Homeನಿಜವೋ ಸುಳ್ಳೋನಾನೇ ಒಂದು ಜುಮ್ಲಾ : ಗೋಡ್ಸೆ ಜೊತೆ ಒಂದು ಕಾಲ್ಪನಿಕ ಸಂದರ್ಶನ

ನಾನೇ ಒಂದು ಜುಮ್ಲಾ : ಗೋಡ್ಸೆ ಜೊತೆ ಒಂದು ಕಾಲ್ಪನಿಕ ಸಂದರ್ಶನ

- Advertisement -
- Advertisement -

ಸ್ವಾತಂತ್ರ್ಯ ಚಳವಳಿಯ ನೇತಾರ ಮಹಾತ್ಮ ಗಾಂಧಿಯವರನ್ನು ಕೊಂದ ದೇಶದ ಮೊದಲ ಭಯೋತ್ಪಾದಕ ನಾಥುರಾಮ್ ಗೋಡ್ಸೆಯನ್ನು ಗಲ್ಲಿಗೇರಿಸಿದ ದಿನ ಇಂದು. ಜೆ.ಎನ್.ಯು.ಎಸ್.ಯು ಮಾಜಿ ಅಧ್ಯಕ್ಷರಾದ ಲೋಕೇಶ್ ಮಾಲ್ತಿ ಪ್ರಕಾಶ್ ರವರು ಗೋಡ್ಸೆಯೊಂದಿಗೆ ಒಂದು ಕಾಲ್ಪನಿಕ ಸಂದರ್ಶನ ನಡೆಸಿದ್ದಾರೆ. 

ಭಾರತದಲ್ಲಿ 2014ರಿಂದ ದೇಶಭಕ್ತ ಸರ್ಕಾರ ಬಂದ ಮೇಲೆ, ತಾನು ಮತ್ತು ತನ್ನ ಸಾಹಸಗಳ ಬಗ್ಗೆ ಭಾರತದಲ್ಲಿ ಹೊಸ ಆಸಕ್ತಿ ಹುಟ್ಟಿದೆ ಎಂಬ ಸುದ್ದಿ ಕಳೆದೆರಡು ವರ್ಷಗಳ ಹಿಂದೆ ನಾಥುರಾಮ್ ಗೋಡ್ಸೆಯನ್ನು ತಲುಪಿತು. ಉಲ್ಲಸಿತನಾದ ಗೋಡ್ಸೆ ಭೂಮಿಗೆ ತಲುಪಲು ಟ್ರಾವೆಲ್ ವೀಸಾಕ್ಕೆ ಅರ್ಜಿ ಹಾಕಿದ. ಆದರೆ ಒಪ್ಪಿಗೆ ಪಡೆಯಲು ಹಲವಾರು ಅಡೆತಡೆ ಎದುರಾದವು. ಅದ್ಹೇಗೋ ಅಧಿಕಾರಿಗಳ ‘ರೆಡ್‍ಟೇಪ್’ ಬಾಹು ಯಮಲೋಕಕ್ಕೂ ಚಾಚಿತು.

ಕೈ ಬೆಚ್ಚಗಿಲ್ಲದೇ ಈ ಬಾಬುಗಳು ಗೋಡ್ಸೆ ಫೈಲನ್ನು ಮುಂದಕ್ಕೆ ಹೋಗಲು ಬಿಡಲೇ ಇಲ್ಲ. ಆದರೂ ಅದ್ಹೇಗೋ ಸ್ವಲ್ಪ ಮುಂದಕ್ಕೆ ಚಲಿಸಿದಾಗ ದುಷ್ಟ ಕಾಂಗ್ರೆಸ್ ಉನ್ನತ ಅಧಿಕಾರಿಗೆ ಈ ಗೋಡ್ಸೆ ಭೂಮಿಗೆ ಬರುವುದು ಇಷ್ಟವಾಗಲಿಲ್ಲ. ಗೋಡ್ಸೆ ಸ್ವರ್ಗ ಮತ್ತು ಭೂಮಿಯಲ್ಲಿರುವ ಕೆಲವು ಎಳೆಗಳನ್ನು ಎಳೆದ. ಅಂತಿಮವಾಗಿ ಭೂಮಿಯ ಮೇಲಿನ ಭಯಂಕರ ಹೆಣ್ಣುಮಗಳೊಬ್ಬಳು ಶಾಪ ಕೊಟ್ಟ ಪರಿಣಾಮವಾಗಿ ಆ ಉನ್ನತ ಅಧಿಕಾರಿ ಅಲ್ಲಿಂದ ವರ್ಗಾವಣೆಗೊಂಡ! ಹಾಂ, ಗೋಡ್ಸೆಗೆ ಭಾರತಕ್ಕೆ ಟ್ರಾವೆಲ್ ವೀಸಾ ಸಿಕ್ಕೇ ಬಿಡ್ತು. ಗೋಡ್ಸೆ ಕೇದಾರನಾಥದ ಗುಹೆಯೊಂದರಲ್ಲಿ ‘ಸಮಾಧಿ’ ಸ್ಥಿತಿಗೆ ತೆರಳುವ ಮುನ್ನ ನನಗೆ ಆತನ ಸಂದರ್ಶನ ಮಾಡುವ ಅವಕಾಶ ಸಿಕ್ಕಿತು. ಆ ಸಂದರ್ಶನದ ಕೆಲವು ತುಣುಕುಗಳು ನಿಮಗಾಗಿ:

ಪ್ರಶ್ನೆ: ಮಿ. ಗೋಡ್ಸೆ, ಹಲವಾರು ದಶಕಗಳ ನಂತರ ಮತ್ತೆ ಹೆಡ್‍ಲೈನಿನಲ್ಲಿರುವುದು ಹೇಗನಿಸುತ್ತೆ?
ಗೋಡ್ಸೆ: ಸೂಪರ್, ಗ್ರೇಟ್! ಇಂತಹ ಒಂದು ಅವಕಾಶ ಮಾಡಿಕೊಟ್ಟ ಸಾಧ್ವಿಗೆ ಥ್ಯಾಂಕ್ಸ್ ಹೇಳ ಬಯಸುತ್ತೇನೆ. ದೇಶಭಕ್ತರು ಅಧಿಕಾರಕ್ಕೆ ಬಂದಾಗಿನಿಂದ ನನಗೊಂದು ಸ್ಥಾನ ಸಿಕ್ಕೇ ಸಿಗುತ್ತೆ ಎಂಬ ಭರವಸೆಯಲ್ಲಿದ್ದೆ. ನಿಮಗೆ ಗೊತ್ತಾ, ಭೂಮಿಯ ಮೇಲೆ ನಿನಗಿಂತ ನನಗೆ ಹೆಚ್ಚು ಭಕ್ತರಿದ್ದಾರೆ ಎಂದು ನಾನು ಹಿಟ್ಲರ್‍ಗೇ ಚಾಲೆಂಜ್ ಮಾಡಿ ಬಂದಿದ್ದೇನೆ. ಅವನು ಇದರಲ್ಲಿ ಸೋತರೆ, ಗೋಮೂತ್ರ ಕುಡಿಯಲೇಬೇಕು. ಗೋಮೂತ್ರವಷ್ಟೇ ನಿನ್ನನ್ನು ನಿಜವಾದ ಆರ್ಯನನ್ನಾಗಿ ಮಾಡಬಲ್ಲದು ಎಂದು ಅವನಿಗೆ ಹೇಳಿದ್ದೇನೆ ಕೂಡ…

ಪ್ರ: ಆದರೆ, ಪ್ರಧಾನಿ ತಮಗೆ ಅಸಂತೋಷವಾಗಿದೆ ಎಂದಿದ್ದಾರೆ, ಅವರು ತಮ್ಮ ಹೃದಯದಿಂದ ಸಾದ್ವಿಯನ್ನು ಕ್ಷಮಿಸಲ್ಲವಂತೆ..
ಗೋಡ್ಸೆ: ಅವರು ಪಿಎಂ. ಅವರು ಬಹಳಷ್ಟು ಜನರನ್ನು ಓಲೈಸಬೇಕಾಗುತ್ತೆ. ಅದು ಡೆಮಾಕ್ರಸಿಯ ಧ್ವನಿ… ನೀವು ಎಲ್ಲರನ್ನು ಸಂತುಷ್ಟಗೊಳಿಸಬೇಕಾಗುತ್ತೆ.

ಪ್ರಶ್ನೆ: ಸಾಧ್ವಿಯನ್ನು ಎಂದೂ ಕ್ಷಮಿಸಲ್ಲ ಅಂದಿದ್ದಾರೆ ಅಂದಮೇಲೆ, ಸಾಧ್ವಿ ಏನೋ ಘನಘೋರ ತಪ್ಪು ಮಾಡಿರಬೇಕಲ್ಲ?
ಗೋಡ್ಸೆ: ಇದು ಎಲೆಕ್ಷನ್ ಟೈಮ್. ಎಲೆಕ್ಷನ್ ಟೈಮ್ ಅಂದರೆ ‘ಜುಮ್ಲಾ ಟೈಮ್’…

ಪ್ರಶ್ನೆ: ಅಂದ್ರೆ ಪಿಎಂ ಸುಮ್ಮನೇ ಒಂದು ‘ಜುಮ್ಲಾ’ ಹೊಡೀತಿದ್ದಾರೆ ವಿನಹ ಸತ್ಯವನ್ನಲ್ಲ?
ಗೋಡ್ಸೆ: ಜನರನ್ನು ಇದು ಸತ್ಯ ಅಂತಾ ನಂಬಿಸ್ತೀವಲ್ಲ, ಅದೇ ಸತ್ಯ…

ಪ್ರಶ್ನೆ: ಕೆಲವು ಜನ ಹೇಳ್ತಾರೆ, ನೀನು ದೇಶಭಕ್ತ ಅಂತಾ. ಅದು ಜುಮ್ಲಾನಾ, ಸತ್ಯವಾ?
ಗೋಡ್ಸೆ: ಅದು ವೀಕ್ಷಕನ (ಅಬ್ಸರ್ವರ್) ಮೇಲೆ ಅವಲಂಬಿತ…

ಪ್ರಶ್ನೆ: ಅಂದರೆ ಹಾಗೇ ಹೇಳತಿರೋ ವ್ಯಕ್ತಿ ಮೇಲಲ್ಲ…
ಗೋಡ್ಸೆ: ಅದು ಆತನ ಪಾಲಿಗೆ ಜುಮ್ಲಾ. ಆತನಿಗೆ ಗೊತ್ತು ತಾನೊಂದು ಜುಮ್ಲಾ ಹೊಡಿತಿದ್ದೀನಿ ಅಂತಾ. ಆದರೆ ಅದನ್ನು ಸತ್ಯ ಅಂತಾ ಸ್ವೀಕರಿಸ್ತಾರೆ ಅಂತಾನೂ ಆತನಿಗೆ ಗೊತ್ತಿರುತ್ತೆ. ಅದೇ ಜುಮ್ಲಾದ ಶಕ್ತಿ. ಅದು ಪಿಎಂ ತಮ್ಮ ಹೃದಯದಿಂದ ( ಅದಕ್ಕೂ ಹೃದಯ ಬೇಕು) ಯಾರನ್ನೋ ಕ್ಷಮಿಸುತ್ತಿದ್ದಾರೆ ಅನ್ನೋ ಬಿಂಬವೂ ಹೌದು, ಪಿಎಂ ತನ್ನ ಹೃದಯದಿಂದ ಕ್ಷಮಿಸಲ್ಲ ಅನ್ನುವ ಸತ್ಯವೂ ಹೌದು…

ಪ್ರಶ್ನೆ: ನಿನ್ನ ಬಗ್ಗೆ ನಿನಗೆ ಏನು ಅನಿಸುತ್ತೆ? ನೀನು ದೇಶಭಕ್ತನಾ?
ಗೋಡ್ಸೆ: ನಾನೊಬ್ಬ ಜುಮ್ಲಾ, ನಾನೊಂದು ಜುಮ್ಲಾ…

ಪ್ರಶ್ನೆ: ಅಂದರೆ ಇದೆಲ್ಲ ಒಂದು ಸುಳ್ಳಿನ ಕಂತೆ?
ಗೋಡ್ಸೆ: ಅದು ಸುಳ್ಳಿನ ಕಂತೆಯಲ್ಲ, ಅದು ‘ಫೀಲ್ ಗುಡ್’ ಭಾವ.. ಜುಮ್ಲಾದಿಂದ ನಿನಗೆ ಒಂದು ಆಹ್ಲಾದಕರ ಭಾವ ಆವರಿಸುತ್ತೆ, ಅದೇ ಜುಮ್ಲಾದ ಉದ್ದೇಶವೂ ಕೂಡ. ಅಚ್ಛೇ ದಿನ್ ಅಂದರೆ ಅದೇ…ಪಕೋಡಾ ಮಾರ್ತಾ ಮಾರ್ತಾ, ಗಾಡಿ ತೊಳಿತಾ ತೊಳಿತಾ ಅಥವಾ ಚಾ ಮಾರ್ತಾ ಮಾರ್ತಾ ನಿನಗೆ ‘ಫೀಲ್ ಗುಡ್’ ಎಂಬ ಸಂತೋಷದ ಭಾವ ಉಂಟಾಗುತ್ತೆ. ಕೊಲ್ಲೋ ಮೂಲಕವೂ ನೀನು ‘ಫೀಲ್‍ಗುಡ್’ ಆನಂದ ಪಡಿಬಹುದು. ಒಳ್ಳೆಯ ಭಾವನೆಗಳಿಗಿಂತ ಈ ‘ಫಿಲ್‍ಗುಡ್’ನ ಸೆನ್ಸೆಷನ್ ಇದೆಯಲ್ಲ, ಇದು ಬಹಳ ಬಹಳ ದೊಡ್ಡದು. ನಾನಿಲ್ಲಿ ಶಬ್ದಗಳ ಆಟ ಆಡ್ತಿಲ್ಲ. ಭಾರತೀಯ ಫಿಲಾಸಫಿಯಲ್ಲಿ ಎಲ್ಲವೂ ಮಾಯೆಯೇ. ಅದರರ್ಥ ಇಡೀ ವಿಶ್ವವೇ ಒಂದು ನಹಾನ್ ಜುಮ್ಲಾ. ನೀನು ಈಗಾಗಲೇ ಜುಮ್ಲಾಗಳ ನಡುವೆ ಸಿಕ್ಕಿ ಹಾಕಿಕೊಂಡಿದ್ದೀಯಾ. ಒಂದಿಷ್ಟು ಜುಮ್ಲಾ ಸೇರಿಸಿದ್ದಕ್ಕೆ ನನ್ನನ್ನು ಏಕೆ ದೂಷಣೆ ಮಾಡ್ತೀಯಾ? ಒಂದೇ ದಾರಿ ಅಂದರೆ ನ್ಯಾಯ ಪಡೆಯುವುದಲ್ಲ ಮುಕ್ತಿ ಪಡೆಯುವುದು. ಅದೊಂದು ಮರೀಚಿಕೆ.

ಪ್ರಶ್ನೆ: ಜನರಿಗೆ ಮೋಕ್ಷಕ್ಕಿಂತ ನ್ಯಾಯದ ಅಗತ್ಯ ಬಹಳ ಇದೆಯಲ್ಲ?
ಗೋಡ್ಸೆ: ಜನರಿಗೆ ತಮಗೇನೂ ಬೇಕಂತನೇ ಗೊತ್ತಿಲ್ಲ. ನನಗೆ ಜುಮ್ಲಾಗಳೇ ಬೇಕು ಅಂತಾ ಯಾವನಾದರೂ ಹೇಳಿದ್ದಾನಾ? ಇಲ್ಲ, ಆದರೆ ದೇಶಭಕ್ತ ಪಾರ್ಟಿಗೆ ಗೊತ್ತು, ಎಲ್ಲರಿಗೂ ಜುಮ್ಲಾ ಬೇಕು ಅಂತಾ. ಅದಕ್ಕೇ ಅವರು ಯಥೇಚ್ಛವಾಗಿ ಜುಮ್ಲಾಗಳನ್ನು ಒದಗಿಸ್ತಾ ಇದ್ದಾರೆ…7 ದಶಕಗಳಿಂದ ಜಾತ್ಯತೀತ ಸರ್ಕಾರಗಳು ಜನರನ್ನು ಈ ಹಸಿವಿನಿಂದ ಕಾಡಿದವು. ದೇಶಭಕ್ತ ಸರ್ಕಾರವು ಅವರ ಖಾಲಿ ಹೊಟ್ಟಗಳನ್ನು ಜುಮ್ಲಾಗಳಿಂದ ಭರ್ತಿ ಮಾಡಿತು.

ಪ್ರಶ್ನೆ: ನೀನು ಅಲ್ಲಿ ಮೇಲೆ ಮೋಡಗಳಲ್ಲಿ ಇರ್ತೀಯಾ. ಯಾವುದಾದರೂ ಸ್ಯಾಟ್‍ಲೈಟ್ ನಿನ್ನ ಇರುವಿಕೆಯನ್ನ ಪತ್ತೆ ಮಾಡಿದೆಯಾ?
ಗೋಡ್ಸೆ: ಇಲ್ಲವೇ ಇಲ್ಲ, ಸಾಧ್ಯಾನೇ ಇಲ್ಲ. ಮೋಡಗಳಲ್ಲಿ ಬದುಕುವುದರ ಅನುಕೂಲ ಅಂದ್ರೆನೇ ಅದು. ಸ್ಯಾಟ್‍ಲೈಟ್ಸ್ ಮತ್ತು ರೆಡಾರ್‍ಗಳು ಎಂದೂ ನಿನ್ನ ಪತ್ತೆ ಹಚ್ಚಕಾಗಲ್ಲ. ಅದಕ್ಕೇ ಟ್ರಂಪ್‍ಗೆ ಆಕಾಶದಲ್ಲಿ ನನ್ನ ಚಲನವಲನ ಗೊತ್ತಾಗದ ರೀತಿಯಲ್ಲಿ ನಾನು ಭಾರತದಲ್ಲಿ ಬಂದಿಳಿದೆ.
ಇದರ ನಂತರ ಗೋಡ್ಸೆ ತನ್ನ ‘ಸಮಾಧಿ’ಯತ್ತ ಹೊರಟ…


ಇದನ್ನೂ ಓದಿ: ಗಾಂಧಿ ಅಂದಿಗೂ ಇಂದಿಗೂ ಒಬ್ಬಂಟಿ. ಗೋಡ್ಸೆ ಅಂದಿಗೂ ಒಬ್ಬಂಟಿಯಲ್ಲ, ಇಂದಿಗೂ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಗೋಡ್ಸೆ ಅವರನ್ನ ಭಯೋತ್ಪಾದಕ ಅಂತ ಕರೆಯುವುದಾದರೆ ,ಭಗತ್ ಸಿಂಗ್ ಅವರನ್ನು ನೇಣು ಕುಣಿಕೆ ತಪ್ಪಿಸಲು ಆಗದವರನ್ನ ,ಸುಭಾಷ್ ಚಂದ್ರಭೋಸ್ ಅವರ ಮೇಲೆ ಗೂಢಾಚಾರಿಕೆ ಮಾಡಲು ನೆರವಾದ ಸೋಕಾಲ್ಡ್ ಒಂದು ಕುಟುಂಬ ರಾಜಕಾರಣದ ಪರಿವಾರದವರನ್ನ ,ಚೀನಾದೊಂದಿಗೆ ಹಿಂದಿನಿಂದಲೂ ಸಹಾಯ ಪಡೆಯುತ್ತಿರುವ ಈಗಲೂ ನೆರವು ಪಡೆದು ಚೀನಾದ ಪರ ನಿಲ್ಲೋ ಭಾರತದ ಕಮ್ಯೂನಿಸ್ಟ್ ರನ್ನ ಯಾವ ಭಯೋತ್ಪಾದನೆ ಯವರು ಎಂದು ಕರೆಯಬಹುದು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...