Homeಕರ್ನಾಟಕನಾನು ದಾಸಯ್ಯ ಅಲ್ಲ, ಮೆಂಬರ್ ಆಫ್ ಪಾರ್ಲಿಮೆಂಟ್ : ತಾಳ್ಮೆ ಕಳೆದುಕೊಂಡ ತುಮಕೂರು ಸಂಸದರು

ನಾನು ದಾಸಯ್ಯ ಅಲ್ಲ, ಮೆಂಬರ್ ಆಫ್ ಪಾರ್ಲಿಮೆಂಟ್ : ತಾಳ್ಮೆ ಕಳೆದುಕೊಂಡ ತುಮಕೂರು ಸಂಸದರು

- Advertisement -
- Advertisement -

ನಾನು ದಾಸಯ್ಯ ಅಲ್ಲ, ಮೆಂಬರ್ ಆಫ್ ಪಾರ್ಲಿಮೆಂಟ್, ನಾನು ಪುರಾಣ ಹೇಳಲು ಬಂದಿಲ್ಲ, ನಾನು’ ನಮ್ಮಪ್ಪಗೆ …………… ಎಂದು ಸಂಸದ ಜಿ.ಎಸ್. ಬಸವರಾಜು ಪತ್ರಿಕಾಗೋಷ್ಠಿಯಲ್ಲಿ ತಾಳ್ಮೆಯನ್ನು ಕಳೆದುಕೊಂಡು ಮಾಧ್ಯಮದವರ ಮೇಲೆ ಸಿಡಿದೆದ್ದ ಪ್ರಕರಣ ಇಂದು ನಡೆಯಿತು.

ಇದೇ ವರ್ಷ ಜುಲೈ 7ರಂದು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಬಸವರಾಜು ಅವರು 2018ರಲ್ಲಿ ತುಮಕೂರು ಜಿಲ್ಲೆಗೆ 23 ಟಿಎಂಸಿ ನೀರು ಹರಿಸಲಾಗಿದೆ ಎಂದು ಸರ್ಕಾರ ಮತ್ತು ಚೀಫ್ ಇಂಜಿನಿಯರ್ ಸುಳ್ಳು ಲೆಕ್ಕ ತೋರಿಸಿದ್ದಾರೆ. ಇವರ ವಿರುದ್ಧ ವಂಚನೆ ಮತ್ತು ದೇಶದ್ರೋಹದ ಕೇಸ್ ದಾಖಲಿಸಲಾಗುವುದು ಎಂದು ಹೇಳಿದ್ದರು.

ಇಂದು ಅದೇ ಪ್ರಶ್ನೆಯನ್ನು ಸಂಸದ ಬಸವರಾಜು ಅವರಿಗೆ ಪತ್ರಕರ್ತರು ಕೇಳಿದರು. ಇದಕ್ಕೆ ಸಂಬಂಧವಿಲ್ಲದ ಮಾಹಿತಿಯನ್ನು ನೀಡಲು ಹೊರಟರು. ಆದರೆ ಪತ್ರಕರ್ತರು ಪಟ್ಟು ಬಿಡದೇ ನೀವು ಹಿಂದೆ ಹೇಳಿದಂತೆ ಚೀಫ್ ಇಂಜಿನಿಯರ್ ವಿರುದ್ಧ ದೂರು ದಾಖಲಿಸುತ್ತೀರ ಅದನ್ನು ಸ್ಪಷ್ಟಪಡಿಸಿ ಎಂದು ಪ್ರಶ್ನಿಸಿದ್ದಾರೆ.

ಇದರಿಂದ ತಾಳ್ಮೆ ಕಳೆದುಕೊಂಡು ಕೆರಳಿದ ಸಂಸದ ಬಸವರಾಜು ಮಾಧ್ಯಮಗೋಷ್ಠಿಯಲ್ಲಿ ದಿಢೀರನೆ ಎದ್ದು ನಿಂತು ನಾನು ಪುರಾಣ ಹೇಳೋಕೆ ದಾಸಯ್ಯ ಅಲ್ಲ, ಮೆಂಬರ್ ಆಫ್ ಪಾರ್ಲಿಮೆಂಟ್ ಎಂದು ಮಾಧ್ಯಮದವರ ವಿರುದ್ದ ಸಿಡಿಮಿಡಿ ವ್ಯಕ್ತಪಡಿಸಿದರು.

ಮಧ್ಯ ಪ್ರವೇಶಿಸಿದ ಕೆಲ ಹಿರಿಯ ಪತ್ರಕರ್ತರು, ನಾವು ನೀವು ಹೇಳಿದಂತೆ ದೂರು ದಾಖಲಿಸುವ ಸುದ್ದಿ ಬರೆದಿದ್ದೇವೆ. ಈಗ ಕೇಳುತ್ತಿದ್ದೇವೆ. ಉತ್ತರ ಹೇಳಿ. ಅದಕ್ಕೇಕೆ ರೇಗುತ್ತೀರ ಎಂದು ಸಮಜಾಯಿಸಿ ನೀಡಿದರು.

ಇದರಿಂದ ದಿಶಾ ಸಮಿತಿಯ ಸದಸ್ಯ ಹಾಗೂ ಅಭಿವೃದ್ಧಿ ರೆವೆಲ್ಯೂಷನ್ ಅಧ್ಯಕ್ಷ  ಕುಂದರನಹಳ್ಳಿ ರಮೇಶ್ ಪತ್ರಕರ್ತರೊಂದಿಗೆ ಏರುಧ್ವನಿಯಲ್ಲಿ ಜಗಳಕ್ಕೆ ಇಳಿದರು. ಕೊನೆಗೆ ಎಲ್ಲರು ಅಲ್ಲಿಂದ ಚದುರಿದರು.

ಈ ವೇಳೆ ಮಾತನಾಡಿದ ಸಂಸದ ಬಸವರಾಜು ಸ್ಮಾರ್ಟ್ ಸಿಟಿ ಸರಿದಾರಿಗೆ ತರಲು ದಿಟ್ಟ ಕ್ರಮ ಕೈಗೊಳ್ಳಲಾಗುವುದು. ತಪ್ಪು ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಕೇಂದ್ರ ಮತ್ತು ರಾಜ್ಯ ಸರ್ಕಾರದ ಉನ್ನತ ಅಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುವುದು. ಸ್ಮಾರ್ಟ್ ಸಿಟಿ ಪ್ರಸ್ತಾಪ ತಯಾರಿಸುವಾಗ ಸುಳ್ಳು ಮಾಹಿತಿ ನೀಡಿದವರಿಗೂ ಬಿಸಿ ತಟ್ಟಲಿದೆ ಎಂದು ಹೇಳಿದರು.

ಸ್ಮಾರ್ಟ್ ಸಿಟಿ ಅಡ್ವೈಸರಿ ಫೋರಂ ಸಭೆ ಯಾವ ಯಾವ ವ್ಯವಸ್ಥಾಪಕ ನಿರ್ದೇಶಕರ ಅವಧಿಯಲ್ಲಿ ಎಷ್ಟೆಷ್ಟು ನಡೆದಿವೆ. ಯಾವ ಸಭೆಯಲ್ಲಿ ಯಾವ ಯೋಜನೆಯ ಬಗ್ಗೆ ವಿವರವಾದ ಚರ್ಚೆ ನಡೆಸಲಾಗಿದೆ ಎಂಬ ಬಗ್ಗೆ ಯೋಜನೆವಾರು ಮಾಹಿತಿಯನ್ನು ಒಂದೇ ಕಡೆ ತರಲು ಸೂಚಿಸಿದ್ದೇನೆ ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...