Homeಮುಖಪುಟನಾನು ಐಐಟಿ, ಸಿಇಟಿಗೆ ಪ್ರೊಫೆಸರ್ ಅಲ್ಲ: ರೋಹಿತ್ ಚಕ್ರತೀರ್ಥ ಸ್ಪಷ್ಟನೆ

ನಾನು ಐಐಟಿ, ಸಿಇಟಿಗೆ ಪ್ರೊಫೆಸರ್ ಅಲ್ಲ: ರೋಹಿತ್ ಚಕ್ರತೀರ್ಥ ಸ್ಪಷ್ಟನೆ

- Advertisement -
- Advertisement -

ನಾನು ಐಐಟಿ, ಸಿಇಟಿಗೆ ಪ್ರೊಫೆಸರ್ ಅಲ್ಲ, ಶಿಕ್ಷಣ ಸಚಿವರು ಮಾತನಾಡುವ ಬರದಲ್ಲಿ ಹೇಳಿರಬಹುದು. ನಾನು ಐಐಟಿ ಮತ್ತು ಸಿಇಟಿ ಪ್ರವೇಶ ಪರೀಕ್ಷೆಗಳಿಗೆ ತಯಾರು ಮಾಡಿದ್ದೇನೆ. ನಾನು ಐಐಟಿ ಹಾಗೂ ಸಿಇಟಿ ಪ್ರೊಫೆಸರ್ ಎಂಬುದನ್ನು ನಿರಾಕರಿಸುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಖಾಸಗಿ ಸುದ್ದಿವಾಹಿನಿ ಟಿವಿ9 ಜೊತೆ ಮಾತನಾಡಿರುವ ಅವರು, “ನಾನು ಕೇವಲ ಅಧ್ಯಕ್ಷ ಸ್ಥಾನದಲ್ಲಿ ಕುಳಿತಿರುತ್ತೇನೆ. ನಮ್ಮ ಕೈ ಕೆಳಗೆ ವಿಷಯ ತಜ್ಞರು ಇರುತ್ತಾರೆ. ಅವರು ನೀಡುವ ಶಿಫಾರಸ್ಸುಗಳನ್ನು ನಾನು ಪರಿಷ್ಕರಣೆ ಮಾಡಿದ್ದೇನೆ. ಕನ್ನಡ ಅಭಿವೃದ್ದಿ ಪ್ರಾಧಿಕಾರದ ಸದಸ್ಯ ಕೂಡ ಆಗಿರುವುದರಿಂದ ನನಗೆ ಆ ಅಧಿಕಾರವಿದೆ. ನಾನು ಐದು ವರ್ಷದದಲ್ಲಿ ನಿರಂತರವಾಗಿ ಪಠ್ಯಪುಸ್ತಕಗಳ ಬಗ್ಗೆ ಮಾತನಾಡುತ್ತೇನೆ. ಈ ಪ್ರಕ್ರಿಯೆ ನೋಡಿ ನನ್ನನ್ನು ಪಠ್ಯ ಪರಿಷ್ಕರಣೆ ಸಮಿತಿಯ ಅಧ್ಯಕ್ಷರಾಗಿ ಮಾಡಿರಬಹುದು” ಎಂದಿದ್ದಾರೆ.

ಪಠ್ಯ ಪರಿಷ್ಕರಣ ಸಮಿತಿಯ ಅಧ್ಯಕ್ಷರಾಗಲು ರೋಹಿತ್ ಚಕ್ರತೀರ್ಥರಿಗಿರುವ ಅರ್ಹತೆಯೇನು ಎಂಬ ಪ್ರಶ್ನೆಗೆ ಶಿಕ್ಷಣ ಸಚಿವ ನಾಗೇಶ್‌ರವರು “ಶಿಕ್ಷಣ ತಜ್ಞ ಎನ್ನುವುದಕ್ಕೆ ಎಲ್ಲಿಯಾದರೂ ಪ್ರಮಾಣ ಪತ್ರ ಇದೆಯಾ? ರೋಹಿತ್ ಚಕ್ರತೀರ್ಥ ಅವರ ಹಿನ್ನೆಲೆಯನ್ನು ಪ್ರಶ್ನೆ ಮಾಡುತ್ತಿರುವವರು ಅವರ ಹಿನ್ನೆಲೆ ಹೇಳಲಿ ನೋಡೋಣ. ಚಕ್ರತೀರ್ಥ ಈ ಹಿಂದೆ ಐಐಟಿ ಮತ್ತು ಸಿಇಟಿ ಪ್ರೊಫೆಸರ್ ಎಂಬುದನ್ನು ಮರೆಯಬಾರದು” ಎಂದು ರೋಹಿತ್‌ ಚಕ್ರತೀರ್ಥ ಅವರ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದರು.

ರೋಹಿತ್ ಚಕ್ರತೀರ್ಥರವರ ಅರ್ಹತೆ ಬಗ್ಗೆ ವಿವಾದ ಎದ್ದಿರುವ ಹಿನ್ನೆಲೆಯಲ್ಲಿ ಅವರು ತಮ್ಮ ವಿದ್ಯಾರ್ಹತೆಯ ಕುರಿತು ಟಿಪ್ಪಣಿಯೊಂದನ್ನು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ, “ಬೇಸ್, ಟೈಮ್ ಮೊದಲಾದ ಸಂಸ್ಥೆಗಳಲ್ಲಿ ಐಐಟಿ, ಜೆಇಇ, ಎನ್‌ಟಿಎಸ್‌ಸಿ, ಸಿಎಟಿ, ಸಿಇಟಿ ಮತ್ತು ಒಲಂಪಿಯಾಡ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಿದ್ದಾರೆ. ವಿದ್ಯವರ್ಧಕ ಕಾಲೇಜು, ಕೆಎಲ್‌ಇ ಮತ್ತು ಜೈನ್ ಕಾಲೇಜುಗಳಲ್ಲಿ ಗಣಿತ ಬೋಧಿಸಿದ್ದಾರೆ” ಎಂದು ಬರೆಯಲಾಗಿದೆ.

ಅದರ ಪೂರ್ಣ ಪಠ್ಯ ಇಲ್ಲಿದೆ.

ರಾಷ್ಟ್ರಗೀತೆ, ರಾಷ್ಟ್ರಕವಿ ಕುವೆಂಪುರವರಿಗೆ ಅವಮಾನ ಮಾಡಿಲ್ಲ

ರಾಷ್ಟ್ರಗೀತೆಗೆ ಅವಮಾನ ಆಗಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, “ಅದು ಹಳೆಯ ವಿವಾದ ಮತ್ತು ಮುಗಿದ ವಿವಾದ. ಅದು ನನ್ನ ಬರಹವಲ್ಲ. ಯಾರೊ ಬರೆದಿದ್ದನ್ನು ಫೇಸ್‌ಬುಕ್‌ಗೆ ಹಾಕಿದ್ದೆ. ನಾನು ಮಾಡಿದ ತಪ್ಪಿಗೆ ಸಮರ್ಥನೆ ಮಾಡಿಕೊಂಡಿಲ್ಲ. ತಪ್ಪಾಗಿರಬಹುದು. ಕುವೆಂಪುರವರಿಗೆ ಅವಮಾನ ಮಾಡುವ ಉದ್ದೇಶ ನನಗಿಲ್ಲ ಎಂದು ರೋಹಿತ್ ಚಕ್ರತೀರ್ಥ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಯಾರೋ ಬರೆದಿದ್ದನ್ನು ಪೇಸ್ಬುಕ್ಕಿಗೆ ಹಾಕಿರುವುದಾಗಿ ತಿಳಿಸಿದ್ದಾರೆ. ಅವರು ಯಾರು ಎಂಬುದು ರೋಹಿತ್ ಚಕ್ರವರ‍್ತಿಗೆ ತಿಳಿದಿರುತ್ತದೆ. ಅದನ್ನು ಬಯಲುಮಾಡಲಿ.

  2. ಅಷ್ಟೊಂದು ಓದುಬರಹ ಬಲ್ಲವರು ಮೊತ್ತಬರು ಹಾಕಿದ ಪೋಸ್ಟ್ ನ್ನು ಓದದೇ ಹಾಕುತ್ತಾರಾ ಅಥವಾ ಅದು ಯಾರೂ ಹಾಕಿದ್ದು ಅಂತ ಗೊತ್ತಿರುತ್ತೆ ಅವರ ವಿವರ ನೀಡಲಿ ಬೇಡ ಅನ್ನುವರಾರು ಚಕ್ರವರ್ತಿಗಳೆ 🙏

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...