Homeಕರ್ನಾಟಕನಾನು ಹಾವಿನಪುರದಲ್ಲಿ ತರಬೇತಿ ಪಡೆದಿಲ್ಲ, ವಾಟ್ಸಪ್‌ ಯುನಿವರ್ಸಿಟಿ ವಿದ್ಯಾರ್ಥಿಯೂ ಅಲ್ಲ: ಸಚಿವ ಬಿಸಿ ನಾಗೇಶ್‌ ವಿರುದ್ಧ...

ನಾನು ಹಾವಿನಪುರದಲ್ಲಿ ತರಬೇತಿ ಪಡೆದಿಲ್ಲ, ವಾಟ್ಸಪ್‌ ಯುನಿವರ್ಸಿಟಿ ವಿದ್ಯಾರ್ಥಿಯೂ ಅಲ್ಲ: ಸಚಿವ ಬಿಸಿ ನಾಗೇಶ್‌ ವಿರುದ್ಧ ಕಾಂಗ್ರೆಸ್‌ ನಾಯಕ ಬಿಕೆ ಹರಿಪ್ರಸಾದ್‌ ವಾಗ್ದಾಳಿ

- Advertisement -
- Advertisement -

ಇತಿಹಾಸದ ಬಗ್ಗೆ ನಂಬಿಕೆಯೂ ಇಲ್ಲದ, ಕನಿಷ್ಠ ಅದರ ತಿಳುವಳಿಕೆಯೂ ಇಲ್ಲದ ಶಿಕ್ಷಣ ಸಚಿವ ನಾಗೇಶ್ ಅವರು ಇತಿಹಾಸದ ಪಾಠ ಹೇಳಲು ಬರುತ್ತಿದ್ದಾರೆ. ಬಿಸಿ ನಾಗೇಶ್ ಅವರೇ ನಾನು ನಿಮ್ಮ ಹಾವಿನಪುರದಲ್ಲಿ ತರಬೇತಿ ಪಡೆದವನೂ ಅಲ್ಲ, ವಾಟ್ಸಪ್ ಫಾರ್ವರ್ಡ್‌ ಯುನಿವರ್ಸಿಟಿಯ ವಿದ್ಯಾರ್ಥಿಯೂ ಅಲ್ಲ ಎಂದು ವಿರೋಧ ಪಕ್ಷದ ನಾಯಕರಾದ ಬಿಕೆ ಹರಿಪ್ರಸಾದ್ ಸೋಮವಾರ ಆಕ್ರೊಶ ವ್ಯಕ್ತಪಡಿಸಿದ್ದಾರೆ.

“ರಾಷ್ಟ್ರೀಯತೆ, ಸ್ವಾತಂತ್ರ್ಯ ಹೋರಾಟ, ರಾಷ್ಟ್ರಪ್ರೇಮ, ರಾಷ್ಟ್ರಧ್ವಜದ ವಿರುದ್ಧ ಇದ್ದವರಿಂದ ಪಾಠ ಹೇಳಿಸಿಕೊಳ್ಳುವ ದಾರಿದ್ರ್ಯ ಬಂದಿಲ್ಲ, ಬರುವುದು ಇಲ್ಲ. ಕೇಸರಿ ಬಿಳಿ ಹಸಿರು ಬಣ್ಣಗಳ ನಡುವೆ ಅಶೋಕ ಚಕ್ರವಿರುವ ರಾಷ್ಟ್ರಧ್ವಜ ಬಗ್ಗೆ ನಿಮ್ಮ ಸಂಘದ ಸಂಸ್ಥಾಪಕ ಹೆಡ್ಗೇವಾರ್ ತಿರಸ್ಕಾರ ಮನೋಭಾವನೆಯ ಜೊತೆಗೆ ಕನಿಷ್ಟ ಗೌರವವೂ ಇರಲಿಲ್ಲ ಎಂಬುದನ್ನ ಸಾಬೀತು ಮಾಡಲು ನಾನು ಸಿದ್ದ” ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್‌ ಅವರಿಗೆ ಸವಾಲು ಎಸೆದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“1930ರಲ್ಲಿಯೇ ತ್ರಿವರ್ಣ ಧ್ವಜವನ್ನು ಸ್ವಾತಂತ್ರ್ಯ ಹೋರಾಟದ ಸ್ಪೂರ್ತಿಯಾಗಿ ಎಲ್ಲಾ ವರ್ಗದ, ಧರ್ಮದವರನ್ನು ಪ್ರತಿನಿಧಿಸುವಂತೆ ರಚಿಸಿ, ಇಡೀ ದೇಶವೇ ತ್ರಿವರ್ಣ ಧ್ವಜವನ್ನ ಒಪ್ಪಿ ಅಪ್ಪಿಕೊಂಡಾಗಿತ್ತು. ಆದರೆ 1928ರಿಂದಲೇ ಭಾಗಧ್ವಜವನ್ನು ಆರೆಸ್ಸೆಸ್‌‌ ಅಧಿಕೃತ ನಿಶಾನೆ ಎಂದು ಹೆಡ್ಗೇವಾರ್ ಘೋಷಿಸಿದ್ದರಿಂದ, ತ್ರಿವರ್ಣ ಧ್ವಜವನ್ನ ಸಂಘಪರಿವಾರ ಒಪ್ಪಲೇ ಇಲ್ಲ. ಹೆಚ್ಚಿನ ಮಾಹಿತಿ ಬೇಕಿದ್ದರೆ ಹೆಡ್ಗೇವಾರರ ಸಹಚರನಾಗಿದ್ದ ಎನ್‌ಹೆಚ್ ಪಾಲ್ಕರ್ ಬರೆದ ‘Saffron flag’ ಪುಸ್ತಕದಲ್ಲಿ ದಾಖಲೆಗಳಿವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೋಹಿತ್‌ ಚಕ್ರತೀರ್ಥ ಐಐಟಿ, ಸಿಇಟಿ ಪ್ರೊಫೆಸರ್‌‌: ಶಿಕ್ಷಣ ಸಚಿವ ಬಿ.ಸಿ ನಾಗೇಶ್

“ಅಷ್ಟೇ ಯಾಕೆ ಸ್ವಾಮಿ, ಸಂಘದ ಸ್ಥಾಪಕ ಮುಖಂಡ ಗೋಳ್ವಾಲ್ಕರ್ ಬರೆದ ‘ಬಂಚ್ ಆಫ್ ಥಾಟ್ಸ್’ ಪುಸ್ತಕದಲ್ಲಿ ರಾಷ್ಟ್ರಧ್ವಜವನ್ನು ತಿರಸ್ಕಾರ ಮಾಡಿದ್ದಾರೆ. ಕಣ್ಣಿನ ಪೊರೆ ಕಳಚಿಟ್ಟು ಓದಿ” ಎಂದು ಕಿಡಿ ಕಾರಿದ್ದಾರೆ.

“1930 ಜನವರಿ 26ರಂದು ಸ್ವಾತಂತ್ರ್ಯ ಹೋರಾಟಗಾರರು ತ್ರಿವರ್ಣ ಧ್ವಜವನ್ನು ದೇಶದೆಲ್ಲೆಡೆ ಹಾರಿಸಲು ತೀರ್ಮಾನಿಸಿದಾಗ, ಈ ಹೆಡ್ಗೆವಾರ್ ‘ನಮ್ಮ ಎಲ್ಲಾ ಶಾಖೆಯ ಕಚೇರಿಗಳಲ್ಲಿ ಭಾಗವಧ್ವಜ ಹಾರಿಸಬೇಕು’ ಎಂದು ಕರೆ ಕೊಟ್ಟಿದ್ದನ್ನು ದೇಶ ಮರೆತಿಲ್ಲ. ಆಗ ಹೆಡ್ಗೇವಾರ್ ಬದುಕಿದ್ದರು” ಎಂದು ಹೇಳಿದ್ದಾರೆ.

“ಬಿಜೆಪಿಯ ಪಿತಾಮಹ ಶ್ಯಾಂ ಪ್ರಸಾದ್ ಮುಖರ್ಜಿ ಸ್ವಾತಂತ್ರ್ಯ ಭಾರತದ ನಂತರ ಪಂಡಿತ್ ಜವಹರಲಾಲ್ ನೆಹರೂ ಸರ್ಕಾರದಲ್ಲಿ ಮಂತ್ರಿಯಾಗಿದ್ದರೂ ಕೂಡ ಅವರ ಅಧಿಕೃತ ನಿವಾಸದ ಮೇಲೆ ಹಾರಿಸುತ್ತಿದ್ದಿದ್ದು ಭಗವದ್ವಜ ಹೊರತು ರಾಷ್ಟ್ರಧ್ವಜ ಅಲ್ಲ” ಎಂದು ಹರಿಪ್ರಸಾದ್‌ ಹೇಳಿದ್ದಾರೆ.

ಇದನ್ನೂ ಓದಿ: ಮಕ್ಕಳಿಗೆ ಇನ್ನೂ ಸಿಕ್ಕಿಲ್ಲ ಪಠ್ಯಪುಸ್ತಕ: ಪೋಷಕರ ಸಂಘಟನೆಗಳ ಸಮನ್ವಯ ಸಮಿತಿ ಆಕ್ರೋಶ

“ಅಷ್ಟಕ್ಕೂ ಆರೆಸ್ಸೆಸ್ಸಿನ ಮುಖವಾಣಿ ಆರ್ಗನೈಸರ್ ಅಲ್ಲಿ ತ್ರಿವರ್ಣ ಇರುವ ಭಾರತದ ಧ್ವಜ ಅಪಶಕುನ ಎಂದು ಬರೆದಿರುವುದು ದಾಖಲೆಯಾಗಿದೆ. ಸ್ವಾತಂತ್ರ್ಯ ಬಂದು 2002ರವರೆಗೆ ರಾಷ್ಟ್ರ ಧ್ವಜವನ್ನ ಶಾಖೆಯ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಹಾರಿಸಲೇ ಇಲ್ಲ ಯಾಕೆ ಎಂಬುದನ್ನ ಮೊದಲು ಸ್ಪಷ್ಟಪಡಿಸಿ” ಎಂದು ಅವರು ಹೇಳಿದ್ದಾರೆ.

“ಆರೆಸ್ಸೆಸ್ಸ್‌ ಹಾಗೂ ಬಿಜೆಪಿ ತಮ್ಮ ಹುಟ್ಟಿನಿಂದಲೇ ಸ್ವಾತಂತ್ರ್ಯ ಹೋರಾಟದ ಜೊತೆ ಜೊತೆಗೆ ರಾಷ್ಟ್ರೀಯತೆ, ರಾಷ್ಟ್ರಧ್ವಜದ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದ್ದಾರೆ ಎಂಬ ನನ್ನ ಹೇಳಿಕೆಗೆ ಈಗಲೂ ನಾನು ಬದ್ಧ. ಚರ್ಚೆಗೂ ಸಿದ್ದ” ಎಂದು ಅವರು ಬಿಜೆಪಿ ಸರ್ಕಾರಕ್ಕೆ ಸವಾಲು ಎಸೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಾನಗೆಟ್ಟ ಮೂರ್ಖ ಚಡ್ಡಿಗಳಿಗೆ ಸಾರ್ವಜನಿಕವಾಗಿ ಬೆತ್ತಲಾಗುವುದು ಒಂದು ಹವ್ಯಾಸವೇ ಆಗಿಬಿಟ್ಟಿದೆ.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...