Homeಮುಖಪುಟನಾನು ಐಐಟಿ, ಸಿಇಟಿಗೆ ಪ್ರೊಫೆಸರ್ ಅಲ್ಲ: ರೋಹಿತ್ ಚಕ್ರತೀರ್ಥ ಸ್ಪಷ್ಟನೆ

ನಾನು ಐಐಟಿ, ಸಿಇಟಿಗೆ ಪ್ರೊಫೆಸರ್ ಅಲ್ಲ: ರೋಹಿತ್ ಚಕ್ರತೀರ್ಥ ಸ್ಪಷ್ಟನೆ

- Advertisement -
- Advertisement -

ನಾನು ಐಐಟಿ, ಸಿಇಟಿಗೆ ಪ್ರೊಫೆಸರ್ ಅಲ್ಲ, ಶಿಕ್ಷಣ ಸಚಿವರು ಮಾತನಾಡುವ ಬರದಲ್ಲಿ ಹೇಳಿರಬಹುದು. ನಾನು ಐಐಟಿ ಮತ್ತು ಸಿಇಟಿ ಪ್ರವೇಶ ಪರೀಕ್ಷೆಗಳಿಗೆ ತಯಾರು ಮಾಡಿದ್ದೇನೆ. ನಾನು ಐಐಟಿ ಹಾಗೂ ಸಿಇಟಿ ಪ್ರೊಫೆಸರ್ ಎಂಬುದನ್ನು ನಿರಾಕರಿಸುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಖಾಸಗಿ ಸುದ್ದಿವಾಹಿನಿ ಟಿವಿ9 ಜೊತೆ ಮಾತನಾಡಿರುವ ಅವರು, “ನಾನು ಕೇವಲ ಅಧ್ಯಕ್ಷ ಸ್ಥಾನದಲ್ಲಿ ಕುಳಿತಿರುತ್ತೇನೆ. ನಮ್ಮ ಕೈ ಕೆಳಗೆ ವಿಷಯ ತಜ್ಞರು ಇರುತ್ತಾರೆ. ಅವರು ನೀಡುವ ಶಿಫಾರಸ್ಸುಗಳನ್ನು ನಾನು ಪರಿಷ್ಕರಣೆ ಮಾಡಿದ್ದೇನೆ. ಕನ್ನಡ ಅಭಿವೃದ್ದಿ ಪ್ರಾಧಿಕಾರದ ಸದಸ್ಯ ಕೂಡ ಆಗಿರುವುದರಿಂದ ನನಗೆ ಆ ಅಧಿಕಾರವಿದೆ. ನಾನು ಐದು ವರ್ಷದದಲ್ಲಿ ನಿರಂತರವಾಗಿ ಪಠ್ಯಪುಸ್ತಕಗಳ ಬಗ್ಗೆ ಮಾತನಾಡುತ್ತೇನೆ. ಈ ಪ್ರಕ್ರಿಯೆ ನೋಡಿ ನನ್ನನ್ನು ಪಠ್ಯ ಪರಿಷ್ಕರಣೆ ಸಮಿತಿಯ ಅಧ್ಯಕ್ಷರಾಗಿ ಮಾಡಿರಬಹುದು” ಎಂದಿದ್ದಾರೆ.

ಪಠ್ಯ ಪರಿಷ್ಕರಣ ಸಮಿತಿಯ ಅಧ್ಯಕ್ಷರಾಗಲು ರೋಹಿತ್ ಚಕ್ರತೀರ್ಥರಿಗಿರುವ ಅರ್ಹತೆಯೇನು ಎಂಬ ಪ್ರಶ್ನೆಗೆ ಶಿಕ್ಷಣ ಸಚಿವ ನಾಗೇಶ್‌ರವರು “ಶಿಕ್ಷಣ ತಜ್ಞ ಎನ್ನುವುದಕ್ಕೆ ಎಲ್ಲಿಯಾದರೂ ಪ್ರಮಾಣ ಪತ್ರ ಇದೆಯಾ? ರೋಹಿತ್ ಚಕ್ರತೀರ್ಥ ಅವರ ಹಿನ್ನೆಲೆಯನ್ನು ಪ್ರಶ್ನೆ ಮಾಡುತ್ತಿರುವವರು ಅವರ ಹಿನ್ನೆಲೆ ಹೇಳಲಿ ನೋಡೋಣ. ಚಕ್ರತೀರ್ಥ ಈ ಹಿಂದೆ ಐಐಟಿ ಮತ್ತು ಸಿಇಟಿ ಪ್ರೊಫೆಸರ್ ಎಂಬುದನ್ನು ಮರೆಯಬಾರದು” ಎಂದು ರೋಹಿತ್‌ ಚಕ್ರತೀರ್ಥ ಅವರ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದರು.

ರೋಹಿತ್ ಚಕ್ರತೀರ್ಥರವರ ಅರ್ಹತೆ ಬಗ್ಗೆ ವಿವಾದ ಎದ್ದಿರುವ ಹಿನ್ನೆಲೆಯಲ್ಲಿ ಅವರು ತಮ್ಮ ವಿದ್ಯಾರ್ಹತೆಯ ಕುರಿತು ಟಿಪ್ಪಣಿಯೊಂದನ್ನು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ, “ಬೇಸ್, ಟೈಮ್ ಮೊದಲಾದ ಸಂಸ್ಥೆಗಳಲ್ಲಿ ಐಐಟಿ, ಜೆಇಇ, ಎನ್‌ಟಿಎಸ್‌ಸಿ, ಸಿಎಟಿ, ಸಿಇಟಿ ಮತ್ತು ಒಲಂಪಿಯಾಡ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಿದ್ದಾರೆ. ವಿದ್ಯವರ್ಧಕ ಕಾಲೇಜು, ಕೆಎಲ್‌ಇ ಮತ್ತು ಜೈನ್ ಕಾಲೇಜುಗಳಲ್ಲಿ ಗಣಿತ ಬೋಧಿಸಿದ್ದಾರೆ” ಎಂದು ಬರೆಯಲಾಗಿದೆ.

ಅದರ ಪೂರ್ಣ ಪಠ್ಯ ಇಲ್ಲಿದೆ.

ರಾಷ್ಟ್ರಗೀತೆ, ರಾಷ್ಟ್ರಕವಿ ಕುವೆಂಪುರವರಿಗೆ ಅವಮಾನ ಮಾಡಿಲ್ಲ

ರಾಷ್ಟ್ರಗೀತೆಗೆ ಅವಮಾನ ಆಗಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, “ಅದು ಹಳೆಯ ವಿವಾದ ಮತ್ತು ಮುಗಿದ ವಿವಾದ. ಅದು ನನ್ನ ಬರಹವಲ್ಲ. ಯಾರೊ ಬರೆದಿದ್ದನ್ನು ಫೇಸ್‌ಬುಕ್‌ಗೆ ಹಾಕಿದ್ದೆ. ನಾನು ಮಾಡಿದ ತಪ್ಪಿಗೆ ಸಮರ್ಥನೆ ಮಾಡಿಕೊಂಡಿಲ್ಲ. ತಪ್ಪಾಗಿರಬಹುದು. ಕುವೆಂಪುರವರಿಗೆ ಅವಮಾನ ಮಾಡುವ ಉದ್ದೇಶ ನನಗಿಲ್ಲ ಎಂದು ರೋಹಿತ್ ಚಕ್ರತೀರ್ಥ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಯಾರೋ ಬರೆದಿದ್ದನ್ನು ಪೇಸ್ಬುಕ್ಕಿಗೆ ಹಾಕಿರುವುದಾಗಿ ತಿಳಿಸಿದ್ದಾರೆ. ಅವರು ಯಾರು ಎಂಬುದು ರೋಹಿತ್ ಚಕ್ರವರ‍್ತಿಗೆ ತಿಳಿದಿರುತ್ತದೆ. ಅದನ್ನು ಬಯಲುಮಾಡಲಿ.

  2. ಅಷ್ಟೊಂದು ಓದುಬರಹ ಬಲ್ಲವರು ಮೊತ್ತಬರು ಹಾಕಿದ ಪೋಸ್ಟ್ ನ್ನು ಓದದೇ ಹಾಕುತ್ತಾರಾ ಅಥವಾ ಅದು ಯಾರೂ ಹಾಕಿದ್ದು ಅಂತ ಗೊತ್ತಿರುತ್ತೆ ಅವರ ವಿವರ ನೀಡಲಿ ಬೇಡ ಅನ್ನುವರಾರು ಚಕ್ರವರ್ತಿಗಳೆ 🙏

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...