Homeಮುಖಪುಟ'ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ' : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

- Advertisement -
- Advertisement -

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, “ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ” ಎಂದಿದ್ದಾರೆ. “ಸಂಸತ್ತಿನಲ್ಲಿ ನನ್ನ ಉದ್ದೇಶ ಪ್ರಭಾವ ಬೀರುವುದೇ ಹೊರತು, ಗದ್ದಲ ಸೃಷ್ಟಿಸುವುದಲ್ಲ” ಎಂದು ಅವರು ಹೇಳಿದ್ದಾರೆ.

ವಿಡಿಯೋ ಹೇಳಿಕೆಯಲ್ಲಿ ಚಡ್ಡಾ ಅವರು, ವಿರೋಧ ಪಕ್ಷದ ಸಭಾತ್ಯಾಗಗಳಲ್ಲಿ ತಾನು ಭಾಗವಹಿಸಿಲ್ಲ ಎಂಬ ಆರೋಪಗಳನ್ನು ‘ಸಂಪೂರ್ಣ ಸುಳ್ಳು’ ಎಂದು ತಳ್ಳಿಹಾಕಿದ್ದಾರೆ. ಸಂಸತ್ತಿನ ಕಲಾಪಗಳು ಸಿಸಿಟಿವಿ ಕ್ಯಾಮರಾಗಳಲ್ಲಿ ದಾಖಲಾಗಿರುತ್ತವೆ ಎಂದಿರುವ ಅವರು, ತಾನು ಭಾಗವಹಿಸದ ಒಂದೇ ಒಂದು ಸಂದರ್ಭವನ್ನು ಬೆರಳು ಮಾಡಿ ತೋರಿಸುವಂತೆ ಟೀಕಾಕಾರರಿಗೆ ಸವಾಲು ಹಾಕಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಆಗ್ರಹಿಸಿದ ನಿಲುವಳಿ ನೋಟಿಸ್‌ಗೆ ಸಹಿ ಹಾಕಲು ನಿರಾಕರಿಸಿದ್ದಾರೆ ಎಂಬ ಮತ್ತೊಂದು ಆರೋಪದ ಕುರಿತು ಪ್ರತಿಕ್ರಿಯಿಸಿದ ಚಡ್ಡಾ, ಈ ಬಗ್ಗೆ ಯಾವುದೇ ಪಕ್ಷದ ನಾಯಕರು ತನ್ನನ್ನು ಔಪಚಾರಿಕವಾಗಿಯಾಗಲಿ ಅಥವಾ ಅನೌಪಚಾರಿಕವಾಗಿಯಾಗಲಿ ಎಂದಿಗೂ ಸಂಪರ್ಕಿಸಿಲ್ಲ. ಅಲ್ಲದೆ, ನಮ್ಮ ಪಕ್ಷದ ಇತರ ಹಲವಾರು ಸಂಸದರು ಕೂಡ ಆ ನೋಟಿಸ್‌ಗೆ ಸಹಿ ಹಾಕಿಲ್ಲ ಎಂದು ಹೇಳಿದ್ದಾರೆ.

ತನ್ನ ಕೆಲಸವನ್ನು ಎತ್ತಿ ತೋರಿಸಿದ ಚಡ್ಡಾ ಅವರು, ಜಿಎಸ್‍ಟಿ, ಆದಾಯ ತೆರಿಗೆ, ದೆಹಲಿಯ ವಾಯು ಮಾಲಿನ್ಯ, ಪಂಜಾಬ್‌ನ ನೀರಿನ ಸಮಸ್ಯೆಗಳು, ಸಾರ್ವಜನಿಕ ಆರೋಗ್ಯ, ಶಿಕ್ಷಣ, ರೈಲ್ವೆ ಪ್ರಯಾಣಿಕರ ಸಮಸ್ಯೆಗಳು, ಋತುಸ್ರಾವದ ಆರೋಗ್ಯ, ನಿರುದ್ಯೋಗ ಮತ್ತು ಹಣದುಬ್ಬರ ಸೇರಿದಂತೆ ಸಾರ್ವಜನಿಕ ಸಮಸ್ಯೆಗಳನ್ನು ಸಂಸತ್ತಿನಲ್ಲಿ ಸತತವಾಗಿ ಪ್ರಸ್ತಾಪಿಸುತ್ತಿರುವುದಾಗಿ ತಿಳಿಸಿದ್ದಾರೆ.

ತನ್ನ ಕೆಲಸದ ಹೊಣೆಗಾರಿಕೆಯನ್ನು ಪುನರುಚ್ಚರಿಸಿದ ಚಡ್ಡಾ, “ಸಂಸತ್ತು ಜನರ ತೆರಿಗೆ ಹಣದಿಂದ ನಡೆಯುತ್ತದೆ. ಜನರ ಸಮಸ್ಯೆಗಳನ್ನು ಪ್ರಸ್ತಾಪಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದಿದ್ದಾರೆ. “ಪ್ರತಿಯೊಂದು ಸುಳ್ಳು ಕೂಡ ಬಯಲಾಗಲಿದೆ” ಎಂದು ಇದೇ ಸಂದರ್ಭದಲ್ಲಿ ಅವರು ಹೇಳಿದ್ದಾರೆ.

ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯ ಪಕ್ಷದ ಉಪನಾಯಕನ ಸ್ಥಾನದಿಂದ ಎಎಪಿ ಹಠಾತ್ ತೆಗೆದು ಹಾಕಿದೆ. ಇದು ಚಡ್ಡಾ ಅವರ ಅಸಮಾಧಾನಕ್ಕೆ ಕಾರಣವಾಗಿದೆ. ಚಡ್ಡಾ ಇತ್ತೀಚಿನ ದಿನಗಳಲ್ಲಿ ರಾಜ್ಯಸಭೆಯಲ್ಲಿ ಜನರ ಹಲವು ಸಮಸ್ಯೆಗಳನ್ನು ಪ್ರಸ್ತಾಪಿಸುವ ಮೂಲಕ ಗಮನ ಸೆಳೆದಿದ್ದರು. ಅವರು ಪ್ರಸ್ತಾಪಿಸಿದ ವಿಷಯಗಳು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಜನರು ಕೂಡ ಈ ಬಗ್ಗೆ ಚರ್ಚೆಗಳನ್ನು ನಡೆಸುತ್ತಿದ್ದರು. ಈ ಸಂದರ್ಭದಲ್ಲೇ ಚಡ್ಡಾ ಅವರ ಸ್ಥಾನ ಕಿತ್ತುಕೊಂಡಿರುವುದು, ಎಎಪಿಯಲ್ಲಿ ಆಂತರಿಕ ಕಲಹಕ್ಕೆ ಕಾರಣವಾಗಿದೆ. ಜನರಲ್ಲೂ ಆಶ್ಚರ್ಯ ಮೂಡಿಸಿದೆ. ಚಡ್ಡಾ ಕೇಜ್ರಿವಾಲ್ ಸೇರಿದಂತೆ ಎಎಪಿ ನಾಯಕ ವಿರುದ್ದವೇ ಅಸಮಾಧಾನ ಹೊರ ಹಾಕಿದ್ದಾರೆ.

ಒಟ್ಟಿನಲ್ಲಿ ಚಡ್ಡಾ ಅವರ ಸ್ಥಾನ ಕಿತ್ತುಕೊಂಡಿರುವುದು ಎಎಪಿಯಲ್ಲಿ ವಾಗ್ಯುದ್ಧವಾಗಿ ಪರಿವರ್ತನೆಗೊಂಡಿದೆ. ಹಿರಿಯ ನಾಯಕರು ಚಡ್ಡಾ ಅವರನ್ನು ಬಹಿರಂಗವಾಗಿ ಟೀಕಿಸುತ್ತಾ ಅವರ ರಾಜಕೀಯ ನಿಲುವನ್ನು ಪ್ರಶ್ನಿಸುತ್ತಿದ್ದರೆ, ಚಡ್ಡಾ ಸಂಸತ್ತಿನಲ್ಲಿ ಸಾರ್ವಜನಿಕ ಹಿತಾಸಕ್ತಿಯ ವಿಷಯಗಳನ್ನು ಪ್ರಸ್ತಾಪಿಸುತ್ತಿದ್ದರೂ ಸಹ ತಮ್ಮನ್ನು ಗುರಿ ಮಾಡಲಾಗುತ್ತಿದೆ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...