Homeಮುಖಪುಟಚಿಕ್ಕಪ್ಪ ರಾಜೀನಾಮೆ ನೀಡಿದ್ದಕ್ಕೆ ನಾನು ಜವಾಬ್ದಾರನಲ್ಲ: ಚಿರಾಗ್ ಪಾಸ್ವಾನ್

ಚಿಕ್ಕಪ್ಪ ರಾಜೀನಾಮೆ ನೀಡಿದ್ದಕ್ಕೆ ನಾನು ಜವಾಬ್ದಾರನಲ್ಲ: ಚಿರಾಗ್ ಪಾಸ್ವಾನ್

- Advertisement -
- Advertisement -

ದಿವಂಗತ ರಾಮ್ ವಿಲಾಸ್ ಪಾಸ್ವಾನ್ ಅವರ ಪುತ್ರ ಚಿರಾಗ್ ಪಾಸ್ವಾನ್ ಅವರು ತಮ್ಮ ತಂದೆಯಂತೆಯೇ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡಿದ್ದಾರೆ. ಅವರು ಬಿಹಾರದ ಹಾಜಿಪುರ ಲೋಕಸಭಾ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದು, ಸಚಿವ ಸ್ಥಾನಕ್ಕೆ ತಮ್ಮ ಚಿಕ್ಕಪ್ಪ ಪಶುಪತಿ ಕುಮಾರ್ ಪರಸ್ ರಾಜೀನಾಮೆ ನೀಡಿದ್ದಕ್ಕೆ ನಾನು ಜವಾಬ್ದಾರನಲ್ಲ ಎಂದು ಹೇಳಿದ್ದಾರೆ.

ಲೋಕ ಜನಶಕ್ತಿ ಪಕ್ಷದ (ರಾಮವಿಲಾಸ್) ಮುಖ್ಯಸ್ಥ ಚಿರಾಗ್ ಪಾಸ್ವಾನ್ ಅವರು ಬಿಜೆಪಿಯೊಂದಿಗೆ ಸೀಟು ಹಂಚಿಕೆ ಒಪ್ಪಂದವನ್ನು ಮಾಡಿಕೊಂಡಿದ್ದಾರೆ. ಒಪ್ಪಂದಂತೆ ಅವರ ಪಕ್ಷವು ಐದು ಸಂಸದೀಯ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಬಿಹಾರದ 40 ಸ್ಥಾನಗಳಲ್ಲಿ ಬಿಜೆಪಿ 17 ರಲ್ಲಿ ಸ್ಪರ್ಧಿಸಲಿದ್ದರೆ, ನಿತೀಶ್ ಕುಮಾರ್ ಅವರ ಜೆಡಿಯು 16 ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿದೆ. ಉಳಿದ ಎರಡು ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಮತ್ತು ರಾಷ್ಟ್ರೀಯ ಲೋಕ ಮೋರ್ಚಾಗೆ ಬಿಟ್ಟುಕೊಡಲಾಗಿದೆ.

ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಚಿರಾಗ್ ಪಾಸ್ವಾನ್, ತಮ್ಮ ತಂದೆ ರಾಮ್ ವಿಲಾಸ್ ಪಾಸ್ವಾನ್ ಅವರನ್ನು ಏಳು ಬಾರಿ ಆಯ್ಕೆ ಮಾಡಿದ ಕಾರಣ, ಪ್ರತಿಷ್ಠೆಯ ಸ್ಥಾನವಾದ ಹಾಜಿಪುರದಿಂದ ಸ್ಪರ್ಧಿಸುವುದಾಗಿ ಹೇಳಿದರು. ಅವರ ವಿರುದ್ಧ ಚಿಕ್ಕಪ್ಪ ಸ್ಪರ್ಧಿಸುವ ಸಾಧ್ಯತೆಯ ಬಗ್ಗೆ ಕೇಳಿದ ಪ್ರಶ್ನೆಗೆ, “ಅವರನ್ನು ಸ್ವಾಗತಿಸುತ್ತೇನೆ, ನಾನು ಸವಾಲುಗಳಿಗೆ ಹೆದರುವುದಿಲ್ಲ” ಎಂದು ಉತ್ತರಿಸಿದರು.

ಚಿರಾಗ್ ಪಾಸ್ವಾನ್ ಮತ್ತು ಪಶುಪತಿ ಕುಮಾರ್ ಪರಾಸ್ ಅವರು 2020 ರಲ್ಲಿ ರಾಮ್ ವಿಲಾಸ್ ಪಾಸ್ವಾನ್ ಅವರ ರಾಜಕೀಯ ಹಿಡಿತಕ್ಕಾಗಿ ಜಗಳವಾಡಿದ್ದಾರೆ. ಚಿರಾಗ್ ಪಾಸ್ವಾನ್ ಬಣವನ್ನು ಲೋಕ ಜನಶಕ್ತಿ ಪಕ್ಷ (ರಾಮ್‌ವಿಲಾಸ್) ಎಂದು ಹೆಸರಿಸಲಾಯಿತು. ಪರಾಸ್ ಅವರು ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷದ ನಿಯಂತ್ರಣವನ್ನು ಪಡೆದರು. ವಿಭಜನೆಯ ನಂತರ, ಬಿಜೆಪಿಯು ಪರಾಸ್ ಅವರನ್ನು ಕೇಂದ್ರ ಸಚಿವರನ್ನಾಗಿ ನೇಮಿಸಿತು. ಸುಮಾರು ಮೂರು ವರ್ಷಗಳ ನಂತರ ಬಿಜೆಪಿಯ ಯು-ಟರ್ನ್ ಮಾಡಿರುವುದಕ್ಕೆ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಪರಿಣಾಮವಾಗಿ, ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಎನ್‌ಡಿಎ ತೊರೆದಿದ್ದಾರೆ. ತಮ್ಮ ಪಕ್ಷವು ಹಾಜಿಪುರ ಕ್ಷೇತ್ರದಲ್ಲಿ ಸ್ಪರ್ಧಿಸಲಿದೆ; ಅದು ಆರ್‌ಜೆಡಿ ಮತ್ತು ಕಾಂಗ್ರೆಸ್‌ಗಳನ್ನು ಒಳಗೊಂಡಿರುವ ವಿರೋಧ ಪಕ್ಷಗಳೊಂದಿಗೆ ಸೇರಿಕೊಳ್ಳಬಹುದು ಎಂದು ಅವರು ಹೇಳಿದ್ದಾರೆ.

ಪರಾಸ್ ವಿರುದ್ಧ ವಾಗ್ದಾಳಿ ನಡೆಸಿದ ಚಿರಾಗ್ ಪಾಸ್ವಾನ್, “ಅವರು ತಮ್ಮ ಕೊನೆಯ ಉಸಿರು ಇರುವವರೆಗೂ ಎನ್‌ಡಿಎ ಜೊತೆ ಇರುತ್ತಾರೆ ಎಂದು ಹೇಳುತ್ತಿದ್ದರು. ಅವರು ಈಗ ಪ್ರಧಾನಿಯ ಗುರಿಗೆ ಅಡ್ಡಿಯಾಗುತ್ತಾರೆಯೇ” ಎಂದು ಪ್ರಶ್ನಿಸಿದ್ದಾರೆ.

ಚಿರಾಗ್ ಪಾಸ್ವಾನ್ ಅವರು ತಮ್ಮದೇ ಆದ ಹೋರಾಟದಲ್ಲಿ ನಿರತರಾಗಿದ್ದಾರೆ; ಅದರ ಮಿತ್ರಪಕ್ಷಗಳೊಂದಿಗೆ ಬಿಜೆಪಿಯ ಸಮೀಕರಣಗಳ ಬಗ್ಗೆ ಅವರು ಕಾಳಜಿ ವಹಿಸುವುದಿಲ್ಲ ಎಂದು ಹೇಳಿದರು. “ಅವರಿಗೆ (ಪಾರಸ್) ಏನಾಯಿತು ಎಂಬುದಕ್ಕೆ ನಾನು ಜವಾಬ್ದಾರನಲ್ಲ, ನಾನು ಈ ಬೆಳವಣಿಗೆಯಲ್ಲಿ ಇರಲಿಲ್ಲ” ಎಂದು ಅವರು ಹೇಳಿದರು.

ತನ್ನ ಚಿಕ್ಕಪ್ಪ ನನ್ನ ವಿರುದ್ಧ ಅನೇಕ ವೈಯಕ್ತಿಕ ಆರೋಪಗಳನ್ನು ಮಾಡಿದ್ದಾರೆ 41 ವರ್ಷದ ಚಿರಾಗ್  ಹೇಳಿದರು. “ನಾನು ಅವರ ವಿರುದ್ಧ ಒಂದು ಮಾತನ್ನೂ ಹೇಳಲಿಲ್ಲ, ಕುಟುಂಬ ಮತ್ತು ಪಕ್ಷದೊಂದಿಗೆ ಬೇರೆಯಾಗಲು ಅವರು ನಿರ್ಧರಿಸಿದರು” ಎಂದು ಹೇಳಿದರು.

“ನಾವು ಯಾವಾಗ ಬೇರ್ಪಟ್ಟಿದ್ದೇವೆ ಎಂಬುದು ನನಗೆ ತಿಳಿದಿಲ್ಲ. ಅವರು ಪಕ್ಷದ ಸಾರಥ್ಯವನ್ನು ವಹಿಸಿಕೊಂಡರೂ ನನಗೆ ಪರವಾಗಿಲ್ಲ. ಪಕ್ಷ ಮತ್ತು ಕುಟುಂಬವು ಒಗ್ಗಟ್ಟಿನಿಂದ ಇರಬೇಕೆಂದು ನಾನು ಬಯಸುತ್ತೇನೆ. ಅವರು ನನ್ನನ್ನು ತಮ್ಮ ಮಗನೆಂದು ಪರಿಗಣಿಸಲಿಲ್ಲ” ಎಂದು ಹೇಳಿದರು.

ತನ್ನ ತಂದೆಯ ಕನಸುಗಳನ್ನು ನನಸಾಗಿಸುವುದು ಅವರ ಏಕೈಕ ಉದ್ದೇಶವಾಗಿತ್ತು; ಈಗ ಅವರು ಇಲ್ಲಿಲ್ಲ, ಅದು ನನ್ನ ಜವಾಬ್ದಾರಿ ಎಂದು ಚಿರಾಗ್ ಹೇಳಿದರು.

ಬಿಹಾರದ ಚುನಾವಣಾ ಕಣದಲ್ಲಿ ಜಾತಿ ಪ್ರಮುಖ ಅಂಶವಾಗಿರುವುದರಿಂದ, 370 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿರುವು ಬಿಜೆಒಇಗೆ ರಾಜ್ಯದ ಮತದಾರರಲ್ಲಿ ಶೇಕಡಾ 6 ರಷ್ಟು ಪಾಸ್ವಾನ್ ಸಮುದಾಯವು ಬಿಜೆಪಿಯ ಆದ್ಯತೆಯ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಪಾಸ್ವಾನ್ ಮತ್ತು ಪರಾಸ್ ನೇತೃತ್ವದ ಬಣಗಳ ನಡುವೆ ಸುದೀರ್ಘ ಸಮತೋಲನದ ಆಟದ ನಂತರ, ಬಿಜೆಪಿ ಅಂತಿಮವಾಗಿ ಮಾಜಿ ಮಿತ್ರಪಕ್ಷ ಪಾಸ್ವಾನ್ ಅವರೊಂದಿಗೆ ನಿಂತಿತು. ಈ ನಿರ್ಧಾರದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಬಿಜೆಪಿ ಯೋಚಿಸಿಲ್ಲ.

ಎನ್‌ಡಿಎ ಎಲ್ಲಾ ಮಿತ್ರಪಕ್ಷಗಳು ಭಿನ್ನಾಭಿಪ್ರಾಯಗಳನ್ನು ಸರಿಡಪಿಸಬೇಕು; ಮುಂಬರುವ ದೊಡ್ಡ ಯುದ್ಧದತ್ತ ಗಮನ ಹರಿಸಬೇಕು ಎಂದು ಚಿರಾಗ್ ಪಾಸ್ವಾನ್ ಹೇಳಿದರು. ಇಂಡಿಯಾ ಬಣಕ್ಕೆ ಹೋಲಿಸಿದರೆ ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ ಹೆಚ್ಚಿನ ಬಲವಿದೆ ಎಂದು ಹೇಳಿದರು. ಲೋಕಸಭೆ ಚುನಾವಣೆ ಒಂದು ಮೈಲಿಗಲ್ಲು, ವಿಧಾನಸಭೆ ಚುನಾವಣೆಯಲ್ಲೂ ಒಗ್ಗಟ್ಟಾಗಿ ಹೋರಾಡಿ ಸರ್ಕಾರ ರಚಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಹಾರಿಗಳ ಆತ್ಮಗೌರವಕ್ಕಾಗಿ ಹೋರಾಡಲು ರಾಜಕೀಯ ಸೇರಿದ್ದೇನೆ ಎಂದು ಪಾಸ್ವಾನ್ ಹೇಳಿದ್ದಾರೆ. ಬೇರೆ ರಾಜ್ಯಗಳಲ್ಲಿ ಬಿಹಾರಿಗಳನ್ನು ಅವಮಾನಿಸಲಾಗುತ್ತದೆ, ಇದನ್ನು ಬದಲಾಯಿಸಲು ನಾನು ರಾಜಕೀಯಕ್ಕೆ ಸೇರಿದ್ದೇನೆ, ಬಿಹಾರದ ರಾಜಕೀಯ ನನ್ನ ಆದ್ಯತೆಯಾಗಿದೆ ಎಂದು ಅವರು ಹೇಳಿದರು.

ಮತ್ತೊಬ್ಬ ಪ್ರಮುಖ ಯುವ ನಾಯಕ ಮತ್ತು ಪ್ರತಿಸ್ಪರ್ಧಿಯಾಗಿರುವ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಕುರಿತು ಮಾತನಾಡಿದ ಪಾಸ್ವಾನ್, “ನಾವು ನಮ್ಮ ಪ್ರತ್ಯೇಕ ಹೋರಾಟಗಳನ್ನು ನಡೆಸುತ್ತಿದ್ದೇವೆ. ಜನರು ಯಾರನ್ನು ನಂಬುತ್ತಾರೆ ಎಂಬುದನ್ನು ನೋಡೋಣ” ಎಂದು ಅವರು ಹೇಳಿದರು.

ಇದನ್ನೂ ಓದಿ; ಉ.ಪ್ರದೇಶ| ನಾಲ್ಕು ವರ್ಷದಿಂದ ಹಣ ನೀಡದ ಯೋಗಿ ಸರ್ಕಾರ: ಹೈಕೋರ್ಟ್‌ ಮೊರೆ ಹೋದ ದೇವಾಲಯಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...