Homeಕರ್ನಾಟಕನಾನು ಹಿಂದೂ ಅಲ್ಲ, ಲಿಂಗಾಯತ; ನಮ್ಮ ದೇಶದಲ್ಲಿ 12,000 ವಿಭಿನ್ನ ಸಂಸ್ಕೃತಿಗಳಿವೆ: ಕುಂವೀ

ನಾನು ಹಿಂದೂ ಅಲ್ಲ, ಲಿಂಗಾಯತ; ನಮ್ಮ ದೇಶದಲ್ಲಿ 12,000 ವಿಭಿನ್ನ ಸಂಸ್ಕೃತಿಗಳಿವೆ: ಕುಂವೀ

- Advertisement -
- Advertisement -

“ನಾನು ಹಿಂದೂ ಅಲ್ಲವೆಂದು ವಿದ್ಯುಕ್ತವಾಗಿ ಘೋಷಿಸುತ್ತಿದ್ದೇನೆ. ನಾನು ಲಿಂಗಾಯತ ಸಮುದಾಯದಿಂದ ಬಂದವನು” ಎಂದು ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ ಹೇಳಿದರು.

ಲೋಕನಾಯಕ ಜೆ.ಪಿ.ವಿಚಾರ ವೇದಿಕೆ ವತಿಯಿಂದ ಬೆಂಗಳೂರಿನ ಗಾಂಧಿಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ, “ಸರ್ವ ಜನಾಂಗದ ಶಾಂತಿಯ ತೋಟ: ಒಂದು ಭಾವೈಕ್ಯತೆಯ ಚರ್ಚೆ” ಕಾರ್ಯಕ್ರಮವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.

“1824ರಲ್ಲಿ ಬಂದ ಶಬ್ದ ಹಿಂದೂ. ಈ ದೇಶದಲ್ಲಿ 12,000 ಜಾತಿಗಳಿವೆ. 12,000 ಸಂಸ್ಕೃತಿಗಳಿವೆ. ಅಷ್ಟು ವೈವಿಧ್ಯಮಯ ದೇಶ ಯಾವುದಾದರೂ ಇದ್ದರೆ ಅದು ನನ್ನ ದೇಶ. ಹೀಗಾಗಿ ನಾವೆಲ್ಲ ಹಿಂದೂ ಎಂದು ಹೇಳುವುದು ಸರಿಯಲ್ಲ” ಎಂದು ಸ್ಪಷ್ಟಪಡಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ನಿಜಲಿಂಗಸ್ವಾಮಿ ಎಂಬ ಹುಡುಗ 2ನೇ ವಯಸ್ಸಿನಲ್ಲಿ ಜಾತ್ರೆಯಲ್ಲಿ ತಪ್ಪಿಸಿಕೊಂಡಿದ್ದ. ಸುಮಾರು 22 ವರ್ಷಗಳ ನಂತರ ಆ ಹುಡುಗ ಪತ್ತೆಯಾದ. ಉಸ್ಮಾನ್ ಎಂಬವರ ಮುಸ್ಲಿಂ ಕುಟುಂಬದಲ್ಲಿ ಆ ಹುಡುಗ ಬೆಳೆದ. ಉಸ್ಮಾನ್ ತಮ್ಮ ಮನೆಯಲ್ಲಿ ಪ್ರತ್ಯೇಕವಾಗಿ ಆ ಹುಡುಗನನ್ನು ಇರಿಸಿದ್ದರು. ಹಿಂದೂ ಅಂತ ತಿಳಿದ ಬಳಿಕ ಹಿಂದೂ ಸಂಪ್ರದಾಯದ ಊಟವನ್ನೇ ನೀಡಿದರು. ಅವನದ್ದೇ ಆದ ನಿಲುವನ್ನು ಬೆಳೆಸಿದರು. ಹೀಗೆ ಇಪ್ಪತ್ತೆರಡು ವರ್ಷಗಳ ಕಾಲ ನೋಡಿಕೊಂಡಿದ್ದಾರೆ. ನಿಜಲಿಂಗ ಎಂದೇ ಆತನ ಹೆಸರಿದೆ. ಯಾವುದೇ ಬದಲಾವಣೆ ಮಾಡಿಲ್ಲ. ಇದು ನಮ್ಮ ಭಾರತ ಎಂದು ತಿಳಿಸಿದರು.

ನಮ್ಮಲ್ಲಿ ಎರಡು ರೀತಿಯ ದೆವ್ವಗಳಿವೆ. ಹಿರಿಯರ ಹಬ್ಬ ಮಾಡಿದಾಗ ಕೆಲವು ದೆವ್ವಗಳು ಸ್ವರ್ಗಕ್ಕೆ ಹೋಗುತ್ತವೆ. ಇನ್ನು ಕೆಲವು ದೆವ್ವಗಳಿವೆ- ಗೋಳ್ವಲ್ಕರ್‌‌, ನಾಥೂರಾಮ್ ಗೋಡ್ಸೆ, ಹೆಗಡೇವಾರ್‌- ಇವು ಆಗಾಗ್ಗೆ ಕೆಲವರ ಮೈಮೇಲೆ ಬರುತ್ತವೆ ಎಂದು ವಿಷಾದಿಸಿದರು.

ಬಹಳ ಸಜ್ಜನರು ಕೆಲವು ಹೇಳಿಕೆಗಳನ್ನು ಕೊಡುತ್ತಾರೆ. ಅವರ ಮೈಮೇಲೆ ದೆವ್ವ ಬಂದಾಗ ಮುಸ್ಲಿಂ ವಿರೋಧಿಯಾಗಿ ಮಾತನಾಡುತ್ತಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರಂತೂ ಒಳ್ಳೆಯ ವ್ಯಕ್ತಿ, ಶಿಕ್ಷಿತ. ಅವರು ಇದ್ದಕ್ಕಿದ್ದಂತೆ ಪಂಚರ್‌ ಹಾಕುವವರ ಬಗ್ಗೆ ಮಾತನಾಡುತ್ತಾರೆ. ಯಾಕೆಂದರೆ ಅವರ ಮೈಮೇಲೆ ಗೋಳ್ವಲ್ಕರ್‌ ಪ್ರೇತ ಬಂದಿರುತ್ತದೆ. ರೇಣುಕಾಚಾರ್ಯ ಅಂತ ಇದ್ದಾರೆ. ಅವರೂ ಬಹಳ ಒಳ್ಳೆಯವರು. ಅವರ ಮೇಲೆ ಪ್ರೇತ ಬಂದಾಗ ಏನೋ ಹೇಳಿಕೆ ನೀಡುತ್ತಾರೆ. ವಿಜಯಪುರದಲ್ಲಿ ಒಬ್ಬ ಸಜ್ಜನರು ಇದ್ದಾರೆ. ಅವರು ಹೆಸರು ಬಸವರಾಜ ಯತ್ನಾಳ್. ಅವರು ಕೂಡ ವಿಚಿತ್ರವಾದ ಹೇಳಿಕೆಗಳನ್ನು ನೀಡುತ್ತಾರೆ ಎಂದು ಟೀಕಿಸಿದರು.

ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ನಾಗಮೋಹನ್ ದಾಸ್ ಮಾತನಾಡಿ, “ಮಾನವನ ದುಃಖ ದುಮ್ಮಾನಗಳನ್ನು ಪರಿಹಾರ ಮಾಡುವುದಕ್ಕೆ ಧರ್ಮಗಳು ಹುಟ್ಟಿದವು. ಹಾಗಾಗಿ ದಮನಕ್ಕೆ ಒಳಗಾಗಿರುವ ಜನರ ದನಿಯೇ ಧರ್ಮ ಎಂದು ನಮ್ಮ ಹಿರಿಯರು ಹೇಳಿದ್ದಾರೆ. ಹಾಗಾಗಿ ನಾವು ಧರ್ಮ ವಿರೋಧಿಗಳಾಗಬೇಕಿಲ್ಲ. ಆದರೆ ನಮ್ಮೆಲ್ಲ ಸುತ್ತ ಈ ರೀತಿಯ ಬೆಳವಣಿಗೆಗಳು ಯಾಕೆ ಆಗುತ್ತಿವೆ? ಧರ್ಮವು ಅಪ್ರಜಾಪ್ರಭುತ್ವಗೊಂಡಾಗ ಅದು ಮೂಲಭೂತವಾದವಾಗುತ್ತದೆ. ಇದು ಮನುಕುಲಕ್ಕೆ ಬಹಳ ಹಾನಿಕಾರಕ” ಎಂದು ಎಚ್ಚರಿಸಿದರು.

ಕಾಶ್ಮೀರದಲ್ಲಿ ಶೇ. 92ರಷ್ಟು ಜನರು ಮುಸ್ಲಿಮರಿದ್ದಾರೆ. ಅಲ್ಲಿನ ಮುಸ್ಲಿಂ ಮಹಿಳೆಯರು ಬುರ್ಕಾ ಹಾಕಲ್ಲ. ಆದರೆ ಇಸ್ಲಾಮಿಕ್ ಮೂಲಭೂತವಾದಿಗಳು, ಬುರ್ಕಾ ಹಾಕಲೇಬೇಕೆಂದು ಧಮ್ಕಿ ಹಾಕುತ್ತಿದ್ದಾರೆ. ಅದು ಮೂಲಭೂತವಾದ. ಮೂರು ನಾಮ ಹಾಕಬೇಕು, ತಿಲಕ ಇಡಬೇಕು, ಗಡ್ಡ ಬಿಡಬೇಕು, ಪಾದಪಾದ ಪೂಜೆ ಮಾಡಬೇಕು ಎಂದು ಹೇರುವುದು ಮೂಲಭೂತವಾದ. ಇದನ್ನು ಎದುರಿಸದಿದ್ದರೆ ಶಾಂತಿ ನೆಮ್ಮದಿ ಇರುವುದಿಲ್ಲ. ಹೀಗಾಗಿ ನಾವು ಧರ್ಮ ವಿರೋಧಿಗಳಾಗಬೇಕಿಲ್ಲ. ಧರ್ಮವನ್ನು ಅಪ್ರಜಾಪ್ರಭುತ್ವಗೊಳಿಸುವ ಪ್ರಕ್ರಿಯೆಯನ್ನು ವಿರೋಧ ಮಾಡಬೇಕಿದೆ” ಎಂದು ಅಭಿಪ್ರಾಯಪಟ್ಟರು.

ಪತ್ರಕರ್ತ ಬಿ.ಎಂ. ಹನೀಫ್ ಮಾತನಾಡಿ, ‘ಮಾಧ್ಯಮಗಳು ಟಿಆರ್‌ಪಿ ಹಿಂದೆ ಹೋಗುತ್ತಿವೆ. ಹಿಜಾಬ್‌ ಧರಿಸದೆ ಹೋದ ನೂರಾರು ವಿದ್ಯಾರ್ಥಿಗಳಿದ್ದರು. ಅವರನ್ನು ಮಾಧ್ಯಮಗಳು ತೋರಿಸಲಿಲ್ಲ. ತರಗತಿಯಲ್ಲಿ ಹಿಜಾಬ್ ಧರಿಸಿ ಪಾಠ ಕೇಳಿದರೆ ಶಿಕ್ಷಣ ವ್ಯವಸ್ಥೆ ಕುಸಿದು ಹೋಗುತ್ತಿರಲಿಲ್ಲ. ಅದೇ ರೀತಿ ತಲೆ ಮೇಲೆ ಹಿಜಾಬ್‌ ಇಲ್ಲದೆ ಪಾಠ ಕೇಳಿದರೆ ಇಸ್ಲಾಂ ಧರ್ಮ ಕೆಟ್ಟು ಹೋಗುವುದಿಲ್ಲ. ಸಾವಿರಾರು ವರ್ಷಗಳ ಇತಿಹಾಸವಿರುವ ಧರ್ಮವಿದೆ” ಎಂದು ವಿವರಿಸಿದರು.

“ನಾವು ದೇಶದ ಬಗ್ಗೆ ಚಿಂತನೆ ಮಾಡಬೇಕಿದೆ. ಸಾವಿರಾರು ಕಾರ್ಮಿಕರು ಉದ್ಯೋಗ ಕಳೆದುಕೊಂಡಿದ್ದಾರೆ. ಕಾರ್ಖಾನೆಗಳು ಮುಚ್ಚಿವೆ. ಇದರ ಬಗ್ಗೆ ಮಾಧ್ಯಮಗಳು ಮಾತನಾಡುತ್ತಿಲ್ಲ. ಲಕ್ಷಾಂತರ ಕೋಟಿ ರೂ. ಸಾಲವನ್ನು ಸರ್ಕಾರ ಮಾಡಿದೆ. ಕೆಲವು ರಾಜಕಾರಣಿಗಳು ನನ್ನ ಮೈಯಲ್ಲಿ ಹಿಂದೂ ರಕ್ತ ಹರಿಯುತ್ತಿದೆ ಎನ್ನುತ್ತಾರೆ. ಮಣಿಪಾಲ್‌ ಆಸ್ಪತ್ರೆಗೆ ಹೋಗಿ ಅರ್ಜೆಂಟಾಗಿ ಎರಡು ಬಾಟಲ್‌ ಹಿಂದೂ ರಕ್ತ ಬೇಕು ಎಂದರೆ ಕೊಡುತ್ತಾರಾ?” ಎಂದು ಪ್ರಶ್ನಿಸಿದರು.

ಆದಿಚುಂಚನಗಿರಿ ಶಾಖಾ ಮಠದ ಸೌಮ್ಯಾನಂದ ಸ್ವಾಮೀಜಿ, ಇಸ್ಲಾಂ ಧಾರ್ಮಿಕ ವಿದ್ವಾಂಸರಾದ  ಮುಫ್ತಿ ಮಹಮ್ಮದ್‌ ಅಲಿ ಮಿಸ್ಬಾಹಿ ಜಮಾಲಿ ನೂರಿ, ಆರ್ಚ್‌ ಡಯಾಸಿಸ್‌ ಕಮ್ಯುನಿಕೇಷನ್‌ ಸೆಂಟರ್‌ ನಿರ್ದೇಶಕರಾದ ಫಾ. ಸಿರಿಲ್ ವಿಕ್ಟರ್‌ ಸರ್ವಧರ್ಮ ಸಮನ್ವಯತೆ ಸಾರುವ ಭಾಷಣ ಮಾಡಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿರಿ: ಕೋಮುದ್ವೇಷದ ವಿರುದ್ಧ ಪಾದಯಾತ್ರೆ ಮಾಡುವೆ: ಎಚ್‌.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...