Homeಮುಖಪುಟ‘ನಾನು ಬೂಟ್‌ ನೆಕ್ಕುವ ಮೂಲಕ ಮಂತ್ರಿಯಾಗಿಲ್ಲ’ - ಸಿಎಂ ಬೊಮ್ಮಾಯಿಗೆ ಬಿಜೆಪಿ ಸಂಸದ

‘ನಾನು ಬೂಟ್‌ ನೆಕ್ಕುವ ಮೂಲಕ ಮಂತ್ರಿಯಾಗಿಲ್ಲ’ – ಸಿಎಂ ಬೊಮ್ಮಾಯಿಗೆ ಬಿಜೆಪಿ ಸಂಸದ

- Advertisement -
- Advertisement -

ಬಿಜೆಪಿಯ ನಾಯಕ, ರಾಜ್ಯಸಭಾ ಸಂಸದ ಸುಬ್ರಮಣ್ಯನ್‌ ಸ್ವಾಮಿ ಅವರು ಮುಖ್ಯಮಂತ್ರಿ ಬೊಮ್ಮಾಯಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ನಾನು ಬೂಟ್‌ ನೆಕ್ಕುವ ಮೂಲಕ ಮಂತ್ರಿಯಾಗಿಲ್ಲ” ಎಂದು ಅವರು ಗುರುವಾರ ಬೊಮ್ಮಾಯಿ ವಿರುದ್ಧ ಕಿಡಿಕಾರಿದ್ದಾರೆ.

ಮುಖ್ಯಮಂತ್ರಿ ಬೊಮ್ಮಾಯಿ ಅವರು ಕರ್ನಾಟಕ ವಿಧಾನಸಭೆಯಲ್ಲಿ ನಡೆದ ಚರ್ಚೆಯಲ್ಲಿ ಮಾತನಾಡುತ್ತಾ, ಸ್ವಂತ ಪಕ್ಷ ಮತ್ತು ಅದರ ನಾಯಕತ್ವದ ವಿರುದ್ಧ ಮಾತನಾಡುವುದು ಸುಬ್ರಮಣ್ಯನ್‌ ಸ್ವಾಮಿಯವರ ಸ್ವಾಭಾವ ಎಂದು ಹೇಳಿದ್ದರು.

“ಸುಬ್ರಮಣ್ಯನ್‌ ಸ್ವಾಮಿ ಬಗ್ಗೆ ನಿಮಗೆ ಚೆನ್ನಾಗಿ ತಿಳಿದಿದೆ. ಅವರು ಯಾವ ಪಕ್ಷದಲ್ಲಿದ್ದರೂ ಸ್ವತಂತ್ರ ರಾಜಕಾರಣಿಯಂತೆ ವರ್ತಿಸುತ್ತಾ, ತನ್ನ ಮನಸ್ಸಿಗೆ ಬಂದದ್ದನ್ನು ಹೇಳುತ್ತಾರೆ. ಅವರ ವಿಶ್ಲೇಷಣೆಯ ಆಧಾರದ ಮೇಲೆ, ಅವರು ವಿಷಯಗಳನ್ನು ಹೇಳುತ್ತಲೇ ಇರುತ್ತಾರೆ” ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಗೆ ಪ್ರತಿಕ್ರಿಯೆ ನೀಡುತ್ತಾ ಹೇಳಿದ್ದರು.

ಇದನ್ನೂ ಓದಿ: ರೈಲು ದರ ವಿವಾದ: ಕೇಂದ್ರದ ಮೂರ್ಖತನವೆಂದ ಬಿಜಿಪಿ ಸಂಸದ ಸುಬ್ರಮಣ್ಯ ಸ್ವಾಮಿ

ಸಿದ್ದರಾಮಯ್ಯ ಅವರು ಪೆಟ್ರೋಲ್ ಬೆಲೆ ಏರಿಕೆಯ ಬಗ್ಗೆ ಸುಬ್ರಮಣ್ಯನ್‌ ಸ್ವಾಮಿ ಸೇರಿದಂತೆ ಬಿಜೆಪಿ ನಾಯಕರು ಸರ್ಕಾರದ ವಿರುದ್ದ ನೀಡಿರುವ ಹೇಳಿಕೆಗಳ ಬಗ್ಗೆ ವಿಧಾನ ಸಭೆಯಲ್ಲಿ ಹಂಚಿಕೊಂಡಿದ್ದರು.

ಈ ಬಗ್ಗೆ ವಾರ್ತಾಭಾರತಿಯ ಇಂಗ್ಲಿಷ್‌ ಪತ್ರಿಕೆ ವರದಿ ಮಾಡಿದ್ದ ಸುದ್ದಿಯನ್ನು ಹಂಚಿಕೊಂಡಿರುವ ಸುಬ್ರಮಣ್ಯನ್‌ ಸ್ವಾಮಿ, “ಕರ್ನಾಟಕದ ಸಿಎಂ ಬಸವರಾಜ ಬೊಮ್ಮಾಯಿ ಅವರು ಸುಬ್ರಮಣಿಯನ್ ಸ್ವಾಮಿ ‘ಸ್ವತಂತ್ರ ರಾಜಕಾರಣಿ’ ಎಂದು ಕರೆದಿದ್ದಾರೆ. 3 ಬಾರಿ ಲೋಕಸಭೆ ಸೇರಿದಂತೆ ಆರು ಅವಧಿಯ ಸಂಸದನಾಗಿದ್ದು ಮತ್ತು ಎರಡು ಬಾರಿ ಮಂತ್ರಿಯಾಗಿದ್ದು, ‘ಬೂಟ್‌ ನೆಕ್ಕುವ ಮೂಲಕ ಅಲ್ಲ’. ಬದಲಾಗಿ ರೋಮಾಂಚಕ ಪ್ರಜಾಪ್ರಭುತ್ವಕ್ಕೆ ಅಗತ್ಯವಾದ ಸತ್ಯವನ್ನು ತಿಳಿಸಿ” ಎಂದು ಹೇಳಿದ್ದಾರೆ.

 

ಸುಬ್ರಮಣ್ಯನ್‌ ಅವರು ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ ಬೊಮ್ಮಾಯಿ, “ಸುಬ್ರಮಣ್ಯನ್‌ ಸ್ವಾಮಿ ಅವರನ್ನು ನಾನು ಸ್ವತಂತ್ರ ಚಿಂತಕ ಎಂದು ಹೇಳಿದ್ದೇನೆ. ನಾನೇನು ಅವರನ್ನು ಟೀಕಿಸಿಲ್ಲ. ನನ್ನ ಹೇಳಿಕೆ ‌ಖಂಡಿಸಿ ಟ್ವೀಟ್ ಮಾಡಿರುವ ಅವರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ’’ ಎಂದು ‌ಮುಖ್ಯಮಂತ್ರಿ ಬೊಮ್ಮಾಯಿ ಶುಕ್ರವಾರ ಹೇಳಿದ್ದಾರೆ.

ಸುಬ್ರಮಣ್ಯನ್‌ ಸ್ವಾಮಿ ಅವರು ಫೆಬ್ರವರಿಯಲ್ಲಿ ರಾಮಾಯಣವನ್ನು ಉಲ್ಲೇಖಿಸುವ ಮೂಲಕ ಭಾರತದಲ್ಲಿ ಪೆಟ್ರೋಲ್ ಬೆಲೆಯ ಹೆಚ್ಚಳದ ಬಗ್ಗೆ ಒಕ್ಕೂಟ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಅವರು, “ಪೆಟ್ರೋಲ್ ಬೆಲೆ ರಾಮನ ಭಾರತದಲ್ಲಿ 92, ಸೀತೆಯ ನೇಪಾಳದಲ್ಲಿ 53 ಮತ್ತು ರಾವಣನ ಲಂಕಾದಲ್ಲಿ 51 ರೂ.ಗಳು” ಎಂದು ಹೇಳಿದ್ದರು.

ಇದನ್ನೂ ಓದಿ: ಅಂಧ ಭಕ್ತರೆ, ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಯಾರು ಕಾರಣ? ಮೋದಿ ವಿರುದ್ಧ ಸಿಡಿದ ಸುಬ್ರಮಣಿಯನ್ ಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...