Homeಮುಖಪುಟನಾನು 'ಗೆ' ಎಂಬ ಕಾರಣಕ್ಕೆ ನ್ಯಾಯಾಧೀಶರಾಗಿ ನೇಮಿಸುತ್ತಿಲ್ಲ: ವಕೀಲ ಸೌರಭ್‌ ಕಿರ್ಪಾಲ್

ನಾನು ‘ಗೆ’ ಎಂಬ ಕಾರಣಕ್ಕೆ ನ್ಯಾಯಾಧೀಶರಾಗಿ ನೇಮಿಸುತ್ತಿಲ್ಲ: ವಕೀಲ ಸೌರಭ್‌ ಕಿರ್ಪಾಲ್

- Advertisement -
- Advertisement -

ನಾನು ‘ಗೆ’ (ಸಲಿಂಗಾಸಕ್ತ) ಎಂಬ ಕಾರಣಕ್ಕೆ ಶಿಫಾರಸ್ಸು ಮಾಡಿ 5 ವರ್ಷವಾದರೂ ನನ್ನನ್ನು ನ್ಯಾಯಾಧೀಶರಾಗಿ ನೇಮಿಸುತ್ತಿಲ್ಲ ಎಂದು ಲೈಂಗಿಕ ಅಲ್ಪಸಂಖ್ಯಾತ ಹೋರಾಟಗಾರ, ಹಿರಿಯ ವಕೀಲ ಸೌರಭ್‌ ಕಿರ್ಪಾಲ್‌ ಹೇಳಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಲೈಂಗಿಕ ಅಲ್ಪಸಂಖ್ಯಾತ ವ್ಯಕ್ತಿಯೊಬ್ಬ ಹೈಕೋರ್ಟ್ ನ್ಯಾಯಾಧೀಶರಾಗಿ ಸರ್ಕಾರ ನೇಮಿಸುತ್ತದೆ ಎಂದು ನನಗನಿಸುತ್ತಿಲ್ಲ ಎಂದು ಅವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

2017 ರ ಅಕ್ಟೋಬರ್‌ನಲ್ಲಿ ದೆಹಲಿ ಹೈಕೋರ್ಟ್ ಹಿರಿಯ ನ್ಯಾಯವಾದಿ ಸೌರಭ್ ಕಿರ್ಪಾಲ್ ಅವರನ್ನು ದೆಹಲಿ ನ್ಯಾಯಾಲಯದ ಖಾಯಂ ನ್ಯಾಯಾಧೀಶರನ್ನಾಗಿ ನೇಮಿಸುವಂತೆ ದೆಹಲಿ ಹೈಕೋರ್ಟ್‌ನ 33 ನ್ಯಾಯಾಧೀಶರು ಶಿಫಾರಸ್ಸು ಮಾಡಿದ್ದರು. ಅಲ್ಲದೆ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಿಸಲು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಅವರ ನೇತೃತ್ವದ ಕೊಲಿಜಿಯಂ ಸಹ ಶಿಫಾರಸು ಮಾಡಿತ್ತು. ಆದರೆ ಕೇಂದ್ರ ಸರ್ಕಾರ ಅದಕ್ಕೆ ಅನುಮತಿ ನೀಡದೆ ವಿಳಂಬ ಮಾಡುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.

2018ರಿಂದ ಕನಿಷ್ಠ ನಾಲ್ಕು ಬಾರಿ ಹಿರಿಯ ವಕೀಲ ಸೌರಭ್ ಕಿರ್ಪಾಲ್ ಅವರ ಉಮೇದುವಾರಿಕೆಯ ನಿರ್ಧಾರವನ್ನು ಮುಂದೂಡಿದ ನಂತರ 2021ರಲ್ಲಿ ಸುಪ್ರೀಂ ಕೋರ್ಟ್ ಕೊಲಿಜಿಯಂ ಅಂತಿಮವಾಗಿ ಅವರ ಹೆಸರನ್ನು ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿಯನ್ನಾಗಿ ನೇಮಿಸಲು ಶಿಫಾರಸು ಮಾಡಿದೆ.

2021ರ ಮಾರ್ಚ್‌ನಲ್ಲಿ ಆಗಿನ ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬೋಬ್ಡೆ ಅವರು ಸೌರಭ್ ಕಿರ್ಪಾಲ್ ಅವರನ್ನು ದೆಹಲಿ ಹೈಕೋರ್ಟ್‌ನ ನ್ಯಾಯಾಧೀಶರನ್ನಾಗಿ ಮಾಡುವ ಬಗ್ಗೆ ತನ್ನ ನಿಲುವನ್ನು ಸ್ಪಷ್ಟಪಡಿಸುವಂತೆ ಕೇಂದ್ರ ಸರ್ಕಾರವನ್ನು ಕೇಳಿದ್ದರು.

ಅಕ್ಟೋಬರ್ 2017ರಲ್ಲಿ ಮೊದಲ ಬಾರಿಗೆ ನ್ಯಾಯಮೂರ್ತಿ ಗೀತಾ ಮಿತ್ತಲ್ ನೇತೃತ್ವದ ದೆಹಲಿ ಹೈಕೋರ್ಟ್ ಕೊಲಿಜಿಯಂ ಕಿರ್ಪಾಲ್ ಅವರನ್ನು ಶಿಫಾರಸು ಮಾಡಿತು. ಸೆಪ್ಟೆಂಬರ್ 2018ರಲ್ಲಿ, ಸುಪ್ರೀಂ ಕೋರ್ಟ್ ಕೊಲಿಜಿಯಂ ಇದನ್ನು “ಕೆಲವು ಸಮಯದ ನಂತರ” ಪರಿಗಣನೆಗೆ ತೆಗೆದುಕೊಳ್ಳಲು ನಿರ್ಧರಿಸಿತು. ಜನವರಿ 2019ರಲ್ಲಿ ಮತ್ತು ನಂತರ ಏಪ್ರಿಲ್ 2019ರಲ್ಲಿ ಮತ್ತೆ ಹೆಸರು ಮುನ್ನೆಲೆಗೆ ಬಂದಾಗ ಕೊಲಿಜಿಯಂ ತನ್ನ ನಿರ್ಧಾರವನ್ನು ಮುಂದೂಡಿತು.

ಕಿರ್ಪಾಲ್‌ ಅವರ ನೇಮಕಕ್ಕೆ ಸಂಬಂಧಿಸಿದಂತೆ ಸರ್ಕಾರ ಒಪ್ಪಿಕೊಂಡಿರಲಿಲ್ಲ. ಯಾಕೆಂದರೆ ಅವರು ಎಲ್‌ಜಿಬಿಟಿ ಸಮುದಾಯದ ಹೋರಾಟದ ಭಾಗವಾಗಿದ್ದರು. ಕಿರ್ಪಾಲ್ ಅವರ ಹೆಸರನ್ನು ಶಿಫಾರಸು ಮಾಡುವಲ್ಲಿನ ವಿಳಂಬವು ಅವರ ಲೈಂಗಿಕ ದೃಷ್ಟಿಕೋನದ ಕಾರಣಕ್ಕೂ ಆಗಿದೆ ಎನ್ನಲಾಗುತ್ತಿತ್ತು. ಕಿರ್ಪಾಲ್ ಅವರು ನೇಮಕವಾದಲ್ಲಿ ಭಾರತದ ಮೊದಲ ಬಹಿರಂಗ ಸಲಿಂಗಾಸಕ್ತ ನ್ಯಾಯಾಧೀಶರಾಗುತ್ತಾರೆ.

ನ್ಯಾಯಾಧೀಶ ಸೌರಭ್ ಕಿರ್ಪಾಲ್ ಅವರ ತಂದೆ, ನ್ಯಾಯಮೂರ್ತಿ ಬಿ.ಎನ್.ಕಿರ್ಪಾಲ್ ಅವರು ಮೇ 2002ರಿಂದ ನವೆಂಬರ್ 2002ರವರೆಗೆ ಸುಪ್ರೀಂಕೋರ್ಟ್‌ನ 31ನೇ ಮುಖ್ಯ ನ್ಯಾಯಮೂರ್ತಿಯಾಗಿದ್ದರು.

ದೆಹಲಿಯ ಸೇಂಟ್ ಸ್ಟೀಫನ್ಸ್‌ನಿಂದ ಭೌತಶಾಸ್ತ್ರದಲ್ಲಿ ಪದವೀಧರರಾಗಿರುವ ನ್ಯಾಯವಾದಿ ಕಿರ್ಪಾಲ್, ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಕಾನೂನು ಅಧ್ಯಯನ ಮಾಡಿದ್ದಾರೆ. ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಿಂದ ಕಾನೂನಿನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ಭಾರತಕ್ಕೆ ಹಿಂದಿರುಗುವ ಮೊದಲು, ಸೌರಭ್ ಕಿರ್ಪಾಲ್ ಜಿನೀವಾದಲ್ಲಿ ವಿಶ್ವಸಂಸ್ಥೆಯೊಂದಿಗೆ ಕೆಲಸ ಮಾಡಿದ್ದರು. ಅವರು ಎರಡು ದಶಕಗಳಿಂದ ಭಾರತದಲ್ಲಿ ಕಾನೂನು ಅಭ್ಯಾಸ ಮಾಡುತ್ತಿದ್ದಾರೆ.

‘ಸೆಕ್ಸ್ ಮತ್ತು ಸುಪ್ರೀಂ ಕೋರ್ಟ್’ ಎಂಬ ಪುಸ್ತಕವನ್ನು ಬರೆದಿದ್ದಾರೆ. ಈ ಕೃತಿಯು ಕಾನೂನು, ಲಿಂಗ ಮತ್ತು ಲೈಂಗಿಕತೆಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಬೆಳಕು ಚೆಲ್ಲುತ್ತದೆ.

ಇದನ್ನೂ ಓದಿ; ದೇಶದ ಮೊದಲ ಗೇ ಜಡ್ಜ್‌ ಆಗಿ ಶಿಫಾರಸ್ಸುಗೊಂಡ ಸೌರಭ್‌ ಕಿರ್ಪಾಲ್‌ ಅವರನ್ನು ಭಾರತ ಇನ್ನೆಷ್ಟು ಕಾಲ ನಿರ್ಲಕ್ಷಿಸುತ್ತದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...