Homeಕರ್ನಾಟಕನಾನು ಬಂಡೆ ಅಲ್ಲ; ಬಿಜೆಪಿ ಸರ್ಕಾರದ ವಿರುದ್ಧ ಜನ ಬೀಸುವ ಕಲ್ಲು: ಡಿ.ಕೆ.ಶಿವಕುಮಾರ್

ನಾನು ಬಂಡೆ ಅಲ್ಲ; ಬಿಜೆಪಿ ಸರ್ಕಾರದ ವಿರುದ್ಧ ಜನ ಬೀಸುವ ಕಲ್ಲು: ಡಿ.ಕೆ.ಶಿವಕುಮಾರ್

ಕೆಲವರು ಬಂಡೆನ ಡೈನಮೇಟ್ ಇಟ್ಟು ಪುಡಿ ಪುಡಿ ಮಾಡುತ್ತೇವೆ ಅಂತಿದ್ದಾರೆ. ಬಂಡೆ ಪುಡಿಯಾಗಿ ಜಲ್ಲಿಕಲ್ಲಾದರೆ ಮನೆಕಟ್ಟಲು, ದೇವರ ಗುಡಿಯ ಮುಂದೆ ಗರಡುಗಂಭವಾಗಿ ನಿಲ್ಲಲು, ವಿಗ್ರಹವಾಗಿ, ಚಪ್ಪಡಿ ಕಲ್ಲಾಗಿ ಜನರಿಗೆ ಉಪಯೋಗಲು ಸಾಧ್ಯ.

- Advertisement -
- Advertisement -

ರಾಜ್ಯದಲ್ಲಿ ಉಪಚುನಾವಣೆಯ ಗಾಳಿ ದಿನೇ ದಿನೇ ರಭಸವಾಗುತ್ತಿದ್ದು, ಪ್ರತಿ ಪಕ್ಷಗಳೂ ಪರಸ್ಪರ ಟೀಕಾಪ್ರಹಾರ ಮಾಡುತ್ತಿವೆ. ಈ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, “ನಾನು ಜನವಿರೋಧಿ ಬಿಜೆಪಿ ಸರ್ಕಾರದ ವಿರುದ್ಧ ಈ ರಾಜ್ಯದ ಜನತೆ ಬೀಸುವ ಕಲ್ಲು” ಎಂದು ಹರಿಹಾಯ್ದಿದ್ದಾರೆ.

“ನಾನು ಬಂಡೆಯಾಗಲು ಇಚ್ಚಿಸುವುದಿಲ್ಲ. ರಾಜ್ಯದ ಜನ ವಿಧಾನಸೌಧಕ್ಕೆ ಹತ್ತಿಕೊಂಡು ಹೋಗುವ ಮೆಟ್ಟಿಲಿನ ಚಪ್ಪಡಿಕಲ್ಲಾಗುತ್ತೇನೆ. ಇಲ್ಲವಾದರೆ ಈ ಜನವಿರೋಧಿ ಬಿಜೆಪಿ ಸರ್ಕಾರದ ವಿರುದ್ಧ ಜನ ಬೀಸುವ ಕಲ್ಲು” ಎಂದು ಹೇಳಿದ್ದಾರೆ.

ಡಿ.ಕೆ. ಶಿವಕುಮಾರ್ ರಾಜರಾಜೇಶ್ವರಿ ನಗರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಪ್ರಚಾರದಲ್ಲಿ, ಕ್ಷೇತ್ರದ ಐಡಿಯಲ್ ಹೋಮ್ಸ್ ನಲ್ಲಿ ಒಕ್ಕಲಿಗ ಸಮುದಾಯದ ನಾನಾ ಸಂಘಟನೆಗಳ ಮುಖಂಡರೊಂದಿಗಿನ ಸಭೆಯಲ್ಲಿ ಈ ಮಾತುಗಳನ್ನು ಹೇಳಿದರು.

‘ಕೆಲವರು ಬಂಡೆನ ಡೈನಮೇಟ್ ಇಟ್ಟು ಪುಡಿ ಪುಡಿ ಮಾಡುತ್ತೇವೆ ಅಂತಿದ್ದಾರೆ. ಬಂಡೆ ಪುಡಿಯಾಗಿ ಜಲ್ಲಿಕಲ್ಲಾದರೆ ಮನೆಕಟ್ಟಲು, ದೇವರ ಗುಡಿಯ ಮುಂದೆ ಗರಡುಗಂಭವಾಗಿ ನಿಲ್ಲಲು, ಕಲ್ಲು ವಿಗ್ರಹವಾಗಿ, ಚಪ್ಪಡಿ ಕಲ್ಲಾಗಿ ಜನರಿಗೆ ಉಪಯೋಗಲು ಸಾಧ್ಯ. ಮಿತಿ ಮೀರಿದರೆ, ಈ ಜನ ವಿರೋಧಿ ಸರ್ಕಾರಕ್ಕೆ ಜನ ಬೀಸುವ ಕಲ್ಲಾಗುವೆ. ಹೀಗಾಗಿ ನಾನು ಕೇವಲ ಬಂಡೆಯಾಗಲು ಇಚ್ಚಿಸುವುದಿಲ್ಲ. ಜನರಿಗೆ ನನ್ನಿಂದ ಉಪಯೋಗವಾದರೆ ಸಾಕು” ಎಂದು ಹೇಳಿದರು.

ಇದನ್ನೂ ಓದಿ: ಇದು ಕೇವಲ ಉಪ ಚುನಾವಣೆಯಲ್ಲ, ನೈತಿಕ ರಾಜಕಾರಣ ಉಳಿಸುವ ಗುರುತರ ಜವಾಬ್ಧಾರಿ!

“ನಾವು ಬೀಜ ಬಿತ್ತುವಾಗ ಅದು ಮರವಾಗಿ ಹಣ್ಣಾದರೂ ನೀಡಲಿ, ನೆರಳಾದರು ನೀಡಲಿ ಎಂಬ ಒಳ್ಳೆ ಭಾವನೆಯಿಂದ ಬಿತ್ತುತ್ತೇವೆ. ಎಲ್ಲ ಬೀಜಗಳು ಹಣ್ಣನ್ನೇ ನೀಡಬೇಕು ಎಂದು ಬಯಸುವುದಿಲ್ಲ. ಕೆಲವೊಮ್ಮೆ ಮರ ಬೆಳೆಸುವವರು ಒಬ್ಬರಾದರೆ, ಮತ್ತೊಬ್ಬರು ಹಣ್ಣು ತಿನ್ನುತ್ತಾರೆ. ಯಾರೋ ಕಟ್ಟಿದ ಹುತ್ತದಲ್ಲಿ ವಿಷ ಸರ್ಪ ಬಂದು ಸೇರುತ್ತದೆ. ಇದು ಪ್ರಕೃತಿ ನಿಯಮ” ಎಂದು ವಿವರಿಸಿದರು.

“ನಮ್ಮ ರವಿ ಪತ್ನಿ ಕುಸುಮಾ ಮತ್ತು ಅವರ ಕುಟುಂಬ ನನಗೆ ಮುಂಚೆಯಿಂದಲೂ ಗೊತ್ತಿದೆ. ಪಾಪ ಆತ ಯಾವುದೋ ಕಾರಣಕ್ಕೆ ಹೇಡಿತನ ತೋರಿಬಿಟ್ಟ. ಆತ ಯಾವುದೇ ಪರಿಸ್ಥಿತಿ ಇದ್ದರೂ ಧೈರ್ಯದಿಂದ ಎದುರಿಸಿ ತನ್ನ ತಂದೆ-ತಾಯಿ, ಕಟ್ಟಿಕೊಂಡ ಹೆಂಡತಿಯನ್ನು ನೋಡಿಕೊಳ್ಳಬೇಕಿತ್ತು. ನಮ್ಮ ಸಮಾಜ ಅವರನ್ನು ಎಷ್ಟು ಪ್ರೀತಿ, ಗೌರವದಿಂದ ನೋಡುತ್ತಿತ್ತು. ಆದರೆ ನಷ್ಟ ಆಗಿದ್ದು ಯಾರಿಗೆ? ಆತನ ಅಸಹಜ ಸಾವನ್ನು, ಅನೇಕರು ಕೊಲೆಯಾಯ್ತು ಅಂತಾ ಧರಣಿ ಮಾಡಿದ್ದನ್ನು ನೋಡಿದ್ದೇವೆ. ನಮ್ಮದೇ ಸರ್ಕಾರ ಸಿಬಿಐ ತನಿಖೆಗೆ ಕೊಟ್ಟೆವು. ಯಾವ ಯಾವ ಹೇಳಿಕೆ ಕೊಡಿಸಿದ್ದಾರೆ ಎಂಬ ದಾಖಲೆಯೂ ನಮ್ಮ ಬಳಿ ಇದೆ. ಆದರೆ ನಾವು ಈ ವಿಚಾರವನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುವುದು ಬೇಡ. ನಮ್ಮ ಹೆಣ್ಣು ಮಗಳು ಎಲ್ಲರ ಸಾಕ್ಷಿಯಾಗಿ ತಾಳಿ ಕಟ್ಟಿಸಿಕೊಂಡು, ಸಪ್ತಪದಿ ತುಳಿದು ಮದುವೆಯಾಗಿದ್ದಾಳೆ. ಆದರೆ ನಮ್ಮ ಶೋಭಕ್ಕ ಚುನಾವಣೆ ವೇಳೆ ಗಂಡನ ಹೆಸರು ಬಳಸಿಕೊಳ್ಳಬೇಡ ಅಂತಾರಲ್ಲ ಹೇಗೆ ಸಾಧ್ಯ? ಶೋಭಕ್ಕ ನೀನು, ನಿನ್ನ ಮಗಳೋ, ತಂಗಿನೋ ಆ ಸ್ಥಾನದಲ್ಲಿ ಇದ್ದಿದ್ದರೆ ಏನು ಹೇಳುತ್ತಿದ್ದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲುವ ಭೀತಿ: ಮೀಟಿಂಗ್‌ ಮೇಲೆ ಮೀಟಿಂಗ್‌

“ಈಗ ನವರಾತ್ರಿ ನಡೆಯುತ್ತಿದೆ. ಈ ಕ್ಷೇತ್ರಕ್ಕೆ ರಕ್ಷಣೆ ನೀಡಲು ದುರ್ಗಾದೇವಿ, ರಾಜರಾಜೇಶ್ವರಿ ಆಶೀರ್ವಾದ ಬೇಕಿದೆ. ಈ ದೇವತೆಗಳ ಆಶೀರ್ವಾದದೊಂದಿಗೆ ನಾವು ಕ್ಷೇತ್ರದ ಹಿತ ಕಾಯಲು ನೊಂದು ಬೆಂದಿರುವ ಹೆಣ್ಣು ಮಗಳನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದೇವೆ” ಎಂದರು.

‘ಕೊರೋನಾ ಹರಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರವೇ ನೇರ ಕಾರಣವಾಗಿದ್ದು, ಮೊದಲು ಲಸಿಕೆಯನ್ನು ತರಲಿ. ಆಮೇಲೆ ಅದನ್ನು ಉಚಿತವಾಗಿ ನೀಡುವ ಬಗ್ಗೆ ಘೋಷಣೆ ಮಾಡಲಿ. ಚುನಾವಣೆಗೋಸ್ಕರ ಸುಖಾಸುಮ್ಮನೆ ಆಶ್ವಾಸನೆ ನೀಡುವುದು ಬೇಡ’ ಎಂದು ಟೀಕಿಸಿದ್ದಾರೆ.

“ಸರ್ಕಾರ ಲಾಕ್ ಡೌನ್ ಮಾಡಿದ್ದಕ್ಕೆ ಚಾಲಕರಿಗೆ, ನೇಕಾರರಿಗೆ, ಸವಿತಾ ಸಮಾಜದವರಿಗೆ 5 ಸಾವಿರ ಕೊಡುತ್ತೇನೆ ಎಂದು ಹೇಳಿದರು. ಆದರೆ ಈವರೆಗೂ ಕೊಟ್ಟಿಲ್ಲ. ಒಬ್ಬ ಕಾರ್ಮಿಕ, ರೈತನಿಗೆ ಸಹಾಯ ಮಾಡಿಲ್ಲ. ನಗರ ಪ್ರದೇಶಗಳಲ್ಲಿ ಕಟ್ಟಡಗಳು ಖಾಲಿ ಬಿದ್ದಿದೆ. ಪಾಲಿಕೆಗಳಿಗೆ ಸೂಚನೆ ನೀಡಿ ಅವರಿಗೆ ತೆರಿಗೆ ವಿನಾಯಿತಿ ಕೊಡಲು ಇವರಿಂದ ಸಾಧ್ಯವಾಗುವುದಿಲ್ಲವೇ? ಬ್ಯಾಂಕ್ ಸಾಲದ ಬಡ್ಡಿ ಮನ್ನಾ ಮಾಡಿದ್ದಾರಾ? ಇವರೇನು ಲಸಿಕೆ ಕೊಡುತ್ತಾರೆ? ಕೋರೊನಾದಿಂದ ಮೃತಪಟ್ಟವರ ಹೆಣವನ್ನು ಬಿಸಾಡಿದರು. ಕೇಂದ್ರ ಸರ್ಕಾರ ನಮ್ಮ ಕೇಂದ್ರ ಸಚಿವರ ಪಾರ್ಥಿವ ಶರೀರವನ್ನು ಅವರ ಕುಟುಂಬದವರಿಗೆ ತೋರಿಸಲಿಲ್ಲ. ಸೇನಾ ವಿಮಾನ ಸೌಲಭ್ಯ ಕಲ್ಪಿಸಿ ಅವರ ಶವವನ್ನು ಇಲ್ಲಿಗೆ ತಲುಪಿಸಿದ್ದರೆ ಅವರ ಕುಟುಂಬದವರು, ಜನರು ಅವರ ಮುಖ ನೋಡಿಕೊಳ್ಳುತ್ತಿದ್ದರು. ಇಚ್ಛೆ ಇದ್ದರೆ ಅದನ್ನು ಮಾಡುವ ಧೃಢ ನಿರ್ಧಾರ ಇರುತ್ತದೆ. ಇದರಲ್ಲೇ ಸರ್ಕಾರಕ್ಕೆ ಯಾವುದೇ ದೂರದೃಷ್ಟಿ ಇಲ್ಲ ಎಂಬುದು ತಿಳಿಯುತ್ತದೆ” ಎಂದರು.


ಇದನ್ನೂ ಓದಿ: ಈ ಉಪಚುನಾವಣೆ ಜನರ ತೀರ್ಪು ಮಾರಿಕೊಂಡವರಿಗೆ ಪಾಠವಾಗಲಿ- ಡಿ.ಕೆ.ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...