Homeಮುಖಪುಟನಾನು 'ಗೆ' ಎಂಬ ಕಾರಣಕ್ಕೆ ನ್ಯಾಯಾಧೀಶರಾಗಿ ನೇಮಿಸುತ್ತಿಲ್ಲ: ವಕೀಲ ಸೌರಭ್‌ ಕಿರ್ಪಾಲ್

ನಾನು ‘ಗೆ’ ಎಂಬ ಕಾರಣಕ್ಕೆ ನ್ಯಾಯಾಧೀಶರಾಗಿ ನೇಮಿಸುತ್ತಿಲ್ಲ: ವಕೀಲ ಸೌರಭ್‌ ಕಿರ್ಪಾಲ್

- Advertisement -
- Advertisement -

ನಾನು ‘ಗೆ’ (ಸಲಿಂಗಾಸಕ್ತ) ಎಂಬ ಕಾರಣಕ್ಕೆ ಶಿಫಾರಸ್ಸು ಮಾಡಿ 5 ವರ್ಷವಾದರೂ ನನ್ನನ್ನು ನ್ಯಾಯಾಧೀಶರಾಗಿ ನೇಮಿಸುತ್ತಿಲ್ಲ ಎಂದು ಲೈಂಗಿಕ ಅಲ್ಪಸಂಖ್ಯಾತ ಹೋರಾಟಗಾರ, ಹಿರಿಯ ವಕೀಲ ಸೌರಭ್‌ ಕಿರ್ಪಾಲ್‌ ಹೇಳಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಲೈಂಗಿಕ ಅಲ್ಪಸಂಖ್ಯಾತ ವ್ಯಕ್ತಿಯೊಬ್ಬ ಹೈಕೋರ್ಟ್ ನ್ಯಾಯಾಧೀಶರಾಗಿ ಸರ್ಕಾರ ನೇಮಿಸುತ್ತದೆ ಎಂದು ನನಗನಿಸುತ್ತಿಲ್ಲ ಎಂದು ಅವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

2017 ರ ಅಕ್ಟೋಬರ್‌ನಲ್ಲಿ ದೆಹಲಿ ಹೈಕೋರ್ಟ್ ಹಿರಿಯ ನ್ಯಾಯವಾದಿ ಸೌರಭ್ ಕಿರ್ಪಾಲ್ ಅವರನ್ನು ದೆಹಲಿ ನ್ಯಾಯಾಲಯದ ಖಾಯಂ ನ್ಯಾಯಾಧೀಶರನ್ನಾಗಿ ನೇಮಿಸುವಂತೆ ದೆಹಲಿ ಹೈಕೋರ್ಟ್‌ನ 33 ನ್ಯಾಯಾಧೀಶರು ಶಿಫಾರಸ್ಸು ಮಾಡಿದ್ದರು. ಅಲ್ಲದೆ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಿಸಲು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಅವರ ನೇತೃತ್ವದ ಕೊಲಿಜಿಯಂ ಸಹ ಶಿಫಾರಸು ಮಾಡಿತ್ತು. ಆದರೆ ಕೇಂದ್ರ ಸರ್ಕಾರ ಅದಕ್ಕೆ ಅನುಮತಿ ನೀಡದೆ ವಿಳಂಬ ಮಾಡುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.

2018ರಿಂದ ಕನಿಷ್ಠ ನಾಲ್ಕು ಬಾರಿ ಹಿರಿಯ ವಕೀಲ ಸೌರಭ್ ಕಿರ್ಪಾಲ್ ಅವರ ಉಮೇದುವಾರಿಕೆಯ ನಿರ್ಧಾರವನ್ನು ಮುಂದೂಡಿದ ನಂತರ 2021ರಲ್ಲಿ ಸುಪ್ರೀಂ ಕೋರ್ಟ್ ಕೊಲಿಜಿಯಂ ಅಂತಿಮವಾಗಿ ಅವರ ಹೆಸರನ್ನು ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿಯನ್ನಾಗಿ ನೇಮಿಸಲು ಶಿಫಾರಸು ಮಾಡಿದೆ.

2021ರ ಮಾರ್ಚ್‌ನಲ್ಲಿ ಆಗಿನ ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬೋಬ್ಡೆ ಅವರು ಸೌರಭ್ ಕಿರ್ಪಾಲ್ ಅವರನ್ನು ದೆಹಲಿ ಹೈಕೋರ್ಟ್‌ನ ನ್ಯಾಯಾಧೀಶರನ್ನಾಗಿ ಮಾಡುವ ಬಗ್ಗೆ ತನ್ನ ನಿಲುವನ್ನು ಸ್ಪಷ್ಟಪಡಿಸುವಂತೆ ಕೇಂದ್ರ ಸರ್ಕಾರವನ್ನು ಕೇಳಿದ್ದರು.

ಅಕ್ಟೋಬರ್ 2017ರಲ್ಲಿ ಮೊದಲ ಬಾರಿಗೆ ನ್ಯಾಯಮೂರ್ತಿ ಗೀತಾ ಮಿತ್ತಲ್ ನೇತೃತ್ವದ ದೆಹಲಿ ಹೈಕೋರ್ಟ್ ಕೊಲಿಜಿಯಂ ಕಿರ್ಪಾಲ್ ಅವರನ್ನು ಶಿಫಾರಸು ಮಾಡಿತು. ಸೆಪ್ಟೆಂಬರ್ 2018ರಲ್ಲಿ, ಸುಪ್ರೀಂ ಕೋರ್ಟ್ ಕೊಲಿಜಿಯಂ ಇದನ್ನು “ಕೆಲವು ಸಮಯದ ನಂತರ” ಪರಿಗಣನೆಗೆ ತೆಗೆದುಕೊಳ್ಳಲು ನಿರ್ಧರಿಸಿತು. ಜನವರಿ 2019ರಲ್ಲಿ ಮತ್ತು ನಂತರ ಏಪ್ರಿಲ್ 2019ರಲ್ಲಿ ಮತ್ತೆ ಹೆಸರು ಮುನ್ನೆಲೆಗೆ ಬಂದಾಗ ಕೊಲಿಜಿಯಂ ತನ್ನ ನಿರ್ಧಾರವನ್ನು ಮುಂದೂಡಿತು.

ಕಿರ್ಪಾಲ್‌ ಅವರ ನೇಮಕಕ್ಕೆ ಸಂಬಂಧಿಸಿದಂತೆ ಸರ್ಕಾರ ಒಪ್ಪಿಕೊಂಡಿರಲಿಲ್ಲ. ಯಾಕೆಂದರೆ ಅವರು ಎಲ್‌ಜಿಬಿಟಿ ಸಮುದಾಯದ ಹೋರಾಟದ ಭಾಗವಾಗಿದ್ದರು. ಕಿರ್ಪಾಲ್ ಅವರ ಹೆಸರನ್ನು ಶಿಫಾರಸು ಮಾಡುವಲ್ಲಿನ ವಿಳಂಬವು ಅವರ ಲೈಂಗಿಕ ದೃಷ್ಟಿಕೋನದ ಕಾರಣಕ್ಕೂ ಆಗಿದೆ ಎನ್ನಲಾಗುತ್ತಿತ್ತು. ಕಿರ್ಪಾಲ್ ಅವರು ನೇಮಕವಾದಲ್ಲಿ ಭಾರತದ ಮೊದಲ ಬಹಿರಂಗ ಸಲಿಂಗಾಸಕ್ತ ನ್ಯಾಯಾಧೀಶರಾಗುತ್ತಾರೆ.

ನ್ಯಾಯಾಧೀಶ ಸೌರಭ್ ಕಿರ್ಪಾಲ್ ಅವರ ತಂದೆ, ನ್ಯಾಯಮೂರ್ತಿ ಬಿ.ಎನ್.ಕಿರ್ಪಾಲ್ ಅವರು ಮೇ 2002ರಿಂದ ನವೆಂಬರ್ 2002ರವರೆಗೆ ಸುಪ್ರೀಂಕೋರ್ಟ್‌ನ 31ನೇ ಮುಖ್ಯ ನ್ಯಾಯಮೂರ್ತಿಯಾಗಿದ್ದರು.

ದೆಹಲಿಯ ಸೇಂಟ್ ಸ್ಟೀಫನ್ಸ್‌ನಿಂದ ಭೌತಶಾಸ್ತ್ರದಲ್ಲಿ ಪದವೀಧರರಾಗಿರುವ ನ್ಯಾಯವಾದಿ ಕಿರ್ಪಾಲ್, ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಕಾನೂನು ಅಧ್ಯಯನ ಮಾಡಿದ್ದಾರೆ. ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಿಂದ ಕಾನೂನಿನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ಭಾರತಕ್ಕೆ ಹಿಂದಿರುಗುವ ಮೊದಲು, ಸೌರಭ್ ಕಿರ್ಪಾಲ್ ಜಿನೀವಾದಲ್ಲಿ ವಿಶ್ವಸಂಸ್ಥೆಯೊಂದಿಗೆ ಕೆಲಸ ಮಾಡಿದ್ದರು. ಅವರು ಎರಡು ದಶಕಗಳಿಂದ ಭಾರತದಲ್ಲಿ ಕಾನೂನು ಅಭ್ಯಾಸ ಮಾಡುತ್ತಿದ್ದಾರೆ.

‘ಸೆಕ್ಸ್ ಮತ್ತು ಸುಪ್ರೀಂ ಕೋರ್ಟ್’ ಎಂಬ ಪುಸ್ತಕವನ್ನು ಬರೆದಿದ್ದಾರೆ. ಈ ಕೃತಿಯು ಕಾನೂನು, ಲಿಂಗ ಮತ್ತು ಲೈಂಗಿಕತೆಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಬೆಳಕು ಚೆಲ್ಲುತ್ತದೆ.

ಇದನ್ನೂ ಓದಿ; ದೇಶದ ಮೊದಲ ಗೇ ಜಡ್ಜ್‌ ಆಗಿ ಶಿಫಾರಸ್ಸುಗೊಂಡ ಸೌರಭ್‌ ಕಿರ್ಪಾಲ್‌ ಅವರನ್ನು ಭಾರತ ಇನ್ನೆಷ್ಟು ಕಾಲ ನಿರ್ಲಕ್ಷಿಸುತ್ತದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...