Homeಕರ್ನಾಟಕನಾನು ಹಿಂದೂ ಅಲ್ಲ, ಲಿಂಗಾಯತ; ನಮ್ಮ ದೇಶದಲ್ಲಿ 12,000 ವಿಭಿನ್ನ ಸಂಸ್ಕೃತಿಗಳಿವೆ: ಕುಂವೀ

ನಾನು ಹಿಂದೂ ಅಲ್ಲ, ಲಿಂಗಾಯತ; ನಮ್ಮ ದೇಶದಲ್ಲಿ 12,000 ವಿಭಿನ್ನ ಸಂಸ್ಕೃತಿಗಳಿವೆ: ಕುಂವೀ

- Advertisement -
- Advertisement -

“ನಾನು ಹಿಂದೂ ಅಲ್ಲವೆಂದು ವಿದ್ಯುಕ್ತವಾಗಿ ಘೋಷಿಸುತ್ತಿದ್ದೇನೆ. ನಾನು ಲಿಂಗಾಯತ ಸಮುದಾಯದಿಂದ ಬಂದವನು” ಎಂದು ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ ಹೇಳಿದರು.

ಲೋಕನಾಯಕ ಜೆ.ಪಿ.ವಿಚಾರ ವೇದಿಕೆ ವತಿಯಿಂದ ಬೆಂಗಳೂರಿನ ಗಾಂಧಿಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ, “ಸರ್ವ ಜನಾಂಗದ ಶಾಂತಿಯ ತೋಟ: ಒಂದು ಭಾವೈಕ್ಯತೆಯ ಚರ್ಚೆ” ಕಾರ್ಯಕ್ರಮವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.

“1824ರಲ್ಲಿ ಬಂದ ಶಬ್ದ ಹಿಂದೂ. ಈ ದೇಶದಲ್ಲಿ 12,000 ಜಾತಿಗಳಿವೆ. 12,000 ಸಂಸ್ಕೃತಿಗಳಿವೆ. ಅಷ್ಟು ವೈವಿಧ್ಯಮಯ ದೇಶ ಯಾವುದಾದರೂ ಇದ್ದರೆ ಅದು ನನ್ನ ದೇಶ. ಹೀಗಾಗಿ ನಾವೆಲ್ಲ ಹಿಂದೂ ಎಂದು ಹೇಳುವುದು ಸರಿಯಲ್ಲ” ಎಂದು ಸ್ಪಷ್ಟಪಡಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ನಿಜಲಿಂಗಸ್ವಾಮಿ ಎಂಬ ಹುಡುಗ 2ನೇ ವಯಸ್ಸಿನಲ್ಲಿ ಜಾತ್ರೆಯಲ್ಲಿ ತಪ್ಪಿಸಿಕೊಂಡಿದ್ದ. ಸುಮಾರು 22 ವರ್ಷಗಳ ನಂತರ ಆ ಹುಡುಗ ಪತ್ತೆಯಾದ. ಉಸ್ಮಾನ್ ಎಂಬವರ ಮುಸ್ಲಿಂ ಕುಟುಂಬದಲ್ಲಿ ಆ ಹುಡುಗ ಬೆಳೆದ. ಉಸ್ಮಾನ್ ತಮ್ಮ ಮನೆಯಲ್ಲಿ ಪ್ರತ್ಯೇಕವಾಗಿ ಆ ಹುಡುಗನನ್ನು ಇರಿಸಿದ್ದರು. ಹಿಂದೂ ಅಂತ ತಿಳಿದ ಬಳಿಕ ಹಿಂದೂ ಸಂಪ್ರದಾಯದ ಊಟವನ್ನೇ ನೀಡಿದರು. ಅವನದ್ದೇ ಆದ ನಿಲುವನ್ನು ಬೆಳೆಸಿದರು. ಹೀಗೆ ಇಪ್ಪತ್ತೆರಡು ವರ್ಷಗಳ ಕಾಲ ನೋಡಿಕೊಂಡಿದ್ದಾರೆ. ನಿಜಲಿಂಗ ಎಂದೇ ಆತನ ಹೆಸರಿದೆ. ಯಾವುದೇ ಬದಲಾವಣೆ ಮಾಡಿಲ್ಲ. ಇದು ನಮ್ಮ ಭಾರತ ಎಂದು ತಿಳಿಸಿದರು.

ನಮ್ಮಲ್ಲಿ ಎರಡು ರೀತಿಯ ದೆವ್ವಗಳಿವೆ. ಹಿರಿಯರ ಹಬ್ಬ ಮಾಡಿದಾಗ ಕೆಲವು ದೆವ್ವಗಳು ಸ್ವರ್ಗಕ್ಕೆ ಹೋಗುತ್ತವೆ. ಇನ್ನು ಕೆಲವು ದೆವ್ವಗಳಿವೆ- ಗೋಳ್ವಲ್ಕರ್‌‌, ನಾಥೂರಾಮ್ ಗೋಡ್ಸೆ, ಹೆಗಡೇವಾರ್‌- ಇವು ಆಗಾಗ್ಗೆ ಕೆಲವರ ಮೈಮೇಲೆ ಬರುತ್ತವೆ ಎಂದು ವಿಷಾದಿಸಿದರು.

ಬಹಳ ಸಜ್ಜನರು ಕೆಲವು ಹೇಳಿಕೆಗಳನ್ನು ಕೊಡುತ್ತಾರೆ. ಅವರ ಮೈಮೇಲೆ ದೆವ್ವ ಬಂದಾಗ ಮುಸ್ಲಿಂ ವಿರೋಧಿಯಾಗಿ ಮಾತನಾಡುತ್ತಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರಂತೂ ಒಳ್ಳೆಯ ವ್ಯಕ್ತಿ, ಶಿಕ್ಷಿತ. ಅವರು ಇದ್ದಕ್ಕಿದ್ದಂತೆ ಪಂಚರ್‌ ಹಾಕುವವರ ಬಗ್ಗೆ ಮಾತನಾಡುತ್ತಾರೆ. ಯಾಕೆಂದರೆ ಅವರ ಮೈಮೇಲೆ ಗೋಳ್ವಲ್ಕರ್‌ ಪ್ರೇತ ಬಂದಿರುತ್ತದೆ. ರೇಣುಕಾಚಾರ್ಯ ಅಂತ ಇದ್ದಾರೆ. ಅವರೂ ಬಹಳ ಒಳ್ಳೆಯವರು. ಅವರ ಮೇಲೆ ಪ್ರೇತ ಬಂದಾಗ ಏನೋ ಹೇಳಿಕೆ ನೀಡುತ್ತಾರೆ. ವಿಜಯಪುರದಲ್ಲಿ ಒಬ್ಬ ಸಜ್ಜನರು ಇದ್ದಾರೆ. ಅವರು ಹೆಸರು ಬಸವರಾಜ ಯತ್ನಾಳ್. ಅವರು ಕೂಡ ವಿಚಿತ್ರವಾದ ಹೇಳಿಕೆಗಳನ್ನು ನೀಡುತ್ತಾರೆ ಎಂದು ಟೀಕಿಸಿದರು.

ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ನಾಗಮೋಹನ್ ದಾಸ್ ಮಾತನಾಡಿ, “ಮಾನವನ ದುಃಖ ದುಮ್ಮಾನಗಳನ್ನು ಪರಿಹಾರ ಮಾಡುವುದಕ್ಕೆ ಧರ್ಮಗಳು ಹುಟ್ಟಿದವು. ಹಾಗಾಗಿ ದಮನಕ್ಕೆ ಒಳಗಾಗಿರುವ ಜನರ ದನಿಯೇ ಧರ್ಮ ಎಂದು ನಮ್ಮ ಹಿರಿಯರು ಹೇಳಿದ್ದಾರೆ. ಹಾಗಾಗಿ ನಾವು ಧರ್ಮ ವಿರೋಧಿಗಳಾಗಬೇಕಿಲ್ಲ. ಆದರೆ ನಮ್ಮೆಲ್ಲ ಸುತ್ತ ಈ ರೀತಿಯ ಬೆಳವಣಿಗೆಗಳು ಯಾಕೆ ಆಗುತ್ತಿವೆ? ಧರ್ಮವು ಅಪ್ರಜಾಪ್ರಭುತ್ವಗೊಂಡಾಗ ಅದು ಮೂಲಭೂತವಾದವಾಗುತ್ತದೆ. ಇದು ಮನುಕುಲಕ್ಕೆ ಬಹಳ ಹಾನಿಕಾರಕ” ಎಂದು ಎಚ್ಚರಿಸಿದರು.

ಕಾಶ್ಮೀರದಲ್ಲಿ ಶೇ. 92ರಷ್ಟು ಜನರು ಮುಸ್ಲಿಮರಿದ್ದಾರೆ. ಅಲ್ಲಿನ ಮುಸ್ಲಿಂ ಮಹಿಳೆಯರು ಬುರ್ಕಾ ಹಾಕಲ್ಲ. ಆದರೆ ಇಸ್ಲಾಮಿಕ್ ಮೂಲಭೂತವಾದಿಗಳು, ಬುರ್ಕಾ ಹಾಕಲೇಬೇಕೆಂದು ಧಮ್ಕಿ ಹಾಕುತ್ತಿದ್ದಾರೆ. ಅದು ಮೂಲಭೂತವಾದ. ಮೂರು ನಾಮ ಹಾಕಬೇಕು, ತಿಲಕ ಇಡಬೇಕು, ಗಡ್ಡ ಬಿಡಬೇಕು, ಪಾದಪಾದ ಪೂಜೆ ಮಾಡಬೇಕು ಎಂದು ಹೇರುವುದು ಮೂಲಭೂತವಾದ. ಇದನ್ನು ಎದುರಿಸದಿದ್ದರೆ ಶಾಂತಿ ನೆಮ್ಮದಿ ಇರುವುದಿಲ್ಲ. ಹೀಗಾಗಿ ನಾವು ಧರ್ಮ ವಿರೋಧಿಗಳಾಗಬೇಕಿಲ್ಲ. ಧರ್ಮವನ್ನು ಅಪ್ರಜಾಪ್ರಭುತ್ವಗೊಳಿಸುವ ಪ್ರಕ್ರಿಯೆಯನ್ನು ವಿರೋಧ ಮಾಡಬೇಕಿದೆ” ಎಂದು ಅಭಿಪ್ರಾಯಪಟ್ಟರು.

ಪತ್ರಕರ್ತ ಬಿ.ಎಂ. ಹನೀಫ್ ಮಾತನಾಡಿ, ‘ಮಾಧ್ಯಮಗಳು ಟಿಆರ್‌ಪಿ ಹಿಂದೆ ಹೋಗುತ್ತಿವೆ. ಹಿಜಾಬ್‌ ಧರಿಸದೆ ಹೋದ ನೂರಾರು ವಿದ್ಯಾರ್ಥಿಗಳಿದ್ದರು. ಅವರನ್ನು ಮಾಧ್ಯಮಗಳು ತೋರಿಸಲಿಲ್ಲ. ತರಗತಿಯಲ್ಲಿ ಹಿಜಾಬ್ ಧರಿಸಿ ಪಾಠ ಕೇಳಿದರೆ ಶಿಕ್ಷಣ ವ್ಯವಸ್ಥೆ ಕುಸಿದು ಹೋಗುತ್ತಿರಲಿಲ್ಲ. ಅದೇ ರೀತಿ ತಲೆ ಮೇಲೆ ಹಿಜಾಬ್‌ ಇಲ್ಲದೆ ಪಾಠ ಕೇಳಿದರೆ ಇಸ್ಲಾಂ ಧರ್ಮ ಕೆಟ್ಟು ಹೋಗುವುದಿಲ್ಲ. ಸಾವಿರಾರು ವರ್ಷಗಳ ಇತಿಹಾಸವಿರುವ ಧರ್ಮವಿದೆ” ಎಂದು ವಿವರಿಸಿದರು.

“ನಾವು ದೇಶದ ಬಗ್ಗೆ ಚಿಂತನೆ ಮಾಡಬೇಕಿದೆ. ಸಾವಿರಾರು ಕಾರ್ಮಿಕರು ಉದ್ಯೋಗ ಕಳೆದುಕೊಂಡಿದ್ದಾರೆ. ಕಾರ್ಖಾನೆಗಳು ಮುಚ್ಚಿವೆ. ಇದರ ಬಗ್ಗೆ ಮಾಧ್ಯಮಗಳು ಮಾತನಾಡುತ್ತಿಲ್ಲ. ಲಕ್ಷಾಂತರ ಕೋಟಿ ರೂ. ಸಾಲವನ್ನು ಸರ್ಕಾರ ಮಾಡಿದೆ. ಕೆಲವು ರಾಜಕಾರಣಿಗಳು ನನ್ನ ಮೈಯಲ್ಲಿ ಹಿಂದೂ ರಕ್ತ ಹರಿಯುತ್ತಿದೆ ಎನ್ನುತ್ತಾರೆ. ಮಣಿಪಾಲ್‌ ಆಸ್ಪತ್ರೆಗೆ ಹೋಗಿ ಅರ್ಜೆಂಟಾಗಿ ಎರಡು ಬಾಟಲ್‌ ಹಿಂದೂ ರಕ್ತ ಬೇಕು ಎಂದರೆ ಕೊಡುತ್ತಾರಾ?” ಎಂದು ಪ್ರಶ್ನಿಸಿದರು.

ಆದಿಚುಂಚನಗಿರಿ ಶಾಖಾ ಮಠದ ಸೌಮ್ಯಾನಂದ ಸ್ವಾಮೀಜಿ, ಇಸ್ಲಾಂ ಧಾರ್ಮಿಕ ವಿದ್ವಾಂಸರಾದ  ಮುಫ್ತಿ ಮಹಮ್ಮದ್‌ ಅಲಿ ಮಿಸ್ಬಾಹಿ ಜಮಾಲಿ ನೂರಿ, ಆರ್ಚ್‌ ಡಯಾಸಿಸ್‌ ಕಮ್ಯುನಿಕೇಷನ್‌ ಸೆಂಟರ್‌ ನಿರ್ದೇಶಕರಾದ ಫಾ. ಸಿರಿಲ್ ವಿಕ್ಟರ್‌ ಸರ್ವಧರ್ಮ ಸಮನ್ವಯತೆ ಸಾರುವ ಭಾಷಣ ಮಾಡಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿರಿ: ಕೋಮುದ್ವೇಷದ ವಿರುದ್ಧ ಪಾದಯಾತ್ರೆ ಮಾಡುವೆ: ಎಚ್‌.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...