Homeನಿಜವೋ ಸುಳ್ಳೋನಾನೇ ಒಂದು ಜುಮ್ಲಾ : ಗೋಡ್ಸೆ ಜೊತೆ ಒಂದು ಕಾಲ್ಪನಿಕ ಸಂದರ್ಶನ

ನಾನೇ ಒಂದು ಜುಮ್ಲಾ : ಗೋಡ್ಸೆ ಜೊತೆ ಒಂದು ಕಾಲ್ಪನಿಕ ಸಂದರ್ಶನ

- Advertisement -
- Advertisement -

ಸ್ವಾತಂತ್ರ್ಯ ಚಳವಳಿಯ ನೇತಾರ ಮಹಾತ್ಮ ಗಾಂಧಿಯವರನ್ನು ಕೊಂದ ದೇಶದ ಮೊದಲ ಭಯೋತ್ಪಾದಕ ನಾಥುರಾಮ್ ಗೋಡ್ಸೆಯನ್ನು ಗಲ್ಲಿಗೇರಿಸಿದ ದಿನ ಇಂದು. ಜೆ.ಎನ್.ಯು.ಎಸ್.ಯು ಮಾಜಿ ಅಧ್ಯಕ್ಷರಾದ ಲೋಕೇಶ್ ಮಾಲ್ತಿ ಪ್ರಕಾಶ್ ರವರು ಗೋಡ್ಸೆಯೊಂದಿಗೆ ಒಂದು ಕಾಲ್ಪನಿಕ ಸಂದರ್ಶನ ನಡೆಸಿದ್ದಾರೆ. 

ಭಾರತದಲ್ಲಿ 2014ರಿಂದ ದೇಶಭಕ್ತ ಸರ್ಕಾರ ಬಂದ ಮೇಲೆ, ತಾನು ಮತ್ತು ತನ್ನ ಸಾಹಸಗಳ ಬಗ್ಗೆ ಭಾರತದಲ್ಲಿ ಹೊಸ ಆಸಕ್ತಿ ಹುಟ್ಟಿದೆ ಎಂಬ ಸುದ್ದಿ ಕಳೆದೆರಡು ವರ್ಷಗಳ ಹಿಂದೆ ನಾಥುರಾಮ್ ಗೋಡ್ಸೆಯನ್ನು ತಲುಪಿತು. ಉಲ್ಲಸಿತನಾದ ಗೋಡ್ಸೆ ಭೂಮಿಗೆ ತಲುಪಲು ಟ್ರಾವೆಲ್ ವೀಸಾಕ್ಕೆ ಅರ್ಜಿ ಹಾಕಿದ. ಆದರೆ ಒಪ್ಪಿಗೆ ಪಡೆಯಲು ಹಲವಾರು ಅಡೆತಡೆ ಎದುರಾದವು. ಅದ್ಹೇಗೋ ಅಧಿಕಾರಿಗಳ ‘ರೆಡ್‍ಟೇಪ್’ ಬಾಹು ಯಮಲೋಕಕ್ಕೂ ಚಾಚಿತು.

ಕೈ ಬೆಚ್ಚಗಿಲ್ಲದೇ ಈ ಬಾಬುಗಳು ಗೋಡ್ಸೆ ಫೈಲನ್ನು ಮುಂದಕ್ಕೆ ಹೋಗಲು ಬಿಡಲೇ ಇಲ್ಲ. ಆದರೂ ಅದ್ಹೇಗೋ ಸ್ವಲ್ಪ ಮುಂದಕ್ಕೆ ಚಲಿಸಿದಾಗ ದುಷ್ಟ ಕಾಂಗ್ರೆಸ್ ಉನ್ನತ ಅಧಿಕಾರಿಗೆ ಈ ಗೋಡ್ಸೆ ಭೂಮಿಗೆ ಬರುವುದು ಇಷ್ಟವಾಗಲಿಲ್ಲ. ಗೋಡ್ಸೆ ಸ್ವರ್ಗ ಮತ್ತು ಭೂಮಿಯಲ್ಲಿರುವ ಕೆಲವು ಎಳೆಗಳನ್ನು ಎಳೆದ. ಅಂತಿಮವಾಗಿ ಭೂಮಿಯ ಮೇಲಿನ ಭಯಂಕರ ಹೆಣ್ಣುಮಗಳೊಬ್ಬಳು ಶಾಪ ಕೊಟ್ಟ ಪರಿಣಾಮವಾಗಿ ಆ ಉನ್ನತ ಅಧಿಕಾರಿ ಅಲ್ಲಿಂದ ವರ್ಗಾವಣೆಗೊಂಡ! ಹಾಂ, ಗೋಡ್ಸೆಗೆ ಭಾರತಕ್ಕೆ ಟ್ರಾವೆಲ್ ವೀಸಾ ಸಿಕ್ಕೇ ಬಿಡ್ತು. ಗೋಡ್ಸೆ ಕೇದಾರನಾಥದ ಗುಹೆಯೊಂದರಲ್ಲಿ ‘ಸಮಾಧಿ’ ಸ್ಥಿತಿಗೆ ತೆರಳುವ ಮುನ್ನ ನನಗೆ ಆತನ ಸಂದರ್ಶನ ಮಾಡುವ ಅವಕಾಶ ಸಿಕ್ಕಿತು. ಆ ಸಂದರ್ಶನದ ಕೆಲವು ತುಣುಕುಗಳು ನಿಮಗಾಗಿ:

ಪ್ರಶ್ನೆ: ಮಿ. ಗೋಡ್ಸೆ, ಹಲವಾರು ದಶಕಗಳ ನಂತರ ಮತ್ತೆ ಹೆಡ್‍ಲೈನಿನಲ್ಲಿರುವುದು ಹೇಗನಿಸುತ್ತೆ?
ಗೋಡ್ಸೆ: ಸೂಪರ್, ಗ್ರೇಟ್! ಇಂತಹ ಒಂದು ಅವಕಾಶ ಮಾಡಿಕೊಟ್ಟ ಸಾಧ್ವಿಗೆ ಥ್ಯಾಂಕ್ಸ್ ಹೇಳ ಬಯಸುತ್ತೇನೆ. ದೇಶಭಕ್ತರು ಅಧಿಕಾರಕ್ಕೆ ಬಂದಾಗಿನಿಂದ ನನಗೊಂದು ಸ್ಥಾನ ಸಿಕ್ಕೇ ಸಿಗುತ್ತೆ ಎಂಬ ಭರವಸೆಯಲ್ಲಿದ್ದೆ. ನಿಮಗೆ ಗೊತ್ತಾ, ಭೂಮಿಯ ಮೇಲೆ ನಿನಗಿಂತ ನನಗೆ ಹೆಚ್ಚು ಭಕ್ತರಿದ್ದಾರೆ ಎಂದು ನಾನು ಹಿಟ್ಲರ್‍ಗೇ ಚಾಲೆಂಜ್ ಮಾಡಿ ಬಂದಿದ್ದೇನೆ. ಅವನು ಇದರಲ್ಲಿ ಸೋತರೆ, ಗೋಮೂತ್ರ ಕುಡಿಯಲೇಬೇಕು. ಗೋಮೂತ್ರವಷ್ಟೇ ನಿನ್ನನ್ನು ನಿಜವಾದ ಆರ್ಯನನ್ನಾಗಿ ಮಾಡಬಲ್ಲದು ಎಂದು ಅವನಿಗೆ ಹೇಳಿದ್ದೇನೆ ಕೂಡ…

ಪ್ರ: ಆದರೆ, ಪ್ರಧಾನಿ ತಮಗೆ ಅಸಂತೋಷವಾಗಿದೆ ಎಂದಿದ್ದಾರೆ, ಅವರು ತಮ್ಮ ಹೃದಯದಿಂದ ಸಾದ್ವಿಯನ್ನು ಕ್ಷಮಿಸಲ್ಲವಂತೆ..
ಗೋಡ್ಸೆ: ಅವರು ಪಿಎಂ. ಅವರು ಬಹಳಷ್ಟು ಜನರನ್ನು ಓಲೈಸಬೇಕಾಗುತ್ತೆ. ಅದು ಡೆಮಾಕ್ರಸಿಯ ಧ್ವನಿ… ನೀವು ಎಲ್ಲರನ್ನು ಸಂತುಷ್ಟಗೊಳಿಸಬೇಕಾಗುತ್ತೆ.

ಪ್ರಶ್ನೆ: ಸಾಧ್ವಿಯನ್ನು ಎಂದೂ ಕ್ಷಮಿಸಲ್ಲ ಅಂದಿದ್ದಾರೆ ಅಂದಮೇಲೆ, ಸಾಧ್ವಿ ಏನೋ ಘನಘೋರ ತಪ್ಪು ಮಾಡಿರಬೇಕಲ್ಲ?
ಗೋಡ್ಸೆ: ಇದು ಎಲೆಕ್ಷನ್ ಟೈಮ್. ಎಲೆಕ್ಷನ್ ಟೈಮ್ ಅಂದರೆ ‘ಜುಮ್ಲಾ ಟೈಮ್’…

ಪ್ರಶ್ನೆ: ಅಂದ್ರೆ ಪಿಎಂ ಸುಮ್ಮನೇ ಒಂದು ‘ಜುಮ್ಲಾ’ ಹೊಡೀತಿದ್ದಾರೆ ವಿನಹ ಸತ್ಯವನ್ನಲ್ಲ?
ಗೋಡ್ಸೆ: ಜನರನ್ನು ಇದು ಸತ್ಯ ಅಂತಾ ನಂಬಿಸ್ತೀವಲ್ಲ, ಅದೇ ಸತ್ಯ…

ಪ್ರಶ್ನೆ: ಕೆಲವು ಜನ ಹೇಳ್ತಾರೆ, ನೀನು ದೇಶಭಕ್ತ ಅಂತಾ. ಅದು ಜುಮ್ಲಾನಾ, ಸತ್ಯವಾ?
ಗೋಡ್ಸೆ: ಅದು ವೀಕ್ಷಕನ (ಅಬ್ಸರ್ವರ್) ಮೇಲೆ ಅವಲಂಬಿತ…

ಪ್ರಶ್ನೆ: ಅಂದರೆ ಹಾಗೇ ಹೇಳತಿರೋ ವ್ಯಕ್ತಿ ಮೇಲಲ್ಲ…
ಗೋಡ್ಸೆ: ಅದು ಆತನ ಪಾಲಿಗೆ ಜುಮ್ಲಾ. ಆತನಿಗೆ ಗೊತ್ತು ತಾನೊಂದು ಜುಮ್ಲಾ ಹೊಡಿತಿದ್ದೀನಿ ಅಂತಾ. ಆದರೆ ಅದನ್ನು ಸತ್ಯ ಅಂತಾ ಸ್ವೀಕರಿಸ್ತಾರೆ ಅಂತಾನೂ ಆತನಿಗೆ ಗೊತ್ತಿರುತ್ತೆ. ಅದೇ ಜುಮ್ಲಾದ ಶಕ್ತಿ. ಅದು ಪಿಎಂ ತಮ್ಮ ಹೃದಯದಿಂದ ( ಅದಕ್ಕೂ ಹೃದಯ ಬೇಕು) ಯಾರನ್ನೋ ಕ್ಷಮಿಸುತ್ತಿದ್ದಾರೆ ಅನ್ನೋ ಬಿಂಬವೂ ಹೌದು, ಪಿಎಂ ತನ್ನ ಹೃದಯದಿಂದ ಕ್ಷಮಿಸಲ್ಲ ಅನ್ನುವ ಸತ್ಯವೂ ಹೌದು…

ಪ್ರಶ್ನೆ: ನಿನ್ನ ಬಗ್ಗೆ ನಿನಗೆ ಏನು ಅನಿಸುತ್ತೆ? ನೀನು ದೇಶಭಕ್ತನಾ?
ಗೋಡ್ಸೆ: ನಾನೊಬ್ಬ ಜುಮ್ಲಾ, ನಾನೊಂದು ಜುಮ್ಲಾ…

ಪ್ರಶ್ನೆ: ಅಂದರೆ ಇದೆಲ್ಲ ಒಂದು ಸುಳ್ಳಿನ ಕಂತೆ?
ಗೋಡ್ಸೆ: ಅದು ಸುಳ್ಳಿನ ಕಂತೆಯಲ್ಲ, ಅದು ‘ಫೀಲ್ ಗುಡ್’ ಭಾವ.. ಜುಮ್ಲಾದಿಂದ ನಿನಗೆ ಒಂದು ಆಹ್ಲಾದಕರ ಭಾವ ಆವರಿಸುತ್ತೆ, ಅದೇ ಜುಮ್ಲಾದ ಉದ್ದೇಶವೂ ಕೂಡ. ಅಚ್ಛೇ ದಿನ್ ಅಂದರೆ ಅದೇ…ಪಕೋಡಾ ಮಾರ್ತಾ ಮಾರ್ತಾ, ಗಾಡಿ ತೊಳಿತಾ ತೊಳಿತಾ ಅಥವಾ ಚಾ ಮಾರ್ತಾ ಮಾರ್ತಾ ನಿನಗೆ ‘ಫೀಲ್ ಗುಡ್’ ಎಂಬ ಸಂತೋಷದ ಭಾವ ಉಂಟಾಗುತ್ತೆ. ಕೊಲ್ಲೋ ಮೂಲಕವೂ ನೀನು ‘ಫೀಲ್‍ಗುಡ್’ ಆನಂದ ಪಡಿಬಹುದು. ಒಳ್ಳೆಯ ಭಾವನೆಗಳಿಗಿಂತ ಈ ‘ಫಿಲ್‍ಗುಡ್’ನ ಸೆನ್ಸೆಷನ್ ಇದೆಯಲ್ಲ, ಇದು ಬಹಳ ಬಹಳ ದೊಡ್ಡದು. ನಾನಿಲ್ಲಿ ಶಬ್ದಗಳ ಆಟ ಆಡ್ತಿಲ್ಲ. ಭಾರತೀಯ ಫಿಲಾಸಫಿಯಲ್ಲಿ ಎಲ್ಲವೂ ಮಾಯೆಯೇ. ಅದರರ್ಥ ಇಡೀ ವಿಶ್ವವೇ ಒಂದು ನಹಾನ್ ಜುಮ್ಲಾ. ನೀನು ಈಗಾಗಲೇ ಜುಮ್ಲಾಗಳ ನಡುವೆ ಸಿಕ್ಕಿ ಹಾಕಿಕೊಂಡಿದ್ದೀಯಾ. ಒಂದಿಷ್ಟು ಜುಮ್ಲಾ ಸೇರಿಸಿದ್ದಕ್ಕೆ ನನ್ನನ್ನು ಏಕೆ ದೂಷಣೆ ಮಾಡ್ತೀಯಾ? ಒಂದೇ ದಾರಿ ಅಂದರೆ ನ್ಯಾಯ ಪಡೆಯುವುದಲ್ಲ ಮುಕ್ತಿ ಪಡೆಯುವುದು. ಅದೊಂದು ಮರೀಚಿಕೆ.

ಪ್ರಶ್ನೆ: ಜನರಿಗೆ ಮೋಕ್ಷಕ್ಕಿಂತ ನ್ಯಾಯದ ಅಗತ್ಯ ಬಹಳ ಇದೆಯಲ್ಲ?
ಗೋಡ್ಸೆ: ಜನರಿಗೆ ತಮಗೇನೂ ಬೇಕಂತನೇ ಗೊತ್ತಿಲ್ಲ. ನನಗೆ ಜುಮ್ಲಾಗಳೇ ಬೇಕು ಅಂತಾ ಯಾವನಾದರೂ ಹೇಳಿದ್ದಾನಾ? ಇಲ್ಲ, ಆದರೆ ದೇಶಭಕ್ತ ಪಾರ್ಟಿಗೆ ಗೊತ್ತು, ಎಲ್ಲರಿಗೂ ಜುಮ್ಲಾ ಬೇಕು ಅಂತಾ. ಅದಕ್ಕೇ ಅವರು ಯಥೇಚ್ಛವಾಗಿ ಜುಮ್ಲಾಗಳನ್ನು ಒದಗಿಸ್ತಾ ಇದ್ದಾರೆ…7 ದಶಕಗಳಿಂದ ಜಾತ್ಯತೀತ ಸರ್ಕಾರಗಳು ಜನರನ್ನು ಈ ಹಸಿವಿನಿಂದ ಕಾಡಿದವು. ದೇಶಭಕ್ತ ಸರ್ಕಾರವು ಅವರ ಖಾಲಿ ಹೊಟ್ಟಗಳನ್ನು ಜುಮ್ಲಾಗಳಿಂದ ಭರ್ತಿ ಮಾಡಿತು.

ಪ್ರಶ್ನೆ: ನೀನು ಅಲ್ಲಿ ಮೇಲೆ ಮೋಡಗಳಲ್ಲಿ ಇರ್ತೀಯಾ. ಯಾವುದಾದರೂ ಸ್ಯಾಟ್‍ಲೈಟ್ ನಿನ್ನ ಇರುವಿಕೆಯನ್ನ ಪತ್ತೆ ಮಾಡಿದೆಯಾ?
ಗೋಡ್ಸೆ: ಇಲ್ಲವೇ ಇಲ್ಲ, ಸಾಧ್ಯಾನೇ ಇಲ್ಲ. ಮೋಡಗಳಲ್ಲಿ ಬದುಕುವುದರ ಅನುಕೂಲ ಅಂದ್ರೆನೇ ಅದು. ಸ್ಯಾಟ್‍ಲೈಟ್ಸ್ ಮತ್ತು ರೆಡಾರ್‍ಗಳು ಎಂದೂ ನಿನ್ನ ಪತ್ತೆ ಹಚ್ಚಕಾಗಲ್ಲ. ಅದಕ್ಕೇ ಟ್ರಂಪ್‍ಗೆ ಆಕಾಶದಲ್ಲಿ ನನ್ನ ಚಲನವಲನ ಗೊತ್ತಾಗದ ರೀತಿಯಲ್ಲಿ ನಾನು ಭಾರತದಲ್ಲಿ ಬಂದಿಳಿದೆ.
ಇದರ ನಂತರ ಗೋಡ್ಸೆ ತನ್ನ ‘ಸಮಾಧಿ’ಯತ್ತ ಹೊರಟ…


ಇದನ್ನೂ ಓದಿ: ಗಾಂಧಿ ಅಂದಿಗೂ ಇಂದಿಗೂ ಒಬ್ಬಂಟಿ. ಗೋಡ್ಸೆ ಅಂದಿಗೂ ಒಬ್ಬಂಟಿಯಲ್ಲ, ಇಂದಿಗೂ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಗೋಡ್ಸೆ ಅವರನ್ನ ಭಯೋತ್ಪಾದಕ ಅಂತ ಕರೆಯುವುದಾದರೆ ,ಭಗತ್ ಸಿಂಗ್ ಅವರನ್ನು ನೇಣು ಕುಣಿಕೆ ತಪ್ಪಿಸಲು ಆಗದವರನ್ನ ,ಸುಭಾಷ್ ಚಂದ್ರಭೋಸ್ ಅವರ ಮೇಲೆ ಗೂಢಾಚಾರಿಕೆ ಮಾಡಲು ನೆರವಾದ ಸೋಕಾಲ್ಡ್ ಒಂದು ಕುಟುಂಬ ರಾಜಕಾರಣದ ಪರಿವಾರದವರನ್ನ ,ಚೀನಾದೊಂದಿಗೆ ಹಿಂದಿನಿಂದಲೂ ಸಹಾಯ ಪಡೆಯುತ್ತಿರುವ ಈಗಲೂ ನೆರವು ಪಡೆದು ಚೀನಾದ ಪರ ನಿಲ್ಲೋ ಭಾರತದ ಕಮ್ಯೂನಿಸ್ಟ್ ರನ್ನ ಯಾವ ಭಯೋತ್ಪಾದನೆ ಯವರು ಎಂದು ಕರೆಯಬಹುದು.

LEAVE A REPLY

Please enter your comment!
Please enter your name here

- Advertisment -

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...