Homeಮುಖಪುಟನಾನು ಐಐಟಿ, ಸಿಇಟಿಗೆ ಪ್ರೊಫೆಸರ್ ಅಲ್ಲ: ರೋಹಿತ್ ಚಕ್ರತೀರ್ಥ ಸ್ಪಷ್ಟನೆ

ನಾನು ಐಐಟಿ, ಸಿಇಟಿಗೆ ಪ್ರೊಫೆಸರ್ ಅಲ್ಲ: ರೋಹಿತ್ ಚಕ್ರತೀರ್ಥ ಸ್ಪಷ್ಟನೆ

- Advertisement -
- Advertisement -

ನಾನು ಐಐಟಿ, ಸಿಇಟಿಗೆ ಪ್ರೊಫೆಸರ್ ಅಲ್ಲ, ಶಿಕ್ಷಣ ಸಚಿವರು ಮಾತನಾಡುವ ಬರದಲ್ಲಿ ಹೇಳಿರಬಹುದು. ನಾನು ಐಐಟಿ ಮತ್ತು ಸಿಇಟಿ ಪ್ರವೇಶ ಪರೀಕ್ಷೆಗಳಿಗೆ ತಯಾರು ಮಾಡಿದ್ದೇನೆ. ನಾನು ಐಐಟಿ ಹಾಗೂ ಸಿಇಟಿ ಪ್ರೊಫೆಸರ್ ಎಂಬುದನ್ನು ನಿರಾಕರಿಸುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಖಾಸಗಿ ಸುದ್ದಿವಾಹಿನಿ ಟಿವಿ9 ಜೊತೆ ಮಾತನಾಡಿರುವ ಅವರು, “ನಾನು ಕೇವಲ ಅಧ್ಯಕ್ಷ ಸ್ಥಾನದಲ್ಲಿ ಕುಳಿತಿರುತ್ತೇನೆ. ನಮ್ಮ ಕೈ ಕೆಳಗೆ ವಿಷಯ ತಜ್ಞರು ಇರುತ್ತಾರೆ. ಅವರು ನೀಡುವ ಶಿಫಾರಸ್ಸುಗಳನ್ನು ನಾನು ಪರಿಷ್ಕರಣೆ ಮಾಡಿದ್ದೇನೆ. ಕನ್ನಡ ಅಭಿವೃದ್ದಿ ಪ್ರಾಧಿಕಾರದ ಸದಸ್ಯ ಕೂಡ ಆಗಿರುವುದರಿಂದ ನನಗೆ ಆ ಅಧಿಕಾರವಿದೆ. ನಾನು ಐದು ವರ್ಷದದಲ್ಲಿ ನಿರಂತರವಾಗಿ ಪಠ್ಯಪುಸ್ತಕಗಳ ಬಗ್ಗೆ ಮಾತನಾಡುತ್ತೇನೆ. ಈ ಪ್ರಕ್ರಿಯೆ ನೋಡಿ ನನ್ನನ್ನು ಪಠ್ಯ ಪರಿಷ್ಕರಣೆ ಸಮಿತಿಯ ಅಧ್ಯಕ್ಷರಾಗಿ ಮಾಡಿರಬಹುದು” ಎಂದಿದ್ದಾರೆ.

ಪಠ್ಯ ಪರಿಷ್ಕರಣ ಸಮಿತಿಯ ಅಧ್ಯಕ್ಷರಾಗಲು ರೋಹಿತ್ ಚಕ್ರತೀರ್ಥರಿಗಿರುವ ಅರ್ಹತೆಯೇನು ಎಂಬ ಪ್ರಶ್ನೆಗೆ ಶಿಕ್ಷಣ ಸಚಿವ ನಾಗೇಶ್‌ರವರು “ಶಿಕ್ಷಣ ತಜ್ಞ ಎನ್ನುವುದಕ್ಕೆ ಎಲ್ಲಿಯಾದರೂ ಪ್ರಮಾಣ ಪತ್ರ ಇದೆಯಾ? ರೋಹಿತ್ ಚಕ್ರತೀರ್ಥ ಅವರ ಹಿನ್ನೆಲೆಯನ್ನು ಪ್ರಶ್ನೆ ಮಾಡುತ್ತಿರುವವರು ಅವರ ಹಿನ್ನೆಲೆ ಹೇಳಲಿ ನೋಡೋಣ. ಚಕ್ರತೀರ್ಥ ಈ ಹಿಂದೆ ಐಐಟಿ ಮತ್ತು ಸಿಇಟಿ ಪ್ರೊಫೆಸರ್ ಎಂಬುದನ್ನು ಮರೆಯಬಾರದು” ಎಂದು ರೋಹಿತ್‌ ಚಕ್ರತೀರ್ಥ ಅವರ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದರು.

ರೋಹಿತ್ ಚಕ್ರತೀರ್ಥರವರ ಅರ್ಹತೆ ಬಗ್ಗೆ ವಿವಾದ ಎದ್ದಿರುವ ಹಿನ್ನೆಲೆಯಲ್ಲಿ ಅವರು ತಮ್ಮ ವಿದ್ಯಾರ್ಹತೆಯ ಕುರಿತು ಟಿಪ್ಪಣಿಯೊಂದನ್ನು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ, “ಬೇಸ್, ಟೈಮ್ ಮೊದಲಾದ ಸಂಸ್ಥೆಗಳಲ್ಲಿ ಐಐಟಿ, ಜೆಇಇ, ಎನ್‌ಟಿಎಸ್‌ಸಿ, ಸಿಎಟಿ, ಸಿಇಟಿ ಮತ್ತು ಒಲಂಪಿಯಾಡ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಿದ್ದಾರೆ. ವಿದ್ಯವರ್ಧಕ ಕಾಲೇಜು, ಕೆಎಲ್‌ಇ ಮತ್ತು ಜೈನ್ ಕಾಲೇಜುಗಳಲ್ಲಿ ಗಣಿತ ಬೋಧಿಸಿದ್ದಾರೆ” ಎಂದು ಬರೆಯಲಾಗಿದೆ.

ಅದರ ಪೂರ್ಣ ಪಠ್ಯ ಇಲ್ಲಿದೆ.

ರಾಷ್ಟ್ರಗೀತೆ, ರಾಷ್ಟ್ರಕವಿ ಕುವೆಂಪುರವರಿಗೆ ಅವಮಾನ ಮಾಡಿಲ್ಲ

ರಾಷ್ಟ್ರಗೀತೆಗೆ ಅವಮಾನ ಆಗಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, “ಅದು ಹಳೆಯ ವಿವಾದ ಮತ್ತು ಮುಗಿದ ವಿವಾದ. ಅದು ನನ್ನ ಬರಹವಲ್ಲ. ಯಾರೊ ಬರೆದಿದ್ದನ್ನು ಫೇಸ್‌ಬುಕ್‌ಗೆ ಹಾಕಿದ್ದೆ. ನಾನು ಮಾಡಿದ ತಪ್ಪಿಗೆ ಸಮರ್ಥನೆ ಮಾಡಿಕೊಂಡಿಲ್ಲ. ತಪ್ಪಾಗಿರಬಹುದು. ಕುವೆಂಪುರವರಿಗೆ ಅವಮಾನ ಮಾಡುವ ಉದ್ದೇಶ ನನಗಿಲ್ಲ ಎಂದು ರೋಹಿತ್ ಚಕ್ರತೀರ್ಥ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಯಾರೋ ಬರೆದಿದ್ದನ್ನು ಪೇಸ್ಬುಕ್ಕಿಗೆ ಹಾಕಿರುವುದಾಗಿ ತಿಳಿಸಿದ್ದಾರೆ. ಅವರು ಯಾರು ಎಂಬುದು ರೋಹಿತ್ ಚಕ್ರವರ‍್ತಿಗೆ ತಿಳಿದಿರುತ್ತದೆ. ಅದನ್ನು ಬಯಲುಮಾಡಲಿ.

  2. ಅಷ್ಟೊಂದು ಓದುಬರಹ ಬಲ್ಲವರು ಮೊತ್ತಬರು ಹಾಕಿದ ಪೋಸ್ಟ್ ನ್ನು ಓದದೇ ಹಾಕುತ್ತಾರಾ ಅಥವಾ ಅದು ಯಾರೂ ಹಾಕಿದ್ದು ಅಂತ ಗೊತ್ತಿರುತ್ತೆ ಅವರ ವಿವರ ನೀಡಲಿ ಬೇಡ ಅನ್ನುವರಾರು ಚಕ್ರವರ್ತಿಗಳೆ 🙏

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....