Homeಕರ್ನಾಟಕನಾನು ಹಿಂದೂ ಅಲ್ಲ, ಲಿಂಗಾಯತ; ನಮ್ಮ ದೇಶದಲ್ಲಿ 12,000 ವಿಭಿನ್ನ ಸಂಸ್ಕೃತಿಗಳಿವೆ: ಕುಂವೀ

ನಾನು ಹಿಂದೂ ಅಲ್ಲ, ಲಿಂಗಾಯತ; ನಮ್ಮ ದೇಶದಲ್ಲಿ 12,000 ವಿಭಿನ್ನ ಸಂಸ್ಕೃತಿಗಳಿವೆ: ಕುಂವೀ

- Advertisement -
- Advertisement -

“ನಾನು ಹಿಂದೂ ಅಲ್ಲವೆಂದು ವಿದ್ಯುಕ್ತವಾಗಿ ಘೋಷಿಸುತ್ತಿದ್ದೇನೆ. ನಾನು ಲಿಂಗಾಯತ ಸಮುದಾಯದಿಂದ ಬಂದವನು” ಎಂದು ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ ಹೇಳಿದರು.

ಲೋಕನಾಯಕ ಜೆ.ಪಿ.ವಿಚಾರ ವೇದಿಕೆ ವತಿಯಿಂದ ಬೆಂಗಳೂರಿನ ಗಾಂಧಿಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ, “ಸರ್ವ ಜನಾಂಗದ ಶಾಂತಿಯ ತೋಟ: ಒಂದು ಭಾವೈಕ್ಯತೆಯ ಚರ್ಚೆ” ಕಾರ್ಯಕ್ರಮವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.

“1824ರಲ್ಲಿ ಬಂದ ಶಬ್ದ ಹಿಂದೂ. ಈ ದೇಶದಲ್ಲಿ 12,000 ಜಾತಿಗಳಿವೆ. 12,000 ಸಂಸ್ಕೃತಿಗಳಿವೆ. ಅಷ್ಟು ವೈವಿಧ್ಯಮಯ ದೇಶ ಯಾವುದಾದರೂ ಇದ್ದರೆ ಅದು ನನ್ನ ದೇಶ. ಹೀಗಾಗಿ ನಾವೆಲ್ಲ ಹಿಂದೂ ಎಂದು ಹೇಳುವುದು ಸರಿಯಲ್ಲ” ಎಂದು ಸ್ಪಷ್ಟಪಡಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ನಿಜಲಿಂಗಸ್ವಾಮಿ ಎಂಬ ಹುಡುಗ 2ನೇ ವಯಸ್ಸಿನಲ್ಲಿ ಜಾತ್ರೆಯಲ್ಲಿ ತಪ್ಪಿಸಿಕೊಂಡಿದ್ದ. ಸುಮಾರು 22 ವರ್ಷಗಳ ನಂತರ ಆ ಹುಡುಗ ಪತ್ತೆಯಾದ. ಉಸ್ಮಾನ್ ಎಂಬವರ ಮುಸ್ಲಿಂ ಕುಟುಂಬದಲ್ಲಿ ಆ ಹುಡುಗ ಬೆಳೆದ. ಉಸ್ಮಾನ್ ತಮ್ಮ ಮನೆಯಲ್ಲಿ ಪ್ರತ್ಯೇಕವಾಗಿ ಆ ಹುಡುಗನನ್ನು ಇರಿಸಿದ್ದರು. ಹಿಂದೂ ಅಂತ ತಿಳಿದ ಬಳಿಕ ಹಿಂದೂ ಸಂಪ್ರದಾಯದ ಊಟವನ್ನೇ ನೀಡಿದರು. ಅವನದ್ದೇ ಆದ ನಿಲುವನ್ನು ಬೆಳೆಸಿದರು. ಹೀಗೆ ಇಪ್ಪತ್ತೆರಡು ವರ್ಷಗಳ ಕಾಲ ನೋಡಿಕೊಂಡಿದ್ದಾರೆ. ನಿಜಲಿಂಗ ಎಂದೇ ಆತನ ಹೆಸರಿದೆ. ಯಾವುದೇ ಬದಲಾವಣೆ ಮಾಡಿಲ್ಲ. ಇದು ನಮ್ಮ ಭಾರತ ಎಂದು ತಿಳಿಸಿದರು.

ನಮ್ಮಲ್ಲಿ ಎರಡು ರೀತಿಯ ದೆವ್ವಗಳಿವೆ. ಹಿರಿಯರ ಹಬ್ಬ ಮಾಡಿದಾಗ ಕೆಲವು ದೆವ್ವಗಳು ಸ್ವರ್ಗಕ್ಕೆ ಹೋಗುತ್ತವೆ. ಇನ್ನು ಕೆಲವು ದೆವ್ವಗಳಿವೆ- ಗೋಳ್ವಲ್ಕರ್‌‌, ನಾಥೂರಾಮ್ ಗೋಡ್ಸೆ, ಹೆಗಡೇವಾರ್‌- ಇವು ಆಗಾಗ್ಗೆ ಕೆಲವರ ಮೈಮೇಲೆ ಬರುತ್ತವೆ ಎಂದು ವಿಷಾದಿಸಿದರು.

ಬಹಳ ಸಜ್ಜನರು ಕೆಲವು ಹೇಳಿಕೆಗಳನ್ನು ಕೊಡುತ್ತಾರೆ. ಅವರ ಮೈಮೇಲೆ ದೆವ್ವ ಬಂದಾಗ ಮುಸ್ಲಿಂ ವಿರೋಧಿಯಾಗಿ ಮಾತನಾಡುತ್ತಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರಂತೂ ಒಳ್ಳೆಯ ವ್ಯಕ್ತಿ, ಶಿಕ್ಷಿತ. ಅವರು ಇದ್ದಕ್ಕಿದ್ದಂತೆ ಪಂಚರ್‌ ಹಾಕುವವರ ಬಗ್ಗೆ ಮಾತನಾಡುತ್ತಾರೆ. ಯಾಕೆಂದರೆ ಅವರ ಮೈಮೇಲೆ ಗೋಳ್ವಲ್ಕರ್‌ ಪ್ರೇತ ಬಂದಿರುತ್ತದೆ. ರೇಣುಕಾಚಾರ್ಯ ಅಂತ ಇದ್ದಾರೆ. ಅವರೂ ಬಹಳ ಒಳ್ಳೆಯವರು. ಅವರ ಮೇಲೆ ಪ್ರೇತ ಬಂದಾಗ ಏನೋ ಹೇಳಿಕೆ ನೀಡುತ್ತಾರೆ. ವಿಜಯಪುರದಲ್ಲಿ ಒಬ್ಬ ಸಜ್ಜನರು ಇದ್ದಾರೆ. ಅವರು ಹೆಸರು ಬಸವರಾಜ ಯತ್ನಾಳ್. ಅವರು ಕೂಡ ವಿಚಿತ್ರವಾದ ಹೇಳಿಕೆಗಳನ್ನು ನೀಡುತ್ತಾರೆ ಎಂದು ಟೀಕಿಸಿದರು.

ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ನಾಗಮೋಹನ್ ದಾಸ್ ಮಾತನಾಡಿ, “ಮಾನವನ ದುಃಖ ದುಮ್ಮಾನಗಳನ್ನು ಪರಿಹಾರ ಮಾಡುವುದಕ್ಕೆ ಧರ್ಮಗಳು ಹುಟ್ಟಿದವು. ಹಾಗಾಗಿ ದಮನಕ್ಕೆ ಒಳಗಾಗಿರುವ ಜನರ ದನಿಯೇ ಧರ್ಮ ಎಂದು ನಮ್ಮ ಹಿರಿಯರು ಹೇಳಿದ್ದಾರೆ. ಹಾಗಾಗಿ ನಾವು ಧರ್ಮ ವಿರೋಧಿಗಳಾಗಬೇಕಿಲ್ಲ. ಆದರೆ ನಮ್ಮೆಲ್ಲ ಸುತ್ತ ಈ ರೀತಿಯ ಬೆಳವಣಿಗೆಗಳು ಯಾಕೆ ಆಗುತ್ತಿವೆ? ಧರ್ಮವು ಅಪ್ರಜಾಪ್ರಭುತ್ವಗೊಂಡಾಗ ಅದು ಮೂಲಭೂತವಾದವಾಗುತ್ತದೆ. ಇದು ಮನುಕುಲಕ್ಕೆ ಬಹಳ ಹಾನಿಕಾರಕ” ಎಂದು ಎಚ್ಚರಿಸಿದರು.

ಕಾಶ್ಮೀರದಲ್ಲಿ ಶೇ. 92ರಷ್ಟು ಜನರು ಮುಸ್ಲಿಮರಿದ್ದಾರೆ. ಅಲ್ಲಿನ ಮುಸ್ಲಿಂ ಮಹಿಳೆಯರು ಬುರ್ಕಾ ಹಾಕಲ್ಲ. ಆದರೆ ಇಸ್ಲಾಮಿಕ್ ಮೂಲಭೂತವಾದಿಗಳು, ಬುರ್ಕಾ ಹಾಕಲೇಬೇಕೆಂದು ಧಮ್ಕಿ ಹಾಕುತ್ತಿದ್ದಾರೆ. ಅದು ಮೂಲಭೂತವಾದ. ಮೂರು ನಾಮ ಹಾಕಬೇಕು, ತಿಲಕ ಇಡಬೇಕು, ಗಡ್ಡ ಬಿಡಬೇಕು, ಪಾದಪಾದ ಪೂಜೆ ಮಾಡಬೇಕು ಎಂದು ಹೇರುವುದು ಮೂಲಭೂತವಾದ. ಇದನ್ನು ಎದುರಿಸದಿದ್ದರೆ ಶಾಂತಿ ನೆಮ್ಮದಿ ಇರುವುದಿಲ್ಲ. ಹೀಗಾಗಿ ನಾವು ಧರ್ಮ ವಿರೋಧಿಗಳಾಗಬೇಕಿಲ್ಲ. ಧರ್ಮವನ್ನು ಅಪ್ರಜಾಪ್ರಭುತ್ವಗೊಳಿಸುವ ಪ್ರಕ್ರಿಯೆಯನ್ನು ವಿರೋಧ ಮಾಡಬೇಕಿದೆ” ಎಂದು ಅಭಿಪ್ರಾಯಪಟ್ಟರು.

ಪತ್ರಕರ್ತ ಬಿ.ಎಂ. ಹನೀಫ್ ಮಾತನಾಡಿ, ‘ಮಾಧ್ಯಮಗಳು ಟಿಆರ್‌ಪಿ ಹಿಂದೆ ಹೋಗುತ್ತಿವೆ. ಹಿಜಾಬ್‌ ಧರಿಸದೆ ಹೋದ ನೂರಾರು ವಿದ್ಯಾರ್ಥಿಗಳಿದ್ದರು. ಅವರನ್ನು ಮಾಧ್ಯಮಗಳು ತೋರಿಸಲಿಲ್ಲ. ತರಗತಿಯಲ್ಲಿ ಹಿಜಾಬ್ ಧರಿಸಿ ಪಾಠ ಕೇಳಿದರೆ ಶಿಕ್ಷಣ ವ್ಯವಸ್ಥೆ ಕುಸಿದು ಹೋಗುತ್ತಿರಲಿಲ್ಲ. ಅದೇ ರೀತಿ ತಲೆ ಮೇಲೆ ಹಿಜಾಬ್‌ ಇಲ್ಲದೆ ಪಾಠ ಕೇಳಿದರೆ ಇಸ್ಲಾಂ ಧರ್ಮ ಕೆಟ್ಟು ಹೋಗುವುದಿಲ್ಲ. ಸಾವಿರಾರು ವರ್ಷಗಳ ಇತಿಹಾಸವಿರುವ ಧರ್ಮವಿದೆ” ಎಂದು ವಿವರಿಸಿದರು.

“ನಾವು ದೇಶದ ಬಗ್ಗೆ ಚಿಂತನೆ ಮಾಡಬೇಕಿದೆ. ಸಾವಿರಾರು ಕಾರ್ಮಿಕರು ಉದ್ಯೋಗ ಕಳೆದುಕೊಂಡಿದ್ದಾರೆ. ಕಾರ್ಖಾನೆಗಳು ಮುಚ್ಚಿವೆ. ಇದರ ಬಗ್ಗೆ ಮಾಧ್ಯಮಗಳು ಮಾತನಾಡುತ್ತಿಲ್ಲ. ಲಕ್ಷಾಂತರ ಕೋಟಿ ರೂ. ಸಾಲವನ್ನು ಸರ್ಕಾರ ಮಾಡಿದೆ. ಕೆಲವು ರಾಜಕಾರಣಿಗಳು ನನ್ನ ಮೈಯಲ್ಲಿ ಹಿಂದೂ ರಕ್ತ ಹರಿಯುತ್ತಿದೆ ಎನ್ನುತ್ತಾರೆ. ಮಣಿಪಾಲ್‌ ಆಸ್ಪತ್ರೆಗೆ ಹೋಗಿ ಅರ್ಜೆಂಟಾಗಿ ಎರಡು ಬಾಟಲ್‌ ಹಿಂದೂ ರಕ್ತ ಬೇಕು ಎಂದರೆ ಕೊಡುತ್ತಾರಾ?” ಎಂದು ಪ್ರಶ್ನಿಸಿದರು.

ಆದಿಚುಂಚನಗಿರಿ ಶಾಖಾ ಮಠದ ಸೌಮ್ಯಾನಂದ ಸ್ವಾಮೀಜಿ, ಇಸ್ಲಾಂ ಧಾರ್ಮಿಕ ವಿದ್ವಾಂಸರಾದ  ಮುಫ್ತಿ ಮಹಮ್ಮದ್‌ ಅಲಿ ಮಿಸ್ಬಾಹಿ ಜಮಾಲಿ ನೂರಿ, ಆರ್ಚ್‌ ಡಯಾಸಿಸ್‌ ಕಮ್ಯುನಿಕೇಷನ್‌ ಸೆಂಟರ್‌ ನಿರ್ದೇಶಕರಾದ ಫಾ. ಸಿರಿಲ್ ವಿಕ್ಟರ್‌ ಸರ್ವಧರ್ಮ ಸಮನ್ವಯತೆ ಸಾರುವ ಭಾಷಣ ಮಾಡಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿರಿ: ಕೋಮುದ್ವೇಷದ ವಿರುದ್ಧ ಪಾದಯಾತ್ರೆ ಮಾಡುವೆ: ಎಚ್‌.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...