Homeಕರ್ನಾಟಕನಾನು ಬಂಡೆ ಅಲ್ಲ; ಬಿಜೆಪಿ ಸರ್ಕಾರದ ವಿರುದ್ಧ ಜನ ಬೀಸುವ ಕಲ್ಲು: ಡಿ.ಕೆ.ಶಿವಕುಮಾರ್

ನಾನು ಬಂಡೆ ಅಲ್ಲ; ಬಿಜೆಪಿ ಸರ್ಕಾರದ ವಿರುದ್ಧ ಜನ ಬೀಸುವ ಕಲ್ಲು: ಡಿ.ಕೆ.ಶಿವಕುಮಾರ್

ಕೆಲವರು ಬಂಡೆನ ಡೈನಮೇಟ್ ಇಟ್ಟು ಪುಡಿ ಪುಡಿ ಮಾಡುತ್ತೇವೆ ಅಂತಿದ್ದಾರೆ. ಬಂಡೆ ಪುಡಿಯಾಗಿ ಜಲ್ಲಿಕಲ್ಲಾದರೆ ಮನೆಕಟ್ಟಲು, ದೇವರ ಗುಡಿಯ ಮುಂದೆ ಗರಡುಗಂಭವಾಗಿ ನಿಲ್ಲಲು, ವಿಗ್ರಹವಾಗಿ, ಚಪ್ಪಡಿ ಕಲ್ಲಾಗಿ ಜನರಿಗೆ ಉಪಯೋಗಲು ಸಾಧ್ಯ.

- Advertisement -
- Advertisement -

ರಾಜ್ಯದಲ್ಲಿ ಉಪಚುನಾವಣೆಯ ಗಾಳಿ ದಿನೇ ದಿನೇ ರಭಸವಾಗುತ್ತಿದ್ದು, ಪ್ರತಿ ಪಕ್ಷಗಳೂ ಪರಸ್ಪರ ಟೀಕಾಪ್ರಹಾರ ಮಾಡುತ್ತಿವೆ. ಈ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, “ನಾನು ಜನವಿರೋಧಿ ಬಿಜೆಪಿ ಸರ್ಕಾರದ ವಿರುದ್ಧ ಈ ರಾಜ್ಯದ ಜನತೆ ಬೀಸುವ ಕಲ್ಲು” ಎಂದು ಹರಿಹಾಯ್ದಿದ್ದಾರೆ.

“ನಾನು ಬಂಡೆಯಾಗಲು ಇಚ್ಚಿಸುವುದಿಲ್ಲ. ರಾಜ್ಯದ ಜನ ವಿಧಾನಸೌಧಕ್ಕೆ ಹತ್ತಿಕೊಂಡು ಹೋಗುವ ಮೆಟ್ಟಿಲಿನ ಚಪ್ಪಡಿಕಲ್ಲಾಗುತ್ತೇನೆ. ಇಲ್ಲವಾದರೆ ಈ ಜನವಿರೋಧಿ ಬಿಜೆಪಿ ಸರ್ಕಾರದ ವಿರುದ್ಧ ಜನ ಬೀಸುವ ಕಲ್ಲು” ಎಂದು ಹೇಳಿದ್ದಾರೆ.

ಡಿ.ಕೆ. ಶಿವಕುಮಾರ್ ರಾಜರಾಜೇಶ್ವರಿ ನಗರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಪ್ರಚಾರದಲ್ಲಿ, ಕ್ಷೇತ್ರದ ಐಡಿಯಲ್ ಹೋಮ್ಸ್ ನಲ್ಲಿ ಒಕ್ಕಲಿಗ ಸಮುದಾಯದ ನಾನಾ ಸಂಘಟನೆಗಳ ಮುಖಂಡರೊಂದಿಗಿನ ಸಭೆಯಲ್ಲಿ ಈ ಮಾತುಗಳನ್ನು ಹೇಳಿದರು.

‘ಕೆಲವರು ಬಂಡೆನ ಡೈನಮೇಟ್ ಇಟ್ಟು ಪುಡಿ ಪುಡಿ ಮಾಡುತ್ತೇವೆ ಅಂತಿದ್ದಾರೆ. ಬಂಡೆ ಪುಡಿಯಾಗಿ ಜಲ್ಲಿಕಲ್ಲಾದರೆ ಮನೆಕಟ್ಟಲು, ದೇವರ ಗುಡಿಯ ಮುಂದೆ ಗರಡುಗಂಭವಾಗಿ ನಿಲ್ಲಲು, ಕಲ್ಲು ವಿಗ್ರಹವಾಗಿ, ಚಪ್ಪಡಿ ಕಲ್ಲಾಗಿ ಜನರಿಗೆ ಉಪಯೋಗಲು ಸಾಧ್ಯ. ಮಿತಿ ಮೀರಿದರೆ, ಈ ಜನ ವಿರೋಧಿ ಸರ್ಕಾರಕ್ಕೆ ಜನ ಬೀಸುವ ಕಲ್ಲಾಗುವೆ. ಹೀಗಾಗಿ ನಾನು ಕೇವಲ ಬಂಡೆಯಾಗಲು ಇಚ್ಚಿಸುವುದಿಲ್ಲ. ಜನರಿಗೆ ನನ್ನಿಂದ ಉಪಯೋಗವಾದರೆ ಸಾಕು” ಎಂದು ಹೇಳಿದರು.

ಇದನ್ನೂ ಓದಿ: ಇದು ಕೇವಲ ಉಪ ಚುನಾವಣೆಯಲ್ಲ, ನೈತಿಕ ರಾಜಕಾರಣ ಉಳಿಸುವ ಗುರುತರ ಜವಾಬ್ಧಾರಿ!

“ನಾವು ಬೀಜ ಬಿತ್ತುವಾಗ ಅದು ಮರವಾಗಿ ಹಣ್ಣಾದರೂ ನೀಡಲಿ, ನೆರಳಾದರು ನೀಡಲಿ ಎಂಬ ಒಳ್ಳೆ ಭಾವನೆಯಿಂದ ಬಿತ್ತುತ್ತೇವೆ. ಎಲ್ಲ ಬೀಜಗಳು ಹಣ್ಣನ್ನೇ ನೀಡಬೇಕು ಎಂದು ಬಯಸುವುದಿಲ್ಲ. ಕೆಲವೊಮ್ಮೆ ಮರ ಬೆಳೆಸುವವರು ಒಬ್ಬರಾದರೆ, ಮತ್ತೊಬ್ಬರು ಹಣ್ಣು ತಿನ್ನುತ್ತಾರೆ. ಯಾರೋ ಕಟ್ಟಿದ ಹುತ್ತದಲ್ಲಿ ವಿಷ ಸರ್ಪ ಬಂದು ಸೇರುತ್ತದೆ. ಇದು ಪ್ರಕೃತಿ ನಿಯಮ” ಎಂದು ವಿವರಿಸಿದರು.

“ನಮ್ಮ ರವಿ ಪತ್ನಿ ಕುಸುಮಾ ಮತ್ತು ಅವರ ಕುಟುಂಬ ನನಗೆ ಮುಂಚೆಯಿಂದಲೂ ಗೊತ್ತಿದೆ. ಪಾಪ ಆತ ಯಾವುದೋ ಕಾರಣಕ್ಕೆ ಹೇಡಿತನ ತೋರಿಬಿಟ್ಟ. ಆತ ಯಾವುದೇ ಪರಿಸ್ಥಿತಿ ಇದ್ದರೂ ಧೈರ್ಯದಿಂದ ಎದುರಿಸಿ ತನ್ನ ತಂದೆ-ತಾಯಿ, ಕಟ್ಟಿಕೊಂಡ ಹೆಂಡತಿಯನ್ನು ನೋಡಿಕೊಳ್ಳಬೇಕಿತ್ತು. ನಮ್ಮ ಸಮಾಜ ಅವರನ್ನು ಎಷ್ಟು ಪ್ರೀತಿ, ಗೌರವದಿಂದ ನೋಡುತ್ತಿತ್ತು. ಆದರೆ ನಷ್ಟ ಆಗಿದ್ದು ಯಾರಿಗೆ? ಆತನ ಅಸಹಜ ಸಾವನ್ನು, ಅನೇಕರು ಕೊಲೆಯಾಯ್ತು ಅಂತಾ ಧರಣಿ ಮಾಡಿದ್ದನ್ನು ನೋಡಿದ್ದೇವೆ. ನಮ್ಮದೇ ಸರ್ಕಾರ ಸಿಬಿಐ ತನಿಖೆಗೆ ಕೊಟ್ಟೆವು. ಯಾವ ಯಾವ ಹೇಳಿಕೆ ಕೊಡಿಸಿದ್ದಾರೆ ಎಂಬ ದಾಖಲೆಯೂ ನಮ್ಮ ಬಳಿ ಇದೆ. ಆದರೆ ನಾವು ಈ ವಿಚಾರವನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುವುದು ಬೇಡ. ನಮ್ಮ ಹೆಣ್ಣು ಮಗಳು ಎಲ್ಲರ ಸಾಕ್ಷಿಯಾಗಿ ತಾಳಿ ಕಟ್ಟಿಸಿಕೊಂಡು, ಸಪ್ತಪದಿ ತುಳಿದು ಮದುವೆಯಾಗಿದ್ದಾಳೆ. ಆದರೆ ನಮ್ಮ ಶೋಭಕ್ಕ ಚುನಾವಣೆ ವೇಳೆ ಗಂಡನ ಹೆಸರು ಬಳಸಿಕೊಳ್ಳಬೇಡ ಅಂತಾರಲ್ಲ ಹೇಗೆ ಸಾಧ್ಯ? ಶೋಭಕ್ಕ ನೀನು, ನಿನ್ನ ಮಗಳೋ, ತಂಗಿನೋ ಆ ಸ್ಥಾನದಲ್ಲಿ ಇದ್ದಿದ್ದರೆ ಏನು ಹೇಳುತ್ತಿದ್ದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲುವ ಭೀತಿ: ಮೀಟಿಂಗ್‌ ಮೇಲೆ ಮೀಟಿಂಗ್‌

“ಈಗ ನವರಾತ್ರಿ ನಡೆಯುತ್ತಿದೆ. ಈ ಕ್ಷೇತ್ರಕ್ಕೆ ರಕ್ಷಣೆ ನೀಡಲು ದುರ್ಗಾದೇವಿ, ರಾಜರಾಜೇಶ್ವರಿ ಆಶೀರ್ವಾದ ಬೇಕಿದೆ. ಈ ದೇವತೆಗಳ ಆಶೀರ್ವಾದದೊಂದಿಗೆ ನಾವು ಕ್ಷೇತ್ರದ ಹಿತ ಕಾಯಲು ನೊಂದು ಬೆಂದಿರುವ ಹೆಣ್ಣು ಮಗಳನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದೇವೆ” ಎಂದರು.

‘ಕೊರೋನಾ ಹರಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರವೇ ನೇರ ಕಾರಣವಾಗಿದ್ದು, ಮೊದಲು ಲಸಿಕೆಯನ್ನು ತರಲಿ. ಆಮೇಲೆ ಅದನ್ನು ಉಚಿತವಾಗಿ ನೀಡುವ ಬಗ್ಗೆ ಘೋಷಣೆ ಮಾಡಲಿ. ಚುನಾವಣೆಗೋಸ್ಕರ ಸುಖಾಸುಮ್ಮನೆ ಆಶ್ವಾಸನೆ ನೀಡುವುದು ಬೇಡ’ ಎಂದು ಟೀಕಿಸಿದ್ದಾರೆ.

“ಸರ್ಕಾರ ಲಾಕ್ ಡೌನ್ ಮಾಡಿದ್ದಕ್ಕೆ ಚಾಲಕರಿಗೆ, ನೇಕಾರರಿಗೆ, ಸವಿತಾ ಸಮಾಜದವರಿಗೆ 5 ಸಾವಿರ ಕೊಡುತ್ತೇನೆ ಎಂದು ಹೇಳಿದರು. ಆದರೆ ಈವರೆಗೂ ಕೊಟ್ಟಿಲ್ಲ. ಒಬ್ಬ ಕಾರ್ಮಿಕ, ರೈತನಿಗೆ ಸಹಾಯ ಮಾಡಿಲ್ಲ. ನಗರ ಪ್ರದೇಶಗಳಲ್ಲಿ ಕಟ್ಟಡಗಳು ಖಾಲಿ ಬಿದ್ದಿದೆ. ಪಾಲಿಕೆಗಳಿಗೆ ಸೂಚನೆ ನೀಡಿ ಅವರಿಗೆ ತೆರಿಗೆ ವಿನಾಯಿತಿ ಕೊಡಲು ಇವರಿಂದ ಸಾಧ್ಯವಾಗುವುದಿಲ್ಲವೇ? ಬ್ಯಾಂಕ್ ಸಾಲದ ಬಡ್ಡಿ ಮನ್ನಾ ಮಾಡಿದ್ದಾರಾ? ಇವರೇನು ಲಸಿಕೆ ಕೊಡುತ್ತಾರೆ? ಕೋರೊನಾದಿಂದ ಮೃತಪಟ್ಟವರ ಹೆಣವನ್ನು ಬಿಸಾಡಿದರು. ಕೇಂದ್ರ ಸರ್ಕಾರ ನಮ್ಮ ಕೇಂದ್ರ ಸಚಿವರ ಪಾರ್ಥಿವ ಶರೀರವನ್ನು ಅವರ ಕುಟುಂಬದವರಿಗೆ ತೋರಿಸಲಿಲ್ಲ. ಸೇನಾ ವಿಮಾನ ಸೌಲಭ್ಯ ಕಲ್ಪಿಸಿ ಅವರ ಶವವನ್ನು ಇಲ್ಲಿಗೆ ತಲುಪಿಸಿದ್ದರೆ ಅವರ ಕುಟುಂಬದವರು, ಜನರು ಅವರ ಮುಖ ನೋಡಿಕೊಳ್ಳುತ್ತಿದ್ದರು. ಇಚ್ಛೆ ಇದ್ದರೆ ಅದನ್ನು ಮಾಡುವ ಧೃಢ ನಿರ್ಧಾರ ಇರುತ್ತದೆ. ಇದರಲ್ಲೇ ಸರ್ಕಾರಕ್ಕೆ ಯಾವುದೇ ದೂರದೃಷ್ಟಿ ಇಲ್ಲ ಎಂಬುದು ತಿಳಿಯುತ್ತದೆ” ಎಂದರು.


ಇದನ್ನೂ ಓದಿ: ಈ ಉಪಚುನಾವಣೆ ಜನರ ತೀರ್ಪು ಮಾರಿಕೊಂಡವರಿಗೆ ಪಾಠವಾಗಲಿ- ಡಿ.ಕೆ.ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...