Homeಕರ್ನಾಟಕನಾನು ಹಿಂದೂ ಅಲ್ಲ, ಲಿಂಗಾಯತ; ನಮ್ಮ ದೇಶದಲ್ಲಿ 12,000 ವಿಭಿನ್ನ ಸಂಸ್ಕೃತಿಗಳಿವೆ: ಕುಂವೀ

ನಾನು ಹಿಂದೂ ಅಲ್ಲ, ಲಿಂಗಾಯತ; ನಮ್ಮ ದೇಶದಲ್ಲಿ 12,000 ವಿಭಿನ್ನ ಸಂಸ್ಕೃತಿಗಳಿವೆ: ಕುಂವೀ

- Advertisement -
- Advertisement -

“ನಾನು ಹಿಂದೂ ಅಲ್ಲವೆಂದು ವಿದ್ಯುಕ್ತವಾಗಿ ಘೋಷಿಸುತ್ತಿದ್ದೇನೆ. ನಾನು ಲಿಂಗಾಯತ ಸಮುದಾಯದಿಂದ ಬಂದವನು” ಎಂದು ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ ಹೇಳಿದರು.

ಲೋಕನಾಯಕ ಜೆ.ಪಿ.ವಿಚಾರ ವೇದಿಕೆ ವತಿಯಿಂದ ಬೆಂಗಳೂರಿನ ಗಾಂಧಿಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ, “ಸರ್ವ ಜನಾಂಗದ ಶಾಂತಿಯ ತೋಟ: ಒಂದು ಭಾವೈಕ್ಯತೆಯ ಚರ್ಚೆ” ಕಾರ್ಯಕ್ರಮವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.

“1824ರಲ್ಲಿ ಬಂದ ಶಬ್ದ ಹಿಂದೂ. ಈ ದೇಶದಲ್ಲಿ 12,000 ಜಾತಿಗಳಿವೆ. 12,000 ಸಂಸ್ಕೃತಿಗಳಿವೆ. ಅಷ್ಟು ವೈವಿಧ್ಯಮಯ ದೇಶ ಯಾವುದಾದರೂ ಇದ್ದರೆ ಅದು ನನ್ನ ದೇಶ. ಹೀಗಾಗಿ ನಾವೆಲ್ಲ ಹಿಂದೂ ಎಂದು ಹೇಳುವುದು ಸರಿಯಲ್ಲ” ಎಂದು ಸ್ಪಷ್ಟಪಡಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ನಿಜಲಿಂಗಸ್ವಾಮಿ ಎಂಬ ಹುಡುಗ 2ನೇ ವಯಸ್ಸಿನಲ್ಲಿ ಜಾತ್ರೆಯಲ್ಲಿ ತಪ್ಪಿಸಿಕೊಂಡಿದ್ದ. ಸುಮಾರು 22 ವರ್ಷಗಳ ನಂತರ ಆ ಹುಡುಗ ಪತ್ತೆಯಾದ. ಉಸ್ಮಾನ್ ಎಂಬವರ ಮುಸ್ಲಿಂ ಕುಟುಂಬದಲ್ಲಿ ಆ ಹುಡುಗ ಬೆಳೆದ. ಉಸ್ಮಾನ್ ತಮ್ಮ ಮನೆಯಲ್ಲಿ ಪ್ರತ್ಯೇಕವಾಗಿ ಆ ಹುಡುಗನನ್ನು ಇರಿಸಿದ್ದರು. ಹಿಂದೂ ಅಂತ ತಿಳಿದ ಬಳಿಕ ಹಿಂದೂ ಸಂಪ್ರದಾಯದ ಊಟವನ್ನೇ ನೀಡಿದರು. ಅವನದ್ದೇ ಆದ ನಿಲುವನ್ನು ಬೆಳೆಸಿದರು. ಹೀಗೆ ಇಪ್ಪತ್ತೆರಡು ವರ್ಷಗಳ ಕಾಲ ನೋಡಿಕೊಂಡಿದ್ದಾರೆ. ನಿಜಲಿಂಗ ಎಂದೇ ಆತನ ಹೆಸರಿದೆ. ಯಾವುದೇ ಬದಲಾವಣೆ ಮಾಡಿಲ್ಲ. ಇದು ನಮ್ಮ ಭಾರತ ಎಂದು ತಿಳಿಸಿದರು.

ನಮ್ಮಲ್ಲಿ ಎರಡು ರೀತಿಯ ದೆವ್ವಗಳಿವೆ. ಹಿರಿಯರ ಹಬ್ಬ ಮಾಡಿದಾಗ ಕೆಲವು ದೆವ್ವಗಳು ಸ್ವರ್ಗಕ್ಕೆ ಹೋಗುತ್ತವೆ. ಇನ್ನು ಕೆಲವು ದೆವ್ವಗಳಿವೆ- ಗೋಳ್ವಲ್ಕರ್‌‌, ನಾಥೂರಾಮ್ ಗೋಡ್ಸೆ, ಹೆಗಡೇವಾರ್‌- ಇವು ಆಗಾಗ್ಗೆ ಕೆಲವರ ಮೈಮೇಲೆ ಬರುತ್ತವೆ ಎಂದು ವಿಷಾದಿಸಿದರು.

ಬಹಳ ಸಜ್ಜನರು ಕೆಲವು ಹೇಳಿಕೆಗಳನ್ನು ಕೊಡುತ್ತಾರೆ. ಅವರ ಮೈಮೇಲೆ ದೆವ್ವ ಬಂದಾಗ ಮುಸ್ಲಿಂ ವಿರೋಧಿಯಾಗಿ ಮಾತನಾಡುತ್ತಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರಂತೂ ಒಳ್ಳೆಯ ವ್ಯಕ್ತಿ, ಶಿಕ್ಷಿತ. ಅವರು ಇದ್ದಕ್ಕಿದ್ದಂತೆ ಪಂಚರ್‌ ಹಾಕುವವರ ಬಗ್ಗೆ ಮಾತನಾಡುತ್ತಾರೆ. ಯಾಕೆಂದರೆ ಅವರ ಮೈಮೇಲೆ ಗೋಳ್ವಲ್ಕರ್‌ ಪ್ರೇತ ಬಂದಿರುತ್ತದೆ. ರೇಣುಕಾಚಾರ್ಯ ಅಂತ ಇದ್ದಾರೆ. ಅವರೂ ಬಹಳ ಒಳ್ಳೆಯವರು. ಅವರ ಮೇಲೆ ಪ್ರೇತ ಬಂದಾಗ ಏನೋ ಹೇಳಿಕೆ ನೀಡುತ್ತಾರೆ. ವಿಜಯಪುರದಲ್ಲಿ ಒಬ್ಬ ಸಜ್ಜನರು ಇದ್ದಾರೆ. ಅವರು ಹೆಸರು ಬಸವರಾಜ ಯತ್ನಾಳ್. ಅವರು ಕೂಡ ವಿಚಿತ್ರವಾದ ಹೇಳಿಕೆಗಳನ್ನು ನೀಡುತ್ತಾರೆ ಎಂದು ಟೀಕಿಸಿದರು.

ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ನಾಗಮೋಹನ್ ದಾಸ್ ಮಾತನಾಡಿ, “ಮಾನವನ ದುಃಖ ದುಮ್ಮಾನಗಳನ್ನು ಪರಿಹಾರ ಮಾಡುವುದಕ್ಕೆ ಧರ್ಮಗಳು ಹುಟ್ಟಿದವು. ಹಾಗಾಗಿ ದಮನಕ್ಕೆ ಒಳಗಾಗಿರುವ ಜನರ ದನಿಯೇ ಧರ್ಮ ಎಂದು ನಮ್ಮ ಹಿರಿಯರು ಹೇಳಿದ್ದಾರೆ. ಹಾಗಾಗಿ ನಾವು ಧರ್ಮ ವಿರೋಧಿಗಳಾಗಬೇಕಿಲ್ಲ. ಆದರೆ ನಮ್ಮೆಲ್ಲ ಸುತ್ತ ಈ ರೀತಿಯ ಬೆಳವಣಿಗೆಗಳು ಯಾಕೆ ಆಗುತ್ತಿವೆ? ಧರ್ಮವು ಅಪ್ರಜಾಪ್ರಭುತ್ವಗೊಂಡಾಗ ಅದು ಮೂಲಭೂತವಾದವಾಗುತ್ತದೆ. ಇದು ಮನುಕುಲಕ್ಕೆ ಬಹಳ ಹಾನಿಕಾರಕ” ಎಂದು ಎಚ್ಚರಿಸಿದರು.

ಕಾಶ್ಮೀರದಲ್ಲಿ ಶೇ. 92ರಷ್ಟು ಜನರು ಮುಸ್ಲಿಮರಿದ್ದಾರೆ. ಅಲ್ಲಿನ ಮುಸ್ಲಿಂ ಮಹಿಳೆಯರು ಬುರ್ಕಾ ಹಾಕಲ್ಲ. ಆದರೆ ಇಸ್ಲಾಮಿಕ್ ಮೂಲಭೂತವಾದಿಗಳು, ಬುರ್ಕಾ ಹಾಕಲೇಬೇಕೆಂದು ಧಮ್ಕಿ ಹಾಕುತ್ತಿದ್ದಾರೆ. ಅದು ಮೂಲಭೂತವಾದ. ಮೂರು ನಾಮ ಹಾಕಬೇಕು, ತಿಲಕ ಇಡಬೇಕು, ಗಡ್ಡ ಬಿಡಬೇಕು, ಪಾದಪಾದ ಪೂಜೆ ಮಾಡಬೇಕು ಎಂದು ಹೇರುವುದು ಮೂಲಭೂತವಾದ. ಇದನ್ನು ಎದುರಿಸದಿದ್ದರೆ ಶಾಂತಿ ನೆಮ್ಮದಿ ಇರುವುದಿಲ್ಲ. ಹೀಗಾಗಿ ನಾವು ಧರ್ಮ ವಿರೋಧಿಗಳಾಗಬೇಕಿಲ್ಲ. ಧರ್ಮವನ್ನು ಅಪ್ರಜಾಪ್ರಭುತ್ವಗೊಳಿಸುವ ಪ್ರಕ್ರಿಯೆಯನ್ನು ವಿರೋಧ ಮಾಡಬೇಕಿದೆ” ಎಂದು ಅಭಿಪ್ರಾಯಪಟ್ಟರು.

ಪತ್ರಕರ್ತ ಬಿ.ಎಂ. ಹನೀಫ್ ಮಾತನಾಡಿ, ‘ಮಾಧ್ಯಮಗಳು ಟಿಆರ್‌ಪಿ ಹಿಂದೆ ಹೋಗುತ್ತಿವೆ. ಹಿಜಾಬ್‌ ಧರಿಸದೆ ಹೋದ ನೂರಾರು ವಿದ್ಯಾರ್ಥಿಗಳಿದ್ದರು. ಅವರನ್ನು ಮಾಧ್ಯಮಗಳು ತೋರಿಸಲಿಲ್ಲ. ತರಗತಿಯಲ್ಲಿ ಹಿಜಾಬ್ ಧರಿಸಿ ಪಾಠ ಕೇಳಿದರೆ ಶಿಕ್ಷಣ ವ್ಯವಸ್ಥೆ ಕುಸಿದು ಹೋಗುತ್ತಿರಲಿಲ್ಲ. ಅದೇ ರೀತಿ ತಲೆ ಮೇಲೆ ಹಿಜಾಬ್‌ ಇಲ್ಲದೆ ಪಾಠ ಕೇಳಿದರೆ ಇಸ್ಲಾಂ ಧರ್ಮ ಕೆಟ್ಟು ಹೋಗುವುದಿಲ್ಲ. ಸಾವಿರಾರು ವರ್ಷಗಳ ಇತಿಹಾಸವಿರುವ ಧರ್ಮವಿದೆ” ಎಂದು ವಿವರಿಸಿದರು.

“ನಾವು ದೇಶದ ಬಗ್ಗೆ ಚಿಂತನೆ ಮಾಡಬೇಕಿದೆ. ಸಾವಿರಾರು ಕಾರ್ಮಿಕರು ಉದ್ಯೋಗ ಕಳೆದುಕೊಂಡಿದ್ದಾರೆ. ಕಾರ್ಖಾನೆಗಳು ಮುಚ್ಚಿವೆ. ಇದರ ಬಗ್ಗೆ ಮಾಧ್ಯಮಗಳು ಮಾತನಾಡುತ್ತಿಲ್ಲ. ಲಕ್ಷಾಂತರ ಕೋಟಿ ರೂ. ಸಾಲವನ್ನು ಸರ್ಕಾರ ಮಾಡಿದೆ. ಕೆಲವು ರಾಜಕಾರಣಿಗಳು ನನ್ನ ಮೈಯಲ್ಲಿ ಹಿಂದೂ ರಕ್ತ ಹರಿಯುತ್ತಿದೆ ಎನ್ನುತ್ತಾರೆ. ಮಣಿಪಾಲ್‌ ಆಸ್ಪತ್ರೆಗೆ ಹೋಗಿ ಅರ್ಜೆಂಟಾಗಿ ಎರಡು ಬಾಟಲ್‌ ಹಿಂದೂ ರಕ್ತ ಬೇಕು ಎಂದರೆ ಕೊಡುತ್ತಾರಾ?” ಎಂದು ಪ್ರಶ್ನಿಸಿದರು.

ಆದಿಚುಂಚನಗಿರಿ ಶಾಖಾ ಮಠದ ಸೌಮ್ಯಾನಂದ ಸ್ವಾಮೀಜಿ, ಇಸ್ಲಾಂ ಧಾರ್ಮಿಕ ವಿದ್ವಾಂಸರಾದ  ಮುಫ್ತಿ ಮಹಮ್ಮದ್‌ ಅಲಿ ಮಿಸ್ಬಾಹಿ ಜಮಾಲಿ ನೂರಿ, ಆರ್ಚ್‌ ಡಯಾಸಿಸ್‌ ಕಮ್ಯುನಿಕೇಷನ್‌ ಸೆಂಟರ್‌ ನಿರ್ದೇಶಕರಾದ ಫಾ. ಸಿರಿಲ್ ವಿಕ್ಟರ್‌ ಸರ್ವಧರ್ಮ ಸಮನ್ವಯತೆ ಸಾರುವ ಭಾಷಣ ಮಾಡಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿರಿ: ಕೋಮುದ್ವೇಷದ ವಿರುದ್ಧ ಪಾದಯಾತ್ರೆ ಮಾಡುವೆ: ಎಚ್‌.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...