Homeಕರ್ನಾಟಕಯತ್ನಾಳ್ ಹಿಂದೂತ್ವವಾದಿಯಾಗಿರುವುದಕ್ಕೆ ಖುಷಿ ಇದೆ, ಪಕ್ಷದ ಶಿಸ್ತು ಕಾಪಾಡಬೇಕು: ಈಶ್ವರಪ್ಪ

ಯತ್ನಾಳ್ ಹಿಂದೂತ್ವವಾದಿಯಾಗಿರುವುದಕ್ಕೆ ಖುಷಿ ಇದೆ, ಪಕ್ಷದ ಶಿಸ್ತು ಕಾಪಾಡಬೇಕು: ಈಶ್ವರಪ್ಪ

- Advertisement -
- Advertisement -

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಂದು ಪ್ರಕಾರದ ಹಿಂದೂತ್ವವಾದಿ. ಅದಕ್ಕೆ ನಾನು ಖುಷಿ ಪಡುತ್ತೇನೆ. ಆದರೆ ಅವರು ಪಕ್ಷದ ಶಿಸ್ತಿನ ಒಳಗೆ ಇದ್ದರೆ ಒಳ್ಳೆಯದು ಎಂದು ಸಚಿವ ಕೆ.ಎಸ್ ಈಶ್ವರಪ್ಪ ಅಭಿಪ್ರಾಯಪಟ್ಟಿದ್ದಾರೆ.

ಸಿಎಂ ಯಡಿಯೂರಪ್ಪ ವಿರುದ್ಧ ಹಲವು ಹೇಳಿಕೆಗಳನ್ನು ನೀಡಿ ಇಕ್ಕಟ್ಟಿಗೆ ಸಿಲುಕಿಸಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕುರಿತು ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಯತ್ನಾಳ್ ಅವರು ಸಿಎಂ ಬಗ್ಗೆ ಈ ರೀತಿಯ ಹೇಳಿಕೆ ನೀಡುವುದಕ್ಕೆ ನಾನು ಒಪ್ಪಲ್ಲ. ಅವರು ಒಂದು ಪ್ರಕಾರದ ಹಿಂದೂತ್ವವಾದಿ, ಅದಕ್ಕೆ ನಾನು ಖುಷಿ ಪಡುತ್ತೇನೆ. ಆದರೆ, ಅವರು ಪಕ್ಷದ ಶಿಸ್ತಿನ ಒಳಗೆ ಇದ್ದರೆ ಒಳ್ಳೆಯದು” ಎಂದು ತಿಳಿಸಿದ್ದಾರೆ.

“ಯತ್ನಾಳ್ ಬಗ್ಗೆ ಏನು ಕ್ರಮ ತೆಗೆದು ಕೊಳ್ಳಬೇಕು ಎಂಬ ಬಗ್ಗೆ ಕೇಂದ್ರಕ್ಕೆ ಮಾಹಿತಿ ಕಳುಹಿಸಿ ಕೊಡಲಾಗಿದೆ. ಕೇಂದ್ರದ ನಾಯಕರು ಅವರಿಗೆ ನೋಟಿಸ್ ನೀಡಿದ್ದಾರೆ. ಅದಕ್ಕೆ ಯತ್ನಾಳ್ ಉತ್ತರ ಸಹ ನೀಡಿದ್ದಾರೆ. ಕೇಂದ್ರದ ನಾಯಕರು ಈ ಬಗ್ಗೆ ಕ್ರಮ ಕೈಗೊಳ್ಳಲಿದ್ದಾರೆ” ಎಂದು ಈಶ್ವರಪ್ಪ ತಿಳಿಸಿದ್ದಾರೆ.


ಇದನ್ನೂ ಓದಿ: ಹೈಕಮಾಂಡ್ ನೀಡಿದ ನೋಟಿಸ್‌ಗೆ ಉತ್ತರಿಸಿದ ಯತ್ನಾಳ್: ಯಡಿಯೂರಪ್ಪ ವಿರುದ್ಧ 11 ಪುಟಗಳ ಆರೋಪ


ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಕಾಂಗ್ರೆಸ್‌ನ ಬಿ ಟೀಂ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ನೂತನ ಬಿಜೆಪಿ ಸಚಿವ ಮುರುಗೇಶ ನಿರಾಣಿ ನಿನ್ನೆ ವಾಗ್ದಾಳಿ ನಡೆಸಿದ್ದರು.

“ಪಂಚಮಸಾಲಿ ಮಂತ್ರಿಗಳು ಮತ್ತು ಶಾಸಕರು ರಾಜೀನಾಮೆ ನೀಡಬೇಕು ಎಂದು ಯತ್ನಾಳ್ ಸಮಾವೇಶದಲ್ಲಿ ಹೇಳಿದ್ದಾರೆ. ನಾವು ನಮ್ಮ ನಮ್ಮ ಕ್ಷೇತ್ರಗಳ ಎಲ್ಲ ಮತದಾರರ ಆಶೀರ್ವಾದದಿಂದ ಗೆದ್ದು ಬಂದಿದ್ದೇವೆ. ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿಯವರು ನಮ್ಮನ್ನು ಮಂತ್ರಿ ಮಾಡಿದ್ದು. ಮೊದಲಿಗೆ ಅವರು (ಯತ್ನಾಳ) ರಾಜೀನಾಮೆ ಕೊಟ್ಟು, ವಿಜಯಪುರದಿಂದ ಸ್ವರ್ಧಿಸಿ ಗೆದ್ದು ಬರಲಿ” ಎಂದು ಮುರಗೇಶ ನಿರಾಣಿ ಸವಾಲು ಹಾಕಿದ್ದರು.

ಇನ್ನು ಮೊನ್ನೆ ಯತ್ನಾಳ್ ಮಾತನಾಡಿ “ಪಕ್ಷದಿಂದ ನನಗೆ ನೋಟಿಸ್ ಬಂದಿರುವುದು ನಿಜ. ಅದಕ್ಕೆ ಪ್ರತಿಕ್ರಿಯೆಯಾಗಿ ಹನ್ನೊಂದು ಪುಟಗಳ ಉತ್ತರ ನೀಡಿದ್ದೇನೆ. ಯಡಿಯೂರಪ್ಪ ಅವರ ಕುಟುಂಬ ರಾಜಕಾರಣದ ಬಗ್ಗೆ 45 ಪ್ಯಾರಾಗಳಲ್ಲಿ ವಿವರಿಸಿದ್ದೇನೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಸರ್ಕಾರಕ್ಕೆ ಹೇಗೆ ಕೆಟ್ಟ ಹೆಸರು ಬರುತ್ತಿದೆ ಎಂಬುದನ್ನು ಪತ್ರದಲ್ಲಿ ಪ್ರಸ್ತಾಪಿಸಿದ್ದೇನೆ. ಸರ್ಕಾರದಲ್ಲಿ ಕುಟುಂಬದ ಹಸ್ತಕ್ಷೇಪ ಇರಬಾರದು ಎನ್ನುವುದು ನರೇಂದ್ರ ಮೋದಿ ಆಶಯ. ಆದರೆ, ಅವರ ಆಶಯದಂತೆ ಇಲ್ಲಿ ಸರ್ಕಾರ ಇಲ್ಲ. ಯಡಿಯೂರಪ್ಪ ಅವರ ಕುಟುಂಬ ಬಿಜೆಪಿ ಶಾಸಕರನ್ನು ಗೌರವಿಸುತ್ತಿಲ್ಲ. ಯಡಿಯೂರಪ್ಪ ಅವರ ಕುಟುಂಬದ ಬಗ್ಗೆಯೂ ತನಿಖೆ ಮಾಡಬೇಕು ಮತ್ತು ಭ್ರಷ್ಟಾಚಾರ, ಹಸ್ತಕ್ಷೇಪ, ವರ್ಗಾವಣೆ ದಂಧೆ ಬಗ್ಗೆಯೂ ತನಿಖೆ ಮಾಡಬೇಕು ಒತ್ತಾಯಿಸಿದ್ದೇನೆ” ಎಂದು ತಿಳಿಸಿದ್ದಾರೆ.

ನೋಟಿಸ್‌ಗೆ ಉತ್ತರ ಕೊಡುವಾಗ ಪತ್ರದಲ್ಲಿ ಎಲ್ಲೂ ಕ್ಷಮೆ ಯಾಚಿಸಿಲ್ಲ. ಸಿಡಿ, ಇಡಿ ಬಗ್ಗೆಯೂ ಪತ್ರದಲ್ಲಿ ಉಲ್ಲೇಖಿಸಿದ್ದೇನೆ.‌ ಮಾರಿಷಸ್ ವಿಚಾರವನ್ನೂ ಬರೆದಿದ್ದೇನೆ. ಮಾರಿಷಸ್‌ಗೆ ಯಾಕೆ ಹೋಗಿದ್ದರು. ಎಷ್ಟು ಮಂದಿ ಹೋಗಿದ್ದರು. ಯಾವ ವಿಮಾನದಲ್ಲಿ ಹೋಗಿದ್ದರು, ಮಾಜಿ ಗೃಹ ಸಚಿವರೊಬ್ಬರ ಆಪ್ತ ಸಹಾಯಕನ ಮೂಲಕ ಮಾರಿಷಸ್‌ಗೆ ಹೋಗಿ ಏನೇನು ತೆಗೆದುಕೊಂಡಿದ್ದಾರೆ ಎಲ್ಲವನ್ನೂ ಪತ್ರದಲ್ಲಿ ಉಲ್ಲೇಖಿಸಿದ್ದೇನೆ. ಇದರ ಬಗ್ಗೆಯೂ ತನಿಖೆ ಮಾಡಲು‌ ಆಗ್ರಹಿಸಿದ್ದೇನೆ” ಎಂದು ಯತ್ನಾಳ್ ಹೇಳಿದ್ದಾರೆ.


ಇದನ್ನೂ ಓದಿ: ಯತ್ನಾಳ್ ಕಾಂಗ್ರೆಸ್‌ನ ‘ಬಿ’ ಟೀಂ ಆಗಿ ಕೆಲಸ ಮಾಡುತ್ತಿದ್ದಾರೆ – ಸಚಿವ ಮುರುಗೇಶ ನಿರಾಣಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...