Homeಕರ್ನಾಟಕನಾನು ಬಂಡೆ ಅಲ್ಲ; ಬಿಜೆಪಿ ಸರ್ಕಾರದ ವಿರುದ್ಧ ಜನ ಬೀಸುವ ಕಲ್ಲು: ಡಿ.ಕೆ.ಶಿವಕುಮಾರ್

ನಾನು ಬಂಡೆ ಅಲ್ಲ; ಬಿಜೆಪಿ ಸರ್ಕಾರದ ವಿರುದ್ಧ ಜನ ಬೀಸುವ ಕಲ್ಲು: ಡಿ.ಕೆ.ಶಿವಕುಮಾರ್

ಕೆಲವರು ಬಂಡೆನ ಡೈನಮೇಟ್ ಇಟ್ಟು ಪುಡಿ ಪುಡಿ ಮಾಡುತ್ತೇವೆ ಅಂತಿದ್ದಾರೆ. ಬಂಡೆ ಪುಡಿಯಾಗಿ ಜಲ್ಲಿಕಲ್ಲಾದರೆ ಮನೆಕಟ್ಟಲು, ದೇವರ ಗುಡಿಯ ಮುಂದೆ ಗರಡುಗಂಭವಾಗಿ ನಿಲ್ಲಲು, ವಿಗ್ರಹವಾಗಿ, ಚಪ್ಪಡಿ ಕಲ್ಲಾಗಿ ಜನರಿಗೆ ಉಪಯೋಗಲು ಸಾಧ್ಯ.

- Advertisement -
- Advertisement -

ರಾಜ್ಯದಲ್ಲಿ ಉಪಚುನಾವಣೆಯ ಗಾಳಿ ದಿನೇ ದಿನೇ ರಭಸವಾಗುತ್ತಿದ್ದು, ಪ್ರತಿ ಪಕ್ಷಗಳೂ ಪರಸ್ಪರ ಟೀಕಾಪ್ರಹಾರ ಮಾಡುತ್ತಿವೆ. ಈ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, “ನಾನು ಜನವಿರೋಧಿ ಬಿಜೆಪಿ ಸರ್ಕಾರದ ವಿರುದ್ಧ ಈ ರಾಜ್ಯದ ಜನತೆ ಬೀಸುವ ಕಲ್ಲು” ಎಂದು ಹರಿಹಾಯ್ದಿದ್ದಾರೆ.

“ನಾನು ಬಂಡೆಯಾಗಲು ಇಚ್ಚಿಸುವುದಿಲ್ಲ. ರಾಜ್ಯದ ಜನ ವಿಧಾನಸೌಧಕ್ಕೆ ಹತ್ತಿಕೊಂಡು ಹೋಗುವ ಮೆಟ್ಟಿಲಿನ ಚಪ್ಪಡಿಕಲ್ಲಾಗುತ್ತೇನೆ. ಇಲ್ಲವಾದರೆ ಈ ಜನವಿರೋಧಿ ಬಿಜೆಪಿ ಸರ್ಕಾರದ ವಿರುದ್ಧ ಜನ ಬೀಸುವ ಕಲ್ಲು” ಎಂದು ಹೇಳಿದ್ದಾರೆ.

ಡಿ.ಕೆ. ಶಿವಕುಮಾರ್ ರಾಜರಾಜೇಶ್ವರಿ ನಗರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಪ್ರಚಾರದಲ್ಲಿ, ಕ್ಷೇತ್ರದ ಐಡಿಯಲ್ ಹೋಮ್ಸ್ ನಲ್ಲಿ ಒಕ್ಕಲಿಗ ಸಮುದಾಯದ ನಾನಾ ಸಂಘಟನೆಗಳ ಮುಖಂಡರೊಂದಿಗಿನ ಸಭೆಯಲ್ಲಿ ಈ ಮಾತುಗಳನ್ನು ಹೇಳಿದರು.

‘ಕೆಲವರು ಬಂಡೆನ ಡೈನಮೇಟ್ ಇಟ್ಟು ಪುಡಿ ಪುಡಿ ಮಾಡುತ್ತೇವೆ ಅಂತಿದ್ದಾರೆ. ಬಂಡೆ ಪುಡಿಯಾಗಿ ಜಲ್ಲಿಕಲ್ಲಾದರೆ ಮನೆಕಟ್ಟಲು, ದೇವರ ಗುಡಿಯ ಮುಂದೆ ಗರಡುಗಂಭವಾಗಿ ನಿಲ್ಲಲು, ಕಲ್ಲು ವಿಗ್ರಹವಾಗಿ, ಚಪ್ಪಡಿ ಕಲ್ಲಾಗಿ ಜನರಿಗೆ ಉಪಯೋಗಲು ಸಾಧ್ಯ. ಮಿತಿ ಮೀರಿದರೆ, ಈ ಜನ ವಿರೋಧಿ ಸರ್ಕಾರಕ್ಕೆ ಜನ ಬೀಸುವ ಕಲ್ಲಾಗುವೆ. ಹೀಗಾಗಿ ನಾನು ಕೇವಲ ಬಂಡೆಯಾಗಲು ಇಚ್ಚಿಸುವುದಿಲ್ಲ. ಜನರಿಗೆ ನನ್ನಿಂದ ಉಪಯೋಗವಾದರೆ ಸಾಕು” ಎಂದು ಹೇಳಿದರು.

ಇದನ್ನೂ ಓದಿ: ಇದು ಕೇವಲ ಉಪ ಚುನಾವಣೆಯಲ್ಲ, ನೈತಿಕ ರಾಜಕಾರಣ ಉಳಿಸುವ ಗುರುತರ ಜವಾಬ್ಧಾರಿ!

“ನಾವು ಬೀಜ ಬಿತ್ತುವಾಗ ಅದು ಮರವಾಗಿ ಹಣ್ಣಾದರೂ ನೀಡಲಿ, ನೆರಳಾದರು ನೀಡಲಿ ಎಂಬ ಒಳ್ಳೆ ಭಾವನೆಯಿಂದ ಬಿತ್ತುತ್ತೇವೆ. ಎಲ್ಲ ಬೀಜಗಳು ಹಣ್ಣನ್ನೇ ನೀಡಬೇಕು ಎಂದು ಬಯಸುವುದಿಲ್ಲ. ಕೆಲವೊಮ್ಮೆ ಮರ ಬೆಳೆಸುವವರು ಒಬ್ಬರಾದರೆ, ಮತ್ತೊಬ್ಬರು ಹಣ್ಣು ತಿನ್ನುತ್ತಾರೆ. ಯಾರೋ ಕಟ್ಟಿದ ಹುತ್ತದಲ್ಲಿ ವಿಷ ಸರ್ಪ ಬಂದು ಸೇರುತ್ತದೆ. ಇದು ಪ್ರಕೃತಿ ನಿಯಮ” ಎಂದು ವಿವರಿಸಿದರು.

“ನಮ್ಮ ರವಿ ಪತ್ನಿ ಕುಸುಮಾ ಮತ್ತು ಅವರ ಕುಟುಂಬ ನನಗೆ ಮುಂಚೆಯಿಂದಲೂ ಗೊತ್ತಿದೆ. ಪಾಪ ಆತ ಯಾವುದೋ ಕಾರಣಕ್ಕೆ ಹೇಡಿತನ ತೋರಿಬಿಟ್ಟ. ಆತ ಯಾವುದೇ ಪರಿಸ್ಥಿತಿ ಇದ್ದರೂ ಧೈರ್ಯದಿಂದ ಎದುರಿಸಿ ತನ್ನ ತಂದೆ-ತಾಯಿ, ಕಟ್ಟಿಕೊಂಡ ಹೆಂಡತಿಯನ್ನು ನೋಡಿಕೊಳ್ಳಬೇಕಿತ್ತು. ನಮ್ಮ ಸಮಾಜ ಅವರನ್ನು ಎಷ್ಟು ಪ್ರೀತಿ, ಗೌರವದಿಂದ ನೋಡುತ್ತಿತ್ತು. ಆದರೆ ನಷ್ಟ ಆಗಿದ್ದು ಯಾರಿಗೆ? ಆತನ ಅಸಹಜ ಸಾವನ್ನು, ಅನೇಕರು ಕೊಲೆಯಾಯ್ತು ಅಂತಾ ಧರಣಿ ಮಾಡಿದ್ದನ್ನು ನೋಡಿದ್ದೇವೆ. ನಮ್ಮದೇ ಸರ್ಕಾರ ಸಿಬಿಐ ತನಿಖೆಗೆ ಕೊಟ್ಟೆವು. ಯಾವ ಯಾವ ಹೇಳಿಕೆ ಕೊಡಿಸಿದ್ದಾರೆ ಎಂಬ ದಾಖಲೆಯೂ ನಮ್ಮ ಬಳಿ ಇದೆ. ಆದರೆ ನಾವು ಈ ವಿಚಾರವನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುವುದು ಬೇಡ. ನಮ್ಮ ಹೆಣ್ಣು ಮಗಳು ಎಲ್ಲರ ಸಾಕ್ಷಿಯಾಗಿ ತಾಳಿ ಕಟ್ಟಿಸಿಕೊಂಡು, ಸಪ್ತಪದಿ ತುಳಿದು ಮದುವೆಯಾಗಿದ್ದಾಳೆ. ಆದರೆ ನಮ್ಮ ಶೋಭಕ್ಕ ಚುನಾವಣೆ ವೇಳೆ ಗಂಡನ ಹೆಸರು ಬಳಸಿಕೊಳ್ಳಬೇಡ ಅಂತಾರಲ್ಲ ಹೇಗೆ ಸಾಧ್ಯ? ಶೋಭಕ್ಕ ನೀನು, ನಿನ್ನ ಮಗಳೋ, ತಂಗಿನೋ ಆ ಸ್ಥಾನದಲ್ಲಿ ಇದ್ದಿದ್ದರೆ ಏನು ಹೇಳುತ್ತಿದ್ದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲುವ ಭೀತಿ: ಮೀಟಿಂಗ್‌ ಮೇಲೆ ಮೀಟಿಂಗ್‌

“ಈಗ ನವರಾತ್ರಿ ನಡೆಯುತ್ತಿದೆ. ಈ ಕ್ಷೇತ್ರಕ್ಕೆ ರಕ್ಷಣೆ ನೀಡಲು ದುರ್ಗಾದೇವಿ, ರಾಜರಾಜೇಶ್ವರಿ ಆಶೀರ್ವಾದ ಬೇಕಿದೆ. ಈ ದೇವತೆಗಳ ಆಶೀರ್ವಾದದೊಂದಿಗೆ ನಾವು ಕ್ಷೇತ್ರದ ಹಿತ ಕಾಯಲು ನೊಂದು ಬೆಂದಿರುವ ಹೆಣ್ಣು ಮಗಳನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದೇವೆ” ಎಂದರು.

‘ಕೊರೋನಾ ಹರಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರವೇ ನೇರ ಕಾರಣವಾಗಿದ್ದು, ಮೊದಲು ಲಸಿಕೆಯನ್ನು ತರಲಿ. ಆಮೇಲೆ ಅದನ್ನು ಉಚಿತವಾಗಿ ನೀಡುವ ಬಗ್ಗೆ ಘೋಷಣೆ ಮಾಡಲಿ. ಚುನಾವಣೆಗೋಸ್ಕರ ಸುಖಾಸುಮ್ಮನೆ ಆಶ್ವಾಸನೆ ನೀಡುವುದು ಬೇಡ’ ಎಂದು ಟೀಕಿಸಿದ್ದಾರೆ.

“ಸರ್ಕಾರ ಲಾಕ್ ಡೌನ್ ಮಾಡಿದ್ದಕ್ಕೆ ಚಾಲಕರಿಗೆ, ನೇಕಾರರಿಗೆ, ಸವಿತಾ ಸಮಾಜದವರಿಗೆ 5 ಸಾವಿರ ಕೊಡುತ್ತೇನೆ ಎಂದು ಹೇಳಿದರು. ಆದರೆ ಈವರೆಗೂ ಕೊಟ್ಟಿಲ್ಲ. ಒಬ್ಬ ಕಾರ್ಮಿಕ, ರೈತನಿಗೆ ಸಹಾಯ ಮಾಡಿಲ್ಲ. ನಗರ ಪ್ರದೇಶಗಳಲ್ಲಿ ಕಟ್ಟಡಗಳು ಖಾಲಿ ಬಿದ್ದಿದೆ. ಪಾಲಿಕೆಗಳಿಗೆ ಸೂಚನೆ ನೀಡಿ ಅವರಿಗೆ ತೆರಿಗೆ ವಿನಾಯಿತಿ ಕೊಡಲು ಇವರಿಂದ ಸಾಧ್ಯವಾಗುವುದಿಲ್ಲವೇ? ಬ್ಯಾಂಕ್ ಸಾಲದ ಬಡ್ಡಿ ಮನ್ನಾ ಮಾಡಿದ್ದಾರಾ? ಇವರೇನು ಲಸಿಕೆ ಕೊಡುತ್ತಾರೆ? ಕೋರೊನಾದಿಂದ ಮೃತಪಟ್ಟವರ ಹೆಣವನ್ನು ಬಿಸಾಡಿದರು. ಕೇಂದ್ರ ಸರ್ಕಾರ ನಮ್ಮ ಕೇಂದ್ರ ಸಚಿವರ ಪಾರ್ಥಿವ ಶರೀರವನ್ನು ಅವರ ಕುಟುಂಬದವರಿಗೆ ತೋರಿಸಲಿಲ್ಲ. ಸೇನಾ ವಿಮಾನ ಸೌಲಭ್ಯ ಕಲ್ಪಿಸಿ ಅವರ ಶವವನ್ನು ಇಲ್ಲಿಗೆ ತಲುಪಿಸಿದ್ದರೆ ಅವರ ಕುಟುಂಬದವರು, ಜನರು ಅವರ ಮುಖ ನೋಡಿಕೊಳ್ಳುತ್ತಿದ್ದರು. ಇಚ್ಛೆ ಇದ್ದರೆ ಅದನ್ನು ಮಾಡುವ ಧೃಢ ನಿರ್ಧಾರ ಇರುತ್ತದೆ. ಇದರಲ್ಲೇ ಸರ್ಕಾರಕ್ಕೆ ಯಾವುದೇ ದೂರದೃಷ್ಟಿ ಇಲ್ಲ ಎಂಬುದು ತಿಳಿಯುತ್ತದೆ” ಎಂದರು.


ಇದನ್ನೂ ಓದಿ: ಈ ಉಪಚುನಾವಣೆ ಜನರ ತೀರ್ಪು ಮಾರಿಕೊಂಡವರಿಗೆ ಪಾಠವಾಗಲಿ- ಡಿ.ಕೆ.ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...