Homeಮುಖಪುಟ'ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ' : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

- Advertisement -
- Advertisement -

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, “ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ” ಎಂದಿದ್ದಾರೆ. “ಸಂಸತ್ತಿನಲ್ಲಿ ನನ್ನ ಉದ್ದೇಶ ಪ್ರಭಾವ ಬೀರುವುದೇ ಹೊರತು, ಗದ್ದಲ ಸೃಷ್ಟಿಸುವುದಲ್ಲ” ಎಂದು ಅವರು ಹೇಳಿದ್ದಾರೆ.

ವಿಡಿಯೋ ಹೇಳಿಕೆಯಲ್ಲಿ ಚಡ್ಡಾ ಅವರು, ವಿರೋಧ ಪಕ್ಷದ ಸಭಾತ್ಯಾಗಗಳಲ್ಲಿ ತಾನು ಭಾಗವಹಿಸಿಲ್ಲ ಎಂಬ ಆರೋಪಗಳನ್ನು ‘ಸಂಪೂರ್ಣ ಸುಳ್ಳು’ ಎಂದು ತಳ್ಳಿಹಾಕಿದ್ದಾರೆ. ಸಂಸತ್ತಿನ ಕಲಾಪಗಳು ಸಿಸಿಟಿವಿ ಕ್ಯಾಮರಾಗಳಲ್ಲಿ ದಾಖಲಾಗಿರುತ್ತವೆ ಎಂದಿರುವ ಅವರು, ತಾನು ಭಾಗವಹಿಸದ ಒಂದೇ ಒಂದು ಸಂದರ್ಭವನ್ನು ಬೆರಳು ಮಾಡಿ ತೋರಿಸುವಂತೆ ಟೀಕಾಕಾರರಿಗೆ ಸವಾಲು ಹಾಕಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಆಗ್ರಹಿಸಿದ ನಿಲುವಳಿ ನೋಟಿಸ್‌ಗೆ ಸಹಿ ಹಾಕಲು ನಿರಾಕರಿಸಿದ್ದಾರೆ ಎಂಬ ಮತ್ತೊಂದು ಆರೋಪದ ಕುರಿತು ಪ್ರತಿಕ್ರಿಯಿಸಿದ ಚಡ್ಡಾ, ಈ ಬಗ್ಗೆ ಯಾವುದೇ ಪಕ್ಷದ ನಾಯಕರು ತನ್ನನ್ನು ಔಪಚಾರಿಕವಾಗಿಯಾಗಲಿ ಅಥವಾ ಅನೌಪಚಾರಿಕವಾಗಿಯಾಗಲಿ ಎಂದಿಗೂ ಸಂಪರ್ಕಿಸಿಲ್ಲ. ಅಲ್ಲದೆ, ನಮ್ಮ ಪಕ್ಷದ ಇತರ ಹಲವಾರು ಸಂಸದರು ಕೂಡ ಆ ನೋಟಿಸ್‌ಗೆ ಸಹಿ ಹಾಕಿಲ್ಲ ಎಂದು ಹೇಳಿದ್ದಾರೆ.

ತನ್ನ ಕೆಲಸವನ್ನು ಎತ್ತಿ ತೋರಿಸಿದ ಚಡ್ಡಾ ಅವರು, ಜಿಎಸ್‍ಟಿ, ಆದಾಯ ತೆರಿಗೆ, ದೆಹಲಿಯ ವಾಯು ಮಾಲಿನ್ಯ, ಪಂಜಾಬ್‌ನ ನೀರಿನ ಸಮಸ್ಯೆಗಳು, ಸಾರ್ವಜನಿಕ ಆರೋಗ್ಯ, ಶಿಕ್ಷಣ, ರೈಲ್ವೆ ಪ್ರಯಾಣಿಕರ ಸಮಸ್ಯೆಗಳು, ಋತುಸ್ರಾವದ ಆರೋಗ್ಯ, ನಿರುದ್ಯೋಗ ಮತ್ತು ಹಣದುಬ್ಬರ ಸೇರಿದಂತೆ ಸಾರ್ವಜನಿಕ ಸಮಸ್ಯೆಗಳನ್ನು ಸಂಸತ್ತಿನಲ್ಲಿ ಸತತವಾಗಿ ಪ್ರಸ್ತಾಪಿಸುತ್ತಿರುವುದಾಗಿ ತಿಳಿಸಿದ್ದಾರೆ.

ತನ್ನ ಕೆಲಸದ ಹೊಣೆಗಾರಿಕೆಯನ್ನು ಪುನರುಚ್ಚರಿಸಿದ ಚಡ್ಡಾ, “ಸಂಸತ್ತು ಜನರ ತೆರಿಗೆ ಹಣದಿಂದ ನಡೆಯುತ್ತದೆ. ಜನರ ಸಮಸ್ಯೆಗಳನ್ನು ಪ್ರಸ್ತಾಪಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದಿದ್ದಾರೆ. “ಪ್ರತಿಯೊಂದು ಸುಳ್ಳು ಕೂಡ ಬಯಲಾಗಲಿದೆ” ಎಂದು ಇದೇ ಸಂದರ್ಭದಲ್ಲಿ ಅವರು ಹೇಳಿದ್ದಾರೆ.

ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯ ಪಕ್ಷದ ಉಪನಾಯಕನ ಸ್ಥಾನದಿಂದ ಎಎಪಿ ಹಠಾತ್ ತೆಗೆದು ಹಾಕಿದೆ. ಇದು ಚಡ್ಡಾ ಅವರ ಅಸಮಾಧಾನಕ್ಕೆ ಕಾರಣವಾಗಿದೆ. ಚಡ್ಡಾ ಇತ್ತೀಚಿನ ದಿನಗಳಲ್ಲಿ ರಾಜ್ಯಸಭೆಯಲ್ಲಿ ಜನರ ಹಲವು ಸಮಸ್ಯೆಗಳನ್ನು ಪ್ರಸ್ತಾಪಿಸುವ ಮೂಲಕ ಗಮನ ಸೆಳೆದಿದ್ದರು. ಅವರು ಪ್ರಸ್ತಾಪಿಸಿದ ವಿಷಯಗಳು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಜನರು ಕೂಡ ಈ ಬಗ್ಗೆ ಚರ್ಚೆಗಳನ್ನು ನಡೆಸುತ್ತಿದ್ದರು. ಈ ಸಂದರ್ಭದಲ್ಲೇ ಚಡ್ಡಾ ಅವರ ಸ್ಥಾನ ಕಿತ್ತುಕೊಂಡಿರುವುದು, ಎಎಪಿಯಲ್ಲಿ ಆಂತರಿಕ ಕಲಹಕ್ಕೆ ಕಾರಣವಾಗಿದೆ. ಜನರಲ್ಲೂ ಆಶ್ಚರ್ಯ ಮೂಡಿಸಿದೆ. ಚಡ್ಡಾ ಕೇಜ್ರಿವಾಲ್ ಸೇರಿದಂತೆ ಎಎಪಿ ನಾಯಕ ವಿರುದ್ದವೇ ಅಸಮಾಧಾನ ಹೊರ ಹಾಕಿದ್ದಾರೆ.

ಒಟ್ಟಿನಲ್ಲಿ ಚಡ್ಡಾ ಅವರ ಸ್ಥಾನ ಕಿತ್ತುಕೊಂಡಿರುವುದು ಎಎಪಿಯಲ್ಲಿ ವಾಗ್ಯುದ್ಧವಾಗಿ ಪರಿವರ್ತನೆಗೊಂಡಿದೆ. ಹಿರಿಯ ನಾಯಕರು ಚಡ್ಡಾ ಅವರನ್ನು ಬಹಿರಂಗವಾಗಿ ಟೀಕಿಸುತ್ತಾ ಅವರ ರಾಜಕೀಯ ನಿಲುವನ್ನು ಪ್ರಶ್ನಿಸುತ್ತಿದ್ದರೆ, ಚಡ್ಡಾ ಸಂಸತ್ತಿನಲ್ಲಿ ಸಾರ್ವಜನಿಕ ಹಿತಾಸಕ್ತಿಯ ವಿಷಯಗಳನ್ನು ಪ್ರಸ್ತಾಪಿಸುತ್ತಿದ್ದರೂ ಸಹ ತಮ್ಮನ್ನು ಗುರಿ ಮಾಡಲಾಗುತ್ತಿದೆ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...