Homeಕರ್ನಾಟಕಸಿಡಿ ಪ್ರಕರಣ: ಸಿಡಿ ನಕಲಿ, ನಾನು ನಿರಪರಾಧಿ ಎಂದು ರಮೇಶ್ ಜಾರಕಿಹೊಳಿ

ಸಿಡಿ ಪ್ರಕರಣ: ಸಿಡಿ ನಕಲಿ, ನಾನು ನಿರಪರಾಧಿ ಎಂದು ರಮೇಶ್ ಜಾರಕಿಹೊಳಿ

ಹೀಗೆ ಆಗುತ್ತದೆ ಎಂದು ನನಗೆ 4 ತಿಂಗಳ ಹಿಂದೆಯೇ ಗೊತ್ತಿತ್ತು. ಸಿಡಿ ಬಿಡುಗಡೆಯಾಗುವ 26 ಗಂಟೆಗಳ ಮೊದಲು ನನಗೆ ಹೈಕಮಾಂಡ್‌, ಹಿತೈಷಿಗಳಿಂದ ಕರೆ ಬಂದಿತ್ತು.

- Advertisement -
- Advertisement -

’ಈ ಸಿಡಿ 100 ರಷ್ಟು ನಕಲಿ, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ. ನನ್ನ ರಾಜಕೀಯ ಏಳಿಗೆ ಸಹಿಸದ ಜನ, ನನ್ನನ್ನು ಎದುರಿಸಲಾಗದವರು ಈ ಕೆಲಸ ಮಾಡಿದ್ದಾರೆ. ಎಲ್ಲಾ ತನಿಖೆ ಎದುರಿಸುತ್ತೇನೆ. ನಾನು ಅಪರಾಧಿಯಲ್ಲ, ನಿರಪರಾಧಿ’ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಹೀಗೆ ಆಗುತ್ತದೆ ಎಂದು ನನಗೆ 4 ತಿಂಗಳ ಹಿಂದೆಯೇ ಗೊತ್ತಿತ್ತು. ಸಿಡಿ ಬಿಡುಗಡೆಯಾಗುವ 26 ಗಂಟೆಗಳ ಮೊದಲು ನನಗೆ ಹೈಕಮಾಂಡ್‌, ಹಿತೈಷಿಗಳಿಂದ ಕರೆ ಬಂದಿತ್ತು. ನಾಳೆ ನಿನ್ನ ಬಗ್ಗೆ ಷಡ್ಯಂತ್ರದ ಒಂದು ಸಿಡಿ ಬಿಡುಗಡೆಯಾಗುತ್ತದೆ ಹೆದರಬೇಡ ಎಂದು. ನಾನು ಹೆದರಲಿಲ್ಲ. ಯಾಕೆಂದರೆ ನಾನು ತಪ್ಪು ಮಾಡಿರಲಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಜಾರಕಿಹೊಳಿ ಸಿಡಿ ಪ್ರಕರಣ: ದೂರು ವಾಪಸ್ ಪಡೆಯಲು ಅವಕಾಶವಿಲ್ಲವೆಂದ ಪೊಲೀಸರು

’ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ಯಾರು ನನ್ನನ್ನು ಕೇಳಲಿಲ್ಲ. ನಾನು ನನ್ನ ಸ್ವತಃ ನಿರ್ಧಾರದಿಂದ ರಾಜೀನಾಮೆ ನೀಡಿದ್ದೇನೆ. ನಾನು ಕಟ್ಟಿದ ಸರ್ಕಾರಕ್ಕೆ ಕೆಟ್ಟ ಹೆಸರು ಬರಬಾರದು ಎಂದು ರಾಜೀನಾಮೆ ನೀಡಿದೆ. ಅಂದು ಬೆಳಗ್ಗೆ 9.30ಕ್ಕೆ ನಾನು ಮುಖ್ಯಮಂತ್ರಿಗೆ ರಾಜೀನಾಮೆ ಸಲ್ಲಿಸಿದ್ದೆ’ ಎಂದಿದ್ದಾರೆ.

’ಕಾಂಗ್ರೆಸ್, ಜೆಡಿಎಸ್‌, ಬಿಜೆಪಿಯಲ್ಲಿಯೂ ನನಗೆ ವಿರೋಧಿಗಳಿಲ್ಲ. ಇದು ರಾಜಕಾರಣವಲ್ಲ. ಯಾವ ಪಕ್ಷದವರ ಮೇಲೂ ನಾನು ಆರೋಪ ಮಾಡಿಲ್ಲ. ಅವರೆಲ್ಲ ನನಗೆ ಬೆಂಬಲ ನೀಡಿದ್ದಾರೆ. ಸರ್ಕಾರದ ಕೆಡವಿದ ಕೋಪವಿದ್ದರೇ ಕುಮಾರಸ್ವಾಮಿ, ರೇವಣ್ಣ ನನಗೆ ಯಾಕೆ ಸಪೋರ್ಟ್ ಮಾಡ್ತಿದ್ರು?’ ಎಂದು ಜಾರಕಿಹೊಳಿ ಪ್ರಶ್ನಿಸಿದ್ದಾರೆ.

’ಎಷ್ಟೇ ದೊಡ್ಡ ಪ್ರಭಾವಿಯಾಗಿದ್ದರೂ ನಾನು ಅವರನ್ನು ಜೈಲಿಗೆ ಕಳಿಸುತ್ತೇನೆ. ಅವರನ್ನು ಬಿಡುವುದಿಲ್ಲ. ನಾನು ರಾಜಕೀಯದಲ್ಲಿ ಇರುತ್ತೇನೆ ಇಲ್ಲವೋ ಗೊತ್ತಿಲ್ಲ. ಆದ್ರೆ ಅವರನ್ನು ಮಾತ್ರ ಬಿಡುವುದಿಲ್ಲ’ ಎಂದು ಜಾರಕಿಹೊಳಿ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ಸಿಂಘು ಗಡಿಯಲ್ಲಿ ಗುಂಡು ಹಾರಿಸಿದ ಅಪರಿಚಿತ ವ್ಯಕ್ತಿಗಳು!

’ನನ್ನನ್ನು ಮುಗಿಸಲು ನೂರಾರು ಕೋಟಿ ಖರ್ಚು ಮಾಡಿದ್ದಾರೆ. ಸಿಡಿಗಾಗಿ 15, 20 ಕೋಟಿ ಖರ್ಚು ಮಾಡಿದ್ದಾರೆ. ಯುವತಿಗೆ 5 ಕೋಟಿ ನೀಡಿದ್ದಾರೆ. ವಿದೇಶದಲ್ಲಿ 2 ಅಪಾರ್ಟ್‌‌ಮೆಂಟ್ ನೀಡಿದ್ದಾರೆ. ಯಶವಂತಪುರದ ಅಕ್ಕ ಪಕ್ಕದಲ್ಲಿ ನಾಲ್ಕನೇ ಫ್ಲೋರ್ ಮತ್ತು ಒರಾಯನ್ ಮಾಲ್ ಪಕ್ಕದಲ್ಲಿ 5ನೇ ಫ್ಲೋರ್‌ನಲ್ಲಿ ಈ ಷಡ್ಯಂತ್ರ ರಚಿಸಲಾಗಿದೆ’ ಎಂದು ಆರೋಪಿಸಿದ್ದಾರೆ.

’ನನಗೆ ಈ ಸಂದರ್ಭದಲ್ಲಿ ಬೆಂಬಲವಾಗಿ ನಿಂತ ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಧನ್ಯವಾದಗಳು ಎಂದಿದ್ದಾರೆ. ನನ್ನ ಕುಟುಂಬ ಸದಸ್ಯರು, ನಾನು ಬಾಲಚಂದ್ರ ಜಾರಕಿಹೊಳಿ ಹೇಳಿರುವ ಎಲ್ಲಾ ಮಾತಿಗೂ ಮತ್ತು ಹಿತೈಷಿಗಳ ಮಾತಿಗೆ ನಾನು ಬದ್ಧವಾಗಿದ್ದೇನೆ ಎಂದಿದ್ದಾರೆ.

ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆದಿದೆ. ನಾನು ನಿರಪರಾಧಿ ದಯವಿಟ್ಟು ನನಗೆ ಬೆಂಬಲ ನೀಡಿ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮನವಿ ಮಾಡಿದ್ದಾರೆ.

“ರಮೇಶ್ ಜಾರಕಿಹೊಳಿಯವರ ಮೇಲೆ ಯುವತಿಯೊಬ್ಬರಿಗೆ ಕೆಲಸದ ಆಮಿವೊಡ್ಡಿ ಲೈಂಗಿಕವಾಗಿ ಬಳಸಿಕೊಂಡ ಆರೋಪವಿದೆ. ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ  ವಿಡಿಯೋ ಸಿ.ಡಿ ಜೊತೆಗೆ ಕಬ್ಬನ್ ಪಾರ್ಕ್ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಕಳೆದೆರಡು ದಿನಗಳ ಹಿಂದೆ ದೂರ ವಾಪಸ್ ಪಡೆಯುವುದಾಗಿ ತಿಳಿಸಿದ್ದರು.


ಇದನ್ನೂ ಓದಿ: ವೀರಶೈವ ಲಿಂಗಾಯತ, ಒಕ್ಕಲಿಗರ ನಿಗಮ ಸ್ಥಾಪನೆಯನ್ನು ಸ್ವಾಗತಿಸುತ್ತೇನೆ: ಬಜೆಟ್ ವಿಶ್ಲೇಷಣೆ ಮಾಡಿದ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...