Homeನಿಜವೋ ಸುಳ್ಳೋನಾನೇ ಒಂದು ಜುಮ್ಲಾ : ಗೋಡ್ಸೆ ಜೊತೆ ಒಂದು ಕಾಲ್ಪನಿಕ ಸಂದರ್ಶನ

ನಾನೇ ಒಂದು ಜುಮ್ಲಾ : ಗೋಡ್ಸೆ ಜೊತೆ ಒಂದು ಕಾಲ್ಪನಿಕ ಸಂದರ್ಶನ

- Advertisement -
- Advertisement -

ಸ್ವಾತಂತ್ರ್ಯ ಚಳವಳಿಯ ನೇತಾರ ಮಹಾತ್ಮ ಗಾಂಧಿಯವರನ್ನು ಕೊಂದ ದೇಶದ ಮೊದಲ ಭಯೋತ್ಪಾದಕ ನಾಥುರಾಮ್ ಗೋಡ್ಸೆಯನ್ನು ಗಲ್ಲಿಗೇರಿಸಿದ ದಿನ ಇಂದು. ಜೆ.ಎನ್.ಯು.ಎಸ್.ಯು ಮಾಜಿ ಅಧ್ಯಕ್ಷರಾದ ಲೋಕೇಶ್ ಮಾಲ್ತಿ ಪ್ರಕಾಶ್ ರವರು ಗೋಡ್ಸೆಯೊಂದಿಗೆ ಒಂದು ಕಾಲ್ಪನಿಕ ಸಂದರ್ಶನ ನಡೆಸಿದ್ದಾರೆ. 

ಭಾರತದಲ್ಲಿ 2014ರಿಂದ ದೇಶಭಕ್ತ ಸರ್ಕಾರ ಬಂದ ಮೇಲೆ, ತಾನು ಮತ್ತು ತನ್ನ ಸಾಹಸಗಳ ಬಗ್ಗೆ ಭಾರತದಲ್ಲಿ ಹೊಸ ಆಸಕ್ತಿ ಹುಟ್ಟಿದೆ ಎಂಬ ಸುದ್ದಿ ಕಳೆದೆರಡು ವರ್ಷಗಳ ಹಿಂದೆ ನಾಥುರಾಮ್ ಗೋಡ್ಸೆಯನ್ನು ತಲುಪಿತು. ಉಲ್ಲಸಿತನಾದ ಗೋಡ್ಸೆ ಭೂಮಿಗೆ ತಲುಪಲು ಟ್ರಾವೆಲ್ ವೀಸಾಕ್ಕೆ ಅರ್ಜಿ ಹಾಕಿದ. ಆದರೆ ಒಪ್ಪಿಗೆ ಪಡೆಯಲು ಹಲವಾರು ಅಡೆತಡೆ ಎದುರಾದವು. ಅದ್ಹೇಗೋ ಅಧಿಕಾರಿಗಳ ‘ರೆಡ್‍ಟೇಪ್’ ಬಾಹು ಯಮಲೋಕಕ್ಕೂ ಚಾಚಿತು.

ಕೈ ಬೆಚ್ಚಗಿಲ್ಲದೇ ಈ ಬಾಬುಗಳು ಗೋಡ್ಸೆ ಫೈಲನ್ನು ಮುಂದಕ್ಕೆ ಹೋಗಲು ಬಿಡಲೇ ಇಲ್ಲ. ಆದರೂ ಅದ್ಹೇಗೋ ಸ್ವಲ್ಪ ಮುಂದಕ್ಕೆ ಚಲಿಸಿದಾಗ ದುಷ್ಟ ಕಾಂಗ್ರೆಸ್ ಉನ್ನತ ಅಧಿಕಾರಿಗೆ ಈ ಗೋಡ್ಸೆ ಭೂಮಿಗೆ ಬರುವುದು ಇಷ್ಟವಾಗಲಿಲ್ಲ. ಗೋಡ್ಸೆ ಸ್ವರ್ಗ ಮತ್ತು ಭೂಮಿಯಲ್ಲಿರುವ ಕೆಲವು ಎಳೆಗಳನ್ನು ಎಳೆದ. ಅಂತಿಮವಾಗಿ ಭೂಮಿಯ ಮೇಲಿನ ಭಯಂಕರ ಹೆಣ್ಣುಮಗಳೊಬ್ಬಳು ಶಾಪ ಕೊಟ್ಟ ಪರಿಣಾಮವಾಗಿ ಆ ಉನ್ನತ ಅಧಿಕಾರಿ ಅಲ್ಲಿಂದ ವರ್ಗಾವಣೆಗೊಂಡ! ಹಾಂ, ಗೋಡ್ಸೆಗೆ ಭಾರತಕ್ಕೆ ಟ್ರಾವೆಲ್ ವೀಸಾ ಸಿಕ್ಕೇ ಬಿಡ್ತು. ಗೋಡ್ಸೆ ಕೇದಾರನಾಥದ ಗುಹೆಯೊಂದರಲ್ಲಿ ‘ಸಮಾಧಿ’ ಸ್ಥಿತಿಗೆ ತೆರಳುವ ಮುನ್ನ ನನಗೆ ಆತನ ಸಂದರ್ಶನ ಮಾಡುವ ಅವಕಾಶ ಸಿಕ್ಕಿತು. ಆ ಸಂದರ್ಶನದ ಕೆಲವು ತುಣುಕುಗಳು ನಿಮಗಾಗಿ:

ಪ್ರಶ್ನೆ: ಮಿ. ಗೋಡ್ಸೆ, ಹಲವಾರು ದಶಕಗಳ ನಂತರ ಮತ್ತೆ ಹೆಡ್‍ಲೈನಿನಲ್ಲಿರುವುದು ಹೇಗನಿಸುತ್ತೆ?
ಗೋಡ್ಸೆ: ಸೂಪರ್, ಗ್ರೇಟ್! ಇಂತಹ ಒಂದು ಅವಕಾಶ ಮಾಡಿಕೊಟ್ಟ ಸಾಧ್ವಿಗೆ ಥ್ಯಾಂಕ್ಸ್ ಹೇಳ ಬಯಸುತ್ತೇನೆ. ದೇಶಭಕ್ತರು ಅಧಿಕಾರಕ್ಕೆ ಬಂದಾಗಿನಿಂದ ನನಗೊಂದು ಸ್ಥಾನ ಸಿಕ್ಕೇ ಸಿಗುತ್ತೆ ಎಂಬ ಭರವಸೆಯಲ್ಲಿದ್ದೆ. ನಿಮಗೆ ಗೊತ್ತಾ, ಭೂಮಿಯ ಮೇಲೆ ನಿನಗಿಂತ ನನಗೆ ಹೆಚ್ಚು ಭಕ್ತರಿದ್ದಾರೆ ಎಂದು ನಾನು ಹಿಟ್ಲರ್‍ಗೇ ಚಾಲೆಂಜ್ ಮಾಡಿ ಬಂದಿದ್ದೇನೆ. ಅವನು ಇದರಲ್ಲಿ ಸೋತರೆ, ಗೋಮೂತ್ರ ಕುಡಿಯಲೇಬೇಕು. ಗೋಮೂತ್ರವಷ್ಟೇ ನಿನ್ನನ್ನು ನಿಜವಾದ ಆರ್ಯನನ್ನಾಗಿ ಮಾಡಬಲ್ಲದು ಎಂದು ಅವನಿಗೆ ಹೇಳಿದ್ದೇನೆ ಕೂಡ…

ಪ್ರ: ಆದರೆ, ಪ್ರಧಾನಿ ತಮಗೆ ಅಸಂತೋಷವಾಗಿದೆ ಎಂದಿದ್ದಾರೆ, ಅವರು ತಮ್ಮ ಹೃದಯದಿಂದ ಸಾದ್ವಿಯನ್ನು ಕ್ಷಮಿಸಲ್ಲವಂತೆ..
ಗೋಡ್ಸೆ: ಅವರು ಪಿಎಂ. ಅವರು ಬಹಳಷ್ಟು ಜನರನ್ನು ಓಲೈಸಬೇಕಾಗುತ್ತೆ. ಅದು ಡೆಮಾಕ್ರಸಿಯ ಧ್ವನಿ… ನೀವು ಎಲ್ಲರನ್ನು ಸಂತುಷ್ಟಗೊಳಿಸಬೇಕಾಗುತ್ತೆ.

ಪ್ರಶ್ನೆ: ಸಾಧ್ವಿಯನ್ನು ಎಂದೂ ಕ್ಷಮಿಸಲ್ಲ ಅಂದಿದ್ದಾರೆ ಅಂದಮೇಲೆ, ಸಾಧ್ವಿ ಏನೋ ಘನಘೋರ ತಪ್ಪು ಮಾಡಿರಬೇಕಲ್ಲ?
ಗೋಡ್ಸೆ: ಇದು ಎಲೆಕ್ಷನ್ ಟೈಮ್. ಎಲೆಕ್ಷನ್ ಟೈಮ್ ಅಂದರೆ ‘ಜುಮ್ಲಾ ಟೈಮ್’…

ಪ್ರಶ್ನೆ: ಅಂದ್ರೆ ಪಿಎಂ ಸುಮ್ಮನೇ ಒಂದು ‘ಜುಮ್ಲಾ’ ಹೊಡೀತಿದ್ದಾರೆ ವಿನಹ ಸತ್ಯವನ್ನಲ್ಲ?
ಗೋಡ್ಸೆ: ಜನರನ್ನು ಇದು ಸತ್ಯ ಅಂತಾ ನಂಬಿಸ್ತೀವಲ್ಲ, ಅದೇ ಸತ್ಯ…

ಪ್ರಶ್ನೆ: ಕೆಲವು ಜನ ಹೇಳ್ತಾರೆ, ನೀನು ದೇಶಭಕ್ತ ಅಂತಾ. ಅದು ಜುಮ್ಲಾನಾ, ಸತ್ಯವಾ?
ಗೋಡ್ಸೆ: ಅದು ವೀಕ್ಷಕನ (ಅಬ್ಸರ್ವರ್) ಮೇಲೆ ಅವಲಂಬಿತ…

ಪ್ರಶ್ನೆ: ಅಂದರೆ ಹಾಗೇ ಹೇಳತಿರೋ ವ್ಯಕ್ತಿ ಮೇಲಲ್ಲ…
ಗೋಡ್ಸೆ: ಅದು ಆತನ ಪಾಲಿಗೆ ಜುಮ್ಲಾ. ಆತನಿಗೆ ಗೊತ್ತು ತಾನೊಂದು ಜುಮ್ಲಾ ಹೊಡಿತಿದ್ದೀನಿ ಅಂತಾ. ಆದರೆ ಅದನ್ನು ಸತ್ಯ ಅಂತಾ ಸ್ವೀಕರಿಸ್ತಾರೆ ಅಂತಾನೂ ಆತನಿಗೆ ಗೊತ್ತಿರುತ್ತೆ. ಅದೇ ಜುಮ್ಲಾದ ಶಕ್ತಿ. ಅದು ಪಿಎಂ ತಮ್ಮ ಹೃದಯದಿಂದ ( ಅದಕ್ಕೂ ಹೃದಯ ಬೇಕು) ಯಾರನ್ನೋ ಕ್ಷಮಿಸುತ್ತಿದ್ದಾರೆ ಅನ್ನೋ ಬಿಂಬವೂ ಹೌದು, ಪಿಎಂ ತನ್ನ ಹೃದಯದಿಂದ ಕ್ಷಮಿಸಲ್ಲ ಅನ್ನುವ ಸತ್ಯವೂ ಹೌದು…

ಪ್ರಶ್ನೆ: ನಿನ್ನ ಬಗ್ಗೆ ನಿನಗೆ ಏನು ಅನಿಸುತ್ತೆ? ನೀನು ದೇಶಭಕ್ತನಾ?
ಗೋಡ್ಸೆ: ನಾನೊಬ್ಬ ಜುಮ್ಲಾ, ನಾನೊಂದು ಜುಮ್ಲಾ…

ಪ್ರಶ್ನೆ: ಅಂದರೆ ಇದೆಲ್ಲ ಒಂದು ಸುಳ್ಳಿನ ಕಂತೆ?
ಗೋಡ್ಸೆ: ಅದು ಸುಳ್ಳಿನ ಕಂತೆಯಲ್ಲ, ಅದು ‘ಫೀಲ್ ಗುಡ್’ ಭಾವ.. ಜುಮ್ಲಾದಿಂದ ನಿನಗೆ ಒಂದು ಆಹ್ಲಾದಕರ ಭಾವ ಆವರಿಸುತ್ತೆ, ಅದೇ ಜುಮ್ಲಾದ ಉದ್ದೇಶವೂ ಕೂಡ. ಅಚ್ಛೇ ದಿನ್ ಅಂದರೆ ಅದೇ…ಪಕೋಡಾ ಮಾರ್ತಾ ಮಾರ್ತಾ, ಗಾಡಿ ತೊಳಿತಾ ತೊಳಿತಾ ಅಥವಾ ಚಾ ಮಾರ್ತಾ ಮಾರ್ತಾ ನಿನಗೆ ‘ಫೀಲ್ ಗುಡ್’ ಎಂಬ ಸಂತೋಷದ ಭಾವ ಉಂಟಾಗುತ್ತೆ. ಕೊಲ್ಲೋ ಮೂಲಕವೂ ನೀನು ‘ಫೀಲ್‍ಗುಡ್’ ಆನಂದ ಪಡಿಬಹುದು. ಒಳ್ಳೆಯ ಭಾವನೆಗಳಿಗಿಂತ ಈ ‘ಫಿಲ್‍ಗುಡ್’ನ ಸೆನ್ಸೆಷನ್ ಇದೆಯಲ್ಲ, ಇದು ಬಹಳ ಬಹಳ ದೊಡ್ಡದು. ನಾನಿಲ್ಲಿ ಶಬ್ದಗಳ ಆಟ ಆಡ್ತಿಲ್ಲ. ಭಾರತೀಯ ಫಿಲಾಸಫಿಯಲ್ಲಿ ಎಲ್ಲವೂ ಮಾಯೆಯೇ. ಅದರರ್ಥ ಇಡೀ ವಿಶ್ವವೇ ಒಂದು ನಹಾನ್ ಜುಮ್ಲಾ. ನೀನು ಈಗಾಗಲೇ ಜುಮ್ಲಾಗಳ ನಡುವೆ ಸಿಕ್ಕಿ ಹಾಕಿಕೊಂಡಿದ್ದೀಯಾ. ಒಂದಿಷ್ಟು ಜುಮ್ಲಾ ಸೇರಿಸಿದ್ದಕ್ಕೆ ನನ್ನನ್ನು ಏಕೆ ದೂಷಣೆ ಮಾಡ್ತೀಯಾ? ಒಂದೇ ದಾರಿ ಅಂದರೆ ನ್ಯಾಯ ಪಡೆಯುವುದಲ್ಲ ಮುಕ್ತಿ ಪಡೆಯುವುದು. ಅದೊಂದು ಮರೀಚಿಕೆ.

ಪ್ರಶ್ನೆ: ಜನರಿಗೆ ಮೋಕ್ಷಕ್ಕಿಂತ ನ್ಯಾಯದ ಅಗತ್ಯ ಬಹಳ ಇದೆಯಲ್ಲ?
ಗೋಡ್ಸೆ: ಜನರಿಗೆ ತಮಗೇನೂ ಬೇಕಂತನೇ ಗೊತ್ತಿಲ್ಲ. ನನಗೆ ಜುಮ್ಲಾಗಳೇ ಬೇಕು ಅಂತಾ ಯಾವನಾದರೂ ಹೇಳಿದ್ದಾನಾ? ಇಲ್ಲ, ಆದರೆ ದೇಶಭಕ್ತ ಪಾರ್ಟಿಗೆ ಗೊತ್ತು, ಎಲ್ಲರಿಗೂ ಜುಮ್ಲಾ ಬೇಕು ಅಂತಾ. ಅದಕ್ಕೇ ಅವರು ಯಥೇಚ್ಛವಾಗಿ ಜುಮ್ಲಾಗಳನ್ನು ಒದಗಿಸ್ತಾ ಇದ್ದಾರೆ…7 ದಶಕಗಳಿಂದ ಜಾತ್ಯತೀತ ಸರ್ಕಾರಗಳು ಜನರನ್ನು ಈ ಹಸಿವಿನಿಂದ ಕಾಡಿದವು. ದೇಶಭಕ್ತ ಸರ್ಕಾರವು ಅವರ ಖಾಲಿ ಹೊಟ್ಟಗಳನ್ನು ಜುಮ್ಲಾಗಳಿಂದ ಭರ್ತಿ ಮಾಡಿತು.

ಪ್ರಶ್ನೆ: ನೀನು ಅಲ್ಲಿ ಮೇಲೆ ಮೋಡಗಳಲ್ಲಿ ಇರ್ತೀಯಾ. ಯಾವುದಾದರೂ ಸ್ಯಾಟ್‍ಲೈಟ್ ನಿನ್ನ ಇರುವಿಕೆಯನ್ನ ಪತ್ತೆ ಮಾಡಿದೆಯಾ?
ಗೋಡ್ಸೆ: ಇಲ್ಲವೇ ಇಲ್ಲ, ಸಾಧ್ಯಾನೇ ಇಲ್ಲ. ಮೋಡಗಳಲ್ಲಿ ಬದುಕುವುದರ ಅನುಕೂಲ ಅಂದ್ರೆನೇ ಅದು. ಸ್ಯಾಟ್‍ಲೈಟ್ಸ್ ಮತ್ತು ರೆಡಾರ್‍ಗಳು ಎಂದೂ ನಿನ್ನ ಪತ್ತೆ ಹಚ್ಚಕಾಗಲ್ಲ. ಅದಕ್ಕೇ ಟ್ರಂಪ್‍ಗೆ ಆಕಾಶದಲ್ಲಿ ನನ್ನ ಚಲನವಲನ ಗೊತ್ತಾಗದ ರೀತಿಯಲ್ಲಿ ನಾನು ಭಾರತದಲ್ಲಿ ಬಂದಿಳಿದೆ.
ಇದರ ನಂತರ ಗೋಡ್ಸೆ ತನ್ನ ‘ಸಮಾಧಿ’ಯತ್ತ ಹೊರಟ…


ಇದನ್ನೂ ಓದಿ: ಗಾಂಧಿ ಅಂದಿಗೂ ಇಂದಿಗೂ ಒಬ್ಬಂಟಿ. ಗೋಡ್ಸೆ ಅಂದಿಗೂ ಒಬ್ಬಂಟಿಯಲ್ಲ, ಇಂದಿಗೂ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಗೋಡ್ಸೆ ಅವರನ್ನ ಭಯೋತ್ಪಾದಕ ಅಂತ ಕರೆಯುವುದಾದರೆ ,ಭಗತ್ ಸಿಂಗ್ ಅವರನ್ನು ನೇಣು ಕುಣಿಕೆ ತಪ್ಪಿಸಲು ಆಗದವರನ್ನ ,ಸುಭಾಷ್ ಚಂದ್ರಭೋಸ್ ಅವರ ಮೇಲೆ ಗೂಢಾಚಾರಿಕೆ ಮಾಡಲು ನೆರವಾದ ಸೋಕಾಲ್ಡ್ ಒಂದು ಕುಟುಂಬ ರಾಜಕಾರಣದ ಪರಿವಾರದವರನ್ನ ,ಚೀನಾದೊಂದಿಗೆ ಹಿಂದಿನಿಂದಲೂ ಸಹಾಯ ಪಡೆಯುತ್ತಿರುವ ಈಗಲೂ ನೆರವು ಪಡೆದು ಚೀನಾದ ಪರ ನಿಲ್ಲೋ ಭಾರತದ ಕಮ್ಯೂನಿಸ್ಟ್ ರನ್ನ ಯಾವ ಭಯೋತ್ಪಾದನೆ ಯವರು ಎಂದು ಕರೆಯಬಹುದು.

LEAVE A REPLY

Please enter your comment!
Please enter your name here

- Advertisment -

‘ಯುದ್ಧ ಮುಂದುವರಿಸಲು ಸಾಧ್ಯವಾಗದೆ ಅಮೆರಿಕ ಬಲವಂತವಾಗಿ ಕದನ ವಿರಾಮ ಘೋಷಿಸಿತು’: ಭಾರತದಲ್ಲಿ ಇರಾನ್ ಸುಪ್ರೀಂ ಲೀಡರ್ ಪ್ರತಿನಿಧಿ

ನವದೆಹಲಿ: ಸಂಘರ್ಷವನ್ನು ಮುುಂದುವರಿಸಲು ವಿಫಲವಾದ ನಂತರ ಅಮೆರಿಕವು ಇರಾನ್ ಜೊತೆ ಕದನ ವಿರಾಮ ಘೋಷಿಸಲು ಒತ್ತಾಯಿಸಲ್ಪಟ್ಟಿತು ಮತ್ತು ನಿರಂತರ ಹಗೆತನವು ವಾಷಿಂಗ್ಟನ್‌ಗೆ ಮತ್ತಷ್ಟು ಹಿನ್ನಡೆಗೆ ಕಾರಣವಾಗುತ್ತಿತ್ತು ಎಂದು ಇರಾನ್‌ನ ಸರ್ವೋಚ್ಚ ನಾಯಕನ ಭಾರತದಲ್ಲಿನ...

ಶಾರದಾ ಚಿಟ್ ಫಂಡ್ ಹಗರಣ: 13 ವರ್ಷಗಳ ನಂತರ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಜಾಮೀನು ಮಂಜೂರು ಮಾಡಿದ ಕೊಲ್ಕತ್ತಾ ಹೈಕೋರ್ಟ್

ಕೊಲ್ಕತ್ತಾ ಹೈಕೋರ್ಟ್ ಬುಧವಾರ ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 13 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಲು ದಾರಿ ಸುಗಮವಾಗಿದೆ. ಪಶ್ಚಿಮ...

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...