Homeಕರ್ನಾಟಕನಾನು ಹಾವಿನಪುರದಲ್ಲಿ ತರಬೇತಿ ಪಡೆದಿಲ್ಲ, ವಾಟ್ಸಪ್‌ ಯುನಿವರ್ಸಿಟಿ ವಿದ್ಯಾರ್ಥಿಯೂ ಅಲ್ಲ: ಸಚಿವ ಬಿಸಿ ನಾಗೇಶ್‌ ವಿರುದ್ಧ...

ನಾನು ಹಾವಿನಪುರದಲ್ಲಿ ತರಬೇತಿ ಪಡೆದಿಲ್ಲ, ವಾಟ್ಸಪ್‌ ಯುನಿವರ್ಸಿಟಿ ವಿದ್ಯಾರ್ಥಿಯೂ ಅಲ್ಲ: ಸಚಿವ ಬಿಸಿ ನಾಗೇಶ್‌ ವಿರುದ್ಧ ಕಾಂಗ್ರೆಸ್‌ ನಾಯಕ ಬಿಕೆ ಹರಿಪ್ರಸಾದ್‌ ವಾಗ್ದಾಳಿ

- Advertisement -
- Advertisement -

ಇತಿಹಾಸದ ಬಗ್ಗೆ ನಂಬಿಕೆಯೂ ಇಲ್ಲದ, ಕನಿಷ್ಠ ಅದರ ತಿಳುವಳಿಕೆಯೂ ಇಲ್ಲದ ಶಿಕ್ಷಣ ಸಚಿವ ನಾಗೇಶ್ ಅವರು ಇತಿಹಾಸದ ಪಾಠ ಹೇಳಲು ಬರುತ್ತಿದ್ದಾರೆ. ಬಿಸಿ ನಾಗೇಶ್ ಅವರೇ ನಾನು ನಿಮ್ಮ ಹಾವಿನಪುರದಲ್ಲಿ ತರಬೇತಿ ಪಡೆದವನೂ ಅಲ್ಲ, ವಾಟ್ಸಪ್ ಫಾರ್ವರ್ಡ್‌ ಯುನಿವರ್ಸಿಟಿಯ ವಿದ್ಯಾರ್ಥಿಯೂ ಅಲ್ಲ ಎಂದು ವಿರೋಧ ಪಕ್ಷದ ನಾಯಕರಾದ ಬಿಕೆ ಹರಿಪ್ರಸಾದ್ ಸೋಮವಾರ ಆಕ್ರೊಶ ವ್ಯಕ್ತಪಡಿಸಿದ್ದಾರೆ.

“ರಾಷ್ಟ್ರೀಯತೆ, ಸ್ವಾತಂತ್ರ್ಯ ಹೋರಾಟ, ರಾಷ್ಟ್ರಪ್ರೇಮ, ರಾಷ್ಟ್ರಧ್ವಜದ ವಿರುದ್ಧ ಇದ್ದವರಿಂದ ಪಾಠ ಹೇಳಿಸಿಕೊಳ್ಳುವ ದಾರಿದ್ರ್ಯ ಬಂದಿಲ್ಲ, ಬರುವುದು ಇಲ್ಲ. ಕೇಸರಿ ಬಿಳಿ ಹಸಿರು ಬಣ್ಣಗಳ ನಡುವೆ ಅಶೋಕ ಚಕ್ರವಿರುವ ರಾಷ್ಟ್ರಧ್ವಜ ಬಗ್ಗೆ ನಿಮ್ಮ ಸಂಘದ ಸಂಸ್ಥಾಪಕ ಹೆಡ್ಗೇವಾರ್ ತಿರಸ್ಕಾರ ಮನೋಭಾವನೆಯ ಜೊತೆಗೆ ಕನಿಷ್ಟ ಗೌರವವೂ ಇರಲಿಲ್ಲ ಎಂಬುದನ್ನ ಸಾಬೀತು ಮಾಡಲು ನಾನು ಸಿದ್ದ” ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್‌ ಅವರಿಗೆ ಸವಾಲು ಎಸೆದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“1930ರಲ್ಲಿಯೇ ತ್ರಿವರ್ಣ ಧ್ವಜವನ್ನು ಸ್ವಾತಂತ್ರ್ಯ ಹೋರಾಟದ ಸ್ಪೂರ್ತಿಯಾಗಿ ಎಲ್ಲಾ ವರ್ಗದ, ಧರ್ಮದವರನ್ನು ಪ್ರತಿನಿಧಿಸುವಂತೆ ರಚಿಸಿ, ಇಡೀ ದೇಶವೇ ತ್ರಿವರ್ಣ ಧ್ವಜವನ್ನ ಒಪ್ಪಿ ಅಪ್ಪಿಕೊಂಡಾಗಿತ್ತು. ಆದರೆ 1928ರಿಂದಲೇ ಭಾಗಧ್ವಜವನ್ನು ಆರೆಸ್ಸೆಸ್‌‌ ಅಧಿಕೃತ ನಿಶಾನೆ ಎಂದು ಹೆಡ್ಗೇವಾರ್ ಘೋಷಿಸಿದ್ದರಿಂದ, ತ್ರಿವರ್ಣ ಧ್ವಜವನ್ನ ಸಂಘಪರಿವಾರ ಒಪ್ಪಲೇ ಇಲ್ಲ. ಹೆಚ್ಚಿನ ಮಾಹಿತಿ ಬೇಕಿದ್ದರೆ ಹೆಡ್ಗೇವಾರರ ಸಹಚರನಾಗಿದ್ದ ಎನ್‌ಹೆಚ್ ಪಾಲ್ಕರ್ ಬರೆದ ‘Saffron flag’ ಪುಸ್ತಕದಲ್ಲಿ ದಾಖಲೆಗಳಿವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೋಹಿತ್‌ ಚಕ್ರತೀರ್ಥ ಐಐಟಿ, ಸಿಇಟಿ ಪ್ರೊಫೆಸರ್‌‌: ಶಿಕ್ಷಣ ಸಚಿವ ಬಿ.ಸಿ ನಾಗೇಶ್

“ಅಷ್ಟೇ ಯಾಕೆ ಸ್ವಾಮಿ, ಸಂಘದ ಸ್ಥಾಪಕ ಮುಖಂಡ ಗೋಳ್ವಾಲ್ಕರ್ ಬರೆದ ‘ಬಂಚ್ ಆಫ್ ಥಾಟ್ಸ್’ ಪುಸ್ತಕದಲ್ಲಿ ರಾಷ್ಟ್ರಧ್ವಜವನ್ನು ತಿರಸ್ಕಾರ ಮಾಡಿದ್ದಾರೆ. ಕಣ್ಣಿನ ಪೊರೆ ಕಳಚಿಟ್ಟು ಓದಿ” ಎಂದು ಕಿಡಿ ಕಾರಿದ್ದಾರೆ.

“1930 ಜನವರಿ 26ರಂದು ಸ್ವಾತಂತ್ರ್ಯ ಹೋರಾಟಗಾರರು ತ್ರಿವರ್ಣ ಧ್ವಜವನ್ನು ದೇಶದೆಲ್ಲೆಡೆ ಹಾರಿಸಲು ತೀರ್ಮಾನಿಸಿದಾಗ, ಈ ಹೆಡ್ಗೆವಾರ್ ‘ನಮ್ಮ ಎಲ್ಲಾ ಶಾಖೆಯ ಕಚೇರಿಗಳಲ್ಲಿ ಭಾಗವಧ್ವಜ ಹಾರಿಸಬೇಕು’ ಎಂದು ಕರೆ ಕೊಟ್ಟಿದ್ದನ್ನು ದೇಶ ಮರೆತಿಲ್ಲ. ಆಗ ಹೆಡ್ಗೇವಾರ್ ಬದುಕಿದ್ದರು” ಎಂದು ಹೇಳಿದ್ದಾರೆ.

“ಬಿಜೆಪಿಯ ಪಿತಾಮಹ ಶ್ಯಾಂ ಪ್ರಸಾದ್ ಮುಖರ್ಜಿ ಸ್ವಾತಂತ್ರ್ಯ ಭಾರತದ ನಂತರ ಪಂಡಿತ್ ಜವಹರಲಾಲ್ ನೆಹರೂ ಸರ್ಕಾರದಲ್ಲಿ ಮಂತ್ರಿಯಾಗಿದ್ದರೂ ಕೂಡ ಅವರ ಅಧಿಕೃತ ನಿವಾಸದ ಮೇಲೆ ಹಾರಿಸುತ್ತಿದ್ದಿದ್ದು ಭಗವದ್ವಜ ಹೊರತು ರಾಷ್ಟ್ರಧ್ವಜ ಅಲ್ಲ” ಎಂದು ಹರಿಪ್ರಸಾದ್‌ ಹೇಳಿದ್ದಾರೆ.

ಇದನ್ನೂ ಓದಿ: ಮಕ್ಕಳಿಗೆ ಇನ್ನೂ ಸಿಕ್ಕಿಲ್ಲ ಪಠ್ಯಪುಸ್ತಕ: ಪೋಷಕರ ಸಂಘಟನೆಗಳ ಸಮನ್ವಯ ಸಮಿತಿ ಆಕ್ರೋಶ

“ಅಷ್ಟಕ್ಕೂ ಆರೆಸ್ಸೆಸ್ಸಿನ ಮುಖವಾಣಿ ಆರ್ಗನೈಸರ್ ಅಲ್ಲಿ ತ್ರಿವರ್ಣ ಇರುವ ಭಾರತದ ಧ್ವಜ ಅಪಶಕುನ ಎಂದು ಬರೆದಿರುವುದು ದಾಖಲೆಯಾಗಿದೆ. ಸ್ವಾತಂತ್ರ್ಯ ಬಂದು 2002ರವರೆಗೆ ರಾಷ್ಟ್ರ ಧ್ವಜವನ್ನ ಶಾಖೆಯ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಹಾರಿಸಲೇ ಇಲ್ಲ ಯಾಕೆ ಎಂಬುದನ್ನ ಮೊದಲು ಸ್ಪಷ್ಟಪಡಿಸಿ” ಎಂದು ಅವರು ಹೇಳಿದ್ದಾರೆ.

“ಆರೆಸ್ಸೆಸ್ಸ್‌ ಹಾಗೂ ಬಿಜೆಪಿ ತಮ್ಮ ಹುಟ್ಟಿನಿಂದಲೇ ಸ್ವಾತಂತ್ರ್ಯ ಹೋರಾಟದ ಜೊತೆ ಜೊತೆಗೆ ರಾಷ್ಟ್ರೀಯತೆ, ರಾಷ್ಟ್ರಧ್ವಜದ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದ್ದಾರೆ ಎಂಬ ನನ್ನ ಹೇಳಿಕೆಗೆ ಈಗಲೂ ನಾನು ಬದ್ಧ. ಚರ್ಚೆಗೂ ಸಿದ್ದ” ಎಂದು ಅವರು ಬಿಜೆಪಿ ಸರ್ಕಾರಕ್ಕೆ ಸವಾಲು ಎಸೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಾನಗೆಟ್ಟ ಮೂರ್ಖ ಚಡ್ಡಿಗಳಿಗೆ ಸಾರ್ವಜನಿಕವಾಗಿ ಬೆತ್ತಲಾಗುವುದು ಒಂದು ಹವ್ಯಾಸವೇ ಆಗಿಬಿಟ್ಟಿದೆ.

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...