Homeಮುಖಪುಟ‘ನಾನು ಬೂಟ್‌ ನೆಕ್ಕುವ ಮೂಲಕ ಮಂತ್ರಿಯಾಗಿಲ್ಲ’ - ಸಿಎಂ ಬೊಮ್ಮಾಯಿಗೆ ಬಿಜೆಪಿ ಸಂಸದ

‘ನಾನು ಬೂಟ್‌ ನೆಕ್ಕುವ ಮೂಲಕ ಮಂತ್ರಿಯಾಗಿಲ್ಲ’ – ಸಿಎಂ ಬೊಮ್ಮಾಯಿಗೆ ಬಿಜೆಪಿ ಸಂಸದ

- Advertisement -
- Advertisement -

ಬಿಜೆಪಿಯ ನಾಯಕ, ರಾಜ್ಯಸಭಾ ಸಂಸದ ಸುಬ್ರಮಣ್ಯನ್‌ ಸ್ವಾಮಿ ಅವರು ಮುಖ್ಯಮಂತ್ರಿ ಬೊಮ್ಮಾಯಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ನಾನು ಬೂಟ್‌ ನೆಕ್ಕುವ ಮೂಲಕ ಮಂತ್ರಿಯಾಗಿಲ್ಲ” ಎಂದು ಅವರು ಗುರುವಾರ ಬೊಮ್ಮಾಯಿ ವಿರುದ್ಧ ಕಿಡಿಕಾರಿದ್ದಾರೆ.

ಮುಖ್ಯಮಂತ್ರಿ ಬೊಮ್ಮಾಯಿ ಅವರು ಕರ್ನಾಟಕ ವಿಧಾನಸಭೆಯಲ್ಲಿ ನಡೆದ ಚರ್ಚೆಯಲ್ಲಿ ಮಾತನಾಡುತ್ತಾ, ಸ್ವಂತ ಪಕ್ಷ ಮತ್ತು ಅದರ ನಾಯಕತ್ವದ ವಿರುದ್ಧ ಮಾತನಾಡುವುದು ಸುಬ್ರಮಣ್ಯನ್‌ ಸ್ವಾಮಿಯವರ ಸ್ವಾಭಾವ ಎಂದು ಹೇಳಿದ್ದರು.

“ಸುಬ್ರಮಣ್ಯನ್‌ ಸ್ವಾಮಿ ಬಗ್ಗೆ ನಿಮಗೆ ಚೆನ್ನಾಗಿ ತಿಳಿದಿದೆ. ಅವರು ಯಾವ ಪಕ್ಷದಲ್ಲಿದ್ದರೂ ಸ್ವತಂತ್ರ ರಾಜಕಾರಣಿಯಂತೆ ವರ್ತಿಸುತ್ತಾ, ತನ್ನ ಮನಸ್ಸಿಗೆ ಬಂದದ್ದನ್ನು ಹೇಳುತ್ತಾರೆ. ಅವರ ವಿಶ್ಲೇಷಣೆಯ ಆಧಾರದ ಮೇಲೆ, ಅವರು ವಿಷಯಗಳನ್ನು ಹೇಳುತ್ತಲೇ ಇರುತ್ತಾರೆ” ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಗೆ ಪ್ರತಿಕ್ರಿಯೆ ನೀಡುತ್ತಾ ಹೇಳಿದ್ದರು.

ಇದನ್ನೂ ಓದಿ: ರೈಲು ದರ ವಿವಾದ: ಕೇಂದ್ರದ ಮೂರ್ಖತನವೆಂದ ಬಿಜಿಪಿ ಸಂಸದ ಸುಬ್ರಮಣ್ಯ ಸ್ವಾಮಿ

ಸಿದ್ದರಾಮಯ್ಯ ಅವರು ಪೆಟ್ರೋಲ್ ಬೆಲೆ ಏರಿಕೆಯ ಬಗ್ಗೆ ಸುಬ್ರಮಣ್ಯನ್‌ ಸ್ವಾಮಿ ಸೇರಿದಂತೆ ಬಿಜೆಪಿ ನಾಯಕರು ಸರ್ಕಾರದ ವಿರುದ್ದ ನೀಡಿರುವ ಹೇಳಿಕೆಗಳ ಬಗ್ಗೆ ವಿಧಾನ ಸಭೆಯಲ್ಲಿ ಹಂಚಿಕೊಂಡಿದ್ದರು.

ಈ ಬಗ್ಗೆ ವಾರ್ತಾಭಾರತಿಯ ಇಂಗ್ಲಿಷ್‌ ಪತ್ರಿಕೆ ವರದಿ ಮಾಡಿದ್ದ ಸುದ್ದಿಯನ್ನು ಹಂಚಿಕೊಂಡಿರುವ ಸುಬ್ರಮಣ್ಯನ್‌ ಸ್ವಾಮಿ, “ಕರ್ನಾಟಕದ ಸಿಎಂ ಬಸವರಾಜ ಬೊಮ್ಮಾಯಿ ಅವರು ಸುಬ್ರಮಣಿಯನ್ ಸ್ವಾಮಿ ‘ಸ್ವತಂತ್ರ ರಾಜಕಾರಣಿ’ ಎಂದು ಕರೆದಿದ್ದಾರೆ. 3 ಬಾರಿ ಲೋಕಸಭೆ ಸೇರಿದಂತೆ ಆರು ಅವಧಿಯ ಸಂಸದನಾಗಿದ್ದು ಮತ್ತು ಎರಡು ಬಾರಿ ಮಂತ್ರಿಯಾಗಿದ್ದು, ‘ಬೂಟ್‌ ನೆಕ್ಕುವ ಮೂಲಕ ಅಲ್ಲ’. ಬದಲಾಗಿ ರೋಮಾಂಚಕ ಪ್ರಜಾಪ್ರಭುತ್ವಕ್ಕೆ ಅಗತ್ಯವಾದ ಸತ್ಯವನ್ನು ತಿಳಿಸಿ” ಎಂದು ಹೇಳಿದ್ದಾರೆ.

 

ಸುಬ್ರಮಣ್ಯನ್‌ ಅವರು ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ ಬೊಮ್ಮಾಯಿ, “ಸುಬ್ರಮಣ್ಯನ್‌ ಸ್ವಾಮಿ ಅವರನ್ನು ನಾನು ಸ್ವತಂತ್ರ ಚಿಂತಕ ಎಂದು ಹೇಳಿದ್ದೇನೆ. ನಾನೇನು ಅವರನ್ನು ಟೀಕಿಸಿಲ್ಲ. ನನ್ನ ಹೇಳಿಕೆ ‌ಖಂಡಿಸಿ ಟ್ವೀಟ್ ಮಾಡಿರುವ ಅವರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ’’ ಎಂದು ‌ಮುಖ್ಯಮಂತ್ರಿ ಬೊಮ್ಮಾಯಿ ಶುಕ್ರವಾರ ಹೇಳಿದ್ದಾರೆ.

ಸುಬ್ರಮಣ್ಯನ್‌ ಸ್ವಾಮಿ ಅವರು ಫೆಬ್ರವರಿಯಲ್ಲಿ ರಾಮಾಯಣವನ್ನು ಉಲ್ಲೇಖಿಸುವ ಮೂಲಕ ಭಾರತದಲ್ಲಿ ಪೆಟ್ರೋಲ್ ಬೆಲೆಯ ಹೆಚ್ಚಳದ ಬಗ್ಗೆ ಒಕ್ಕೂಟ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಅವರು, “ಪೆಟ್ರೋಲ್ ಬೆಲೆ ರಾಮನ ಭಾರತದಲ್ಲಿ 92, ಸೀತೆಯ ನೇಪಾಳದಲ್ಲಿ 53 ಮತ್ತು ರಾವಣನ ಲಂಕಾದಲ್ಲಿ 51 ರೂ.ಗಳು” ಎಂದು ಹೇಳಿದ್ದರು.

ಇದನ್ನೂ ಓದಿ: ಅಂಧ ಭಕ್ತರೆ, ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಯಾರು ಕಾರಣ? ಮೋದಿ ವಿರುದ್ಧ ಸಿಡಿದ ಸುಬ್ರಮಣಿಯನ್ ಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...