Homeಮುಖಪುಟ'ಬಂಧನದ ಬಳಿಕ ನನ್ನ ಗಂಡನ ಬಗ್ಗೆ ಯಾವುದೇ ಮಾಹಿತಿ ಸಿಗುತ್ತಿಲ್ಲ': ರಾಷ್ಟ್ರಪತಿ, ಪ್ರಧಾನಿಗೆ ಪತ್ರ ಬರೆದ...

‘ಬಂಧನದ ಬಳಿಕ ನನ್ನ ಗಂಡನ ಬಗ್ಗೆ ಯಾವುದೇ ಮಾಹಿತಿ ಸಿಗುತ್ತಿಲ್ಲ’: ರಾಷ್ಟ್ರಪತಿ, ಪ್ರಧಾನಿಗೆ ಪತ್ರ ಬರೆದ ಸೋನಮ್ ವಾಂಗ್ಚುಕ್ ಪತ್ನಿ

- Advertisement -
- Advertisement -

ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್‌ಗೆ ಬುಧವಾರ (ಅ.1) ಪತ್ರ ಬರೆದಿರುವ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಅಂಗ್ಮೋ, ವಾಂಗ್ಚುಕ್ ಅವರ ಶೀಘ್ರ ಬಿಡುಗಡೆಗೆ ಒತ್ತಾಯಿಸಿದ್ದಾರೆ. ಸರ್ಕಾರ ವಾಂಗ್ಚುಕ್ ಅವರಿಗೆ ಕಿರುಕುಳ ಕೊಡುತ್ತಿದೆ ಎಂದು ಆರೋಪಿಸಿದ್ದಾರೆ.

ಮೂರು ಪುಟಗಳ ಪತ್ರದಲ್ಲಿ ವಾಂಗ್ಚುಕ್ ಅವರ ಪತ್ನಿ, “ಕಳೆದ ನಾಲ್ಕು ವರ್ಷಗಳಿಂದ ಜನರ ಪರವಾಗಿ ಕೆಲಸ ಮಾಡುತ್ತಿದ್ದ ನನ್ನ ಪತಿಯ ವಿರುದ್ಧ ಸರ್ಕಾರ ಬೇಟೆ ಕೈಗೊಂಡಿದೆ. ಸೆಪ್ಟೆಂಬರ್ 26ರಂದು ಬಂಧಿಸಿದ ಬಳಿಕ ನನ್ನ ಗಂಡನ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ” ಎಂದು ಬರೆದಿದ್ದಾರೆ.

“ನನ್ನ ಪತಿಯನ್ನು ಎಲ್ಲಿ ಬಂಧಿಸಲಾಗಿದ್ದರೂ ಅವರನ್ನು ಫೋನ್‌ನಲ್ಲಿ ಮತ್ತು ವೈಯಕ್ತಿಕವಾಗಿ ಭೇಟಿಯಾಗಲು ಮತ್ತು ಮಾತನಾಡಲು ನನಗೆ ಅರ್ಹತೆ ಇಲ್ಲವೇ? ನನ್ನ ಪತಿ ಬಂಧನದ ಕಾರಣವನ್ನು ತಿಳಿದುಕೊಳ್ಳಲು ಮತ್ತು ನ್ಯಾಯಾಲಯದ ಮುಂದೆ ನ್ಯಾಯವನ್ನು ಪಡೆಯುವ ಅವರ ಕಾನೂನುಬದ್ಧ ಹಕ್ಕುಗಳನ್ನು ಸಮರ್ಥಿಸಲು ನಾನು ಸಹಾಯ ಮಾಡಲು ಸಾಧ್ಯವಿಲ್ಲವೇ? ನನ್ನ ಬಂಧನಕ್ಕೊಳಗಾದ ಪತಿಯ ಸ್ಥಿತಿಯನ್ನು ತಿಳಿದುಕೊಳ್ಳಲು ನನಗೆ ಅರ್ಹತೆ ಇಲ್ಲವೇ? ಭಾರತದ ಜವಾಬ್ದಾರಿಯುತ ನಾಗರಿಕಳಾಗಿ, ನಮಗೆ ಶಾಂತಿಯುತ ಅಭಿವ್ಯಕ್ತಿ ಮತ್ತು ಚಲನೆಯ ಸ್ವಾತಂತ್ರ್ಯದ ಹಕ್ಕಿಲ್ಲವೇ?” ಎಂದು ಗೀಂತಾಜಲಿ ತನ್ನ ಪತ್ರದಲ್ಲಿ ಪ್ರಶ್ನಿಸಿದ್ದಾರೆ.

ಲಡಾಖ್‌ಗೆ ರಾಜ್ಯದ ಸ್ಥಾನಮಾನ ನೀಡಬೇಕು ಮತ್ತು ಸಂವಿಧಾನದ 6ನೇ ಪರಿಚ್ಛೇಧದಡಿ ಸೇರಿಸಬೇಕು ಎಂದು ಸೋನಮ್ ವಾಂಗ್ಚುಕ್ ಹೋರಾಟ (ಉಪವಾಸ ಸತ್ಯಾಗ್ರಹ) ಕೈಗೊಂಡಿದ್ದರು. ಈ ನಡುವೆ ಸೆಪ್ಟೆಂಬರ್ 24ರಂದು ಲೇಹ್‌ನಲ್ಲಿ ಯುವಜನರು ಬೀದಿಗಿಳಿದು ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ಶುರು ಮಾಡಿದ್ದರು. ನಂತರ ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು.

ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದರು ಮತ್ತು 80ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಹಿಂಸಾತ್ಮಕ ಪ್ರತಿಭಟನೆ ಬಳಿಕ 1980ರ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ವಾಂಗ್ಚುಕ್ ಅವರನ್ನು ಬಂಧಿಸಲಾಗಿದೆ. ಪ್ರಸ್ತುತ ಅವರನ್ನು ರಾಜಸ್ಥಾನದ ಜೋಧ್‌ಪುರ ಜೈಲಿನಲ್ಲಿ ಇರಿಸಲಾಗಿದೆ ಎಂದು ವರದಿಯಾಗಿದೆ. ವಾಂಗ್ಚುಕ್ ಪ್ರಚೋದನಕಾರಿ ಭಾಷಣಗಳ ಮೂಲಕ ಹಿಂಸಾಚಾರವನ್ನು ಪ್ರಚೋದಿಸುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ಆರೋಪಿಸಿದೆ.

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆಗಳು ಮೆತ್ತಿಕೊಂಡಿದೆ: ಕಾಂಗ್ರೆಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

ತಮಗೂ ಪಾಕಿಸ್ತಾನಕ್ಕೂ ಸಂಬಂಧವಿದೆ ಎಂಬ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆರೋಪಗಳನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ತಳ್ಳಿಹಾಕಿದ್ದು, ಎಸ್‌ಐಟಿ ವರದಿಯು ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಬಳಿಯೇ ಇದೆ....

ಪಂಜಾಬ್: ತರಗತಿಯೊಳಗೆ ವಿದ್ಯಾರ್ಥಿನಿಯನ್ನು ಕೊಂದು, ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

ಚಂಡೀಗಢ: ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯಲ್ಲಿ ಕಾನೂನು ವಿದ್ಯಾರ್ಥಿಯೊಬ್ಬ ಶಾಲಾ ಕೋಣೆಯೊಳಗೆ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಕೊಂದ ಘಟನೆ ಸೋಮವಾರ ನಡೆದಿದೆ. ಸಹಪಾಠಿಗಳು ಭಯಭೀತರಾಗಿ ನೋಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು...

ಅಸ್ಸಾಂ ಸಿಎಂ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ : ಗೌರವ್ ಗೊಗೊಯ್

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಮುಸ್ಲಿಮರ ವಿರುದ್ದ ದ್ವೇಷ ಹರಡುತ್ತಿದ್ದಾರೆ, ಅವರ ಜನಾಂಗೀಯ ಹತ್ಯೆಗೆ ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಹಾಗೂ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ. ಅಸ್ಸಾಂ...

‘ಎಂಡಿಎಂಎ ಡ್ರಗ್ಸ್ ಕೇಂದ್ರವಾಗಿ ಮಾರ್ಪಟ್ಟ ಮಧ್ಯಪ್ರದೇಶ-ರಾಜಸ್ಥಾನ ಗಡಿ’: 13ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದ ಪೊಲೀಸರು. 

ಭೋಪಾಲ್: ದೇಶದ ಅಫೀಮು ಕೃಷಿ ಮತ್ತು ಕಳ್ಳಸಾಗಣೆ ಮಾರ್ಗವಾಗಿ ದೀರ್ಘಕಾಲದಿಂದ ಕುಖ್ಯಾತಿ ಗಳಿಸಿರುವ ಪಶ್ಚಿಮ ಮಧ್ಯಪ್ರದೇಶ ಮತ್ತು ಪಕ್ಕದ ಆಗ್ನೇಯ ರಾಜಸ್ಥಾನದ ಜಿಲ್ಲೆಗಳು ಈಗ MDMA ಸಂಶ್ಲೇಷಿತ ಡ್ರಗ್ಸ್ ಅಕ್ರಮ ಉತ್ಪಾದನೆ ಮತ್ತು...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ವಿರೋಧ ಪಕ್ಷಗಳು: ವರದಿ

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ವಿಪಕ್ಷ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ 'ಅನಿರೀಕ್ಷಿತ ಕೃತ್ಯ' ಎಸಗಲು ಸಂಚು...

ಮೆಟಾ-ವಾಟ್ಸಾಪ್ ಗೌಪ್ಯತೆ ನೀತಿ ಪ್ರಕರಣ: ಸುಪ್ರೀಂ ಕೋರ್ಟ್ ವಿಚಾರಣೆ ಫೆಬ್ರವರಿ 23ಕ್ಕೆ ಮುಂದೂಡಿಕೆ 

ನವದೆಹಲಿ: ಗೌಪ್ಯತೆ ನೀತಿಯ ಮೇಲೆ 213.14 ಕೋಟಿ ರೂ. ದಂಡ ವಿಧಿಸಿದ ಭಾರತೀಯ ಸ್ಪರ್ಧಾ ಆಯೋಗದ (ಸಿಸಿಐ) ಆದೇಶದ ವಿರುದ್ಧ ಮೆಟಾ ಪ್ಲಾಟ್‌ಫಾರ್ಮ್ಸ್ ಇಂಕ್ ಮತ್ತು ವಾಟ್ಸಾಪ್ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್...

ಪ್ರಬಲಜಾತಿ ಯುವತಿಯೊಂದಿಗೆ ಗ್ರಾಮ ತೊರೆದ ದಲಿತ ಯುವಕ; ಕುಟುಂಬದ ಮೇಲೆ ದಾಳಿ ಮಾಡಿದ ಹದಿಮೂರು ಜನರ ಬಂಧನ

ಸೂರತ್ ಗ್ರಾಮದಲ್ಲಿ ಪರಿಶಿಷ್ಟ ಜಾತಿಯ ಮಹಿಳೆ ಮತ್ತು ಆಕೆಯ ಇಬ್ಬರು ವಯಸ್ಕ ಮಕ್ಕಳ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುಜರಾತ್ ಪೊಲೀಸರು ಶನಿವಾರ ಒಂದೇ ಕುಟುಂಬದ 13 ಸದಸ್ಯರನ್ನು ಬಂಧಿಸಿದ್ದಾರೆ. ಆಕೆಯ...

‘ದೆಹಲಿ ಖಾಲಿಸ್ತಾನವಾಗಲಿದೆ’: 10 ಶಾಲೆಗಳು, ಸಂಸತ್ತಿಗೆ ಬಾಂಬ್ ಬೆದರಿಕೆ ಇಮೇಲ್ ಬಂದ ನಂತರ ವಿದ್ಯಾರ್ಥಿಗಳ ಸ್ಥಳಾಂತರ

ಸೋಮವಾರ ರಾಷ್ಟ್ರ ರಾಜಧಾನಿ ಮತ್ತು ಸಂಸತ್ತಿನ ಕನಿಷ್ಠ 10 ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ಭಾರಿ ಭದ್ರತಾ ಪ್ರತಿಕ್ರಿಯೆ ನೀಡಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳು (ಡಿಎಫ್‌ಎಸ್) ತಿಳಿಸಿವೆ. ಡಿಎಫ್‌ಎಸ್ ಪ್ರಕಾರ, ಬೆಳಿಗ್ಗೆ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ರೈತರ ಪಾಲಿಗೆ ಮರಣಶಾಸನ: ಸಿಎಂ ಸಿದ್ದರಾಮಯ್ಯ

ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಒಪ್ಪಿಕೊಂಡು ಸ್ವಾಗತಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ಸಂಪೂರ್ಣ ಶರಣಾಗಿದ್ದಾರೆ. ಮುಂದಿನ ದಿನಗಳಲ್ಲಿ ಈ ಒಪ್ಪಂದ 140 ಕೋಟಿ ಭಾರತೀಯರಿಗೆ, ಅದರಲ್ಲಿಯೂ...

ಉತ್ತರ ಪ್ರದೇಶ| ಜಾತಿ ನಿಂದನೆ-ಹಲ್ಲೆ; ದೃಷ್ಟಿ ಕಳೆದುಕೊಂಡ ದಲಿತ ಯುವಕ

ಕಾಲುವೆ ಬಳಿ ಮಲವಿಸರ್ಜನೆ ಮಾಡುತ್ತಿದ್ದ ದಲಿತ ಯುವಕನ ಜೊತೆಗೆ ನಡೆದ ಜಗಳ ತೀವ್ರಗೊಂಡು, ದಾಳಿಕೋರನೊಬ್ಬ ಮೋಟಾರ್ ಸೈಕಲ್ ಕೀಲಿಯಿಂದ ಚುಚ್ಚಿದ ಪರಿಣಾಮ ಆತ ಒಂದು ಕಣ್ಣಿನ ದೃಷ್ಠಿ ಕಳೆದುಕೊಂಡಿದ್ದಾರೆ. 20 ರ ಹರೆಯದ...