Homeಕರ್ನಾಟಕನಾನು ಬಂಡೆ ಅಲ್ಲ; ಬಿಜೆಪಿ ಸರ್ಕಾರದ ವಿರುದ್ಧ ಜನ ಬೀಸುವ ಕಲ್ಲು: ಡಿ.ಕೆ.ಶಿವಕುಮಾರ್

ನಾನು ಬಂಡೆ ಅಲ್ಲ; ಬಿಜೆಪಿ ಸರ್ಕಾರದ ವಿರುದ್ಧ ಜನ ಬೀಸುವ ಕಲ್ಲು: ಡಿ.ಕೆ.ಶಿವಕುಮಾರ್

ಕೆಲವರು ಬಂಡೆನ ಡೈನಮೇಟ್ ಇಟ್ಟು ಪುಡಿ ಪುಡಿ ಮಾಡುತ್ತೇವೆ ಅಂತಿದ್ದಾರೆ. ಬಂಡೆ ಪುಡಿಯಾಗಿ ಜಲ್ಲಿಕಲ್ಲಾದರೆ ಮನೆಕಟ್ಟಲು, ದೇವರ ಗುಡಿಯ ಮುಂದೆ ಗರಡುಗಂಭವಾಗಿ ನಿಲ್ಲಲು, ವಿಗ್ರಹವಾಗಿ, ಚಪ್ಪಡಿ ಕಲ್ಲಾಗಿ ಜನರಿಗೆ ಉಪಯೋಗಲು ಸಾಧ್ಯ.

- Advertisement -
- Advertisement -

ರಾಜ್ಯದಲ್ಲಿ ಉಪಚುನಾವಣೆಯ ಗಾಳಿ ದಿನೇ ದಿನೇ ರಭಸವಾಗುತ್ತಿದ್ದು, ಪ್ರತಿ ಪಕ್ಷಗಳೂ ಪರಸ್ಪರ ಟೀಕಾಪ್ರಹಾರ ಮಾಡುತ್ತಿವೆ. ಈ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, “ನಾನು ಜನವಿರೋಧಿ ಬಿಜೆಪಿ ಸರ್ಕಾರದ ವಿರುದ್ಧ ಈ ರಾಜ್ಯದ ಜನತೆ ಬೀಸುವ ಕಲ್ಲು” ಎಂದು ಹರಿಹಾಯ್ದಿದ್ದಾರೆ.

“ನಾನು ಬಂಡೆಯಾಗಲು ಇಚ್ಚಿಸುವುದಿಲ್ಲ. ರಾಜ್ಯದ ಜನ ವಿಧಾನಸೌಧಕ್ಕೆ ಹತ್ತಿಕೊಂಡು ಹೋಗುವ ಮೆಟ್ಟಿಲಿನ ಚಪ್ಪಡಿಕಲ್ಲಾಗುತ್ತೇನೆ. ಇಲ್ಲವಾದರೆ ಈ ಜನವಿರೋಧಿ ಬಿಜೆಪಿ ಸರ್ಕಾರದ ವಿರುದ್ಧ ಜನ ಬೀಸುವ ಕಲ್ಲು” ಎಂದು ಹೇಳಿದ್ದಾರೆ.

ಡಿ.ಕೆ. ಶಿವಕುಮಾರ್ ರಾಜರಾಜೇಶ್ವರಿ ನಗರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಪ್ರಚಾರದಲ್ಲಿ, ಕ್ಷೇತ್ರದ ಐಡಿಯಲ್ ಹೋಮ್ಸ್ ನಲ್ಲಿ ಒಕ್ಕಲಿಗ ಸಮುದಾಯದ ನಾನಾ ಸಂಘಟನೆಗಳ ಮುಖಂಡರೊಂದಿಗಿನ ಸಭೆಯಲ್ಲಿ ಈ ಮಾತುಗಳನ್ನು ಹೇಳಿದರು.

‘ಕೆಲವರು ಬಂಡೆನ ಡೈನಮೇಟ್ ಇಟ್ಟು ಪುಡಿ ಪುಡಿ ಮಾಡುತ್ತೇವೆ ಅಂತಿದ್ದಾರೆ. ಬಂಡೆ ಪುಡಿಯಾಗಿ ಜಲ್ಲಿಕಲ್ಲಾದರೆ ಮನೆಕಟ್ಟಲು, ದೇವರ ಗುಡಿಯ ಮುಂದೆ ಗರಡುಗಂಭವಾಗಿ ನಿಲ್ಲಲು, ಕಲ್ಲು ವಿಗ್ರಹವಾಗಿ, ಚಪ್ಪಡಿ ಕಲ್ಲಾಗಿ ಜನರಿಗೆ ಉಪಯೋಗಲು ಸಾಧ್ಯ. ಮಿತಿ ಮೀರಿದರೆ, ಈ ಜನ ವಿರೋಧಿ ಸರ್ಕಾರಕ್ಕೆ ಜನ ಬೀಸುವ ಕಲ್ಲಾಗುವೆ. ಹೀಗಾಗಿ ನಾನು ಕೇವಲ ಬಂಡೆಯಾಗಲು ಇಚ್ಚಿಸುವುದಿಲ್ಲ. ಜನರಿಗೆ ನನ್ನಿಂದ ಉಪಯೋಗವಾದರೆ ಸಾಕು” ಎಂದು ಹೇಳಿದರು.

ಇದನ್ನೂ ಓದಿ: ಇದು ಕೇವಲ ಉಪ ಚುನಾವಣೆಯಲ್ಲ, ನೈತಿಕ ರಾಜಕಾರಣ ಉಳಿಸುವ ಗುರುತರ ಜವಾಬ್ಧಾರಿ!

“ನಾವು ಬೀಜ ಬಿತ್ತುವಾಗ ಅದು ಮರವಾಗಿ ಹಣ್ಣಾದರೂ ನೀಡಲಿ, ನೆರಳಾದರು ನೀಡಲಿ ಎಂಬ ಒಳ್ಳೆ ಭಾವನೆಯಿಂದ ಬಿತ್ತುತ್ತೇವೆ. ಎಲ್ಲ ಬೀಜಗಳು ಹಣ್ಣನ್ನೇ ನೀಡಬೇಕು ಎಂದು ಬಯಸುವುದಿಲ್ಲ. ಕೆಲವೊಮ್ಮೆ ಮರ ಬೆಳೆಸುವವರು ಒಬ್ಬರಾದರೆ, ಮತ್ತೊಬ್ಬರು ಹಣ್ಣು ತಿನ್ನುತ್ತಾರೆ. ಯಾರೋ ಕಟ್ಟಿದ ಹುತ್ತದಲ್ಲಿ ವಿಷ ಸರ್ಪ ಬಂದು ಸೇರುತ್ತದೆ. ಇದು ಪ್ರಕೃತಿ ನಿಯಮ” ಎಂದು ವಿವರಿಸಿದರು.

“ನಮ್ಮ ರವಿ ಪತ್ನಿ ಕುಸುಮಾ ಮತ್ತು ಅವರ ಕುಟುಂಬ ನನಗೆ ಮುಂಚೆಯಿಂದಲೂ ಗೊತ್ತಿದೆ. ಪಾಪ ಆತ ಯಾವುದೋ ಕಾರಣಕ್ಕೆ ಹೇಡಿತನ ತೋರಿಬಿಟ್ಟ. ಆತ ಯಾವುದೇ ಪರಿಸ್ಥಿತಿ ಇದ್ದರೂ ಧೈರ್ಯದಿಂದ ಎದುರಿಸಿ ತನ್ನ ತಂದೆ-ತಾಯಿ, ಕಟ್ಟಿಕೊಂಡ ಹೆಂಡತಿಯನ್ನು ನೋಡಿಕೊಳ್ಳಬೇಕಿತ್ತು. ನಮ್ಮ ಸಮಾಜ ಅವರನ್ನು ಎಷ್ಟು ಪ್ರೀತಿ, ಗೌರವದಿಂದ ನೋಡುತ್ತಿತ್ತು. ಆದರೆ ನಷ್ಟ ಆಗಿದ್ದು ಯಾರಿಗೆ? ಆತನ ಅಸಹಜ ಸಾವನ್ನು, ಅನೇಕರು ಕೊಲೆಯಾಯ್ತು ಅಂತಾ ಧರಣಿ ಮಾಡಿದ್ದನ್ನು ನೋಡಿದ್ದೇವೆ. ನಮ್ಮದೇ ಸರ್ಕಾರ ಸಿಬಿಐ ತನಿಖೆಗೆ ಕೊಟ್ಟೆವು. ಯಾವ ಯಾವ ಹೇಳಿಕೆ ಕೊಡಿಸಿದ್ದಾರೆ ಎಂಬ ದಾಖಲೆಯೂ ನಮ್ಮ ಬಳಿ ಇದೆ. ಆದರೆ ನಾವು ಈ ವಿಚಾರವನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುವುದು ಬೇಡ. ನಮ್ಮ ಹೆಣ್ಣು ಮಗಳು ಎಲ್ಲರ ಸಾಕ್ಷಿಯಾಗಿ ತಾಳಿ ಕಟ್ಟಿಸಿಕೊಂಡು, ಸಪ್ತಪದಿ ತುಳಿದು ಮದುವೆಯಾಗಿದ್ದಾಳೆ. ಆದರೆ ನಮ್ಮ ಶೋಭಕ್ಕ ಚುನಾವಣೆ ವೇಳೆ ಗಂಡನ ಹೆಸರು ಬಳಸಿಕೊಳ್ಳಬೇಡ ಅಂತಾರಲ್ಲ ಹೇಗೆ ಸಾಧ್ಯ? ಶೋಭಕ್ಕ ನೀನು, ನಿನ್ನ ಮಗಳೋ, ತಂಗಿನೋ ಆ ಸ್ಥಾನದಲ್ಲಿ ಇದ್ದಿದ್ದರೆ ಏನು ಹೇಳುತ್ತಿದ್ದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲುವ ಭೀತಿ: ಮೀಟಿಂಗ್‌ ಮೇಲೆ ಮೀಟಿಂಗ್‌

“ಈಗ ನವರಾತ್ರಿ ನಡೆಯುತ್ತಿದೆ. ಈ ಕ್ಷೇತ್ರಕ್ಕೆ ರಕ್ಷಣೆ ನೀಡಲು ದುರ್ಗಾದೇವಿ, ರಾಜರಾಜೇಶ್ವರಿ ಆಶೀರ್ವಾದ ಬೇಕಿದೆ. ಈ ದೇವತೆಗಳ ಆಶೀರ್ವಾದದೊಂದಿಗೆ ನಾವು ಕ್ಷೇತ್ರದ ಹಿತ ಕಾಯಲು ನೊಂದು ಬೆಂದಿರುವ ಹೆಣ್ಣು ಮಗಳನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದೇವೆ” ಎಂದರು.

‘ಕೊರೋನಾ ಹರಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರವೇ ನೇರ ಕಾರಣವಾಗಿದ್ದು, ಮೊದಲು ಲಸಿಕೆಯನ್ನು ತರಲಿ. ಆಮೇಲೆ ಅದನ್ನು ಉಚಿತವಾಗಿ ನೀಡುವ ಬಗ್ಗೆ ಘೋಷಣೆ ಮಾಡಲಿ. ಚುನಾವಣೆಗೋಸ್ಕರ ಸುಖಾಸುಮ್ಮನೆ ಆಶ್ವಾಸನೆ ನೀಡುವುದು ಬೇಡ’ ಎಂದು ಟೀಕಿಸಿದ್ದಾರೆ.

“ಸರ್ಕಾರ ಲಾಕ್ ಡೌನ್ ಮಾಡಿದ್ದಕ್ಕೆ ಚಾಲಕರಿಗೆ, ನೇಕಾರರಿಗೆ, ಸವಿತಾ ಸಮಾಜದವರಿಗೆ 5 ಸಾವಿರ ಕೊಡುತ್ತೇನೆ ಎಂದು ಹೇಳಿದರು. ಆದರೆ ಈವರೆಗೂ ಕೊಟ್ಟಿಲ್ಲ. ಒಬ್ಬ ಕಾರ್ಮಿಕ, ರೈತನಿಗೆ ಸಹಾಯ ಮಾಡಿಲ್ಲ. ನಗರ ಪ್ರದೇಶಗಳಲ್ಲಿ ಕಟ್ಟಡಗಳು ಖಾಲಿ ಬಿದ್ದಿದೆ. ಪಾಲಿಕೆಗಳಿಗೆ ಸೂಚನೆ ನೀಡಿ ಅವರಿಗೆ ತೆರಿಗೆ ವಿನಾಯಿತಿ ಕೊಡಲು ಇವರಿಂದ ಸಾಧ್ಯವಾಗುವುದಿಲ್ಲವೇ? ಬ್ಯಾಂಕ್ ಸಾಲದ ಬಡ್ಡಿ ಮನ್ನಾ ಮಾಡಿದ್ದಾರಾ? ಇವರೇನು ಲಸಿಕೆ ಕೊಡುತ್ತಾರೆ? ಕೋರೊನಾದಿಂದ ಮೃತಪಟ್ಟವರ ಹೆಣವನ್ನು ಬಿಸಾಡಿದರು. ಕೇಂದ್ರ ಸರ್ಕಾರ ನಮ್ಮ ಕೇಂದ್ರ ಸಚಿವರ ಪಾರ್ಥಿವ ಶರೀರವನ್ನು ಅವರ ಕುಟುಂಬದವರಿಗೆ ತೋರಿಸಲಿಲ್ಲ. ಸೇನಾ ವಿಮಾನ ಸೌಲಭ್ಯ ಕಲ್ಪಿಸಿ ಅವರ ಶವವನ್ನು ಇಲ್ಲಿಗೆ ತಲುಪಿಸಿದ್ದರೆ ಅವರ ಕುಟುಂಬದವರು, ಜನರು ಅವರ ಮುಖ ನೋಡಿಕೊಳ್ಳುತ್ತಿದ್ದರು. ಇಚ್ಛೆ ಇದ್ದರೆ ಅದನ್ನು ಮಾಡುವ ಧೃಢ ನಿರ್ಧಾರ ಇರುತ್ತದೆ. ಇದರಲ್ಲೇ ಸರ್ಕಾರಕ್ಕೆ ಯಾವುದೇ ದೂರದೃಷ್ಟಿ ಇಲ್ಲ ಎಂಬುದು ತಿಳಿಯುತ್ತದೆ” ಎಂದರು.


ಇದನ್ನೂ ಓದಿ: ಈ ಉಪಚುನಾವಣೆ ಜನರ ತೀರ್ಪು ಮಾರಿಕೊಂಡವರಿಗೆ ಪಾಠವಾಗಲಿ- ಡಿ.ಕೆ.ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....