Homeಕರ್ನಾಟಕನಾನು ಹಾವಿನಪುರದಲ್ಲಿ ತರಬೇತಿ ಪಡೆದಿಲ್ಲ, ವಾಟ್ಸಪ್‌ ಯುನಿವರ್ಸಿಟಿ ವಿದ್ಯಾರ್ಥಿಯೂ ಅಲ್ಲ: ಸಚಿವ ಬಿಸಿ ನಾಗೇಶ್‌ ವಿರುದ್ಧ...

ನಾನು ಹಾವಿನಪುರದಲ್ಲಿ ತರಬೇತಿ ಪಡೆದಿಲ್ಲ, ವಾಟ್ಸಪ್‌ ಯುನಿವರ್ಸಿಟಿ ವಿದ್ಯಾರ್ಥಿಯೂ ಅಲ್ಲ: ಸಚಿವ ಬಿಸಿ ನಾಗೇಶ್‌ ವಿರುದ್ಧ ಕಾಂಗ್ರೆಸ್‌ ನಾಯಕ ಬಿಕೆ ಹರಿಪ್ರಸಾದ್‌ ವಾಗ್ದಾಳಿ

- Advertisement -
- Advertisement -

ಇತಿಹಾಸದ ಬಗ್ಗೆ ನಂಬಿಕೆಯೂ ಇಲ್ಲದ, ಕನಿಷ್ಠ ಅದರ ತಿಳುವಳಿಕೆಯೂ ಇಲ್ಲದ ಶಿಕ್ಷಣ ಸಚಿವ ನಾಗೇಶ್ ಅವರು ಇತಿಹಾಸದ ಪಾಠ ಹೇಳಲು ಬರುತ್ತಿದ್ದಾರೆ. ಬಿಸಿ ನಾಗೇಶ್ ಅವರೇ ನಾನು ನಿಮ್ಮ ಹಾವಿನಪುರದಲ್ಲಿ ತರಬೇತಿ ಪಡೆದವನೂ ಅಲ್ಲ, ವಾಟ್ಸಪ್ ಫಾರ್ವರ್ಡ್‌ ಯುನಿವರ್ಸಿಟಿಯ ವಿದ್ಯಾರ್ಥಿಯೂ ಅಲ್ಲ ಎಂದು ವಿರೋಧ ಪಕ್ಷದ ನಾಯಕರಾದ ಬಿಕೆ ಹರಿಪ್ರಸಾದ್ ಸೋಮವಾರ ಆಕ್ರೊಶ ವ್ಯಕ್ತಪಡಿಸಿದ್ದಾರೆ.

“ರಾಷ್ಟ್ರೀಯತೆ, ಸ್ವಾತಂತ್ರ್ಯ ಹೋರಾಟ, ರಾಷ್ಟ್ರಪ್ರೇಮ, ರಾಷ್ಟ್ರಧ್ವಜದ ವಿರುದ್ಧ ಇದ್ದವರಿಂದ ಪಾಠ ಹೇಳಿಸಿಕೊಳ್ಳುವ ದಾರಿದ್ರ್ಯ ಬಂದಿಲ್ಲ, ಬರುವುದು ಇಲ್ಲ. ಕೇಸರಿ ಬಿಳಿ ಹಸಿರು ಬಣ್ಣಗಳ ನಡುವೆ ಅಶೋಕ ಚಕ್ರವಿರುವ ರಾಷ್ಟ್ರಧ್ವಜ ಬಗ್ಗೆ ನಿಮ್ಮ ಸಂಘದ ಸಂಸ್ಥಾಪಕ ಹೆಡ್ಗೇವಾರ್ ತಿರಸ್ಕಾರ ಮನೋಭಾವನೆಯ ಜೊತೆಗೆ ಕನಿಷ್ಟ ಗೌರವವೂ ಇರಲಿಲ್ಲ ಎಂಬುದನ್ನ ಸಾಬೀತು ಮಾಡಲು ನಾನು ಸಿದ್ದ” ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್‌ ಅವರಿಗೆ ಸವಾಲು ಎಸೆದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“1930ರಲ್ಲಿಯೇ ತ್ರಿವರ್ಣ ಧ್ವಜವನ್ನು ಸ್ವಾತಂತ್ರ್ಯ ಹೋರಾಟದ ಸ್ಪೂರ್ತಿಯಾಗಿ ಎಲ್ಲಾ ವರ್ಗದ, ಧರ್ಮದವರನ್ನು ಪ್ರತಿನಿಧಿಸುವಂತೆ ರಚಿಸಿ, ಇಡೀ ದೇಶವೇ ತ್ರಿವರ್ಣ ಧ್ವಜವನ್ನ ಒಪ್ಪಿ ಅಪ್ಪಿಕೊಂಡಾಗಿತ್ತು. ಆದರೆ 1928ರಿಂದಲೇ ಭಾಗಧ್ವಜವನ್ನು ಆರೆಸ್ಸೆಸ್‌‌ ಅಧಿಕೃತ ನಿಶಾನೆ ಎಂದು ಹೆಡ್ಗೇವಾರ್ ಘೋಷಿಸಿದ್ದರಿಂದ, ತ್ರಿವರ್ಣ ಧ್ವಜವನ್ನ ಸಂಘಪರಿವಾರ ಒಪ್ಪಲೇ ಇಲ್ಲ. ಹೆಚ್ಚಿನ ಮಾಹಿತಿ ಬೇಕಿದ್ದರೆ ಹೆಡ್ಗೇವಾರರ ಸಹಚರನಾಗಿದ್ದ ಎನ್‌ಹೆಚ್ ಪಾಲ್ಕರ್ ಬರೆದ ‘Saffron flag’ ಪುಸ್ತಕದಲ್ಲಿ ದಾಖಲೆಗಳಿವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೋಹಿತ್‌ ಚಕ್ರತೀರ್ಥ ಐಐಟಿ, ಸಿಇಟಿ ಪ್ರೊಫೆಸರ್‌‌: ಶಿಕ್ಷಣ ಸಚಿವ ಬಿ.ಸಿ ನಾಗೇಶ್

“ಅಷ್ಟೇ ಯಾಕೆ ಸ್ವಾಮಿ, ಸಂಘದ ಸ್ಥಾಪಕ ಮುಖಂಡ ಗೋಳ್ವಾಲ್ಕರ್ ಬರೆದ ‘ಬಂಚ್ ಆಫ್ ಥಾಟ್ಸ್’ ಪುಸ್ತಕದಲ್ಲಿ ರಾಷ್ಟ್ರಧ್ವಜವನ್ನು ತಿರಸ್ಕಾರ ಮಾಡಿದ್ದಾರೆ. ಕಣ್ಣಿನ ಪೊರೆ ಕಳಚಿಟ್ಟು ಓದಿ” ಎಂದು ಕಿಡಿ ಕಾರಿದ್ದಾರೆ.

“1930 ಜನವರಿ 26ರಂದು ಸ್ವಾತಂತ್ರ್ಯ ಹೋರಾಟಗಾರರು ತ್ರಿವರ್ಣ ಧ್ವಜವನ್ನು ದೇಶದೆಲ್ಲೆಡೆ ಹಾರಿಸಲು ತೀರ್ಮಾನಿಸಿದಾಗ, ಈ ಹೆಡ್ಗೆವಾರ್ ‘ನಮ್ಮ ಎಲ್ಲಾ ಶಾಖೆಯ ಕಚೇರಿಗಳಲ್ಲಿ ಭಾಗವಧ್ವಜ ಹಾರಿಸಬೇಕು’ ಎಂದು ಕರೆ ಕೊಟ್ಟಿದ್ದನ್ನು ದೇಶ ಮರೆತಿಲ್ಲ. ಆಗ ಹೆಡ್ಗೇವಾರ್ ಬದುಕಿದ್ದರು” ಎಂದು ಹೇಳಿದ್ದಾರೆ.

“ಬಿಜೆಪಿಯ ಪಿತಾಮಹ ಶ್ಯಾಂ ಪ್ರಸಾದ್ ಮುಖರ್ಜಿ ಸ್ವಾತಂತ್ರ್ಯ ಭಾರತದ ನಂತರ ಪಂಡಿತ್ ಜವಹರಲಾಲ್ ನೆಹರೂ ಸರ್ಕಾರದಲ್ಲಿ ಮಂತ್ರಿಯಾಗಿದ್ದರೂ ಕೂಡ ಅವರ ಅಧಿಕೃತ ನಿವಾಸದ ಮೇಲೆ ಹಾರಿಸುತ್ತಿದ್ದಿದ್ದು ಭಗವದ್ವಜ ಹೊರತು ರಾಷ್ಟ್ರಧ್ವಜ ಅಲ್ಲ” ಎಂದು ಹರಿಪ್ರಸಾದ್‌ ಹೇಳಿದ್ದಾರೆ.

ಇದನ್ನೂ ಓದಿ: ಮಕ್ಕಳಿಗೆ ಇನ್ನೂ ಸಿಕ್ಕಿಲ್ಲ ಪಠ್ಯಪುಸ್ತಕ: ಪೋಷಕರ ಸಂಘಟನೆಗಳ ಸಮನ್ವಯ ಸಮಿತಿ ಆಕ್ರೋಶ

“ಅಷ್ಟಕ್ಕೂ ಆರೆಸ್ಸೆಸ್ಸಿನ ಮುಖವಾಣಿ ಆರ್ಗನೈಸರ್ ಅಲ್ಲಿ ತ್ರಿವರ್ಣ ಇರುವ ಭಾರತದ ಧ್ವಜ ಅಪಶಕುನ ಎಂದು ಬರೆದಿರುವುದು ದಾಖಲೆಯಾಗಿದೆ. ಸ್ವಾತಂತ್ರ್ಯ ಬಂದು 2002ರವರೆಗೆ ರಾಷ್ಟ್ರ ಧ್ವಜವನ್ನ ಶಾಖೆಯ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಹಾರಿಸಲೇ ಇಲ್ಲ ಯಾಕೆ ಎಂಬುದನ್ನ ಮೊದಲು ಸ್ಪಷ್ಟಪಡಿಸಿ” ಎಂದು ಅವರು ಹೇಳಿದ್ದಾರೆ.

“ಆರೆಸ್ಸೆಸ್ಸ್‌ ಹಾಗೂ ಬಿಜೆಪಿ ತಮ್ಮ ಹುಟ್ಟಿನಿಂದಲೇ ಸ್ವಾತಂತ್ರ್ಯ ಹೋರಾಟದ ಜೊತೆ ಜೊತೆಗೆ ರಾಷ್ಟ್ರೀಯತೆ, ರಾಷ್ಟ್ರಧ್ವಜದ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದ್ದಾರೆ ಎಂಬ ನನ್ನ ಹೇಳಿಕೆಗೆ ಈಗಲೂ ನಾನು ಬದ್ಧ. ಚರ್ಚೆಗೂ ಸಿದ್ದ” ಎಂದು ಅವರು ಬಿಜೆಪಿ ಸರ್ಕಾರಕ್ಕೆ ಸವಾಲು ಎಸೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಾನಗೆಟ್ಟ ಮೂರ್ಖ ಚಡ್ಡಿಗಳಿಗೆ ಸಾರ್ವಜನಿಕವಾಗಿ ಬೆತ್ತಲಾಗುವುದು ಒಂದು ಹವ್ಯಾಸವೇ ಆಗಿಬಿಟ್ಟಿದೆ.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...