Homeಕರ್ನಾಟಕನಾನು ಬಂಡೆ ಅಲ್ಲ; ಬಿಜೆಪಿ ಸರ್ಕಾರದ ವಿರುದ್ಧ ಜನ ಬೀಸುವ ಕಲ್ಲು: ಡಿ.ಕೆ.ಶಿವಕುಮಾರ್

ನಾನು ಬಂಡೆ ಅಲ್ಲ; ಬಿಜೆಪಿ ಸರ್ಕಾರದ ವಿರುದ್ಧ ಜನ ಬೀಸುವ ಕಲ್ಲು: ಡಿ.ಕೆ.ಶಿವಕುಮಾರ್

ಕೆಲವರು ಬಂಡೆನ ಡೈನಮೇಟ್ ಇಟ್ಟು ಪುಡಿ ಪುಡಿ ಮಾಡುತ್ತೇವೆ ಅಂತಿದ್ದಾರೆ. ಬಂಡೆ ಪುಡಿಯಾಗಿ ಜಲ್ಲಿಕಲ್ಲಾದರೆ ಮನೆಕಟ್ಟಲು, ದೇವರ ಗುಡಿಯ ಮುಂದೆ ಗರಡುಗಂಭವಾಗಿ ನಿಲ್ಲಲು, ವಿಗ್ರಹವಾಗಿ, ಚಪ್ಪಡಿ ಕಲ್ಲಾಗಿ ಜನರಿಗೆ ಉಪಯೋಗಲು ಸಾಧ್ಯ.

- Advertisement -
- Advertisement -

ರಾಜ್ಯದಲ್ಲಿ ಉಪಚುನಾವಣೆಯ ಗಾಳಿ ದಿನೇ ದಿನೇ ರಭಸವಾಗುತ್ತಿದ್ದು, ಪ್ರತಿ ಪಕ್ಷಗಳೂ ಪರಸ್ಪರ ಟೀಕಾಪ್ರಹಾರ ಮಾಡುತ್ತಿವೆ. ಈ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, “ನಾನು ಜನವಿರೋಧಿ ಬಿಜೆಪಿ ಸರ್ಕಾರದ ವಿರುದ್ಧ ಈ ರಾಜ್ಯದ ಜನತೆ ಬೀಸುವ ಕಲ್ಲು” ಎಂದು ಹರಿಹಾಯ್ದಿದ್ದಾರೆ.

“ನಾನು ಬಂಡೆಯಾಗಲು ಇಚ್ಚಿಸುವುದಿಲ್ಲ. ರಾಜ್ಯದ ಜನ ವಿಧಾನಸೌಧಕ್ಕೆ ಹತ್ತಿಕೊಂಡು ಹೋಗುವ ಮೆಟ್ಟಿಲಿನ ಚಪ್ಪಡಿಕಲ್ಲಾಗುತ್ತೇನೆ. ಇಲ್ಲವಾದರೆ ಈ ಜನವಿರೋಧಿ ಬಿಜೆಪಿ ಸರ್ಕಾರದ ವಿರುದ್ಧ ಜನ ಬೀಸುವ ಕಲ್ಲು” ಎಂದು ಹೇಳಿದ್ದಾರೆ.

ಡಿ.ಕೆ. ಶಿವಕುಮಾರ್ ರಾಜರಾಜೇಶ್ವರಿ ನಗರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಪ್ರಚಾರದಲ್ಲಿ, ಕ್ಷೇತ್ರದ ಐಡಿಯಲ್ ಹೋಮ್ಸ್ ನಲ್ಲಿ ಒಕ್ಕಲಿಗ ಸಮುದಾಯದ ನಾನಾ ಸಂಘಟನೆಗಳ ಮುಖಂಡರೊಂದಿಗಿನ ಸಭೆಯಲ್ಲಿ ಈ ಮಾತುಗಳನ್ನು ಹೇಳಿದರು.

‘ಕೆಲವರು ಬಂಡೆನ ಡೈನಮೇಟ್ ಇಟ್ಟು ಪುಡಿ ಪುಡಿ ಮಾಡುತ್ತೇವೆ ಅಂತಿದ್ದಾರೆ. ಬಂಡೆ ಪುಡಿಯಾಗಿ ಜಲ್ಲಿಕಲ್ಲಾದರೆ ಮನೆಕಟ್ಟಲು, ದೇವರ ಗುಡಿಯ ಮುಂದೆ ಗರಡುಗಂಭವಾಗಿ ನಿಲ್ಲಲು, ಕಲ್ಲು ವಿಗ್ರಹವಾಗಿ, ಚಪ್ಪಡಿ ಕಲ್ಲಾಗಿ ಜನರಿಗೆ ಉಪಯೋಗಲು ಸಾಧ್ಯ. ಮಿತಿ ಮೀರಿದರೆ, ಈ ಜನ ವಿರೋಧಿ ಸರ್ಕಾರಕ್ಕೆ ಜನ ಬೀಸುವ ಕಲ್ಲಾಗುವೆ. ಹೀಗಾಗಿ ನಾನು ಕೇವಲ ಬಂಡೆಯಾಗಲು ಇಚ್ಚಿಸುವುದಿಲ್ಲ. ಜನರಿಗೆ ನನ್ನಿಂದ ಉಪಯೋಗವಾದರೆ ಸಾಕು” ಎಂದು ಹೇಳಿದರು.

ಇದನ್ನೂ ಓದಿ: ಇದು ಕೇವಲ ಉಪ ಚುನಾವಣೆಯಲ್ಲ, ನೈತಿಕ ರಾಜಕಾರಣ ಉಳಿಸುವ ಗುರುತರ ಜವಾಬ್ಧಾರಿ!

“ನಾವು ಬೀಜ ಬಿತ್ತುವಾಗ ಅದು ಮರವಾಗಿ ಹಣ್ಣಾದರೂ ನೀಡಲಿ, ನೆರಳಾದರು ನೀಡಲಿ ಎಂಬ ಒಳ್ಳೆ ಭಾವನೆಯಿಂದ ಬಿತ್ತುತ್ತೇವೆ. ಎಲ್ಲ ಬೀಜಗಳು ಹಣ್ಣನ್ನೇ ನೀಡಬೇಕು ಎಂದು ಬಯಸುವುದಿಲ್ಲ. ಕೆಲವೊಮ್ಮೆ ಮರ ಬೆಳೆಸುವವರು ಒಬ್ಬರಾದರೆ, ಮತ್ತೊಬ್ಬರು ಹಣ್ಣು ತಿನ್ನುತ್ತಾರೆ. ಯಾರೋ ಕಟ್ಟಿದ ಹುತ್ತದಲ್ಲಿ ವಿಷ ಸರ್ಪ ಬಂದು ಸೇರುತ್ತದೆ. ಇದು ಪ್ರಕೃತಿ ನಿಯಮ” ಎಂದು ವಿವರಿಸಿದರು.

“ನಮ್ಮ ರವಿ ಪತ್ನಿ ಕುಸುಮಾ ಮತ್ತು ಅವರ ಕುಟುಂಬ ನನಗೆ ಮುಂಚೆಯಿಂದಲೂ ಗೊತ್ತಿದೆ. ಪಾಪ ಆತ ಯಾವುದೋ ಕಾರಣಕ್ಕೆ ಹೇಡಿತನ ತೋರಿಬಿಟ್ಟ. ಆತ ಯಾವುದೇ ಪರಿಸ್ಥಿತಿ ಇದ್ದರೂ ಧೈರ್ಯದಿಂದ ಎದುರಿಸಿ ತನ್ನ ತಂದೆ-ತಾಯಿ, ಕಟ್ಟಿಕೊಂಡ ಹೆಂಡತಿಯನ್ನು ನೋಡಿಕೊಳ್ಳಬೇಕಿತ್ತು. ನಮ್ಮ ಸಮಾಜ ಅವರನ್ನು ಎಷ್ಟು ಪ್ರೀತಿ, ಗೌರವದಿಂದ ನೋಡುತ್ತಿತ್ತು. ಆದರೆ ನಷ್ಟ ಆಗಿದ್ದು ಯಾರಿಗೆ? ಆತನ ಅಸಹಜ ಸಾವನ್ನು, ಅನೇಕರು ಕೊಲೆಯಾಯ್ತು ಅಂತಾ ಧರಣಿ ಮಾಡಿದ್ದನ್ನು ನೋಡಿದ್ದೇವೆ. ನಮ್ಮದೇ ಸರ್ಕಾರ ಸಿಬಿಐ ತನಿಖೆಗೆ ಕೊಟ್ಟೆವು. ಯಾವ ಯಾವ ಹೇಳಿಕೆ ಕೊಡಿಸಿದ್ದಾರೆ ಎಂಬ ದಾಖಲೆಯೂ ನಮ್ಮ ಬಳಿ ಇದೆ. ಆದರೆ ನಾವು ಈ ವಿಚಾರವನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುವುದು ಬೇಡ. ನಮ್ಮ ಹೆಣ್ಣು ಮಗಳು ಎಲ್ಲರ ಸಾಕ್ಷಿಯಾಗಿ ತಾಳಿ ಕಟ್ಟಿಸಿಕೊಂಡು, ಸಪ್ತಪದಿ ತುಳಿದು ಮದುವೆಯಾಗಿದ್ದಾಳೆ. ಆದರೆ ನಮ್ಮ ಶೋಭಕ್ಕ ಚುನಾವಣೆ ವೇಳೆ ಗಂಡನ ಹೆಸರು ಬಳಸಿಕೊಳ್ಳಬೇಡ ಅಂತಾರಲ್ಲ ಹೇಗೆ ಸಾಧ್ಯ? ಶೋಭಕ್ಕ ನೀನು, ನಿನ್ನ ಮಗಳೋ, ತಂಗಿನೋ ಆ ಸ್ಥಾನದಲ್ಲಿ ಇದ್ದಿದ್ದರೆ ಏನು ಹೇಳುತ್ತಿದ್ದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲುವ ಭೀತಿ: ಮೀಟಿಂಗ್‌ ಮೇಲೆ ಮೀಟಿಂಗ್‌

“ಈಗ ನವರಾತ್ರಿ ನಡೆಯುತ್ತಿದೆ. ಈ ಕ್ಷೇತ್ರಕ್ಕೆ ರಕ್ಷಣೆ ನೀಡಲು ದುರ್ಗಾದೇವಿ, ರಾಜರಾಜೇಶ್ವರಿ ಆಶೀರ್ವಾದ ಬೇಕಿದೆ. ಈ ದೇವತೆಗಳ ಆಶೀರ್ವಾದದೊಂದಿಗೆ ನಾವು ಕ್ಷೇತ್ರದ ಹಿತ ಕಾಯಲು ನೊಂದು ಬೆಂದಿರುವ ಹೆಣ್ಣು ಮಗಳನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದೇವೆ” ಎಂದರು.

‘ಕೊರೋನಾ ಹರಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರವೇ ನೇರ ಕಾರಣವಾಗಿದ್ದು, ಮೊದಲು ಲಸಿಕೆಯನ್ನು ತರಲಿ. ಆಮೇಲೆ ಅದನ್ನು ಉಚಿತವಾಗಿ ನೀಡುವ ಬಗ್ಗೆ ಘೋಷಣೆ ಮಾಡಲಿ. ಚುನಾವಣೆಗೋಸ್ಕರ ಸುಖಾಸುಮ್ಮನೆ ಆಶ್ವಾಸನೆ ನೀಡುವುದು ಬೇಡ’ ಎಂದು ಟೀಕಿಸಿದ್ದಾರೆ.

“ಸರ್ಕಾರ ಲಾಕ್ ಡೌನ್ ಮಾಡಿದ್ದಕ್ಕೆ ಚಾಲಕರಿಗೆ, ನೇಕಾರರಿಗೆ, ಸವಿತಾ ಸಮಾಜದವರಿಗೆ 5 ಸಾವಿರ ಕೊಡುತ್ತೇನೆ ಎಂದು ಹೇಳಿದರು. ಆದರೆ ಈವರೆಗೂ ಕೊಟ್ಟಿಲ್ಲ. ಒಬ್ಬ ಕಾರ್ಮಿಕ, ರೈತನಿಗೆ ಸಹಾಯ ಮಾಡಿಲ್ಲ. ನಗರ ಪ್ರದೇಶಗಳಲ್ಲಿ ಕಟ್ಟಡಗಳು ಖಾಲಿ ಬಿದ್ದಿದೆ. ಪಾಲಿಕೆಗಳಿಗೆ ಸೂಚನೆ ನೀಡಿ ಅವರಿಗೆ ತೆರಿಗೆ ವಿನಾಯಿತಿ ಕೊಡಲು ಇವರಿಂದ ಸಾಧ್ಯವಾಗುವುದಿಲ್ಲವೇ? ಬ್ಯಾಂಕ್ ಸಾಲದ ಬಡ್ಡಿ ಮನ್ನಾ ಮಾಡಿದ್ದಾರಾ? ಇವರೇನು ಲಸಿಕೆ ಕೊಡುತ್ತಾರೆ? ಕೋರೊನಾದಿಂದ ಮೃತಪಟ್ಟವರ ಹೆಣವನ್ನು ಬಿಸಾಡಿದರು. ಕೇಂದ್ರ ಸರ್ಕಾರ ನಮ್ಮ ಕೇಂದ್ರ ಸಚಿವರ ಪಾರ್ಥಿವ ಶರೀರವನ್ನು ಅವರ ಕುಟುಂಬದವರಿಗೆ ತೋರಿಸಲಿಲ್ಲ. ಸೇನಾ ವಿಮಾನ ಸೌಲಭ್ಯ ಕಲ್ಪಿಸಿ ಅವರ ಶವವನ್ನು ಇಲ್ಲಿಗೆ ತಲುಪಿಸಿದ್ದರೆ ಅವರ ಕುಟುಂಬದವರು, ಜನರು ಅವರ ಮುಖ ನೋಡಿಕೊಳ್ಳುತ್ತಿದ್ದರು. ಇಚ್ಛೆ ಇದ್ದರೆ ಅದನ್ನು ಮಾಡುವ ಧೃಢ ನಿರ್ಧಾರ ಇರುತ್ತದೆ. ಇದರಲ್ಲೇ ಸರ್ಕಾರಕ್ಕೆ ಯಾವುದೇ ದೂರದೃಷ್ಟಿ ಇಲ್ಲ ಎಂಬುದು ತಿಳಿಯುತ್ತದೆ” ಎಂದರು.


ಇದನ್ನೂ ಓದಿ: ಈ ಉಪಚುನಾವಣೆ ಜನರ ತೀರ್ಪು ಮಾರಿಕೊಂಡವರಿಗೆ ಪಾಠವಾಗಲಿ- ಡಿ.ಕೆ.ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....