Homeಮುಖಪುಟ‘ನನ್ನನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಲಾಗುತ್ತಿದೆ’: ಕೊಲೆಗೀಡಾದ ಉತ್ತರಾಖಂಡದ ಯುವತಿಯ ವಾಟ್ಸಾಪ್ ಚಾಟ್‌‌

‘ನನ್ನನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಲಾಗುತ್ತಿದೆ’: ಕೊಲೆಗೀಡಾದ ಉತ್ತರಾಖಂಡದ ಯುವತಿಯ ವಾಟ್ಸಾಪ್ ಚಾಟ್‌‌

ಯುವತಿಯ ಕೊಲೆ ಪ್ರಕರಣದಲ್ಲಿ ಆರೆಸ್ಸೆಸ್‌, ಬಿಜೆಪಿಯ ಹಿರಿಯ ಮುಖಂಡನ ಮಗ ಪ್ರಮುಖ ಆರೋಪಿಯಾಗಿದ್ದು, ಬಂಧಿಸಲಾಗಿದೆ

- Advertisement -
- Advertisement -

ಆರೆಸ್ಸೆಸ್‌ ಮತ್ತು ಬಿಜೆಪಿ ನಾಯಕನ ಮಗ ನಡೆಸಿರುವ ಉತ್ತರಖಂಡ ಯುವತಿ ಕೊಲೆ ಪ್ರಕರಣದ ಮತ್ತಷ್ಟು ವಿವರಗಳು ಹೊರಬೀಳುತ್ತಿವೆ. ಆರೋಪಿಗಳು ರೆಸಾರ್ಟ್‌ನಲ್ಲಿ ಹದಿಹರೆಯದವರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದಾರೆ ಎಂದು ಹತ್ಯೆಗೀಡಾದ ಯುವತಿಯು ತನ್ನ ಸ್ನೇಹಿತೆಗೆ ಮಾಡಿದ್ದ ವಾಟ್ಸಾಪ್ ಸಂದೇಶಗಳ ಆರೋಪವನ್ನು ದೃಢಪಡಿಸುವಂತಿದೆ ಎಂದು ಎನ್‌ಡಿಟಿವಿ ವರದಿ ಹೇಳಿದೆ.

“ಅವರು ನನ್ನನ್ನು ವೇಶ್ಯೆಯನ್ನಾಗಿ ಮಾಡಲು ಪ್ರಯತ್ನಿಸುತ್ತಿದ್ದಾರೆ” ಎಂದು ಕೊಲೆಗೀಡಾದ ಯುವತಿಯು ತನ್ನ ಸ್ನೇಹಿತರಿಗೆ ಸಂದೇಶ ಕಳುಹಿಸಿದ್ದು ಮತ್ತು ರೆಸಾರ್ಟ್‌ನಲ್ಲಿ ಸ್ವಾಗತಕಾರಿಣಿಯಾಗಿ ಕೆಲಸ ಮಾಡಿದ ಅನುಭವವನ್ನು ವಿವರಿಸುತ್ತಿದ್ದ ಬಗ್ಗೆ ವರದಿಗಳು ಬಹಿರಂಗಗೊಂಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಯುವತಿಯು ಕಳುಹಿಸಿರುವ ಸಂದೇಶಗಳ ಸ್ಕ್ರೀನ್‌ಶಾಟ್‌ಗಳು ಹರಿದಾಡುತ್ತಿದೆ. ಅದರಲ್ಲಿ ಅವರು, ರೆಸಾರ್ಟ್‌ಗೆ ಆಗಮಿಸುತ್ತಿದ್ದ ಗ್ರಾಹಕರಿಗೆ 10 ಸಾವಿರ ರೂ.ಗೆ ‘ವಿಶೇಷ ಸೇವೆಗಳನ್ನು’ ಒದಗಿಸಲು ಹೇಗೆ ಒತ್ತಾಯಿಸಲಾಯಿತು ಎಂಬುದನ್ನು ವಿವರಿಸಿದ್ದಾರೆ. ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಗಳು ಈ ಸಂದೇಶಗಳು ಕೊಲೆಗೀಡಾದ ಯುವತಿಯದ್ದೆ ಎಂದು ಸೂಚಿಸುತ್ತಿವೆ ಎಂದು ಎನ್‌ಡಿಟಿವಿ ಪೊಲೀಸರ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಮಾಡಿದೆ. ಈ ಬಗ್ಗೆ ಇನ್ನಷ್ಟು ಫೋರೆನ್ಸಿಕ್ ತನಿಖೆಯನ್ನು ಸಹ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರಖಂಡ ಯುವತಿ ಕೊಲೆ ಪ್ರಕರಣ: ಬಿಜೆಪಿ ಮುಖಂಡನ ಪುತ್ರನ ರೆಸಾರ್ಟ್, ಬಿಜೆಪಿ ಶಾಸಕನ ಕಾರಿಗೆ ಬೆಂಕಿ

“ರೆಸಾರ್ಟ್‌ನಲ್ಲಿ ವ್ಯಕ್ತಿಯೊಬ್ಬ ಅನುಚಿತವಾಗಿ ತನ್ನ ಸ್ಪರ್ಶಿಸಿದ್ದು, ನಂತರ ತಾನು ಕುಡಿದಿದ್ದರಿಂದ ಹೀಗಾಯ್ತು, ಯಾರಿಗೂ ಹೇಳದಿರುವಂತೆ ಕೇಳಿಕೊಂಡಿದ್ದ” ಎಂದು ಸಂತ್ರಸ್ತ ಯುವತಿಯು ತನ್ನ ಸ್ನೇಹಿತನಿಗೆ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇಷ್ಟೆ ಅಲ್ಲದೆ ಯುವತಿಯು ರೆಸಾರ್ಟ್ ಉದ್ಯೋಗಿಯೊಬ್ಬರಿಗೆ ಕರೆ ಮಾಡಿದ ಆಡಿಯೋ ಕ್ಲಿಪ್ ಕೂಡ ವೈರಲ್ ಆಗಿದೆ. ಅದರಲ್ಲಿ ಯುವತಿ ಫೋನ್‌ನಲ್ಲಿ ಅಳುವುದು ಮತ್ತು ತನ್ನ ಬ್ಯಾಗ್ ಅನ್ನು ಮೇಲಕ್ಕೆ ತರಲು ಇನ್ನೊಬ್ಬ ವ್ಯಕ್ತಿಯು ಕೇಳುವುದು ಕೇಳಿಸುತ್ತದೆ.

“ಅತಿಥಿಗಳಿಗೆ ‘ವಿಶೇಷ ಸೇವೆ’ಗಳನ್ನು ಒದಗಿಸುವಂತೆ ರೆಸಾರ್ಟ್ ಮಾಲೀಕರು ಯುವತಿಗೆ ಒತ್ತಡ ಹೇರುತ್ತಿದ್ದರು” ಎಂದು ಉತ್ತರಾಖಂಡದ ಉನ್ನತ ಪೊಲೀಸ್ ಅಶೋಕ್ ಕುಮಾರ್ ಹೇಳಿದ್ದಾರೆ.

ಯುವತಿ ಕೆಲಸ ಮಾಡುತ್ತಿದ್ದ ರೆಸಾರ್ಟ್ ಮಾಲೀಕರು ಪುಲ್ಕಿತ್ ಆರ್ಯ ಬೇಡಿಕೆಯಂತೆ ಅತಿಥಿಗಳೊಂದಿಗೆ ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಕಾರಣ ಅವರನ್ನು ಕೊಲ್ಲಲಾಯಿತು ಎಂದು ಈ ಹಿಂದೆ ಅವರ ಫೇಸ್‌ಬುಕ್ ಸ್ನೇಹಿತರೊಬ್ಬರು ಹೇಳಿದ್ದರು.

ಇದನ್ನೂ ಓದಿ: ಉತ್ತರಖಂಡ: 19 ವರ್ಷದ ಯುವತಿ ಕೊಲೆಗೈದ ಬಿಜೆಪಿ ಮುಖಂಡನ ಮಗನ ಬಂಧನ 

ಅದೇ ದಿನ ರಾತ್ರಿ ಕೊಲೆಗೀಡಾದ ಯುವತಿಯು ಈ ಸ್ನೇಹಿತನಿಗೆ ಕರೆ ಮಾಡಿದ್ದರು. ರಾತ್ರಿ 8:30 ರ ನಂತರ ಯುವತಿಯ ಫೋನ್ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಪದೇ ಪದೇ ಕರೆ ಮಾಡಲು ಪ್ರಯತ್ನಿಸಿದ್ದ ಸ್ನೇಹಿತ, ಯುವತಿ ಸಂಪರ್ಕಕ್ಕೆ ಸಿಗದ ಕಾರಣ ಪುಲ್ಕಿತ್ ಆರ್ಯನಿಗೆ ಫೋನ್ ಮಾಡಿದ್ದರು. ಆಗ ಆರೋಪಿಯು ಯುವತಿ ನಿದ್ದೆ ಮಾಡಲು ತನ್ನ ಕೋಣೆಗೆ ಹೋಗಿದ್ದಾಳೆ ಎಂದು ಹೇಳಿದ್ದಾನೆ.

ಮರುದಿನ ಕೂಡಾ ಯುವತಿಯ ಸ್ನೇಹಿತ ಪುಲ್ಕಿತ್‌ಗೆ ಕರೆ ಮಾಡಿದಾಗ, ಅವರ ಫೋನ್ ಸ್ವಿಚ್ ಆಫ್ ಆಗಿರುವುದು ಕಂಡುಬಂದಿದೆ. ಆಗ ಸ್ನೇಹಿತ ರೆಸಾರ್ಟ್‌ನ ಮ್ಯಾನೇಜರ್ ಅಂಕಿತ್‌ಗೆ ಫೋನ್ ಮಾಡಿದ್ದರು. ಈ ವೇಳೆ ಅಂಕಿತ್‌ ಯುವತಿಯು ಜಿಮ್‌ನಲ್ಲಿದ್ದಾರೆ ಎಂದು ಹೇಳಿದ್ದನು. ಇದರ ನಂತರ ಸ್ನೇಹಿತ ರೆಸಾರ್ಟ್‌ನ ಬಾಣಸಿಗರೊಂದಿಗೆ ಮಾತನಾಡಿದಾಗ, ಅವರು ಆ ದಿನ ಯುವತಿಯನ್ನು ನೋಡಿಲ್ಲ ಎಂದು ಹೇಳಿದ್ದಾರೆ.

ರೆಸಾರ್ಟ್‌ನಲ್ಲಿ ವಿವಿಐಪಿ ಅತಿಥಿಗಳಿಗೆ 10 ಸಾವಿರ ರೂ.ಗಳಿಗೆ ‘ಹೆಚ್ಚುವರಿ ಸೇವೆ’ಯನ್ನು ಒದಗಿಸಲಾಗಿದೆ ಎಂದು ವಾಟ್ಸಾಪ್ ಚಾಟ್‌ಗಳು ಸೂಚಿಸುತ್ತದೆ. ಸ್ಪಾ ನೆಪದಲ್ಲಿ ಈ ‘ಹೆಚ್ಚುವರಿ ಸೇವೆ’ ಒದಗಿಸಲಾಗಿದೆ ಎಂದು ಚಾಟ್‌ಗಳು ಬಹಿರಂಗಪಡಿಸುತ್ತವೆ.

ಇದನ್ನೂ ಓದಿ: ಉತ್ತರ ಪ್ರದೇಶ: ಮಹಿಳೆಯ ಮೇಲೆ ಕೈ ಮಾಡಿ, ಅಶ್ಲೀಲ ಪದಗಳಲ್ಲಿ ನಿಂದಿಸಿದ ಬಿಜೆಪಿ ಮುಖಂಡ

ಪ್ರಕರಣದ ಹಿನ್ನೆಲೆ

ಪುಲ್ಕಿತ್ ಆರ್ಯನ ರೆಸಾರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ 19 ವರ್ಷದ ಯುವತಿ ಸೆಪ್ಟಂಬರ್ 18ರಂದು ಕಾಣೆಯಾಗಿದ್ದರು. ಸ್ವತಃ ಪುಲ್ಕಿತ್ ಆರ್ಯನೇ ಪೊಲೀಸ್ ಠಾಣೆಯಲ್ಲಿ ಯುವತಿ ಕಾಣೆಯಾಗಿದ್ದಾರೆ ಎಂದು ದೂರು ನೀಡಿದ್ದನು. ಆದರೆ 5 ದಿನದ ನಂತರ ಪುಲ್ಕಿತ್ ಆರ್ಯ ಇಬ್ಬರು ಸಿಬ್ಬಂದಿಯೊಡನೆ ಸೇರಿ ಯುವತಿಯನ್ನು ಕೊಂದಿದ್ದಾನೆ ಎಂಬ ಅಂಶ ಬೆಳಕಿಗೆ ಬಂದಿದೆ.

ಸಂತ್ರಸ್ತ ಯುವತಿಯ ಕುಟುಂಬವು ಮೊದಲಿನಿಂದಲೂ ಪುಲ್ಕಿತ್ ಆರ್ಯನ ಮೇಲೆ ಸಂಶಯ ವ್ಯಕ್ತಪಡಿಸಿತ್ತು. ಏಕೆಂದರೆ ಪ್ರಕರಣದ ಬಗ್ಗೆ ಆತ ಆರಂಭದಲ್ಲಿ ದೂರು ನೀಡಲು ನಿರಾಕರಿಸಿದ್ದ ಎಂದು ಹೇಳಲಾಗಿದೆ. ಮೃತ ದೇಹವನ್ನು ಪಕ್ಕದ ಕಾಲುವೆಯಲ್ಲಿ ಪತ್ತೆಹಚ್ಚಲಾಗಿದ್ದು, ಯುವತಿಯ ಸಂಬಂಧಿಕರನ್ನು ಗುರುತು ಪತ್ತೆ ಹಚ್ಚಲು ಕರೆಯಲಾಗಿದೆ ಎಂದು ವರದಿಯಾಗಿದೆ.

ಈ ನಡವೆ ಆರೋಪಿಯು ಹಿರಿಯ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಮುಖಂಡನ ಮಗನಾಗಿದ್ದರಿಂದ ಪೊಲೀಸರು ತನಿಖೆಯಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಷಯ ವೈರಲ್ ಆದ ನಂತರ ಪೊಲೀಸರು ಮುಖ್ಯ ಆರೋಪಿ ಪುಲ್ಕಿತ್ ಮತ್ತು ಇಬ್ಬರು ಸಿಬ್ಬಂದಿಗಳನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ದ್ವೇಷ ಭಾಷಣ: ಹಿಮಾಚಲ ಸರ್ಕಾರಕ್ಕೆ ತರಾಟೆ, ಉತ್ತರಾಖಂಡ್‌ಗೆ ಖಡಕ್‌ ಎಚ್ಚರಿಕೆ ನೀಡಿದ ಸುಪ್ರೀಂಕೋರ್ಟ್‌

“ಪೊಲೀಸರು ತನಿಖೆಯಲ್ಲಿ ಲೋಪವೆಸಗುತ್ತಿದ್ದಾರೆ. ಸೆಪ್ಟಂಬರ್ 18ರಂದು ಯುವತಿ ಕಾಣೆಯಾಗಿದ್ದರು ಸಹ ಸೆಪ್ಟಂಬರ್ 21 ರಂದು ಎಫ್‌ಐಆರ್ ದಾಖಲಿಸಿದ್ದು ಏಕೆ? ಎಲ್ಲಿಯವರೆಗೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಮುಖಂಡರು ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳುತ್ತಾರೆ?” ಎಂದು ಕಾಂಗ್ರೆಸ್ ವಕ್ತಾರ ಗರಿಮ ಮೆಹ್ರ ದುಸಾನಿ ಪ್ರಶ್ನಿಸಿದ್ದಾರೆ.

ಬಂಧನದ ವೇಳೆ ಪುಲ್ಕಿತ್ ಆರ್ಯನ ಬೆಂಬಲಿಗರು ಮತ್ತು ಬಿಜೆಪಿ ಕಾರ್ಯಕರ್ತರು ಪೊಲೀಸ್ ವಾಹನದ ಮೇಲೆ ದಾಳಿ ನಡೆಸಿ ಜಖಂಗೊಳಿಸಿದ್ದಾರೆ ಎಂದು ವರದಿಯಾಗಿದೆ. ರೆಸಾರ್ಟ್ ಮ್ಯಾನೇಜರ್ ಸೌರಭ್ ಭಾಸ್ಕರ್ ಮತ್ತು ಸಹಾಯಕ ಮ್ಯಾನೇಜರ್ ಅಂಕಿತ್ ಗುಪ್ತಾ ಎಂಬುವವರನ್ನು ಸಹ ಬಂಧಿಸಿದ್ದೇವೆ. ಆರಂಭದಲ್ಲಿ ಅವರು ಪೊಲೀಸರನ್ನು ದಿಕ್ಕು ತಪ್ಪಿಸಲು ಯತ್ನಿಸಿದರು. ಆದರೆ ಧೀರ್ಘ ವಿಚಾರಣೆಯ ಸಂದರ್ಭದಲ್ಲಿ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...