Homeಕರ್ನಾಟಕಸಿದ್ದರಾಮಯ್ಯರ ʼಹೃದಯ ವೈಶಾಲ್ಯತೆʼಗೆ ನಾನು ಆಭಾರಿ: ಹೆಚ್‌ಡಿ ಕುಮಾರಸ್ವಾಮಿ

ಸಿದ್ದರಾಮಯ್ಯರ ʼಹೃದಯ ವೈಶಾಲ್ಯತೆʼಗೆ ನಾನು ಆಭಾರಿ: ಹೆಚ್‌ಡಿ ಕುಮಾರಸ್ವಾಮಿ

- Advertisement -
- Advertisement -

ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ʼಹೃದಯ ವೈಶಾಲ್ಯತೆʼಗೆ ನಾನು ಆಭಾರಿ. ರೈತ ಸಾಂತ್ವನ ಯಾತ್ರೆಯನ್ನು ಸ್ವಾಗತ ಮಾಡಿರುವ ನಿಮ್ಮ ʼದೊಡ್ಡʼ ಗುಣವನ್ನು ಮನಸಾರೆ ಕೊಂಡಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವ್ಯಂಗ್ಯ ಮಾಡಿ ಹೆಚ್‌ಡಿ ಕುಮಾರಸ್ವಾಮಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಜೆಡಿಎಸ್‌ ಪಕ್ಷದ ರೈತ ಸಾಂತ್ವನ ಯಾತ್ರೆಯ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ”ಜಾತ್ಯತೀತ ಜನತಾ ದಳ ನಾಡಿನ ಬರಪರಿಸ್ಥಿತಿಯ ವೀಕ್ಷಣೆಗೆ ‘ರೈತ ಸಾಂತ್ವನ ಯಾತ್ರೆ’ ಕೈಗೊಳ್ಳುವುದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದು ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಮಾಡಬೇಕಾದ ಕೆಲಸ. ಈ ಯಾತ್ರೆಯ ನಂತರ ಅವರು ಕೊಡುವ ವರದಿಯನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ” ಎಂದು ಹೇಳಿದ್ದರು.

ಮುಖ್ಯ ಮಂತ್ರಿಗಳ ಪೋಸ್ಟ್ ಬೆನ್ನಲ್ಲೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‌ಡಿ ಕುಮಾರಸ್ವಾಮಿ ಅವರು ಪೋಸ್ಟ್ ಮಾಡಿದ್ದು, ”ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ʼಹೃದಯ ವೈಶಾಲ್ಯತೆʼಗೆ ನಾನು ಆಭಾರಿ. ರೈತ ಸಾಂತ್ವನ ಯಾತ್ರೆಯನ್ನು ಸ್ವಾಗತ ಮಾಡಿರುವ ನಿಮ್ಮ ʼದೊಡ್ಡʼ ಗುಣವನ್ನು ಮನಸಾರೆ ಕೊಂಡಾಡುತ್ತೇನೆ” ಎಂದು ಹೇಳಿದ್ದಾರೆ.

”ಜೆಡಿಎಸ್‌ ಪಕ್ಷ ಸಲ್ಲಿಸಲಿರುವ ಬರ ಅಧ್ಯಯನ ವರದಿಯನ್ನು ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದ್ದೀರಿ, ಬಹಳ ಸಂತೋಷ. ‘ರೈತ ಸಾಂತ್ವನ ಯಾತ್ರೆ’ಯ ಅನುಭವವನ್ನು ಕೇಂದ್ರದ ಜತೆಗೂ ಹಂಚಿಕೊಳ್ಳುತ್ತೇವೆ. ನಿಮಗೆ ಸಂಶಯ ಬೇಡ. ರಾಜ್ಯದ ಅಗತ್ಯಗಳಿಗೆ ಕೇಂದ್ರ ಸರಕಾರ ಹೇಗೆ ಸ್ಪಂದಿಸುತ್ತಿದೆ? ಅದಕ್ಕೆ ನಿಮ್ಮ ನೇತೃತ್ವದ ಸರಕಾರ ಎಷ್ಟು ʼಗಂಭೀರ(!?)ʼ ಪ್ರಯತ್ನ ಮಾಡಿದೆ, ಮಾಡುತ್ತಿದೆ ಎನ್ನುವುದು ನನಗೂ ತಿಳಿದಿದೆ. ಬರದ ಜತೆಗೆ, ವಿದ್ಯುತ್‌ ಬಿಕ್ಕಟ್ಟು, ಕಾವೇರಿ ಸಂಕಷ್ಟದ ವಿಷಯದಲ್ಲಿ ನಿಮ್ಮ ಸರಕಾರದ ʼಅಪರಿಮಿತ ಅಸಡ್ಡೆʼಯನ್ನು ಅರಿಯದಷ್ಟು ಮುಗ್ಧನೇ ನಾನು?” ಎಂದು ಪ್ರಶ್ನೆ ಮಾಡಿದ್ದಾರೆ.

”ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ಜತೆ ಹೆಚ್.ಡಿ.ದೇವೇಗೌಡರು ಮತ್ತವರ ಕುಟುಂಬಕ್ಕೆ ಆತ್ಮೀಯತೆ ಇದೆ ಎಂಬುದರಲ್ಲಿ ಎರಡು ಮಾತಿಲ್ಲ. ಬಿಜೆಪಿ-ಜೆಡಿಎಸ್‌ ನಡುವೆ ಮೈತ್ರಿ ಏರ್ಪಟ್ಟಿದೆ ಎನ್ನುವುದೂ ನಿಜ. ರಾಜ್ಯದ ಹಿತಕ್ಕಾಗಿ ನಾವು ಪ್ರಧಾನಿಯವರ ಮುಂದೆಯೂ ದನಿ ಎತ್ತುತ್ತೇವೆ, ಅದು ನಮ್ಮ ಬದ್ಧತೆ. ಆದರೆ, ನಿಮಗೆ ರಾಜ್ಯದ ಬರ ಮತ್ತಿತರೆ ಸಂಕಷ್ಟಗಳಿಗಿಂತ ಈ ಮೈತ್ರಿಯೇ ಬಹುದೊಡ್ಡ ಸಂಕಷ್ಟವಾಗಿ ಪರಿಣಮಿಸಿದಂತೆ ತೋರುತ್ತಿದೆ! ಅಲ್ಲವೇ?” ಎಂದು ಕೇಳಿದ್ದಾರೆ.

”ಪ್ರತಿಪಕ್ಷಗಳಾಗಿ ನಮ್ಮ ಪ್ರಯತ್ನ ನಾವು ಮಾಡುತ್ತೇವೆ, ಸರಕಾರವಾಗಿ ನಿಮ್ಮ ಸಾಧನೆ ಏನು? ಎಷ್ಟು ರೈತರಿಗೆ ಬೆಳೆ ವಿಮೆ ಕೊಡಿಸಿದ್ದೀರಿ? ಸರಕಾರದ ವತಿಯಿಂದ ಎಷ್ಟು ಪರಿಹಾರ ನೀಡಿದ್ದೀರಿ? ಅದನ್ನು ಹೇಳಬೇಕೆ ಹೊರತು, ಮಿತ್ರರ ನಡುವೆ ಹುಳಿ ಹಿಂಡುವ ಉಡಾಳತನ ತಮಗ್ಯಾಕೆ? ಎನ್ನುವುದು ನನ್ನ ವಿನಮ್ರ ಪ್ರಶ್ನೆ” ಎಂದಿದ್ದಾರೆ.

”236 ತಾಲೂಕುಗಳಲ್ಲಿ 216 ಬರಪೀಡಿತ ಎಂದು ಲೆಕ್ಕ ಕೊಟ್ಟಿದ್ದೀರಿ. 33,710 ಕೋಟಿ ರೂ. ಮೌಲ್ಯದ ಬೆಳೆಹಾನಿ ಆಗಿದ್ದು, ಕೇಂದ್ರಕ್ಕೆ 17,901 ಕೋಟಿ ರೂ. ಪರಿಹಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದ್ದೀರಿ, ಸರಿ. ಜತೆಗೆ; 343 ಕೋಟಿ ರೂ. ಬಿಡುಗಡೆ ಮಾಡಿದ್ದೇವೆ ಎಂದೂ ತಿಳಿಸಿದ್ದೀರಿ. ಅದನ್ನು ಯಾರಿಗೆ ಹಂಚಿದ್ದೀರಿ?” ಎಂದು ಪ್ರಶ್ನೆ ಮಾಡಿದ್ದಾರೆ.

”ಈ ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್‌ ಮಂಡಿಸಿ ʼವಿಶ್ವವಿಖ್ಯಾತ ವಿತ್ತತಜ್ಞʼರಾಗಿ ಮೆರೆಯುತ್ತಿರುವವರು ನೀವು. ಅಧಿಕಾರಕ್ಕೆ ಬಂದೊಡನೆ ವಿಶೇಷವಾಗಿ ವಿತ್ತಖಾತೆಯನ್ನು ತಮ್ಮಲ್ಲಿಯೇ ‘ ಜೋಪಾನ ‘ ಮಾಡಿಕೊಳ್ಳುವ ನಿಮಗೆ, ಕೇಂದ್ರ ಸರಕಾರವು ಬರಕ್ಕೆ, ಪ್ರವಾಹಕ್ಕೆ ಯಾವ ರೀತಿ ಪರಿಹಾರ ಕೊಡುತ್ತದೆ ಎನ್ನುವ ಸಾಮಾನ್ಯ ತಿಳಿವಳಿಕೆಯೂ ಇಲ್ಲವೇ?” ಎಂದು ಕೇಳಿದ್ದಾರೆ.

”ಹೋಗಲಿ, ನೀವು ಈ ರಾಜ್ಯದ ಮುಖ್ಯಮಂತ್ರಿ… ದೆಹಲಿಗೆ ಹೋಗಿ ಪ್ರಧಾನಿಗಳಿಗೆ ವಸ್ತುಸ್ಥಿತಿ ಮನವರಿಕೆ ಮಾಡಿಕೊಡಬೇಕಿತ್ತು. ಅದನ್ನೂ ಮಾಡಲಿಲ್ಲ, ಪ್ರತಿಷ್ಠೆ ನಿಮಗೆ. ಪ್ರಧಾನಿಗಳನ್ನು ಸದಾ ನಿಂದಿಸುತ್ತಾ ಕುಳಿತರೆ ಲಾಭವೇನು? ಇಲ್ಲಿ ವರ್ಗಾವಣೆ ದಂಧೆ, ಕಮೀಷನ್ ವಸೂಲಿ, ಆಪರೇಷನ್‌ ಹಸ್ತ, ಡಿನ್ನರ್‌-ಬ್ರೇಕ್‌ ಫಾಸ್ಟ್‌ ಮೀಟಿಂಗುಗಳಲ್ಲಿಯೇ ʼಭಾರೀʼ ಬ್ಯುಸಿ‌ ಆಗಿರುವ ನಿಮಗೆ ದೆಹಲಿಗೆ ಜನರ ಅಹವಾಲು ತೆಗೆದುಕೊಂಡು ಹೋಗಲು ಸಮಯವಾದರೂ ಎಲ್ಲಿದೆ?” ಎಂದು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

”ನೀವು ಕರೆದೊಯ್ಯುವ ಸರ್ವಪಕ್ಷ ನಿಯೋಗದಲ್ಲಿ ಜೆಡಿಎಸ್ ಪಕ್ಷವೂ ಇರುತ್ತದೆ, ನಮ್ಮ ಮಿತ್ರಪಕ್ಷ ಬಿಜೆಪಿಯೂ ಇರುತ್ತದೆ. ಇನ್ನೊಬ್ಬರ ಧೈರ್ಯದ ಬಗ್ಗೆ ಮಾತನಾಡುವ ನೀವು, ನಿಮ್ಮ ಸ್ಥೈರ್ಯದ ಬಗ್ಗೆಯೂ ಕೊಂಚ ಹೇಳಬೇಕಲ್ಲವೇ? ಮುಖ್ಯಮಂತ್ರಿಯಾಗಿ ನೀವು ರಾಜ್ಯಕ್ಕೆ ಸಂಬಂಧಿಸಿ ಪ್ರಧಾನಿಗಳನ್ನು,‌ ಸಂಬಂಧಿಸಿದ ಕೇಂದ್ರ ಸಚಿವರನ್ನು ಎಷ್ಟು ಸಲ ಭೇಟಿ ಆಗಿದ್ದೀರಿ? ಎಷ್ಟು ಅರ್ಜಿ ಕೊಟ್ಟಿದ್ದೀರಿ? ರಾಜ್ಯದ ನೆಲ-ಜಲ, ಇನ್ನಿತರೆ ಸಂಕಷ್ಟದ ವೇಳೆ ಈ ಇಳಿವಯಸ್ಸಿನಲ್ಲಿಯೂ ಮಾನ್ಯ ದೇವೇಗೌಡರು ನಡೆಸುತ್ತಿರುವ ಹೋರಾಟ ನಿಮಗೆ ಕಾಣಿಸಿಲ್ಲವೇ? ಕಾವೇರಿ ಬಗ್ಗೆ ಅವರು ಸಂಸತ್ತಿನಲ್ಲಿ ಸಿಡಿದೆದ್ದಾಗ ನಿಮ್ಮ ಪಕ್ಷದ ಸದಸ್ಯರೆಲ್ಲರೂ ಎಲ್ಲಿ ಅವಿತು ಕುಳಿತಿದ್ದರು? ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...