Homeಕರ್ನಾಟಕನಾನು ಹಾವಿನಪುರದಲ್ಲಿ ತರಬೇತಿ ಪಡೆದಿಲ್ಲ, ವಾಟ್ಸಪ್‌ ಯುನಿವರ್ಸಿಟಿ ವಿದ್ಯಾರ್ಥಿಯೂ ಅಲ್ಲ: ಸಚಿವ ಬಿಸಿ ನಾಗೇಶ್‌ ವಿರುದ್ಧ...

ನಾನು ಹಾವಿನಪುರದಲ್ಲಿ ತರಬೇತಿ ಪಡೆದಿಲ್ಲ, ವಾಟ್ಸಪ್‌ ಯುನಿವರ್ಸಿಟಿ ವಿದ್ಯಾರ್ಥಿಯೂ ಅಲ್ಲ: ಸಚಿವ ಬಿಸಿ ನಾಗೇಶ್‌ ವಿರುದ್ಧ ಕಾಂಗ್ರೆಸ್‌ ನಾಯಕ ಬಿಕೆ ಹರಿಪ್ರಸಾದ್‌ ವಾಗ್ದಾಳಿ

- Advertisement -
- Advertisement -

ಇತಿಹಾಸದ ಬಗ್ಗೆ ನಂಬಿಕೆಯೂ ಇಲ್ಲದ, ಕನಿಷ್ಠ ಅದರ ತಿಳುವಳಿಕೆಯೂ ಇಲ್ಲದ ಶಿಕ್ಷಣ ಸಚಿವ ನಾಗೇಶ್ ಅವರು ಇತಿಹಾಸದ ಪಾಠ ಹೇಳಲು ಬರುತ್ತಿದ್ದಾರೆ. ಬಿಸಿ ನಾಗೇಶ್ ಅವರೇ ನಾನು ನಿಮ್ಮ ಹಾವಿನಪುರದಲ್ಲಿ ತರಬೇತಿ ಪಡೆದವನೂ ಅಲ್ಲ, ವಾಟ್ಸಪ್ ಫಾರ್ವರ್ಡ್‌ ಯುನಿವರ್ಸಿಟಿಯ ವಿದ್ಯಾರ್ಥಿಯೂ ಅಲ್ಲ ಎಂದು ವಿರೋಧ ಪಕ್ಷದ ನಾಯಕರಾದ ಬಿಕೆ ಹರಿಪ್ರಸಾದ್ ಸೋಮವಾರ ಆಕ್ರೊಶ ವ್ಯಕ್ತಪಡಿಸಿದ್ದಾರೆ.

“ರಾಷ್ಟ್ರೀಯತೆ, ಸ್ವಾತಂತ್ರ್ಯ ಹೋರಾಟ, ರಾಷ್ಟ್ರಪ್ರೇಮ, ರಾಷ್ಟ್ರಧ್ವಜದ ವಿರುದ್ಧ ಇದ್ದವರಿಂದ ಪಾಠ ಹೇಳಿಸಿಕೊಳ್ಳುವ ದಾರಿದ್ರ್ಯ ಬಂದಿಲ್ಲ, ಬರುವುದು ಇಲ್ಲ. ಕೇಸರಿ ಬಿಳಿ ಹಸಿರು ಬಣ್ಣಗಳ ನಡುವೆ ಅಶೋಕ ಚಕ್ರವಿರುವ ರಾಷ್ಟ್ರಧ್ವಜ ಬಗ್ಗೆ ನಿಮ್ಮ ಸಂಘದ ಸಂಸ್ಥಾಪಕ ಹೆಡ್ಗೇವಾರ್ ತಿರಸ್ಕಾರ ಮನೋಭಾವನೆಯ ಜೊತೆಗೆ ಕನಿಷ್ಟ ಗೌರವವೂ ಇರಲಿಲ್ಲ ಎಂಬುದನ್ನ ಸಾಬೀತು ಮಾಡಲು ನಾನು ಸಿದ್ದ” ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್‌ ಅವರಿಗೆ ಸವಾಲು ಎಸೆದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“1930ರಲ್ಲಿಯೇ ತ್ರಿವರ್ಣ ಧ್ವಜವನ್ನು ಸ್ವಾತಂತ್ರ್ಯ ಹೋರಾಟದ ಸ್ಪೂರ್ತಿಯಾಗಿ ಎಲ್ಲಾ ವರ್ಗದ, ಧರ್ಮದವರನ್ನು ಪ್ರತಿನಿಧಿಸುವಂತೆ ರಚಿಸಿ, ಇಡೀ ದೇಶವೇ ತ್ರಿವರ್ಣ ಧ್ವಜವನ್ನ ಒಪ್ಪಿ ಅಪ್ಪಿಕೊಂಡಾಗಿತ್ತು. ಆದರೆ 1928ರಿಂದಲೇ ಭಾಗಧ್ವಜವನ್ನು ಆರೆಸ್ಸೆಸ್‌‌ ಅಧಿಕೃತ ನಿಶಾನೆ ಎಂದು ಹೆಡ್ಗೇವಾರ್ ಘೋಷಿಸಿದ್ದರಿಂದ, ತ್ರಿವರ್ಣ ಧ್ವಜವನ್ನ ಸಂಘಪರಿವಾರ ಒಪ್ಪಲೇ ಇಲ್ಲ. ಹೆಚ್ಚಿನ ಮಾಹಿತಿ ಬೇಕಿದ್ದರೆ ಹೆಡ್ಗೇವಾರರ ಸಹಚರನಾಗಿದ್ದ ಎನ್‌ಹೆಚ್ ಪಾಲ್ಕರ್ ಬರೆದ ‘Saffron flag’ ಪುಸ್ತಕದಲ್ಲಿ ದಾಖಲೆಗಳಿವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೋಹಿತ್‌ ಚಕ್ರತೀರ್ಥ ಐಐಟಿ, ಸಿಇಟಿ ಪ್ರೊಫೆಸರ್‌‌: ಶಿಕ್ಷಣ ಸಚಿವ ಬಿ.ಸಿ ನಾಗೇಶ್

“ಅಷ್ಟೇ ಯಾಕೆ ಸ್ವಾಮಿ, ಸಂಘದ ಸ್ಥಾಪಕ ಮುಖಂಡ ಗೋಳ್ವಾಲ್ಕರ್ ಬರೆದ ‘ಬಂಚ್ ಆಫ್ ಥಾಟ್ಸ್’ ಪುಸ್ತಕದಲ್ಲಿ ರಾಷ್ಟ್ರಧ್ವಜವನ್ನು ತಿರಸ್ಕಾರ ಮಾಡಿದ್ದಾರೆ. ಕಣ್ಣಿನ ಪೊರೆ ಕಳಚಿಟ್ಟು ಓದಿ” ಎಂದು ಕಿಡಿ ಕಾರಿದ್ದಾರೆ.

“1930 ಜನವರಿ 26ರಂದು ಸ್ವಾತಂತ್ರ್ಯ ಹೋರಾಟಗಾರರು ತ್ರಿವರ್ಣ ಧ್ವಜವನ್ನು ದೇಶದೆಲ್ಲೆಡೆ ಹಾರಿಸಲು ತೀರ್ಮಾನಿಸಿದಾಗ, ಈ ಹೆಡ್ಗೆವಾರ್ ‘ನಮ್ಮ ಎಲ್ಲಾ ಶಾಖೆಯ ಕಚೇರಿಗಳಲ್ಲಿ ಭಾಗವಧ್ವಜ ಹಾರಿಸಬೇಕು’ ಎಂದು ಕರೆ ಕೊಟ್ಟಿದ್ದನ್ನು ದೇಶ ಮರೆತಿಲ್ಲ. ಆಗ ಹೆಡ್ಗೇವಾರ್ ಬದುಕಿದ್ದರು” ಎಂದು ಹೇಳಿದ್ದಾರೆ.

“ಬಿಜೆಪಿಯ ಪಿತಾಮಹ ಶ್ಯಾಂ ಪ್ರಸಾದ್ ಮುಖರ್ಜಿ ಸ್ವಾತಂತ್ರ್ಯ ಭಾರತದ ನಂತರ ಪಂಡಿತ್ ಜವಹರಲಾಲ್ ನೆಹರೂ ಸರ್ಕಾರದಲ್ಲಿ ಮಂತ್ರಿಯಾಗಿದ್ದರೂ ಕೂಡ ಅವರ ಅಧಿಕೃತ ನಿವಾಸದ ಮೇಲೆ ಹಾರಿಸುತ್ತಿದ್ದಿದ್ದು ಭಗವದ್ವಜ ಹೊರತು ರಾಷ್ಟ್ರಧ್ವಜ ಅಲ್ಲ” ಎಂದು ಹರಿಪ್ರಸಾದ್‌ ಹೇಳಿದ್ದಾರೆ.

ಇದನ್ನೂ ಓದಿ: ಮಕ್ಕಳಿಗೆ ಇನ್ನೂ ಸಿಕ್ಕಿಲ್ಲ ಪಠ್ಯಪುಸ್ತಕ: ಪೋಷಕರ ಸಂಘಟನೆಗಳ ಸಮನ್ವಯ ಸಮಿತಿ ಆಕ್ರೋಶ

“ಅಷ್ಟಕ್ಕೂ ಆರೆಸ್ಸೆಸ್ಸಿನ ಮುಖವಾಣಿ ಆರ್ಗನೈಸರ್ ಅಲ್ಲಿ ತ್ರಿವರ್ಣ ಇರುವ ಭಾರತದ ಧ್ವಜ ಅಪಶಕುನ ಎಂದು ಬರೆದಿರುವುದು ದಾಖಲೆಯಾಗಿದೆ. ಸ್ವಾತಂತ್ರ್ಯ ಬಂದು 2002ರವರೆಗೆ ರಾಷ್ಟ್ರ ಧ್ವಜವನ್ನ ಶಾಖೆಯ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಹಾರಿಸಲೇ ಇಲ್ಲ ಯಾಕೆ ಎಂಬುದನ್ನ ಮೊದಲು ಸ್ಪಷ್ಟಪಡಿಸಿ” ಎಂದು ಅವರು ಹೇಳಿದ್ದಾರೆ.

“ಆರೆಸ್ಸೆಸ್ಸ್‌ ಹಾಗೂ ಬಿಜೆಪಿ ತಮ್ಮ ಹುಟ್ಟಿನಿಂದಲೇ ಸ್ವಾತಂತ್ರ್ಯ ಹೋರಾಟದ ಜೊತೆ ಜೊತೆಗೆ ರಾಷ್ಟ್ರೀಯತೆ, ರಾಷ್ಟ್ರಧ್ವಜದ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದ್ದಾರೆ ಎಂಬ ನನ್ನ ಹೇಳಿಕೆಗೆ ಈಗಲೂ ನಾನು ಬದ್ಧ. ಚರ್ಚೆಗೂ ಸಿದ್ದ” ಎಂದು ಅವರು ಬಿಜೆಪಿ ಸರ್ಕಾರಕ್ಕೆ ಸವಾಲು ಎಸೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಾನಗೆಟ್ಟ ಮೂರ್ಖ ಚಡ್ಡಿಗಳಿಗೆ ಸಾರ್ವಜನಿಕವಾಗಿ ಬೆತ್ತಲಾಗುವುದು ಒಂದು ಹವ್ಯಾಸವೇ ಆಗಿಬಿಟ್ಟಿದೆ.

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...