Homeಕರ್ನಾಟಕನಾನು ಹಾವಿನಪುರದಲ್ಲಿ ತರಬೇತಿ ಪಡೆದಿಲ್ಲ, ವಾಟ್ಸಪ್‌ ಯುನಿವರ್ಸಿಟಿ ವಿದ್ಯಾರ್ಥಿಯೂ ಅಲ್ಲ: ಸಚಿವ ಬಿಸಿ ನಾಗೇಶ್‌ ವಿರುದ್ಧ...

ನಾನು ಹಾವಿನಪುರದಲ್ಲಿ ತರಬೇತಿ ಪಡೆದಿಲ್ಲ, ವಾಟ್ಸಪ್‌ ಯುನಿವರ್ಸಿಟಿ ವಿದ್ಯಾರ್ಥಿಯೂ ಅಲ್ಲ: ಸಚಿವ ಬಿಸಿ ನಾಗೇಶ್‌ ವಿರುದ್ಧ ಕಾಂಗ್ರೆಸ್‌ ನಾಯಕ ಬಿಕೆ ಹರಿಪ್ರಸಾದ್‌ ವಾಗ್ದಾಳಿ

- Advertisement -
- Advertisement -

ಇತಿಹಾಸದ ಬಗ್ಗೆ ನಂಬಿಕೆಯೂ ಇಲ್ಲದ, ಕನಿಷ್ಠ ಅದರ ತಿಳುವಳಿಕೆಯೂ ಇಲ್ಲದ ಶಿಕ್ಷಣ ಸಚಿವ ನಾಗೇಶ್ ಅವರು ಇತಿಹಾಸದ ಪಾಠ ಹೇಳಲು ಬರುತ್ತಿದ್ದಾರೆ. ಬಿಸಿ ನಾಗೇಶ್ ಅವರೇ ನಾನು ನಿಮ್ಮ ಹಾವಿನಪುರದಲ್ಲಿ ತರಬೇತಿ ಪಡೆದವನೂ ಅಲ್ಲ, ವಾಟ್ಸಪ್ ಫಾರ್ವರ್ಡ್‌ ಯುನಿವರ್ಸಿಟಿಯ ವಿದ್ಯಾರ್ಥಿಯೂ ಅಲ್ಲ ಎಂದು ವಿರೋಧ ಪಕ್ಷದ ನಾಯಕರಾದ ಬಿಕೆ ಹರಿಪ್ರಸಾದ್ ಸೋಮವಾರ ಆಕ್ರೊಶ ವ್ಯಕ್ತಪಡಿಸಿದ್ದಾರೆ.

“ರಾಷ್ಟ್ರೀಯತೆ, ಸ್ವಾತಂತ್ರ್ಯ ಹೋರಾಟ, ರಾಷ್ಟ್ರಪ್ರೇಮ, ರಾಷ್ಟ್ರಧ್ವಜದ ವಿರುದ್ಧ ಇದ್ದವರಿಂದ ಪಾಠ ಹೇಳಿಸಿಕೊಳ್ಳುವ ದಾರಿದ್ರ್ಯ ಬಂದಿಲ್ಲ, ಬರುವುದು ಇಲ್ಲ. ಕೇಸರಿ ಬಿಳಿ ಹಸಿರು ಬಣ್ಣಗಳ ನಡುವೆ ಅಶೋಕ ಚಕ್ರವಿರುವ ರಾಷ್ಟ್ರಧ್ವಜ ಬಗ್ಗೆ ನಿಮ್ಮ ಸಂಘದ ಸಂಸ್ಥಾಪಕ ಹೆಡ್ಗೇವಾರ್ ತಿರಸ್ಕಾರ ಮನೋಭಾವನೆಯ ಜೊತೆಗೆ ಕನಿಷ್ಟ ಗೌರವವೂ ಇರಲಿಲ್ಲ ಎಂಬುದನ್ನ ಸಾಬೀತು ಮಾಡಲು ನಾನು ಸಿದ್ದ” ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್‌ ಅವರಿಗೆ ಸವಾಲು ಎಸೆದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“1930ರಲ್ಲಿಯೇ ತ್ರಿವರ್ಣ ಧ್ವಜವನ್ನು ಸ್ವಾತಂತ್ರ್ಯ ಹೋರಾಟದ ಸ್ಪೂರ್ತಿಯಾಗಿ ಎಲ್ಲಾ ವರ್ಗದ, ಧರ್ಮದವರನ್ನು ಪ್ರತಿನಿಧಿಸುವಂತೆ ರಚಿಸಿ, ಇಡೀ ದೇಶವೇ ತ್ರಿವರ್ಣ ಧ್ವಜವನ್ನ ಒಪ್ಪಿ ಅಪ್ಪಿಕೊಂಡಾಗಿತ್ತು. ಆದರೆ 1928ರಿಂದಲೇ ಭಾಗಧ್ವಜವನ್ನು ಆರೆಸ್ಸೆಸ್‌‌ ಅಧಿಕೃತ ನಿಶಾನೆ ಎಂದು ಹೆಡ್ಗೇವಾರ್ ಘೋಷಿಸಿದ್ದರಿಂದ, ತ್ರಿವರ್ಣ ಧ್ವಜವನ್ನ ಸಂಘಪರಿವಾರ ಒಪ್ಪಲೇ ಇಲ್ಲ. ಹೆಚ್ಚಿನ ಮಾಹಿತಿ ಬೇಕಿದ್ದರೆ ಹೆಡ್ಗೇವಾರರ ಸಹಚರನಾಗಿದ್ದ ಎನ್‌ಹೆಚ್ ಪಾಲ್ಕರ್ ಬರೆದ ‘Saffron flag’ ಪುಸ್ತಕದಲ್ಲಿ ದಾಖಲೆಗಳಿವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೋಹಿತ್‌ ಚಕ್ರತೀರ್ಥ ಐಐಟಿ, ಸಿಇಟಿ ಪ್ರೊಫೆಸರ್‌‌: ಶಿಕ್ಷಣ ಸಚಿವ ಬಿ.ಸಿ ನಾಗೇಶ್

“ಅಷ್ಟೇ ಯಾಕೆ ಸ್ವಾಮಿ, ಸಂಘದ ಸ್ಥಾಪಕ ಮುಖಂಡ ಗೋಳ್ವಾಲ್ಕರ್ ಬರೆದ ‘ಬಂಚ್ ಆಫ್ ಥಾಟ್ಸ್’ ಪುಸ್ತಕದಲ್ಲಿ ರಾಷ್ಟ್ರಧ್ವಜವನ್ನು ತಿರಸ್ಕಾರ ಮಾಡಿದ್ದಾರೆ. ಕಣ್ಣಿನ ಪೊರೆ ಕಳಚಿಟ್ಟು ಓದಿ” ಎಂದು ಕಿಡಿ ಕಾರಿದ್ದಾರೆ.

“1930 ಜನವರಿ 26ರಂದು ಸ್ವಾತಂತ್ರ್ಯ ಹೋರಾಟಗಾರರು ತ್ರಿವರ್ಣ ಧ್ವಜವನ್ನು ದೇಶದೆಲ್ಲೆಡೆ ಹಾರಿಸಲು ತೀರ್ಮಾನಿಸಿದಾಗ, ಈ ಹೆಡ್ಗೆವಾರ್ ‘ನಮ್ಮ ಎಲ್ಲಾ ಶಾಖೆಯ ಕಚೇರಿಗಳಲ್ಲಿ ಭಾಗವಧ್ವಜ ಹಾರಿಸಬೇಕು’ ಎಂದು ಕರೆ ಕೊಟ್ಟಿದ್ದನ್ನು ದೇಶ ಮರೆತಿಲ್ಲ. ಆಗ ಹೆಡ್ಗೇವಾರ್ ಬದುಕಿದ್ದರು” ಎಂದು ಹೇಳಿದ್ದಾರೆ.

“ಬಿಜೆಪಿಯ ಪಿತಾಮಹ ಶ್ಯಾಂ ಪ್ರಸಾದ್ ಮುಖರ್ಜಿ ಸ್ವಾತಂತ್ರ್ಯ ಭಾರತದ ನಂತರ ಪಂಡಿತ್ ಜವಹರಲಾಲ್ ನೆಹರೂ ಸರ್ಕಾರದಲ್ಲಿ ಮಂತ್ರಿಯಾಗಿದ್ದರೂ ಕೂಡ ಅವರ ಅಧಿಕೃತ ನಿವಾಸದ ಮೇಲೆ ಹಾರಿಸುತ್ತಿದ್ದಿದ್ದು ಭಗವದ್ವಜ ಹೊರತು ರಾಷ್ಟ್ರಧ್ವಜ ಅಲ್ಲ” ಎಂದು ಹರಿಪ್ರಸಾದ್‌ ಹೇಳಿದ್ದಾರೆ.

ಇದನ್ನೂ ಓದಿ: ಮಕ್ಕಳಿಗೆ ಇನ್ನೂ ಸಿಕ್ಕಿಲ್ಲ ಪಠ್ಯಪುಸ್ತಕ: ಪೋಷಕರ ಸಂಘಟನೆಗಳ ಸಮನ್ವಯ ಸಮಿತಿ ಆಕ್ರೋಶ

“ಅಷ್ಟಕ್ಕೂ ಆರೆಸ್ಸೆಸ್ಸಿನ ಮುಖವಾಣಿ ಆರ್ಗನೈಸರ್ ಅಲ್ಲಿ ತ್ರಿವರ್ಣ ಇರುವ ಭಾರತದ ಧ್ವಜ ಅಪಶಕುನ ಎಂದು ಬರೆದಿರುವುದು ದಾಖಲೆಯಾಗಿದೆ. ಸ್ವಾತಂತ್ರ್ಯ ಬಂದು 2002ರವರೆಗೆ ರಾಷ್ಟ್ರ ಧ್ವಜವನ್ನ ಶಾಖೆಯ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಹಾರಿಸಲೇ ಇಲ್ಲ ಯಾಕೆ ಎಂಬುದನ್ನ ಮೊದಲು ಸ್ಪಷ್ಟಪಡಿಸಿ” ಎಂದು ಅವರು ಹೇಳಿದ್ದಾರೆ.

“ಆರೆಸ್ಸೆಸ್ಸ್‌ ಹಾಗೂ ಬಿಜೆಪಿ ತಮ್ಮ ಹುಟ್ಟಿನಿಂದಲೇ ಸ್ವಾತಂತ್ರ್ಯ ಹೋರಾಟದ ಜೊತೆ ಜೊತೆಗೆ ರಾಷ್ಟ್ರೀಯತೆ, ರಾಷ್ಟ್ರಧ್ವಜದ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದ್ದಾರೆ ಎಂಬ ನನ್ನ ಹೇಳಿಕೆಗೆ ಈಗಲೂ ನಾನು ಬದ್ಧ. ಚರ್ಚೆಗೂ ಸಿದ್ದ” ಎಂದು ಅವರು ಬಿಜೆಪಿ ಸರ್ಕಾರಕ್ಕೆ ಸವಾಲು ಎಸೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಾನಗೆಟ್ಟ ಮೂರ್ಖ ಚಡ್ಡಿಗಳಿಗೆ ಸಾರ್ವಜನಿಕವಾಗಿ ಬೆತ್ತಲಾಗುವುದು ಒಂದು ಹವ್ಯಾಸವೇ ಆಗಿಬಿಟ್ಟಿದೆ.

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...