Homeನಿಜವೋ ಸುಳ್ಳೋನಾನೇ ಒಂದು ಜುಮ್ಲಾ : ಗೋಡ್ಸೆ ಜೊತೆ ಒಂದು ಕಾಲ್ಪನಿಕ ಸಂದರ್ಶನ

ನಾನೇ ಒಂದು ಜುಮ್ಲಾ : ಗೋಡ್ಸೆ ಜೊತೆ ಒಂದು ಕಾಲ್ಪನಿಕ ಸಂದರ್ಶನ

- Advertisement -
- Advertisement -

ಸ್ವಾತಂತ್ರ್ಯ ಚಳವಳಿಯ ನೇತಾರ ಮಹಾತ್ಮ ಗಾಂಧಿಯವರನ್ನು ಕೊಂದ ದೇಶದ ಮೊದಲ ಭಯೋತ್ಪಾದಕ ನಾಥುರಾಮ್ ಗೋಡ್ಸೆಯನ್ನು ಗಲ್ಲಿಗೇರಿಸಿದ ದಿನ ಇಂದು. ಜೆ.ಎನ್.ಯು.ಎಸ್.ಯು ಮಾಜಿ ಅಧ್ಯಕ್ಷರಾದ ಲೋಕೇಶ್ ಮಾಲ್ತಿ ಪ್ರಕಾಶ್ ರವರು ಗೋಡ್ಸೆಯೊಂದಿಗೆ ಒಂದು ಕಾಲ್ಪನಿಕ ಸಂದರ್ಶನ ನಡೆಸಿದ್ದಾರೆ. 

ಭಾರತದಲ್ಲಿ 2014ರಿಂದ ದೇಶಭಕ್ತ ಸರ್ಕಾರ ಬಂದ ಮೇಲೆ, ತಾನು ಮತ್ತು ತನ್ನ ಸಾಹಸಗಳ ಬಗ್ಗೆ ಭಾರತದಲ್ಲಿ ಹೊಸ ಆಸಕ್ತಿ ಹುಟ್ಟಿದೆ ಎಂಬ ಸುದ್ದಿ ಕಳೆದೆರಡು ವರ್ಷಗಳ ಹಿಂದೆ ನಾಥುರಾಮ್ ಗೋಡ್ಸೆಯನ್ನು ತಲುಪಿತು. ಉಲ್ಲಸಿತನಾದ ಗೋಡ್ಸೆ ಭೂಮಿಗೆ ತಲುಪಲು ಟ್ರಾವೆಲ್ ವೀಸಾಕ್ಕೆ ಅರ್ಜಿ ಹಾಕಿದ. ಆದರೆ ಒಪ್ಪಿಗೆ ಪಡೆಯಲು ಹಲವಾರು ಅಡೆತಡೆ ಎದುರಾದವು. ಅದ್ಹೇಗೋ ಅಧಿಕಾರಿಗಳ ‘ರೆಡ್‍ಟೇಪ್’ ಬಾಹು ಯಮಲೋಕಕ್ಕೂ ಚಾಚಿತು.

ಕೈ ಬೆಚ್ಚಗಿಲ್ಲದೇ ಈ ಬಾಬುಗಳು ಗೋಡ್ಸೆ ಫೈಲನ್ನು ಮುಂದಕ್ಕೆ ಹೋಗಲು ಬಿಡಲೇ ಇಲ್ಲ. ಆದರೂ ಅದ್ಹೇಗೋ ಸ್ವಲ್ಪ ಮುಂದಕ್ಕೆ ಚಲಿಸಿದಾಗ ದುಷ್ಟ ಕಾಂಗ್ರೆಸ್ ಉನ್ನತ ಅಧಿಕಾರಿಗೆ ಈ ಗೋಡ್ಸೆ ಭೂಮಿಗೆ ಬರುವುದು ಇಷ್ಟವಾಗಲಿಲ್ಲ. ಗೋಡ್ಸೆ ಸ್ವರ್ಗ ಮತ್ತು ಭೂಮಿಯಲ್ಲಿರುವ ಕೆಲವು ಎಳೆಗಳನ್ನು ಎಳೆದ. ಅಂತಿಮವಾಗಿ ಭೂಮಿಯ ಮೇಲಿನ ಭಯಂಕರ ಹೆಣ್ಣುಮಗಳೊಬ್ಬಳು ಶಾಪ ಕೊಟ್ಟ ಪರಿಣಾಮವಾಗಿ ಆ ಉನ್ನತ ಅಧಿಕಾರಿ ಅಲ್ಲಿಂದ ವರ್ಗಾವಣೆಗೊಂಡ! ಹಾಂ, ಗೋಡ್ಸೆಗೆ ಭಾರತಕ್ಕೆ ಟ್ರಾವೆಲ್ ವೀಸಾ ಸಿಕ್ಕೇ ಬಿಡ್ತು. ಗೋಡ್ಸೆ ಕೇದಾರನಾಥದ ಗುಹೆಯೊಂದರಲ್ಲಿ ‘ಸಮಾಧಿ’ ಸ್ಥಿತಿಗೆ ತೆರಳುವ ಮುನ್ನ ನನಗೆ ಆತನ ಸಂದರ್ಶನ ಮಾಡುವ ಅವಕಾಶ ಸಿಕ್ಕಿತು. ಆ ಸಂದರ್ಶನದ ಕೆಲವು ತುಣುಕುಗಳು ನಿಮಗಾಗಿ:

ಪ್ರಶ್ನೆ: ಮಿ. ಗೋಡ್ಸೆ, ಹಲವಾರು ದಶಕಗಳ ನಂತರ ಮತ್ತೆ ಹೆಡ್‍ಲೈನಿನಲ್ಲಿರುವುದು ಹೇಗನಿಸುತ್ತೆ?
ಗೋಡ್ಸೆ: ಸೂಪರ್, ಗ್ರೇಟ್! ಇಂತಹ ಒಂದು ಅವಕಾಶ ಮಾಡಿಕೊಟ್ಟ ಸಾಧ್ವಿಗೆ ಥ್ಯಾಂಕ್ಸ್ ಹೇಳ ಬಯಸುತ್ತೇನೆ. ದೇಶಭಕ್ತರು ಅಧಿಕಾರಕ್ಕೆ ಬಂದಾಗಿನಿಂದ ನನಗೊಂದು ಸ್ಥಾನ ಸಿಕ್ಕೇ ಸಿಗುತ್ತೆ ಎಂಬ ಭರವಸೆಯಲ್ಲಿದ್ದೆ. ನಿಮಗೆ ಗೊತ್ತಾ, ಭೂಮಿಯ ಮೇಲೆ ನಿನಗಿಂತ ನನಗೆ ಹೆಚ್ಚು ಭಕ್ತರಿದ್ದಾರೆ ಎಂದು ನಾನು ಹಿಟ್ಲರ್‍ಗೇ ಚಾಲೆಂಜ್ ಮಾಡಿ ಬಂದಿದ್ದೇನೆ. ಅವನು ಇದರಲ್ಲಿ ಸೋತರೆ, ಗೋಮೂತ್ರ ಕುಡಿಯಲೇಬೇಕು. ಗೋಮೂತ್ರವಷ್ಟೇ ನಿನ್ನನ್ನು ನಿಜವಾದ ಆರ್ಯನನ್ನಾಗಿ ಮಾಡಬಲ್ಲದು ಎಂದು ಅವನಿಗೆ ಹೇಳಿದ್ದೇನೆ ಕೂಡ…

ಪ್ರ: ಆದರೆ, ಪ್ರಧಾನಿ ತಮಗೆ ಅಸಂತೋಷವಾಗಿದೆ ಎಂದಿದ್ದಾರೆ, ಅವರು ತಮ್ಮ ಹೃದಯದಿಂದ ಸಾದ್ವಿಯನ್ನು ಕ್ಷಮಿಸಲ್ಲವಂತೆ..
ಗೋಡ್ಸೆ: ಅವರು ಪಿಎಂ. ಅವರು ಬಹಳಷ್ಟು ಜನರನ್ನು ಓಲೈಸಬೇಕಾಗುತ್ತೆ. ಅದು ಡೆಮಾಕ್ರಸಿಯ ಧ್ವನಿ… ನೀವು ಎಲ್ಲರನ್ನು ಸಂತುಷ್ಟಗೊಳಿಸಬೇಕಾಗುತ್ತೆ.

ಪ್ರಶ್ನೆ: ಸಾಧ್ವಿಯನ್ನು ಎಂದೂ ಕ್ಷಮಿಸಲ್ಲ ಅಂದಿದ್ದಾರೆ ಅಂದಮೇಲೆ, ಸಾಧ್ವಿ ಏನೋ ಘನಘೋರ ತಪ್ಪು ಮಾಡಿರಬೇಕಲ್ಲ?
ಗೋಡ್ಸೆ: ಇದು ಎಲೆಕ್ಷನ್ ಟೈಮ್. ಎಲೆಕ್ಷನ್ ಟೈಮ್ ಅಂದರೆ ‘ಜುಮ್ಲಾ ಟೈಮ್’…

ಪ್ರಶ್ನೆ: ಅಂದ್ರೆ ಪಿಎಂ ಸುಮ್ಮನೇ ಒಂದು ‘ಜುಮ್ಲಾ’ ಹೊಡೀತಿದ್ದಾರೆ ವಿನಹ ಸತ್ಯವನ್ನಲ್ಲ?
ಗೋಡ್ಸೆ: ಜನರನ್ನು ಇದು ಸತ್ಯ ಅಂತಾ ನಂಬಿಸ್ತೀವಲ್ಲ, ಅದೇ ಸತ್ಯ…

ಪ್ರಶ್ನೆ: ಕೆಲವು ಜನ ಹೇಳ್ತಾರೆ, ನೀನು ದೇಶಭಕ್ತ ಅಂತಾ. ಅದು ಜುಮ್ಲಾನಾ, ಸತ್ಯವಾ?
ಗೋಡ್ಸೆ: ಅದು ವೀಕ್ಷಕನ (ಅಬ್ಸರ್ವರ್) ಮೇಲೆ ಅವಲಂಬಿತ…

ಪ್ರಶ್ನೆ: ಅಂದರೆ ಹಾಗೇ ಹೇಳತಿರೋ ವ್ಯಕ್ತಿ ಮೇಲಲ್ಲ…
ಗೋಡ್ಸೆ: ಅದು ಆತನ ಪಾಲಿಗೆ ಜುಮ್ಲಾ. ಆತನಿಗೆ ಗೊತ್ತು ತಾನೊಂದು ಜುಮ್ಲಾ ಹೊಡಿತಿದ್ದೀನಿ ಅಂತಾ. ಆದರೆ ಅದನ್ನು ಸತ್ಯ ಅಂತಾ ಸ್ವೀಕರಿಸ್ತಾರೆ ಅಂತಾನೂ ಆತನಿಗೆ ಗೊತ್ತಿರುತ್ತೆ. ಅದೇ ಜುಮ್ಲಾದ ಶಕ್ತಿ. ಅದು ಪಿಎಂ ತಮ್ಮ ಹೃದಯದಿಂದ ( ಅದಕ್ಕೂ ಹೃದಯ ಬೇಕು) ಯಾರನ್ನೋ ಕ್ಷಮಿಸುತ್ತಿದ್ದಾರೆ ಅನ್ನೋ ಬಿಂಬವೂ ಹೌದು, ಪಿಎಂ ತನ್ನ ಹೃದಯದಿಂದ ಕ್ಷಮಿಸಲ್ಲ ಅನ್ನುವ ಸತ್ಯವೂ ಹೌದು…

ಪ್ರಶ್ನೆ: ನಿನ್ನ ಬಗ್ಗೆ ನಿನಗೆ ಏನು ಅನಿಸುತ್ತೆ? ನೀನು ದೇಶಭಕ್ತನಾ?
ಗೋಡ್ಸೆ: ನಾನೊಬ್ಬ ಜುಮ್ಲಾ, ನಾನೊಂದು ಜುಮ್ಲಾ…

ಪ್ರಶ್ನೆ: ಅಂದರೆ ಇದೆಲ್ಲ ಒಂದು ಸುಳ್ಳಿನ ಕಂತೆ?
ಗೋಡ್ಸೆ: ಅದು ಸುಳ್ಳಿನ ಕಂತೆಯಲ್ಲ, ಅದು ‘ಫೀಲ್ ಗುಡ್’ ಭಾವ.. ಜುಮ್ಲಾದಿಂದ ನಿನಗೆ ಒಂದು ಆಹ್ಲಾದಕರ ಭಾವ ಆವರಿಸುತ್ತೆ, ಅದೇ ಜುಮ್ಲಾದ ಉದ್ದೇಶವೂ ಕೂಡ. ಅಚ್ಛೇ ದಿನ್ ಅಂದರೆ ಅದೇ…ಪಕೋಡಾ ಮಾರ್ತಾ ಮಾರ್ತಾ, ಗಾಡಿ ತೊಳಿತಾ ತೊಳಿತಾ ಅಥವಾ ಚಾ ಮಾರ್ತಾ ಮಾರ್ತಾ ನಿನಗೆ ‘ಫೀಲ್ ಗುಡ್’ ಎಂಬ ಸಂತೋಷದ ಭಾವ ಉಂಟಾಗುತ್ತೆ. ಕೊಲ್ಲೋ ಮೂಲಕವೂ ನೀನು ‘ಫೀಲ್‍ಗುಡ್’ ಆನಂದ ಪಡಿಬಹುದು. ಒಳ್ಳೆಯ ಭಾವನೆಗಳಿಗಿಂತ ಈ ‘ಫಿಲ್‍ಗುಡ್’ನ ಸೆನ್ಸೆಷನ್ ಇದೆಯಲ್ಲ, ಇದು ಬಹಳ ಬಹಳ ದೊಡ್ಡದು. ನಾನಿಲ್ಲಿ ಶಬ್ದಗಳ ಆಟ ಆಡ್ತಿಲ್ಲ. ಭಾರತೀಯ ಫಿಲಾಸಫಿಯಲ್ಲಿ ಎಲ್ಲವೂ ಮಾಯೆಯೇ. ಅದರರ್ಥ ಇಡೀ ವಿಶ್ವವೇ ಒಂದು ನಹಾನ್ ಜುಮ್ಲಾ. ನೀನು ಈಗಾಗಲೇ ಜುಮ್ಲಾಗಳ ನಡುವೆ ಸಿಕ್ಕಿ ಹಾಕಿಕೊಂಡಿದ್ದೀಯಾ. ಒಂದಿಷ್ಟು ಜುಮ್ಲಾ ಸೇರಿಸಿದ್ದಕ್ಕೆ ನನ್ನನ್ನು ಏಕೆ ದೂಷಣೆ ಮಾಡ್ತೀಯಾ? ಒಂದೇ ದಾರಿ ಅಂದರೆ ನ್ಯಾಯ ಪಡೆಯುವುದಲ್ಲ ಮುಕ್ತಿ ಪಡೆಯುವುದು. ಅದೊಂದು ಮರೀಚಿಕೆ.

ಪ್ರಶ್ನೆ: ಜನರಿಗೆ ಮೋಕ್ಷಕ್ಕಿಂತ ನ್ಯಾಯದ ಅಗತ್ಯ ಬಹಳ ಇದೆಯಲ್ಲ?
ಗೋಡ್ಸೆ: ಜನರಿಗೆ ತಮಗೇನೂ ಬೇಕಂತನೇ ಗೊತ್ತಿಲ್ಲ. ನನಗೆ ಜುಮ್ಲಾಗಳೇ ಬೇಕು ಅಂತಾ ಯಾವನಾದರೂ ಹೇಳಿದ್ದಾನಾ? ಇಲ್ಲ, ಆದರೆ ದೇಶಭಕ್ತ ಪಾರ್ಟಿಗೆ ಗೊತ್ತು, ಎಲ್ಲರಿಗೂ ಜುಮ್ಲಾ ಬೇಕು ಅಂತಾ. ಅದಕ್ಕೇ ಅವರು ಯಥೇಚ್ಛವಾಗಿ ಜುಮ್ಲಾಗಳನ್ನು ಒದಗಿಸ್ತಾ ಇದ್ದಾರೆ…7 ದಶಕಗಳಿಂದ ಜಾತ್ಯತೀತ ಸರ್ಕಾರಗಳು ಜನರನ್ನು ಈ ಹಸಿವಿನಿಂದ ಕಾಡಿದವು. ದೇಶಭಕ್ತ ಸರ್ಕಾರವು ಅವರ ಖಾಲಿ ಹೊಟ್ಟಗಳನ್ನು ಜುಮ್ಲಾಗಳಿಂದ ಭರ್ತಿ ಮಾಡಿತು.

ಪ್ರಶ್ನೆ: ನೀನು ಅಲ್ಲಿ ಮೇಲೆ ಮೋಡಗಳಲ್ಲಿ ಇರ್ತೀಯಾ. ಯಾವುದಾದರೂ ಸ್ಯಾಟ್‍ಲೈಟ್ ನಿನ್ನ ಇರುವಿಕೆಯನ್ನ ಪತ್ತೆ ಮಾಡಿದೆಯಾ?
ಗೋಡ್ಸೆ: ಇಲ್ಲವೇ ಇಲ್ಲ, ಸಾಧ್ಯಾನೇ ಇಲ್ಲ. ಮೋಡಗಳಲ್ಲಿ ಬದುಕುವುದರ ಅನುಕೂಲ ಅಂದ್ರೆನೇ ಅದು. ಸ್ಯಾಟ್‍ಲೈಟ್ಸ್ ಮತ್ತು ರೆಡಾರ್‍ಗಳು ಎಂದೂ ನಿನ್ನ ಪತ್ತೆ ಹಚ್ಚಕಾಗಲ್ಲ. ಅದಕ್ಕೇ ಟ್ರಂಪ್‍ಗೆ ಆಕಾಶದಲ್ಲಿ ನನ್ನ ಚಲನವಲನ ಗೊತ್ತಾಗದ ರೀತಿಯಲ್ಲಿ ನಾನು ಭಾರತದಲ್ಲಿ ಬಂದಿಳಿದೆ.
ಇದರ ನಂತರ ಗೋಡ್ಸೆ ತನ್ನ ‘ಸಮಾಧಿ’ಯತ್ತ ಹೊರಟ…


ಇದನ್ನೂ ಓದಿ: ಗಾಂಧಿ ಅಂದಿಗೂ ಇಂದಿಗೂ ಒಬ್ಬಂಟಿ. ಗೋಡ್ಸೆ ಅಂದಿಗೂ ಒಬ್ಬಂಟಿಯಲ್ಲ, ಇಂದಿಗೂ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಗೋಡ್ಸೆ ಅವರನ್ನ ಭಯೋತ್ಪಾದಕ ಅಂತ ಕರೆಯುವುದಾದರೆ ,ಭಗತ್ ಸಿಂಗ್ ಅವರನ್ನು ನೇಣು ಕುಣಿಕೆ ತಪ್ಪಿಸಲು ಆಗದವರನ್ನ ,ಸುಭಾಷ್ ಚಂದ್ರಭೋಸ್ ಅವರ ಮೇಲೆ ಗೂಢಾಚಾರಿಕೆ ಮಾಡಲು ನೆರವಾದ ಸೋಕಾಲ್ಡ್ ಒಂದು ಕುಟುಂಬ ರಾಜಕಾರಣದ ಪರಿವಾರದವರನ್ನ ,ಚೀನಾದೊಂದಿಗೆ ಹಿಂದಿನಿಂದಲೂ ಸಹಾಯ ಪಡೆಯುತ್ತಿರುವ ಈಗಲೂ ನೆರವು ಪಡೆದು ಚೀನಾದ ಪರ ನಿಲ್ಲೋ ಭಾರತದ ಕಮ್ಯೂನಿಸ್ಟ್ ರನ್ನ ಯಾವ ಭಯೋತ್ಪಾದನೆ ಯವರು ಎಂದು ಕರೆಯಬಹುದು.

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....