Homeಕರ್ನಾಟಕಸಿದ್ದರಾಮಯ್ಯರ ʼಹೃದಯ ವೈಶಾಲ್ಯತೆʼಗೆ ನಾನು ಆಭಾರಿ: ಹೆಚ್‌ಡಿ ಕುಮಾರಸ್ವಾಮಿ

ಸಿದ್ದರಾಮಯ್ಯರ ʼಹೃದಯ ವೈಶಾಲ್ಯತೆʼಗೆ ನಾನು ಆಭಾರಿ: ಹೆಚ್‌ಡಿ ಕುಮಾರಸ್ವಾಮಿ

- Advertisement -
- Advertisement -

ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ʼಹೃದಯ ವೈಶಾಲ್ಯತೆʼಗೆ ನಾನು ಆಭಾರಿ. ರೈತ ಸಾಂತ್ವನ ಯಾತ್ರೆಯನ್ನು ಸ್ವಾಗತ ಮಾಡಿರುವ ನಿಮ್ಮ ʼದೊಡ್ಡʼ ಗುಣವನ್ನು ಮನಸಾರೆ ಕೊಂಡಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವ್ಯಂಗ್ಯ ಮಾಡಿ ಹೆಚ್‌ಡಿ ಕುಮಾರಸ್ವಾಮಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಜೆಡಿಎಸ್‌ ಪಕ್ಷದ ರೈತ ಸಾಂತ್ವನ ಯಾತ್ರೆಯ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ”ಜಾತ್ಯತೀತ ಜನತಾ ದಳ ನಾಡಿನ ಬರಪರಿಸ್ಥಿತಿಯ ವೀಕ್ಷಣೆಗೆ ‘ರೈತ ಸಾಂತ್ವನ ಯಾತ್ರೆ’ ಕೈಗೊಳ್ಳುವುದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದು ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಮಾಡಬೇಕಾದ ಕೆಲಸ. ಈ ಯಾತ್ರೆಯ ನಂತರ ಅವರು ಕೊಡುವ ವರದಿಯನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ” ಎಂದು ಹೇಳಿದ್ದರು.

ಮುಖ್ಯ ಮಂತ್ರಿಗಳ ಪೋಸ್ಟ್ ಬೆನ್ನಲ್ಲೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‌ಡಿ ಕುಮಾರಸ್ವಾಮಿ ಅವರು ಪೋಸ್ಟ್ ಮಾಡಿದ್ದು, ”ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ʼಹೃದಯ ವೈಶಾಲ್ಯತೆʼಗೆ ನಾನು ಆಭಾರಿ. ರೈತ ಸಾಂತ್ವನ ಯಾತ್ರೆಯನ್ನು ಸ್ವಾಗತ ಮಾಡಿರುವ ನಿಮ್ಮ ʼದೊಡ್ಡʼ ಗುಣವನ್ನು ಮನಸಾರೆ ಕೊಂಡಾಡುತ್ತೇನೆ” ಎಂದು ಹೇಳಿದ್ದಾರೆ.

”ಜೆಡಿಎಸ್‌ ಪಕ್ಷ ಸಲ್ಲಿಸಲಿರುವ ಬರ ಅಧ್ಯಯನ ವರದಿಯನ್ನು ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದ್ದೀರಿ, ಬಹಳ ಸಂತೋಷ. ‘ರೈತ ಸಾಂತ್ವನ ಯಾತ್ರೆ’ಯ ಅನುಭವವನ್ನು ಕೇಂದ್ರದ ಜತೆಗೂ ಹಂಚಿಕೊಳ್ಳುತ್ತೇವೆ. ನಿಮಗೆ ಸಂಶಯ ಬೇಡ. ರಾಜ್ಯದ ಅಗತ್ಯಗಳಿಗೆ ಕೇಂದ್ರ ಸರಕಾರ ಹೇಗೆ ಸ್ಪಂದಿಸುತ್ತಿದೆ? ಅದಕ್ಕೆ ನಿಮ್ಮ ನೇತೃತ್ವದ ಸರಕಾರ ಎಷ್ಟು ʼಗಂಭೀರ(!?)ʼ ಪ್ರಯತ್ನ ಮಾಡಿದೆ, ಮಾಡುತ್ತಿದೆ ಎನ್ನುವುದು ನನಗೂ ತಿಳಿದಿದೆ. ಬರದ ಜತೆಗೆ, ವಿದ್ಯುತ್‌ ಬಿಕ್ಕಟ್ಟು, ಕಾವೇರಿ ಸಂಕಷ್ಟದ ವಿಷಯದಲ್ಲಿ ನಿಮ್ಮ ಸರಕಾರದ ʼಅಪರಿಮಿತ ಅಸಡ್ಡೆʼಯನ್ನು ಅರಿಯದಷ್ಟು ಮುಗ್ಧನೇ ನಾನು?” ಎಂದು ಪ್ರಶ್ನೆ ಮಾಡಿದ್ದಾರೆ.

”ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ಜತೆ ಹೆಚ್.ಡಿ.ದೇವೇಗೌಡರು ಮತ್ತವರ ಕುಟುಂಬಕ್ಕೆ ಆತ್ಮೀಯತೆ ಇದೆ ಎಂಬುದರಲ್ಲಿ ಎರಡು ಮಾತಿಲ್ಲ. ಬಿಜೆಪಿ-ಜೆಡಿಎಸ್‌ ನಡುವೆ ಮೈತ್ರಿ ಏರ್ಪಟ್ಟಿದೆ ಎನ್ನುವುದೂ ನಿಜ. ರಾಜ್ಯದ ಹಿತಕ್ಕಾಗಿ ನಾವು ಪ್ರಧಾನಿಯವರ ಮುಂದೆಯೂ ದನಿ ಎತ್ತುತ್ತೇವೆ, ಅದು ನಮ್ಮ ಬದ್ಧತೆ. ಆದರೆ, ನಿಮಗೆ ರಾಜ್ಯದ ಬರ ಮತ್ತಿತರೆ ಸಂಕಷ್ಟಗಳಿಗಿಂತ ಈ ಮೈತ್ರಿಯೇ ಬಹುದೊಡ್ಡ ಸಂಕಷ್ಟವಾಗಿ ಪರಿಣಮಿಸಿದಂತೆ ತೋರುತ್ತಿದೆ! ಅಲ್ಲವೇ?” ಎಂದು ಕೇಳಿದ್ದಾರೆ.

”ಪ್ರತಿಪಕ್ಷಗಳಾಗಿ ನಮ್ಮ ಪ್ರಯತ್ನ ನಾವು ಮಾಡುತ್ತೇವೆ, ಸರಕಾರವಾಗಿ ನಿಮ್ಮ ಸಾಧನೆ ಏನು? ಎಷ್ಟು ರೈತರಿಗೆ ಬೆಳೆ ವಿಮೆ ಕೊಡಿಸಿದ್ದೀರಿ? ಸರಕಾರದ ವತಿಯಿಂದ ಎಷ್ಟು ಪರಿಹಾರ ನೀಡಿದ್ದೀರಿ? ಅದನ್ನು ಹೇಳಬೇಕೆ ಹೊರತು, ಮಿತ್ರರ ನಡುವೆ ಹುಳಿ ಹಿಂಡುವ ಉಡಾಳತನ ತಮಗ್ಯಾಕೆ? ಎನ್ನುವುದು ನನ್ನ ವಿನಮ್ರ ಪ್ರಶ್ನೆ” ಎಂದಿದ್ದಾರೆ.

”236 ತಾಲೂಕುಗಳಲ್ಲಿ 216 ಬರಪೀಡಿತ ಎಂದು ಲೆಕ್ಕ ಕೊಟ್ಟಿದ್ದೀರಿ. 33,710 ಕೋಟಿ ರೂ. ಮೌಲ್ಯದ ಬೆಳೆಹಾನಿ ಆಗಿದ್ದು, ಕೇಂದ್ರಕ್ಕೆ 17,901 ಕೋಟಿ ರೂ. ಪರಿಹಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದ್ದೀರಿ, ಸರಿ. ಜತೆಗೆ; 343 ಕೋಟಿ ರೂ. ಬಿಡುಗಡೆ ಮಾಡಿದ್ದೇವೆ ಎಂದೂ ತಿಳಿಸಿದ್ದೀರಿ. ಅದನ್ನು ಯಾರಿಗೆ ಹಂಚಿದ್ದೀರಿ?” ಎಂದು ಪ್ರಶ್ನೆ ಮಾಡಿದ್ದಾರೆ.

”ಈ ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್‌ ಮಂಡಿಸಿ ʼವಿಶ್ವವಿಖ್ಯಾತ ವಿತ್ತತಜ್ಞʼರಾಗಿ ಮೆರೆಯುತ್ತಿರುವವರು ನೀವು. ಅಧಿಕಾರಕ್ಕೆ ಬಂದೊಡನೆ ವಿಶೇಷವಾಗಿ ವಿತ್ತಖಾತೆಯನ್ನು ತಮ್ಮಲ್ಲಿಯೇ ‘ ಜೋಪಾನ ‘ ಮಾಡಿಕೊಳ್ಳುವ ನಿಮಗೆ, ಕೇಂದ್ರ ಸರಕಾರವು ಬರಕ್ಕೆ, ಪ್ರವಾಹಕ್ಕೆ ಯಾವ ರೀತಿ ಪರಿಹಾರ ಕೊಡುತ್ತದೆ ಎನ್ನುವ ಸಾಮಾನ್ಯ ತಿಳಿವಳಿಕೆಯೂ ಇಲ್ಲವೇ?” ಎಂದು ಕೇಳಿದ್ದಾರೆ.

”ಹೋಗಲಿ, ನೀವು ಈ ರಾಜ್ಯದ ಮುಖ್ಯಮಂತ್ರಿ… ದೆಹಲಿಗೆ ಹೋಗಿ ಪ್ರಧಾನಿಗಳಿಗೆ ವಸ್ತುಸ್ಥಿತಿ ಮನವರಿಕೆ ಮಾಡಿಕೊಡಬೇಕಿತ್ತು. ಅದನ್ನೂ ಮಾಡಲಿಲ್ಲ, ಪ್ರತಿಷ್ಠೆ ನಿಮಗೆ. ಪ್ರಧಾನಿಗಳನ್ನು ಸದಾ ನಿಂದಿಸುತ್ತಾ ಕುಳಿತರೆ ಲಾಭವೇನು? ಇಲ್ಲಿ ವರ್ಗಾವಣೆ ದಂಧೆ, ಕಮೀಷನ್ ವಸೂಲಿ, ಆಪರೇಷನ್‌ ಹಸ್ತ, ಡಿನ್ನರ್‌-ಬ್ರೇಕ್‌ ಫಾಸ್ಟ್‌ ಮೀಟಿಂಗುಗಳಲ್ಲಿಯೇ ʼಭಾರೀʼ ಬ್ಯುಸಿ‌ ಆಗಿರುವ ನಿಮಗೆ ದೆಹಲಿಗೆ ಜನರ ಅಹವಾಲು ತೆಗೆದುಕೊಂಡು ಹೋಗಲು ಸಮಯವಾದರೂ ಎಲ್ಲಿದೆ?” ಎಂದು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

”ನೀವು ಕರೆದೊಯ್ಯುವ ಸರ್ವಪಕ್ಷ ನಿಯೋಗದಲ್ಲಿ ಜೆಡಿಎಸ್ ಪಕ್ಷವೂ ಇರುತ್ತದೆ, ನಮ್ಮ ಮಿತ್ರಪಕ್ಷ ಬಿಜೆಪಿಯೂ ಇರುತ್ತದೆ. ಇನ್ನೊಬ್ಬರ ಧೈರ್ಯದ ಬಗ್ಗೆ ಮಾತನಾಡುವ ನೀವು, ನಿಮ್ಮ ಸ್ಥೈರ್ಯದ ಬಗ್ಗೆಯೂ ಕೊಂಚ ಹೇಳಬೇಕಲ್ಲವೇ? ಮುಖ್ಯಮಂತ್ರಿಯಾಗಿ ನೀವು ರಾಜ್ಯಕ್ಕೆ ಸಂಬಂಧಿಸಿ ಪ್ರಧಾನಿಗಳನ್ನು,‌ ಸಂಬಂಧಿಸಿದ ಕೇಂದ್ರ ಸಚಿವರನ್ನು ಎಷ್ಟು ಸಲ ಭೇಟಿ ಆಗಿದ್ದೀರಿ? ಎಷ್ಟು ಅರ್ಜಿ ಕೊಟ್ಟಿದ್ದೀರಿ? ರಾಜ್ಯದ ನೆಲ-ಜಲ, ಇನ್ನಿತರೆ ಸಂಕಷ್ಟದ ವೇಳೆ ಈ ಇಳಿವಯಸ್ಸಿನಲ್ಲಿಯೂ ಮಾನ್ಯ ದೇವೇಗೌಡರು ನಡೆಸುತ್ತಿರುವ ಹೋರಾಟ ನಿಮಗೆ ಕಾಣಿಸಿಲ್ಲವೇ? ಕಾವೇರಿ ಬಗ್ಗೆ ಅವರು ಸಂಸತ್ತಿನಲ್ಲಿ ಸಿಡಿದೆದ್ದಾಗ ನಿಮ್ಮ ಪಕ್ಷದ ಸದಸ್ಯರೆಲ್ಲರೂ ಎಲ್ಲಿ ಅವಿತು ಕುಳಿತಿದ್ದರು? ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...