Homeಕರ್ನಾಟಕಸಿಡಿ ಪ್ರಕರಣ: ಸಿಡಿ ನಕಲಿ, ನಾನು ನಿರಪರಾಧಿ ಎಂದು ರಮೇಶ್ ಜಾರಕಿಹೊಳಿ

ಸಿಡಿ ಪ್ರಕರಣ: ಸಿಡಿ ನಕಲಿ, ನಾನು ನಿರಪರಾಧಿ ಎಂದು ರಮೇಶ್ ಜಾರಕಿಹೊಳಿ

ಹೀಗೆ ಆಗುತ್ತದೆ ಎಂದು ನನಗೆ 4 ತಿಂಗಳ ಹಿಂದೆಯೇ ಗೊತ್ತಿತ್ತು. ಸಿಡಿ ಬಿಡುಗಡೆಯಾಗುವ 26 ಗಂಟೆಗಳ ಮೊದಲು ನನಗೆ ಹೈಕಮಾಂಡ್‌, ಹಿತೈಷಿಗಳಿಂದ ಕರೆ ಬಂದಿತ್ತು.

- Advertisement -
- Advertisement -

’ಈ ಸಿಡಿ 100 ರಷ್ಟು ನಕಲಿ, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ. ನನ್ನ ರಾಜಕೀಯ ಏಳಿಗೆ ಸಹಿಸದ ಜನ, ನನ್ನನ್ನು ಎದುರಿಸಲಾಗದವರು ಈ ಕೆಲಸ ಮಾಡಿದ್ದಾರೆ. ಎಲ್ಲಾ ತನಿಖೆ ಎದುರಿಸುತ್ತೇನೆ. ನಾನು ಅಪರಾಧಿಯಲ್ಲ, ನಿರಪರಾಧಿ’ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಹೀಗೆ ಆಗುತ್ತದೆ ಎಂದು ನನಗೆ 4 ತಿಂಗಳ ಹಿಂದೆಯೇ ಗೊತ್ತಿತ್ತು. ಸಿಡಿ ಬಿಡುಗಡೆಯಾಗುವ 26 ಗಂಟೆಗಳ ಮೊದಲು ನನಗೆ ಹೈಕಮಾಂಡ್‌, ಹಿತೈಷಿಗಳಿಂದ ಕರೆ ಬಂದಿತ್ತು. ನಾಳೆ ನಿನ್ನ ಬಗ್ಗೆ ಷಡ್ಯಂತ್ರದ ಒಂದು ಸಿಡಿ ಬಿಡುಗಡೆಯಾಗುತ್ತದೆ ಹೆದರಬೇಡ ಎಂದು. ನಾನು ಹೆದರಲಿಲ್ಲ. ಯಾಕೆಂದರೆ ನಾನು ತಪ್ಪು ಮಾಡಿರಲಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಜಾರಕಿಹೊಳಿ ಸಿಡಿ ಪ್ರಕರಣ: ದೂರು ವಾಪಸ್ ಪಡೆಯಲು ಅವಕಾಶವಿಲ್ಲವೆಂದ ಪೊಲೀಸರು

’ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ಯಾರು ನನ್ನನ್ನು ಕೇಳಲಿಲ್ಲ. ನಾನು ನನ್ನ ಸ್ವತಃ ನಿರ್ಧಾರದಿಂದ ರಾಜೀನಾಮೆ ನೀಡಿದ್ದೇನೆ. ನಾನು ಕಟ್ಟಿದ ಸರ್ಕಾರಕ್ಕೆ ಕೆಟ್ಟ ಹೆಸರು ಬರಬಾರದು ಎಂದು ರಾಜೀನಾಮೆ ನೀಡಿದೆ. ಅಂದು ಬೆಳಗ್ಗೆ 9.30ಕ್ಕೆ ನಾನು ಮುಖ್ಯಮಂತ್ರಿಗೆ ರಾಜೀನಾಮೆ ಸಲ್ಲಿಸಿದ್ದೆ’ ಎಂದಿದ್ದಾರೆ.

’ಕಾಂಗ್ರೆಸ್, ಜೆಡಿಎಸ್‌, ಬಿಜೆಪಿಯಲ್ಲಿಯೂ ನನಗೆ ವಿರೋಧಿಗಳಿಲ್ಲ. ಇದು ರಾಜಕಾರಣವಲ್ಲ. ಯಾವ ಪಕ್ಷದವರ ಮೇಲೂ ನಾನು ಆರೋಪ ಮಾಡಿಲ್ಲ. ಅವರೆಲ್ಲ ನನಗೆ ಬೆಂಬಲ ನೀಡಿದ್ದಾರೆ. ಸರ್ಕಾರದ ಕೆಡವಿದ ಕೋಪವಿದ್ದರೇ ಕುಮಾರಸ್ವಾಮಿ, ರೇವಣ್ಣ ನನಗೆ ಯಾಕೆ ಸಪೋರ್ಟ್ ಮಾಡ್ತಿದ್ರು?’ ಎಂದು ಜಾರಕಿಹೊಳಿ ಪ್ರಶ್ನಿಸಿದ್ದಾರೆ.

’ಎಷ್ಟೇ ದೊಡ್ಡ ಪ್ರಭಾವಿಯಾಗಿದ್ದರೂ ನಾನು ಅವರನ್ನು ಜೈಲಿಗೆ ಕಳಿಸುತ್ತೇನೆ. ಅವರನ್ನು ಬಿಡುವುದಿಲ್ಲ. ನಾನು ರಾಜಕೀಯದಲ್ಲಿ ಇರುತ್ತೇನೆ ಇಲ್ಲವೋ ಗೊತ್ತಿಲ್ಲ. ಆದ್ರೆ ಅವರನ್ನು ಮಾತ್ರ ಬಿಡುವುದಿಲ್ಲ’ ಎಂದು ಜಾರಕಿಹೊಳಿ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ಸಿಂಘು ಗಡಿಯಲ್ಲಿ ಗುಂಡು ಹಾರಿಸಿದ ಅಪರಿಚಿತ ವ್ಯಕ್ತಿಗಳು!

’ನನ್ನನ್ನು ಮುಗಿಸಲು ನೂರಾರು ಕೋಟಿ ಖರ್ಚು ಮಾಡಿದ್ದಾರೆ. ಸಿಡಿಗಾಗಿ 15, 20 ಕೋಟಿ ಖರ್ಚು ಮಾಡಿದ್ದಾರೆ. ಯುವತಿಗೆ 5 ಕೋಟಿ ನೀಡಿದ್ದಾರೆ. ವಿದೇಶದಲ್ಲಿ 2 ಅಪಾರ್ಟ್‌‌ಮೆಂಟ್ ನೀಡಿದ್ದಾರೆ. ಯಶವಂತಪುರದ ಅಕ್ಕ ಪಕ್ಕದಲ್ಲಿ ನಾಲ್ಕನೇ ಫ್ಲೋರ್ ಮತ್ತು ಒರಾಯನ್ ಮಾಲ್ ಪಕ್ಕದಲ್ಲಿ 5ನೇ ಫ್ಲೋರ್‌ನಲ್ಲಿ ಈ ಷಡ್ಯಂತ್ರ ರಚಿಸಲಾಗಿದೆ’ ಎಂದು ಆರೋಪಿಸಿದ್ದಾರೆ.

’ನನಗೆ ಈ ಸಂದರ್ಭದಲ್ಲಿ ಬೆಂಬಲವಾಗಿ ನಿಂತ ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಧನ್ಯವಾದಗಳು ಎಂದಿದ್ದಾರೆ. ನನ್ನ ಕುಟುಂಬ ಸದಸ್ಯರು, ನಾನು ಬಾಲಚಂದ್ರ ಜಾರಕಿಹೊಳಿ ಹೇಳಿರುವ ಎಲ್ಲಾ ಮಾತಿಗೂ ಮತ್ತು ಹಿತೈಷಿಗಳ ಮಾತಿಗೆ ನಾನು ಬದ್ಧವಾಗಿದ್ದೇನೆ ಎಂದಿದ್ದಾರೆ.

ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆದಿದೆ. ನಾನು ನಿರಪರಾಧಿ ದಯವಿಟ್ಟು ನನಗೆ ಬೆಂಬಲ ನೀಡಿ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮನವಿ ಮಾಡಿದ್ದಾರೆ.

“ರಮೇಶ್ ಜಾರಕಿಹೊಳಿಯವರ ಮೇಲೆ ಯುವತಿಯೊಬ್ಬರಿಗೆ ಕೆಲಸದ ಆಮಿವೊಡ್ಡಿ ಲೈಂಗಿಕವಾಗಿ ಬಳಸಿಕೊಂಡ ಆರೋಪವಿದೆ. ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ  ವಿಡಿಯೋ ಸಿ.ಡಿ ಜೊತೆಗೆ ಕಬ್ಬನ್ ಪಾರ್ಕ್ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಕಳೆದೆರಡು ದಿನಗಳ ಹಿಂದೆ ದೂರ ವಾಪಸ್ ಪಡೆಯುವುದಾಗಿ ತಿಳಿಸಿದ್ದರು.


ಇದನ್ನೂ ಓದಿ: ವೀರಶೈವ ಲಿಂಗಾಯತ, ಒಕ್ಕಲಿಗರ ನಿಗಮ ಸ್ಥಾಪನೆಯನ್ನು ಸ್ವಾಗತಿಸುತ್ತೇನೆ: ಬಜೆಟ್ ವಿಶ್ಲೇಷಣೆ ಮಾಡಿದ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...