Homeಕರ್ನಾಟಕನಾನು ಹಿಂದೂ ಅಲ್ಲ, ಲಿಂಗಾಯತ; ನಮ್ಮ ದೇಶದಲ್ಲಿ 12,000 ವಿಭಿನ್ನ ಸಂಸ್ಕೃತಿಗಳಿವೆ: ಕುಂವೀ

ನಾನು ಹಿಂದೂ ಅಲ್ಲ, ಲಿಂಗಾಯತ; ನಮ್ಮ ದೇಶದಲ್ಲಿ 12,000 ವಿಭಿನ್ನ ಸಂಸ್ಕೃತಿಗಳಿವೆ: ಕುಂವೀ

- Advertisement -
- Advertisement -

“ನಾನು ಹಿಂದೂ ಅಲ್ಲವೆಂದು ವಿದ್ಯುಕ್ತವಾಗಿ ಘೋಷಿಸುತ್ತಿದ್ದೇನೆ. ನಾನು ಲಿಂಗಾಯತ ಸಮುದಾಯದಿಂದ ಬಂದವನು” ಎಂದು ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ ಹೇಳಿದರು.

ಲೋಕನಾಯಕ ಜೆ.ಪಿ.ವಿಚಾರ ವೇದಿಕೆ ವತಿಯಿಂದ ಬೆಂಗಳೂರಿನ ಗಾಂಧಿಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ, “ಸರ್ವ ಜನಾಂಗದ ಶಾಂತಿಯ ತೋಟ: ಒಂದು ಭಾವೈಕ್ಯತೆಯ ಚರ್ಚೆ” ಕಾರ್ಯಕ್ರಮವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.

“1824ರಲ್ಲಿ ಬಂದ ಶಬ್ದ ಹಿಂದೂ. ಈ ದೇಶದಲ್ಲಿ 12,000 ಜಾತಿಗಳಿವೆ. 12,000 ಸಂಸ್ಕೃತಿಗಳಿವೆ. ಅಷ್ಟು ವೈವಿಧ್ಯಮಯ ದೇಶ ಯಾವುದಾದರೂ ಇದ್ದರೆ ಅದು ನನ್ನ ದೇಶ. ಹೀಗಾಗಿ ನಾವೆಲ್ಲ ಹಿಂದೂ ಎಂದು ಹೇಳುವುದು ಸರಿಯಲ್ಲ” ಎಂದು ಸ್ಪಷ್ಟಪಡಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ನಿಜಲಿಂಗಸ್ವಾಮಿ ಎಂಬ ಹುಡುಗ 2ನೇ ವಯಸ್ಸಿನಲ್ಲಿ ಜಾತ್ರೆಯಲ್ಲಿ ತಪ್ಪಿಸಿಕೊಂಡಿದ್ದ. ಸುಮಾರು 22 ವರ್ಷಗಳ ನಂತರ ಆ ಹುಡುಗ ಪತ್ತೆಯಾದ. ಉಸ್ಮಾನ್ ಎಂಬವರ ಮುಸ್ಲಿಂ ಕುಟುಂಬದಲ್ಲಿ ಆ ಹುಡುಗ ಬೆಳೆದ. ಉಸ್ಮಾನ್ ತಮ್ಮ ಮನೆಯಲ್ಲಿ ಪ್ರತ್ಯೇಕವಾಗಿ ಆ ಹುಡುಗನನ್ನು ಇರಿಸಿದ್ದರು. ಹಿಂದೂ ಅಂತ ತಿಳಿದ ಬಳಿಕ ಹಿಂದೂ ಸಂಪ್ರದಾಯದ ಊಟವನ್ನೇ ನೀಡಿದರು. ಅವನದ್ದೇ ಆದ ನಿಲುವನ್ನು ಬೆಳೆಸಿದರು. ಹೀಗೆ ಇಪ್ಪತ್ತೆರಡು ವರ್ಷಗಳ ಕಾಲ ನೋಡಿಕೊಂಡಿದ್ದಾರೆ. ನಿಜಲಿಂಗ ಎಂದೇ ಆತನ ಹೆಸರಿದೆ. ಯಾವುದೇ ಬದಲಾವಣೆ ಮಾಡಿಲ್ಲ. ಇದು ನಮ್ಮ ಭಾರತ ಎಂದು ತಿಳಿಸಿದರು.

ನಮ್ಮಲ್ಲಿ ಎರಡು ರೀತಿಯ ದೆವ್ವಗಳಿವೆ. ಹಿರಿಯರ ಹಬ್ಬ ಮಾಡಿದಾಗ ಕೆಲವು ದೆವ್ವಗಳು ಸ್ವರ್ಗಕ್ಕೆ ಹೋಗುತ್ತವೆ. ಇನ್ನು ಕೆಲವು ದೆವ್ವಗಳಿವೆ- ಗೋಳ್ವಲ್ಕರ್‌‌, ನಾಥೂರಾಮ್ ಗೋಡ್ಸೆ, ಹೆಗಡೇವಾರ್‌- ಇವು ಆಗಾಗ್ಗೆ ಕೆಲವರ ಮೈಮೇಲೆ ಬರುತ್ತವೆ ಎಂದು ವಿಷಾದಿಸಿದರು.

ಬಹಳ ಸಜ್ಜನರು ಕೆಲವು ಹೇಳಿಕೆಗಳನ್ನು ಕೊಡುತ್ತಾರೆ. ಅವರ ಮೈಮೇಲೆ ದೆವ್ವ ಬಂದಾಗ ಮುಸ್ಲಿಂ ವಿರೋಧಿಯಾಗಿ ಮಾತನಾಡುತ್ತಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರಂತೂ ಒಳ್ಳೆಯ ವ್ಯಕ್ತಿ, ಶಿಕ್ಷಿತ. ಅವರು ಇದ್ದಕ್ಕಿದ್ದಂತೆ ಪಂಚರ್‌ ಹಾಕುವವರ ಬಗ್ಗೆ ಮಾತನಾಡುತ್ತಾರೆ. ಯಾಕೆಂದರೆ ಅವರ ಮೈಮೇಲೆ ಗೋಳ್ವಲ್ಕರ್‌ ಪ್ರೇತ ಬಂದಿರುತ್ತದೆ. ರೇಣುಕಾಚಾರ್ಯ ಅಂತ ಇದ್ದಾರೆ. ಅವರೂ ಬಹಳ ಒಳ್ಳೆಯವರು. ಅವರ ಮೇಲೆ ಪ್ರೇತ ಬಂದಾಗ ಏನೋ ಹೇಳಿಕೆ ನೀಡುತ್ತಾರೆ. ವಿಜಯಪುರದಲ್ಲಿ ಒಬ್ಬ ಸಜ್ಜನರು ಇದ್ದಾರೆ. ಅವರು ಹೆಸರು ಬಸವರಾಜ ಯತ್ನಾಳ್. ಅವರು ಕೂಡ ವಿಚಿತ್ರವಾದ ಹೇಳಿಕೆಗಳನ್ನು ನೀಡುತ್ತಾರೆ ಎಂದು ಟೀಕಿಸಿದರು.

ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ನಾಗಮೋಹನ್ ದಾಸ್ ಮಾತನಾಡಿ, “ಮಾನವನ ದುಃಖ ದುಮ್ಮಾನಗಳನ್ನು ಪರಿಹಾರ ಮಾಡುವುದಕ್ಕೆ ಧರ್ಮಗಳು ಹುಟ್ಟಿದವು. ಹಾಗಾಗಿ ದಮನಕ್ಕೆ ಒಳಗಾಗಿರುವ ಜನರ ದನಿಯೇ ಧರ್ಮ ಎಂದು ನಮ್ಮ ಹಿರಿಯರು ಹೇಳಿದ್ದಾರೆ. ಹಾಗಾಗಿ ನಾವು ಧರ್ಮ ವಿರೋಧಿಗಳಾಗಬೇಕಿಲ್ಲ. ಆದರೆ ನಮ್ಮೆಲ್ಲ ಸುತ್ತ ಈ ರೀತಿಯ ಬೆಳವಣಿಗೆಗಳು ಯಾಕೆ ಆಗುತ್ತಿವೆ? ಧರ್ಮವು ಅಪ್ರಜಾಪ್ರಭುತ್ವಗೊಂಡಾಗ ಅದು ಮೂಲಭೂತವಾದವಾಗುತ್ತದೆ. ಇದು ಮನುಕುಲಕ್ಕೆ ಬಹಳ ಹಾನಿಕಾರಕ” ಎಂದು ಎಚ್ಚರಿಸಿದರು.

ಕಾಶ್ಮೀರದಲ್ಲಿ ಶೇ. 92ರಷ್ಟು ಜನರು ಮುಸ್ಲಿಮರಿದ್ದಾರೆ. ಅಲ್ಲಿನ ಮುಸ್ಲಿಂ ಮಹಿಳೆಯರು ಬುರ್ಕಾ ಹಾಕಲ್ಲ. ಆದರೆ ಇಸ್ಲಾಮಿಕ್ ಮೂಲಭೂತವಾದಿಗಳು, ಬುರ್ಕಾ ಹಾಕಲೇಬೇಕೆಂದು ಧಮ್ಕಿ ಹಾಕುತ್ತಿದ್ದಾರೆ. ಅದು ಮೂಲಭೂತವಾದ. ಮೂರು ನಾಮ ಹಾಕಬೇಕು, ತಿಲಕ ಇಡಬೇಕು, ಗಡ್ಡ ಬಿಡಬೇಕು, ಪಾದಪಾದ ಪೂಜೆ ಮಾಡಬೇಕು ಎಂದು ಹೇರುವುದು ಮೂಲಭೂತವಾದ. ಇದನ್ನು ಎದುರಿಸದಿದ್ದರೆ ಶಾಂತಿ ನೆಮ್ಮದಿ ಇರುವುದಿಲ್ಲ. ಹೀಗಾಗಿ ನಾವು ಧರ್ಮ ವಿರೋಧಿಗಳಾಗಬೇಕಿಲ್ಲ. ಧರ್ಮವನ್ನು ಅಪ್ರಜಾಪ್ರಭುತ್ವಗೊಳಿಸುವ ಪ್ರಕ್ರಿಯೆಯನ್ನು ವಿರೋಧ ಮಾಡಬೇಕಿದೆ” ಎಂದು ಅಭಿಪ್ರಾಯಪಟ್ಟರು.

ಪತ್ರಕರ್ತ ಬಿ.ಎಂ. ಹನೀಫ್ ಮಾತನಾಡಿ, ‘ಮಾಧ್ಯಮಗಳು ಟಿಆರ್‌ಪಿ ಹಿಂದೆ ಹೋಗುತ್ತಿವೆ. ಹಿಜಾಬ್‌ ಧರಿಸದೆ ಹೋದ ನೂರಾರು ವಿದ್ಯಾರ್ಥಿಗಳಿದ್ದರು. ಅವರನ್ನು ಮಾಧ್ಯಮಗಳು ತೋರಿಸಲಿಲ್ಲ. ತರಗತಿಯಲ್ಲಿ ಹಿಜಾಬ್ ಧರಿಸಿ ಪಾಠ ಕೇಳಿದರೆ ಶಿಕ್ಷಣ ವ್ಯವಸ್ಥೆ ಕುಸಿದು ಹೋಗುತ್ತಿರಲಿಲ್ಲ. ಅದೇ ರೀತಿ ತಲೆ ಮೇಲೆ ಹಿಜಾಬ್‌ ಇಲ್ಲದೆ ಪಾಠ ಕೇಳಿದರೆ ಇಸ್ಲಾಂ ಧರ್ಮ ಕೆಟ್ಟು ಹೋಗುವುದಿಲ್ಲ. ಸಾವಿರಾರು ವರ್ಷಗಳ ಇತಿಹಾಸವಿರುವ ಧರ್ಮವಿದೆ” ಎಂದು ವಿವರಿಸಿದರು.

“ನಾವು ದೇಶದ ಬಗ್ಗೆ ಚಿಂತನೆ ಮಾಡಬೇಕಿದೆ. ಸಾವಿರಾರು ಕಾರ್ಮಿಕರು ಉದ್ಯೋಗ ಕಳೆದುಕೊಂಡಿದ್ದಾರೆ. ಕಾರ್ಖಾನೆಗಳು ಮುಚ್ಚಿವೆ. ಇದರ ಬಗ್ಗೆ ಮಾಧ್ಯಮಗಳು ಮಾತನಾಡುತ್ತಿಲ್ಲ. ಲಕ್ಷಾಂತರ ಕೋಟಿ ರೂ. ಸಾಲವನ್ನು ಸರ್ಕಾರ ಮಾಡಿದೆ. ಕೆಲವು ರಾಜಕಾರಣಿಗಳು ನನ್ನ ಮೈಯಲ್ಲಿ ಹಿಂದೂ ರಕ್ತ ಹರಿಯುತ್ತಿದೆ ಎನ್ನುತ್ತಾರೆ. ಮಣಿಪಾಲ್‌ ಆಸ್ಪತ್ರೆಗೆ ಹೋಗಿ ಅರ್ಜೆಂಟಾಗಿ ಎರಡು ಬಾಟಲ್‌ ಹಿಂದೂ ರಕ್ತ ಬೇಕು ಎಂದರೆ ಕೊಡುತ್ತಾರಾ?” ಎಂದು ಪ್ರಶ್ನಿಸಿದರು.

ಆದಿಚುಂಚನಗಿರಿ ಶಾಖಾ ಮಠದ ಸೌಮ್ಯಾನಂದ ಸ್ವಾಮೀಜಿ, ಇಸ್ಲಾಂ ಧಾರ್ಮಿಕ ವಿದ್ವಾಂಸರಾದ  ಮುಫ್ತಿ ಮಹಮ್ಮದ್‌ ಅಲಿ ಮಿಸ್ಬಾಹಿ ಜಮಾಲಿ ನೂರಿ, ಆರ್ಚ್‌ ಡಯಾಸಿಸ್‌ ಕಮ್ಯುನಿಕೇಷನ್‌ ಸೆಂಟರ್‌ ನಿರ್ದೇಶಕರಾದ ಫಾ. ಸಿರಿಲ್ ವಿಕ್ಟರ್‌ ಸರ್ವಧರ್ಮ ಸಮನ್ವಯತೆ ಸಾರುವ ಭಾಷಣ ಮಾಡಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿರಿ: ಕೋಮುದ್ವೇಷದ ವಿರುದ್ಧ ಪಾದಯಾತ್ರೆ ಮಾಡುವೆ: ಎಚ್‌.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...