನ ಪುತ್ರನ ರೆಸಾರ್ಟ್, ಬಿಜೆಪಿ ಶಾಸಕನ ಕಾರಿಗೆ ಬೆಂಕಿ

“ರೆಸಾರ್ಟ್‌ನಲ್ಲಿ ವ್ಯಕ್ತಿಯೊಬ್ಬ ಅನುಚಿತವಾಗಿ ತನ್ನ ಸ್ಪರ್ಶಿಸಿದ್ದು, ನಂತರ ತಾನು ಕುಡಿದಿದ್ದರಿಂದ ಹೀಗಾಯ್ತು, ಯಾರಿಗೂ ಹೇಳದಿರುವಂತೆ ಕೇಳಿಕೊಂಡಿದ್ದ” ಎಂದು ಸಂತ್ರಸ್ತ ಯುವತಿಯು ತನ್ನ ಸ್ನೇಹಿತನಿಗೆ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇಷ್ಟೆ ಅಲ್ಲದೆ ಯುವತಿಯು ರೆಸಾರ್ಟ್ ಉದ್ಯೋಗಿಯೊಬ್ಬರಿಗೆ ಕರೆ ಮಾಡಿದ ಆಡಿಯೋ ಕ್ಲಿಪ್ ಕೂಡ ವೈರಲ್ ಆಗಿದೆ. ಅದರಲ್ಲಿ ಯುವತಿ ಫೋನ್‌ನಲ್ಲಿ ಅಳುವುದು ಮತ್ತು ತನ್ನ ಬ್ಯಾಗ್ ಅನ್ನು ಮೇಲಕ್ಕೆ ತರಲು ಇನ್ನೊಬ್ಬ ವ್ಯಕ್ತಿಯು ಕೇಳುವುದು ಕೇಳಿಸುತ್ತದೆ.

“ಅತಿಥಿಗಳಿಗೆ ‘ವಿಶೇಷ ಸೇವೆ’ಗಳನ್ನು ಒದಗಿಸುವಂತೆ ರೆಸಾರ್ಟ್ ಮಾಲೀಕರು ಯುವತಿಗೆ ಒತ್ತಡ ಹೇರುತ್ತಿದ್ದರು” ಎಂದು ಉತ್ತರಾಖಂಡದ ಉನ್ನತ ಪೊಲೀಸ್ ಅಶೋಕ್ ಕುಮಾರ್ ಹೇಳಿದ್ದಾರೆ.

ಯುವತಿ ಕೆಲಸ ಮಾಡುತ್ತಿದ್ದ ರೆಸಾರ್ಟ್ ಮಾಲೀಕರು ಪುಲ್ಕಿತ್ ಆರ್ಯ ಬೇಡಿಕೆಯಂತೆ ಅತಿಥಿಗಳೊಂದಿಗೆ ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಕಾರಣ ಅವರನ್ನು ಕೊಲ್ಲಲಾಯಿತು ಎಂದು ಈ ಹಿಂದೆ ಅವರ ಫೇಸ್‌ಬುಕ್ ಸ್ನೇಹಿತರೊಬ್ಬರು ಹೇಳಿದ್ದರು.

ಇದನ್ನೂ ಓದಿ: ಉತ್ತರಖಂಡ: 19 ವರ್ಷದ ಯುವತಿ ಕೊಲೆಗೈದ ಬಿಜೆಪಿ ಮುಖಂಡನ ಮಗನ ಬಂಧನ 

ಅದೇ ದಿನ ರಾತ್ರಿ ಕೊಲೆಗೀಡಾದ ಯುವತಿಯು ಈ ಸ್ನೇಹಿತನಿಗೆ ಕರೆ ಮಾಡಿದ್ದರು. ರಾತ್ರಿ 8:30 ರ ನಂತರ ಯುವತಿಯ ಫೋನ್ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಪದೇ ಪದೇ ಕರೆ ಮಾಡಲು ಪ್ರಯತ್ನಿಸಿದ್ದ ಸ್ನೇಹಿತ, ಯುವತಿ ಸಂಪರ್ಕಕ್ಕೆ ಸಿಗದ ಕಾರಣ ಪುಲ್ಕಿತ್ ಆರ್ಯನಿಗೆ ಫೋನ್ ಮಾಡಿದ್ದರು. ಆಗ ಆರೋಪಿಯು ಯುವತಿ ನಿದ್ದೆ ಮಾಡಲು ತನ್ನ ಕೋಣೆಗೆ ಹೋಗಿದ್ದಾಳೆ ಎಂದು ಹೇಳಿದ್ದಾನೆ.

ಮರುದಿನ ಕೂಡಾ ಯುವತಿಯ ಸ್ನೇಹಿತ ಪುಲ್ಕಿತ್‌ಗೆ ಕರೆ ಮಾಡಿದಾಗ, ಅವರ ಫೋನ್ ಸ್ವಿಚ್ ಆಫ್ ಆಗಿರುವುದು ಕಂಡುಬಂದಿದೆ. ಆಗ ಸ್ನೇಹಿತ ರೆಸಾರ್ಟ್‌ನ ಮ್ಯಾನೇಜರ್ ಅಂಕಿತ್‌ಗೆ ಫೋನ್ ಮಾಡಿದ್ದರು. ಈ ವೇಳೆ ಅಂಕಿತ್‌ ಯುವತಿಯು ಜಿಮ್‌ನಲ್ಲಿದ್ದಾರೆ ಎಂದು ಹೇಳಿದ್ದನು. ಇದರ ನಂತರ ಸ್ನೇಹಿತ ರೆಸಾರ್ಟ್‌ನ ಬಾಣಸಿಗರೊಂದಿಗೆ ಮಾತನಾಡಿದಾಗ, ಅವರು ಆ ದಿನ ಯುವತಿಯನ್ನು ನೋಡಿಲ್ಲ ಎಂದು ಹೇಳಿದ್ದಾರೆ.

ರೆಸಾರ್ಟ್‌ನಲ್ಲಿ ವಿವಿಐಪಿ ಅತಿಥಿಗಳಿಗೆ 10 ಸಾವಿರ ರೂ.ಗಳಿಗೆ ‘ಹೆಚ್ಚುವರಿ ಸೇವೆ’ಯನ್ನು ಒದಗಿಸಲಾಗಿದೆ ಎಂದು ವಾಟ್ಸಾಪ್ ಚಾಟ್‌ಗಳು ಸೂಚಿಸುತ್ತದೆ. ಸ್ಪಾ ನೆಪದಲ್ಲಿ ಈ ‘ಹೆಚ್ಚುವರಿ ಸೇವೆ’ ಒದಗಿಸಲಾಗಿದೆ ಎಂದು ಚಾಟ್‌ಗಳು ಬಹಿರಂಗಪಡಿಸುತ್ತವೆ.

ಇದನ್ನೂ ಓದಿ: ಉತ್ತರ ಪ್ರದೇಶ: ಮಹಿಳೆಯ ಮೇಲೆ ಕೈ ಮಾಡಿ, ಅಶ್ಲೀಲ ಪದಗಳಲ್ಲಿ ನಿಂದಿಸಿದ ಬಿಜೆಪಿ ಮುಖಂಡ

ಪ್ರಕರಣದ ಹಿನ್ನೆಲೆ

ಪುಲ್ಕಿತ್ ಆರ್ಯನ ರೆಸಾರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ 19 ವರ್ಷದ ಯುವತಿ ಸೆಪ್ಟಂಬರ್ 18ರಂದು ಕಾಣೆಯಾಗಿದ್ದರು. ಸ್ವತಃ ಪುಲ್ಕಿತ್ ಆರ್ಯನೇ ಪೊಲೀಸ್ ಠಾಣೆಯಲ್ಲಿ ಯುವತಿ ಕಾಣೆಯಾಗಿದ್ದಾರೆ ಎಂದು ದೂರು ನೀಡಿದ್ದನು. ಆದರೆ 5 ದಿನದ ನಂತರ ಪುಲ್ಕಿತ್ ಆರ್ಯ ಇಬ್ಬರು ಸಿಬ್ಬಂದಿಯೊಡನೆ ಸೇರಿ ಯುವತಿಯನ್ನು ಕೊಂದಿದ್ದಾನೆ ಎಂಬ ಅಂಶ ಬೆಳಕಿಗೆ ಬಂದಿದೆ.

ಸಂತ್ರಸ್ತ ಯುವತಿಯ ಕುಟುಂಬವು ಮೊದಲಿನಿಂದಲೂ ಪುಲ್ಕಿತ್ ಆರ್ಯನ ಮೇಲೆ ಸಂಶಯ ವ್ಯಕ್ತಪಡಿಸಿತ್ತು. ಏಕೆಂದರೆ ಪ್ರಕರಣದ ಬಗ್ಗೆ ಆತ ಆರಂಭದಲ್ಲಿ ದೂರು ನೀಡಲು ನಿರಾಕರಿಸಿದ್ದ ಎಂದು ಹೇಳಲಾಗಿದೆ. ಮೃತ ದೇಹವನ್ನು ಪಕ್ಕದ ಕಾಲುವೆಯಲ್ಲಿ ಪತ್ತೆಹಚ್ಚಲಾಗಿದ್ದು, ಯುವತಿಯ ಸಂಬಂಧಿಕರನ್ನು ಗುರುತು ಪತ್ತೆ ಹಚ್ಚಲು ಕರೆಯಲಾಗಿದೆ ಎಂದು ವರದಿಯಾಗಿದೆ.

ಈ ನಡವೆ ಆರೋಪಿಯು ಹಿರಿಯ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಮುಖಂಡನ ಮಗನಾಗಿದ್ದರಿಂದ ಪೊಲೀಸರು ತನಿಖೆಯಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಷಯ ವೈರಲ್ ಆದ ನಂತರ ಪೊಲೀಸರು ಮುಖ್ಯ ಆರೋಪಿ ಪುಲ್ಕಿತ್ ಮತ್ತು ಇಬ್ಬರು ಸಿಬ್ಬಂದಿಗಳನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ದ್ವೇಷ ಭಾಷಣ: ಹಿಮಾಚಲ ಸರ್ಕಾರಕ್ಕೆ ತರಾಟೆ, ಉತ್ತರಾಖಂಡ್‌ಗೆ ಖಡಕ್‌ ಎಚ್ಚರಿಕೆ ನೀಡಿದ ಸುಪ್ರೀಂಕೋರ್ಟ್‌

“ಪೊಲೀಸರು ತನಿಖೆಯಲ್ಲಿ ಲೋಪವೆಸಗುತ್ತಿದ್ದಾರೆ. ಸೆಪ್ಟಂಬರ್ 18ರಂದು ಯುವತಿ ಕಾಣೆಯಾಗಿದ್ದರು ಸಹ ಸೆಪ್ಟಂಬರ್ 21 ರಂದು ಎಫ್‌ಐಆರ್ ದಾಖಲಿಸಿದ್ದು ಏಕೆ? ಎಲ್ಲಿಯವರೆಗೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಮುಖಂಡರು ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳುತ್ತಾರೆ?” ಎಂದು ಕಾಂಗ್ರೆಸ್ ವಕ್ತಾರ ಗರಿಮ ಮೆಹ್ರ ದುಸಾನಿ ಪ್ರಶ್ನಿಸಿದ್ದಾರೆ.

ಬಂಧನದ ವೇಳೆ ಪುಲ್ಕಿತ್ ಆರ್ಯನ ಬೆಂಬಲಿಗರು ಮತ್ತು ಬಿಜೆಪಿ ಕಾರ್ಯಕರ್ತರು ಪೊಲೀಸ್ ವಾಹನದ ಮೇಲೆ ದಾಳಿ ನಡೆಸಿ ಜಖಂಗೊಳಿಸಿದ್ದಾರೆ ಎಂದು ವರದಿಯಾಗಿದೆ. ರೆಸಾರ್ಟ್ ಮ್ಯಾನೇಜರ್ ಸೌರಭ್ ಭಾಸ್ಕರ್ ಮತ್ತು ಸಹಾಯಕ ಮ್ಯಾನೇಜರ್ ಅಂಕಿತ್ ಗುಪ್ತಾ ಎಂಬುವವರನ್ನು ಸಹ ಬಂಧಿಸಿದ್ದೇವೆ. ಆರಂಭದಲ್ಲಿ ಅವರು ಪೊಲೀಸರನ್ನು ದಿಕ್ಕು ತಪ್ಪಿಸಲು ಯತ್ನಿಸಿದರು. ಆದರೆ ಧೀರ್ಘ ವಿಚಾರಣೆಯ ಸಂದರ್ಭದಲ್ಲಿ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...